Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೊಂಡು ವರ್ಷಗಳೇ ಉರುಳುತ್ತಿವೆ. ಈ ಗ್ಯಾರಂಟಿ ಯೋಜನೆಗಳಿಗೆ ತಗಲುತ್ತಿರುವಂತ ವೆಚ್ಚವನ್ನು ಕಂಡು ಸರ್ಕಾರವೇ ಬೆಚ್ಚಿ ಬಿದ್ದಿರುವುದಾಗಿ ಹೇಳಲಾಗುತ್ತಿದೆ. ಇದೇ ಕಾರಣಕ್ಕಾಗಿ ಗ್ಯಾರಂಟಿ ಸ್ಕೀಂಗಳನ್ನು ಪರಿಷ್ಕರಣೆ ಮಾಡಬೇಕು. ಜೊತೆಗೆ ಇನ್ನಷ್ಟು ಷರತ್ತುಗಳನ್ನು ವಿಧಿಸಬೇಕು ಎಂಬ ಕೂಗು ಎದ್ದಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಯುವನಿಧಿ ಹಾಗೂ ಶಕ್ತಿ ಯೋಜನೆಗೆ ಕಳೆದ 8 ತಿಂಗಳಿನಿಂದ ಕೋಟಿ ಕೋಟಿ ಖರ್ಚಾಗಿದೆಯಂತೆ. ಕಳೆದ 8 ತಿಂಗಳು ಗ್ಯಾರಂಟಿ ಯೋಜನೆಗಳಿಗೆ ಆಗಿರುವಂತ ಖರ್ಚು ನೋಡಿದಂತ ಸರ್ಕಾರ, ಪುಲ್ ಶಾಕ್ ಗೆ ಒಳಗಾಗಿದೆ ಎನ್ನಲಾಗುತ್ತಿದೆ. ಈ ನಡುವೆಯೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಗ್ಯಾರಂಟಿ ಸ್ಕೀಂಗಳನ್ನು ಜಾರಿಗೊಳಿಸಿರುವುದೇ ಬಡವರು, ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಆಗಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಮುಂದುವರೆಯಲಿದೆ ಎಂಬುದಾಗಿ ಪದೇ ಪದೇ ಸ್ಪಷ್ಟ ಪಡಿಸಿದ್ದಾರೆ. ಅಂದಹಾಗೇ ಗೃಹ ಲಕ್ಷ್ಮೀ ಯೋಜನೆಗೆ ಪ್ರತಿ ತಿಂಗಳು …
ಕೆಎನ್ಎನ್ ಸಿನಿಮಾ ಡೆಸ್ಕ್: ಕಂಗನಾ ರನೌತ್ ಅಭಿನಯದ ತುರ್ತು ಪರಿಸ್ಥಿತಿಯ ಟ್ರೈಲರ್ ಅಂತಿಮವಾಗಿ ಹೊರಬಂದಿದೆ. ಬುಧವಾರ, ನಟಿ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಟ್ರೈಲರ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಚಿತ್ರಕ್ಕಾಗಿ ಎಲ್ಲರನ್ನೂ ಉತ್ಸುಕರಾಗಿದ್ದಾರೆ. 1975ರಲ್ಲಿ ಭಾರತದಲ್ಲಿ ನಡೆದ ಈ ಚಿತ್ರವು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಸಮಯದ ಸುತ್ತ ಸುತ್ತುತ್ತದೆ. ರಾಜಕೀಯ ನಾಟಕದಲ್ಲಿ, ಕಂಗನಾ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಕಂಗನಾ ಜೊತೆಗೆ, ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ ಮತ್ತು ಶ್ರೇಯಸ್ ತಲ್ಪಾಡೆ ಕೂಡ ನಟಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಾಡೆ, ಜಯಪ್ರಕಾಶ್ ನಾರಾಯಣ್ ಪಾತ್ರದಲ್ಲಿ ಅನುಪಮ್ ಖೇರ್ ಕಾಣಿಸಿಕೊಳ್ಳಲಿದ್ದಾರೆ. ದಿವಂಗತ ನಟ ಸತೀಶ್ ಕೌಶಿಕ್ ಅವರು ಭಾರತದ ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಮರ್ಜೆನ್ಸಿಯ ಟ್ರೈಲರ್ ಚಿತ್ರಕ್ಕಾಗಿ ನೆಟ್ಟಿಗರನ್ನು ಉತ್ಸುಕರನ್ನಾಗಿ ಮಾಡಿದೆ. ಹಲವಾರು ಅಭಿಮಾನಿಗಳು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ ಮತ್ತು ಅದನ್ನು ನೋಡಲು “ಕಾಯಲು ಸಾಧ್ಯವಿಲ್ಲ” ಎಂದು ಹಂಚಿಕೊಂಡಿದ್ದಾರೆ.…
ಬೆಂಗಳೂರು : ಅರಣ್ಯ ಭೂಮಿಯನ್ನು ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಬಳಿಕ ಅಲ್ಲಿ ವೃಕ್ಷೋಧ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್.ಎಂ.ಟಿ. ವಶದಲ್ಲಿರುವ ಜಮೀನು ಪಡೆದು ಯಾರಿಗೆ ಮಾರುತ್ತೀರಿ ಎಂದು ಕೇಳಿದ್ದಾರೆ. ಅರಣ್ಯ ಭೂಮಿ ಮಾರಾಟ ಮಾಡಿರುವುದು ಈಗ ನಿಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಎಚ್.ಎಂ.ಟಿ.ಯೇ ಹೊರತು ಅರಣ್ಯ ಇಲಾಖೆ ಅಲ್ಲ ಎಂದು ತಿರುಗೇಟು ನೀಡಿದರು. ಬೆಂಗಳೂರಿನ ಪ್ರಮುಖ ಭಾಗದಲ್ಲಿರುವ ಪೀಣ್ಯ ಜಾಲಹಳ್ಳಿ ಅರಣ್ಯ ಜಮೀನು ಮರು ವಶಕ್ಕೆಪಡೆದು ಶುದ್ಧ ಉಸಿರಾಟಕ್ಕೊಂದು ತಾಣ (ಲಂಗ್ ಸ್ಪೇಸ್) ನಿರ್ಮಾಣ ಮಾಡಲು ತಾವು ಬಯಸಿರುವುದಾಗಿ ತಿಳಿಸಿದರು. ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ರಿಯಲ್ ಎಸ್ಟೇಟ್ ಸಂಸ್ಥೆಯಂತೆ ವರ್ತಿಸುತ್ತಿದೆ. 1997ರಿಂದ 2011ರವರೆಗೆ ಎಚ್.ಎಂ.ಟಿ. ಸಂಸ್ಥೆ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯನ್ನು ಅಕ್ರಮವಾಗಿ…
ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದು ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿನರಸಮ್ಮ, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಿ ಪಿ.ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ…
ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ನಿನ್ನೆಯಂದು ‘KPTCL ಕಿರಿಯ ಇಂಜಿನಿಯರ್’ ವರ್ಗಾವಣೆಯಲ್ಲಿ ‘ಮಹಾ ಎಡವಟ್ಟು’: ಒಂದೇ ಹುದ್ದೆಗೆ ‘7 ಜೆಇ’ ನೇಮಕ ಎಂಬುದಾಗಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ವೈರಲ್ ಸುದ್ದಿಯ ಹಿನ್ನಲೆಯಲ್ಲಿ ಈ ಸುದ್ದಿ ಪ್ರಕಟಿಸಿದ ನಂತ್ರ, ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳು ಕರೆ ಮಾಡಿ, ಅದರ ವಾಸ್ತವ ಸತ್ಯ ಸಂಗತಿ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಿಕೊಟ್ಟಿದ್ದಾರೆ. ಹಾಗಾದ್ರೆ ಒಂದೇ ಹುದ್ದೆಗೆ ಕೆಪಿಟಿಸಿಎಲ್ ನಿಂದ 7 ಕಿರಿಯ ಇಂಜಿನಿಯರ್ ವರ್ಗಾವಣೆ ಮಾಡಿದೆ ಎನ್ನುವ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ದಿನಾಂಕ 31-07-2024ರಂದು ಕೆಪಿಟಿಸಿಎಲ್ ನಿಂದ 226 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಈ ವರ್ಗಾವಣೆ ಆದೇಶದಲ್ಲಿ ಮಹಾ ಎಡವಟ್ಟು ಮಾಡಿದೆ. ಒಂದೇ ಹುದ್ದೆಗೆ 7 ಕಿರಿಯ ಇಂಜಿನಿಯರ್ ನೇಮಕ ಮಾಡಿದೆ ಎಂಬುದಾಗಿ ತಿಳಿದು ಬಂದಿತ್ತು. ಇದಷ್ಟೇ ಅಲ್ಲದೇ ಕನಿಷ್ಠ 4 ವರ್ಷ ಗ್ರೂಪ್-ಸಿ ಪದವೃಂದದ ನೌಕರರು ಆ ಹುದ್ದೆಯಲ್ಲಿ ಕೆಲಸ ಮಾಡಿದ್ದರೇ ಮಾತ್ರವೇ ವರ್ಗಾವಣೆ…
ಬೆಂಗಳೂರು: ಎಐಸಿಸಿಯಿಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಮಾಡಿದೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಈ ಕುರಿತಂತೆ ಎಐಸಿಸಿಯ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಧ್ಯಕ್ಷರ ಅನುಮತಿಯ ಮೇರೆಗೆ ಆಂಧ್ರಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚುಕು ನಾಚಿ ಅವರನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಚಂಡೀಗಡದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಂದಿತಾ ಹೂಡ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಲಾಗಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-students-in-the-state-4-new-courses-to-be-started-in-45-colleges/ https://kannadanewsnow.com/kannada/landslide-case-near-shirur-several-parts-of-a-lorry-found-in-gangavali-river/
ಬೆಂಗಳೂರು: ಸಕಲೇಶಪುರ ಟು ಬಾಳ್ಳುಪೇಟೆ ಮಾರ್ಗಮಧ್ಯದ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಇಂದು ಭೂ ಕುಸಿತದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಸಂಚಾರ ಸುರಕ್ಷತೆಯ ಪರೀಕ್ಷೆಯನ್ನು ನಡೆಸಲಾಗಿದೆ. ಹೀಗಾಗಿ ನಾಳೆಯಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಾಹಿತಿ ನೀಡಿದ್ದು, ಸಕಲೇಶಪುರ-ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಹಳಿಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ. ಯಾವೆಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿತ್ತು.? ದಿನಾಂಕ 11.08.2024ರ ನೈರುತ್ಯ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಬಿಡುಗಡೆ ಮಾಡಿದ್ದಂತ ಬುಲೆಟಿನ್ ಸಂಖ್ಯೆ-7 ರಲ್ಲಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇದೀಗ ನಾಳೆಯಿಂದ ಪುನರಾರಂಭಗೊಳಿಸಲಾಗುತ್ತಿದೆ ಅಂತ ತಿಳಿಸಿದೆ. ಆದರೇ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ದಿನಾಂಕ 14.08.2024 ರಂದು ರದ್ದಾಗಿದೆ ಎಂದು ಹೇಳಿದೆ. 1. ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್…
ಗರುಡನು ಶ್ರೀ ಮಹಾವಿಷ್ಣುವಿನ ಬಳಿ ಎಂತಹದೇ ಕಷ್ಟದ ಕಾಲದಲ್ಲಿ, ಎಂತಹ ಪರಿಸ್ಥಿತಿಯಲ್ಲೂ ಏನು ಆಗಬಾರದು ಅಂತಹ ಒಂದು ಮಂತ್ರವನ್ನು ತಿಳಿಸಿಕೊಡಿ ಎಂದು ಕೇಳಿದಾಗ, ಗರುಡನಿಗೆ ಮಹಾವಿಷ್ಣು ಈ ಮಂತ್ರವನ್ನು ಹೇಳುತ್ತಾರೆ. ಈ ಮಂತ್ರವನ್ನು ಗರುಡ ಪುರಾಣದಲ್ಲಿ ಹೇಳಲಾಗಿದೆ. ಗರುಡ ಪುರಾಣದಲ್ಲಿ ಉಲ್ಲೇಖವಾಗಿರುವ ಈ ಮಂತ್ರದ ಹೆಸರು ಏನಂದರೆ ಗಾರುಣಿ ಪರಾವಿದ್ಯ ಮಂತ್ರ. ಈ ಮಂತ್ರವನ್ನು ಪ್ರತಿನಿತ್ಯ ಹೇಳುವುದರಿಂದ ಆರೋಗ್ಯವು ವೃದ್ಧಿಯಾಗುತ್ತದೆ. ಈ ಮಂತ್ರದಿಂದ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ. ಈ ಮಂತ್ರವನ್ನು ಹೇಳಬೇಕಾದರೆ ಶ್ರದ್ಧಾಭಕ್ತಿಯಿಂದ ನಂಬಿಕೆಯನ್ನು ಇಟ್ಟು ಹೇಳಬೇಕು. ದೇವರನ್ನು ನಂಬಿ ಈ ಮಂತ್ರವನ್ನು ಹೇಳಿದರೆ ಎಲ್ಲವೂ ಒಳ್ಳೆಯದಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ದಂಧೆ ನಡೆಸಲಾಗುತ್ತಿದೆ. ಕಾಸಿಗಾಗಿ ಪೋಸ್ಟಿಂಗ್ ಮಾಡಲಾಗುತ್ತೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷಗಳ ನಾಯಕರು ಸೇರಿದಂತೆ ಅನೇಕರು ಗಂಭೀರ ಆರೋಪವನ್ನೇ ಮಾಡಿದ್ದಾರೆ. ಈ ಹೊತ್ತಿನಲ್ಲೇ ಕೆಪಿಟಿಸಿಎಲ್ ನಿಂದ ಮಹಾ ಎಡವಟ್ಟು ಎನ್ನುವಂತೆ ಒಂದೇ ಹುದ್ದೆಗೆ 7 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಇದಲ್ಲದೇ 4 ವರ್ಷ ಪೂರೈಸದ ಜೆಇಗಳ ಸ್ಥಾನಕ್ಕೂ ಬೇರೊಬ್ಬರನ್ನು ವರ್ಗಾವಣೆ ಮಾಡಿ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ನ ಆಡಳಿತ ಮತ್ತು ಮಾ.ಸಂ ನ ನಿರ್ದೇಶಕರು ದಿನಾಂಕ 31-07-2024ರಂದು 226 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಆದರೇ ವರ್ಗಾವಣೆಯ ಆದೇಶದಲ್ಲಿ ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 7 ಜೆಇಗಳನ್ನು ಒಂದೇ ಸ್ಥಳಕ್ಕೆ, ಒಂದೇ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಒಂದೇ ಹುದ್ದೆಗೆ 7 ಕಿರಿಯ ಇಂಜಿನಿಯರ್ ವರ್ಗಾವಣೆ ಕೆಪಿಟಿಸಿಎಲ್ 226 ಕಿರಿಯ ಇಂಜಿನಿಯರ್ ( ವಿದ್ಯುತ್/ಕಾಮಗಾರಿ) ವರ್ಗಾವಣೆ ಆದೇಶದಲ್ಲಿ ಬೇರೆ…
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾಹಿತಿ ಹಂಚಿಕೊಂಡಿದ್ದು, ಯುವಕರಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ಕೌಶಲವೃದ್ಧಿಗಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ಗಳು ಪ್ರಸಕ್ತ ವರ್ಷದಿಂದ ಆರಂಭವಾಗಲಿದ್ದು, 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ವಿವಿಧ ಕೋರ್ಸ್ ಗಳಿಗೆ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ನೀಡಲಾಗಿದೆ. ಈಗ ಹೊಸದಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಆರಂಭಿಸುವ ಮೂಲಕ, ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ವಿಷಯದ ಕಲಿಕೆಗೆ ಅವಕಾಶವನ್ನು ಮಾಡಿಕೊಡಲಾಗುತ್ತಿದೆ. https://twitter.com/KarnatakaVarthe/status/1823337503669027249 https://kannadanewsnow.com/kannada/good-news-for-parents-of-children-500-karnataka-public-schools-to-be-opened-by-next-year/ https://kannadanewsnow.com/kannada/i-am-pro-farmer-wont-let-crops-suffer-siddaramaiah/ https://kannadanewsnow.com/kannada/chief-minister-siddaramaiah-instructs-officials-to-complete-tungabhadra-dam-gate-repair-work-at-the-earliest/