Author: kannadanewsnow09

ವಿಜಯನಗರ: ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ತುಂಗಭದ್ರಾ ಡ್ಯಾಂ ಬಳಿಯಲ್ಲಿ ಕ್ರಸ್ಟ್ ಗೇಟ್ ಕೊಟ್ಟಿ ಹೋಗಿದ್ದನ್ನು ಪರಿಶೀಲಿಸಿದ ಬಳಿಕ ಹೇಳಿದ್ದಾರೆ. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953…

Read More

ಬೆಂಗಳೂರು; ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ವರ್ಷದ ವೇಳೆಗೆ ರಾಜ್ಯಾಧ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್‌ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದಿದ್ದಾರೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1823327788541128788 https://kannadanewsnow.com/kannada/50000-children-to-be-given-free-coaching-for-competitive-exams-from-next-year-madhu-bangarappa/ https://kannadanewsnow.com/kannada/landslide-case-near-shirur-several-parts-of-a-lorry-found-in-gangavali-river/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ಮುಂದಿನ ವರ್ಷದಿಂದ 50,000 ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್‌, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1823331129270698475 https://kannadanewsnow.com/kannada/chief-minister-siddaramaiah-instructs-officials-to-complete-tungabhadra-dam-gate-repair-work-at-the-earliest/ https://kannadanewsnow.com/kannada/landslide-case-near-shirur-several-parts-of-a-lorry-found-in-gangavali-river/

Read More

ಹೊಸಪೇಟೆ:  ತುಂಗಭದ್ರಾ ಜಲಾಶಯ ಮತ್ತೆ ತುಂಬತ್ತದೆ. ಬಾಗಿನ ಅರ್ಪಿಸೋಕೆ ನಾನು ಬರ್ತೀನಿ ಎಂಬುದಾಗಿ ಇಂದು ಸಿ.ಎಂ.ಸಿದ್ದರಾಮಯ್ಯ ಆತ್ಮವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಲವರ್ಷಗಳಿಂದ ತುಂಗಭದ್ರಾ ಜಲಾಶಯದ ದುರಸ್ತಿಯಿಂದಾಗಿ ನೀರು ಪೋಲಾಗುತ್ತಿರುವ ಬಗ್ಗೆ ಪ್ರಶ್ನಿಸಿದ ಮಾಧ್ಯಮದರಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, 2019 ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್ ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ . 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೇಟ್ ನ ಸರಪಳಿ ತುಂಡಾಗಿರುವ ಘಟನೆ ನಡೆದಿದೆ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. ಇಂತಹ ಘಟನೆಗಳಿಗೆ ಯಾರು ಹೊಣೆ ಹೊರುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ನೇಮಿಸಿದ ತುಂಗಭದ್ರ ಮಂಡಳಿ…

Read More

ಹೊಸಪೇಟೆ : ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954…

Read More

ಶಿವಮೊಗ್ಗ: ಆಗಸ್ಟ್.15ರಂದು ಸಾಗರ ನಗರಸಭೆಯ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಸುಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ನಗರಸಭೆ ಆಯುಕ್ತ ಹೆಚ್.ನಾಗಪ್ಪ ಮನವಿ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನಗರಸಭೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್.15ರಂದು ಆಚರಿಸಲಾಗುತ್ತದೆ. ಗಣಪತಿ ಕೆರೆಯ ಸಮೀಪದ ಬೃಹತ್ ಧ್ವಜ ಸ್ಥಂಭದ ಬಳಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಗರ ತಾಲ್ಲೂಕಿನ ಶಾಸಕರಾದಂತ ಬೇಳೂರು ಗೋಪಾಲಕೃಷ್ಣ ಅವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ನಗರಸಭೆಯ ಸದಸ್ಯರು ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿರಲಿದ್ದಾರೆ ಎಂದರು. ಆಗಸ್ಟ್.15ರ ಸ್ವಾತಂತ್ರ್ಯ ಸಂಭ್ರಮದ ವೇಳೆಯಲ್ಲಿ ಸಾಗರ ನಗರದ ಜನತೆ ಪ್ಲಾಸ್ಟಿಕ್ ಧ್ವಜವನ್ನು ಬಳಸಬಾರದು. ಇದು ಕೋರ್ಟ್ ಆದೇಶ ಕೂಡವಾಗಿದೆ. ಒಂದು ವೇಳೆ ಬಳಕೆ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಬಟ್ಟೆಯಿಂದ ಮಾಡಿದಂತ ರಾಷ್ಟ್ರಧ್ವಜವನ್ನು ಬಳಕೆ ಮಾಡಿ, ಪರಿಸರವನ್ನು ಸ್ವಚ್ಛಂದವಾಗಿ ಇರಿಸುವಂತೆ ಮನವಿ ಮಾಡಿದರು. ವರದಿ: ವಸಂತ…

Read More

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು. ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು ಅವರು. ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ…

Read More

ಉತ್ತರ ಕನ್ನಡ: ಜಿಲ್ಲೆಯ ಅಂಕೋಲ ಬಳಿಯ ಶಿರೂರು ಗ್ರಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದಂತ ಮೂವರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಇವರ ಪತ್ತೆಗಾಗಿ ಈಗ ಮುಳುಗು ತಜ್ಞರಿಂದ ಶೋಧಕಾರ್ಯಾಚರಣೆ ಮುಂದುವರೆಸಲಾಗಿದೆ. ಇಂದು ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ತಂಡದ ಮುಳುಗು ತಜ್ಞರಿಂದ ನಾಪತ್ತೆಯಾಗಿರುವಂತ ಮೂವರ ಪತ್ತೆಗಾಗಿ ಶೋಧಕಾರ್ಯಾಚರಣೆ ನಡೆಸಲಾಯಿತು. ಈ ವೇಳೆಯಲ್ಲಿ ಲಾರಿಯ ಜಾಕ್ ಪತ್ತೆಯಾಗಿದೆ ಎಂಬುದಾಗಿ ತಿಳಿದು ಬಂದಿದೆ. ಕೇರಳ ಮೂಲದ ಅರ್ಜುನ್ ಎಂಬ ಲಾರಿ ಡ್ರೈವರ್ ಶಿರೂರು ಗುಡ್ಡ ಕುಸಿತ ಘಟನೆಯ ನಂತ್ರ ನಾಪತ್ತೆಯಾಗಿದ್ದರು. ಇವರಲ್ಲದೇ ಇನ್ನೂ ಇಬ್ಬರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಕಳೆದ ಅರ್ಧ ಗಂಟೆಯಿಂದ ಇಂದು ಮುಳುಗು ತಜ್ಞರಿಂದ ಅವರ ಪತ್ತೆಗಾಗಿ ಗಂಗಾವಳಿ ನದಿಯಲ್ಲಿ ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಲಾರಿಯ ಜಾಕ್ ಸೇರಿದಂತೆ 28 ಬಿಡಿ ಭಾಗಗಳು ಕೂಡ ಇಂದಿನ ಕಾರ್ಯಾಚರಣೆಯ ವೇಳೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಅವುಗಳು ಅರ್ಜುನ್ ಓಡಿಸುತ್ತಿದ್ದಂತ ಲಾರಿಯ ವಸ್ತುಗಳು ಎಂಬುದಾಗಿಯೂ ಮಾಲೀಕರು ಸ್ಪಷ್ಟ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಾದಂತ ಪ್ರಕರಣದ ಅರ್ಜಿಯ ವಿಚಾರಣೆಯನ್ನು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್.21ಕ್ಕೆ ಮುಂದೂಡಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್.20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ ತಿಳಿಸಿ, ಆಗಸ್ಟ್.21ಕ್ಕೆ ವಿಚಾರಣೆಯನ್ನು ಮುಂದೂಡಿದೆ. https://kannadanewsnow.com/kannada/good-news-for-state-government-employees-special-casual-leave-granted-on-august-17/ https://kannadanewsnow.com/kannada/muda-scam-cm-siddaramaiah-faces-more-trouble-another-complaint-to-governor/ https://kannadanewsnow.com/kannada/paralympic-leader-pramod-bhagat-banned-for-18-months-for-doping-violations/

Read More

ಬೆಂಗಳೂರು: ನಗರದಲ್ಲಿ ಆಗಸ್ಟ್.17ರಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವಂತ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದರಲ್ಲಿ ಭಾಗಿಯಾಗೋದಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್.17ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ದಿನಾಂಕ:17.08.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನ, ಹಾಗೂ “ಕಾರ್ಯಾಗಾರ” ಆಯೋಜಿಸಲಾಗಿದೆ ಎಂದಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ…

Read More