Author: kannadanewsnow09

ತುಮಕೂರು: ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಕೆರೆಪಾಳ್ಯದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆರೆಗಳಪಾಳ್ಯದ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮಾರುತಿ ನೆಕ್ಸಾ ಹಾಗೂ ಟಿಯಾಗೋ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಎರಡು ಕಾರುಗಳ ಚಾಲಕರು, ಓರ್ವ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸಮೀಪದ ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಮಧುಗಿರಿ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದಂತ ಟಿಯಾಗೋ ಹಾಗೂ ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದಂತ ಮಾರುತಿ ನೆಕ್ಸಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/dy-cm-dk-shivakumar-clarifies-that-us-tour-is-private-not-meeting-any-leaders/ https://kannadanewsnow.com/kannada/number-of-people-stitching-suits-for-cms-post-has-increased-bjp-to-congress/ https://kannadanewsnow.com/kannada/if-potholes-are-not-closed-in-bengaluru-within-15-days-strict-action-will-be-taken-dk-shivakumar-shivakumar-warns/

Read More

ಬೆಂಗಳೂರು : ತಾವು ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದ್ದು, ತಾವು ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಡಿಸಿಎಂ ಅವರು ಇಂದಿನಿಂದ ಸೆ. 15 ರವರೆಗೆ ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸ ಸಂದರ್ಭದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರು ಮಾಧ್ಯಮ ಹೇಳಿಕೆ ಮೂಲಕ ಈ ಸ್ಪಷ್ಟನೆ ನೀಡಿದ್ದಾರೆ. ಅವರು ಅಮೆರಿಕ ಪ್ರವಾಸ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರವನ್ನು ಸಹ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. https://kannadanewsnow.com/kannada/three-killed-as-two-cars-collide-in-tumkur/ https://kannadanewsnow.com/kannada/number-of-people-stitching-suits-for-cms-post-has-increased-bjp-to-congress/

Read More

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸೂಚ್ ಹೊಲಿಸಿಕೊಳ್ಳೋರ ಸಂಖ್ಯೆ ಹೆಚ್ಚಾಗಿದೆ ಎಂಬುದಾಗಿ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮುಡಾ ಹಗರಣದ ರೂವಾರಿ ಸಿದ್ಧರಾಮಯ್ಯನವರು ರಾಜೀನಾಮೆ ನೀಡುವ ಒಳ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೇರಲು ಸೂಟ್ ಹೊಲೆಸಿಕೊಳ್ಳುವವರ ಸಂಖ್ಯೆ ಹೆಚ್ಚಾಗ ತೊಡಗಿದೆ ಎಂದು ವ್ಯಂಗ್ಯವಾಡಿದೆ. ನಾವೆಲ್ಲರೂ ಸಿದ್ದರಾಯ್ಯನವರ ಬೆಂಬಲಕ್ಕೆ ಬಂಡೆಯಂತೆ ನಿಲ್ಲುತ್ತೇವೆ ಎಂದು ಹೇಳುತ್ತಿದ್ದವರೇ ಈಗ ತಾವು ಸಿಎಂ ಹುದ್ದೆಯ ಆಕಾಂಕ್ಷಿಗಳು ಎನ್ನತೊಡಗಿದ್ದಾರೆ. ಹೀಗಾಗಿ, ಸಿದ್ದರಾಮಯ್ಯನವರ ಕುರ್ಚಿಗೆ ಬಂದಿರುವ ಕಂಟಕವನ್ನ ಸ್ವತಃ ಆ ವಿಘ್ನ ವಿನಾಯಕನೂ ತಪ್ಪಿಸಲಾರ ಎಂದು ಭವಿಷ್ಯ ನುಡಿದಿದೆ. ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರ ಎಪಿಸೋಡ್ ಮುಗಿಯುತ್ತಿದ್ದಂತೆ ಸಚಿವ ಎಂ.ಬಿ ಪಾಟೀಲ್ ತಾವು ಸಿಎಂ ಆಕಾಂಕ್ಷಿಯೆಂದು ಡಂಗೂರ ಸಾರುತ್ತಿದ್ದಾರೆ. ಹೊರಗೆ ಬೆಂಬಲ, ಒಳಗೆ ಹಂಬಲ ವಿಟ್ಟುಕೊಂಡಿರುವ ಕೆಲ ಕಾಂಗ್ರೆಸ್ಸಿಗರೆಲ್ಲಾ ಸಿದ್ದರಾಮಯ್ಯನವರು ಯಾವಾಗ.? ಕುರ್ಚಿ ಖಾಲಿ ಮಾಡುತ್ತಾರೆ ಎಂಬುವುದನ್ನೇ ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದೆ.…

Read More

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವಂತ ಘಟನೆ ತುಮಕೂರಿನ ಕೆರೆಗಳಪಾಳ್ಯದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆರೆಗಳಪಾಳ್ಯದ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದು ಕಾರಿನಲ್ಲಿದ್ದ ಇಬ್ಬರು, ಮತ್ತೊಂದು ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಎರಡು ಕಾರುಗಳ ನಡುವಿನ ಅಪಘಾತದಲ್ಲಿ ಮಹಿಳೆ ಮತ್ತು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಚಿಂತಾಜನಕ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಮಧುಗಿರಿ ಠಾಣೆಯ ಪೊಲೀಸರು ಮೃತರ ಗುರುತಿನ ಬಗ್ಗೆ ಪರಿಶೀಲನೆ ನಡೆಸಿದರು. ಸಾವನ್ನಪ್ಪಿದವರ ಗುರುತು ತಿಳಿಯಬೇಕಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/humanitarian-ideals-of-great-men-should-not-fall-prey-to-conspiracy-of-hate-by-hypocrites-siddaramaiah/ https://kannadanewsnow.com/kannada/how-to-pay-gram-panchayat-property-tax-on-your-smartphone-watch-this-video/ https://kannadanewsnow.com/kannada/alert-beware-of-those-who-use-mobile-phones-excessively-this-dangerous-disease-can-haunt-you/

Read More

ಬೆಂಗಳೂರು : ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು. ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು. ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ…

Read More

ಬೆಂಗಳೂರು: ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಈಗ ಸುಲಭ. ನಿಮ್ಮ ಸ್ಮಾರ್ಟ್ ಪೋನ್ ನಲ್ಲೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಸ್ಮಾರ್ಟ್ ಪೋನ್ ಯುಗದಲ್ಲಿ ಸ್ಮಾರ್ಟ್ ಆಗೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸುವಂತ ವಿಧಾನವನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಪರಿಚಯಿಸಿದೆ. ರಾಜ್ಯದ ಗ್ರಾಮೀಣ ಜನರು ಗ್ರಾಮ ಪಂಚಾಯ್ತಿ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳದೇ ಕುಳಿತಲ್ಲೇ ಮೊಬೈಲ್ ನಲ್ಲಿ ಆಸ್ತಿ ತೆರಿಗೆ ಪಾವತಿಸೋದಕ್ಕೆ ಅವಕಾಶ ನೀಡಿದೆ. ಅದು ಹೇಗೆ ಅಂತ ಈ ಕೆಳಗಿನ ವೀಡಿಯೋ ನೋಡಿ. https://twitter.com/CommrPR/status/1828044457641476535 ನೋಡಿದ್ರಲ್ಲ ಗೂಗಲ್ ಪೇ, ಪೋನ್ ಪೇ, ಪೇಟಿಎಂ ಮೂಲಕ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಸ್ಮಾರ್ಟ್ ಪೋನ್ ಇದ್ರೆ ಸಾಕು, ಕುಳಿತಲ್ಲೇ ಪೇ ಮಾಡಬಹುದು. ನಿಮಗೆ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಸ್ಮಾರ್ಟ್ ಪೋನ್ ನಲ್ಲಿ ಪಾವತಿ ಬಗ್ಗೆ ಅನುಮಾನಗಳಿದ್ದರೇ, ಸಮಸ್ಯೆ ಆಗುತ್ತಿದ್ದರೇ ಏಕೀಕೃತ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ ಪಡೆಯುವಂತೆ…

Read More

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಫೆಲೋಶಿಪ್ ಗೆ ಆಯ್ಕೆಯಾದಂತವರಿಗೆ ರೂ.60,000 ವೇತನ ಪ್ರತಿ ತಿಂಗಳು ಸಿಗಲಿದೆ. ಇಂತಹ ಫೆಲೋಶಿಫ್ ಗಾಗಿ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್ ಆಗಿದೆ. ಈ ಕುರಿತಂತೆ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರವು “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್’ ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ 07 ಹುದ್ದೆಗಳಿಗೆ ಅರ್ಹ ಮತ್ತು ಅನುಭವ ಹೊಂದಿರುವ ಯುವ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಫೆಲೋರವರನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಖಾಲಿ ಇರುವ ತಾಲ್ಲೂಕುಗಳಿಗೆ ನಿಯುಕ್ತಿಗೊಳಿಸಲಾಗುವುದು ಎಂದಿದೆ. ಫೆಲೋಶಿಪ್ ಅಭ್ಯರ್ಥಿಗಳ ಅರ್ಹತೆಗಳು 1) ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 32 ವರ್ಷದೊಳಗಿರಬೇಕು. 2) ಅಭ್ಯರ್ಥಿಗಳು ಸಾಮಾಜಿಕ ವಿಜ್ಞಾನಗಳಾದ ಸಮಾಜಶಾಸ್ತ್ರ ಅಥವಾ ಅರ್ಥಶಾಸ್ತ್ರ ಅಥವಾ ಗ್ರಾಮೀಣಾಭಿವೃದ್ಧಿ ಅಥವಾ ಸಮಾಜ…

Read More

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ ( World Health Organization -WHO) ನಿಯೋಜಿಸಿದ ಅತ್ಯುನ್ನತ ಗುಣಮಟ್ಟದ ಪುರಾವೆಗಳ ಸಮಗ್ರ ವಿಮರ್ಶೆಯ ಪ್ರಕಾರ, ಮೊಬೈಲ್ ಫೋನ್ಗಳನ್ನು ಬಳಸುವುದು, ಎಷ್ಟು ಸಮಯದವರೆಗೆ ಇರಲಿ, ಮೆದುಳು ಮತ್ತು ತಲೆಯ ಕ್ಯಾನ್ಸರ್ಗೆ ಸಂಬಂಧಿಸಿಲ್ಲ. ಪ್ರಯೋಗಾರ್ಥಿಗಳಲ್ಲಿ ಹಲವಾರು ವರ್ಷಗಳ ಮೊಬೈಲ್ ಬಳಕೆಯ ಹೊರತಾಗಿಯೂ ಗ್ಲಿಯೋಮಾ ಮತ್ತು ಲಾಲಾರಸ ಗ್ರಂಥಿ ಗೆಡ್ಡೆಗಳಂತಹ ಕ್ಯಾನ್ಸರ್ಗಳ ಅಪಾಯದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಮೊಬೈಲ್ ಫೋನ್ಗಳು ಮತ್ತು ಮೆದುಳಿನ ಕ್ಯಾನ್ಸರ್ ಅಥವಾ ಇತರ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ಗಳ ನಡುವಿನ ಸಂಬಂಧವನ್ನು ಪುರಾವೆಗಳು ತೋರಿಸುವುದಿಲ್ಲ ಎಂದು ನಾವು ತೀರ್ಮಾನಿಸಿದ್ದೇವೆ. ಮೊಬೈಲ್ ಫೋನ್ ಬಳಕೆ ಗಗನಕ್ಕೇರಿದ್ದರೂ, ಮೆದುಳಿನ ಗೆಡ್ಡೆಯ ಪ್ರಮಾಣವು ಸ್ಥಿರವಾಗಿದೆ ಎಂದು ಪ್ರಮುಖ ಲೇಖಕ ಕೆನ್ ಕರಿಪಿಡಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಟ್ರೇಲಿಯಾದ ವಿಕಿರಣ ರಕ್ಷಣೆ ಮತ್ತು ಪರಮಾಣು ಸುರಕ್ಷತಾ ಸಂಸ್ಥೆ (ಅರ್ಪನ್ಸಾ) ನೇತೃತ್ವದ ವ್ಯವಸ್ಥಿತ ವಿಮರ್ಶೆಯು ಈ ವಿಷಯದ ಬಗ್ಗೆ 5,000 ಕ್ಕೂ ಹೆಚ್ಚು ಅಧ್ಯಯನಗಳನ್ನು ಪರಿಶೀಲಿಸಿದೆ. ರೇಡಿಯೋ ತರಂಗಗಳು…

Read More

ಬೆಂಗಳೂರು: “ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ಬೆಂಗಳೂರಿನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇಂದು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿ, ಕೊಟ್ಟಿರುವ 15 ದಿನಗಳ ಗಡುವಿನ ಒಳಗೆ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕು ಎಂದು ನಿರ್ದೇಶನ ನೀಡಿದ್ದೇನೆ” ಎಂದು ತಿಳಿಸಿದರು. “ರಸ್ತೆ ಗುಂಡಿ ವಿಚಾರವಾಗಿ ಸಾರ್ವಜನಿಕರಿಂದ ಮತ್ತೆ ದೂರು ಬಂದರೆ ಇದಕ್ಕೆ ಜವಾಬ್ದಾರಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಷ್ಟು ಜನ ಅಮಾನತುಗೊಳ್ಳುತ್ತಾರೋ ಗೊತ್ತಿಲ್ಲ” ಎಂದೂ ತಿಳಿಸಿದರು. “ಪಾಲಿಕೆಯ ಪ್ರತಿ ಅಧಿಕಾರಿಗಳು ಎಷ್ಟೇ ದೊಡ್ಡವರಿದ್ದರೂ ಪ್ರತಿಯೊಬ್ಬರೂ ರಸ್ತೆಯಲ್ಲಿ…

Read More

ಬೆಳಗಾವಿ: ರಾಜ್ಯ ಸರ್ಕಾರ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ನಿಷೇಧ ಹೇರಿತ್ತು. ಸರ್ಕಾರ ಈ ನಿರ್ಧಾರದ ವಿರುದ್ಧ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಅಲ್ಲದೇ ಡಿಜೆ ಹಾಕಿಯೇ ಗಣೇಶೋತ್ಸವ ಆಚರಿಸುವಂತೆ ಯುವಕ ಮಂಡಳಿಗೆ ಕರೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ವರ್ಷಕ್ಕೊಮ್ಮೆ ಬರುವಂತ ಗಣೇಶ ಹಬ್ಬದ ವೇಳೆಯಲ್ಲಿ ಡಿಜೆ ಮೂಲಕ ಆಚರಿಸುತ್ತೇವೆ. ಆದರೇ ಹಿಂದೂ ವಿರೋಧಿ ಈ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಡಿಜೆ ಹಾಕದಂತೆ ತೊಂದರೆ ಕೊಡುತ್ತಿದೆ ಎಂಬುದಾಗಿ ಕಿಡಿಕಾರಿದರು. ತುಮಕೂರು ಜಿಲ್ಲೆಯ ಹಿಂದೂ ಸಂಘಟನೆಗಳಿಗೆ ಸರ್ಕಾರ ಡಿಜೆ ಹಾಕದಂತೆ ತೊಂದರೆ ಕೊಡುತ್ತಿದೆ. ಅದರೇ ಪೊಲೀಸರಿಗೆ ನಾವು ಬಗ್ಗುವುದಿಲ್ಲ. ಅದೇನೇ ಆಗಲಿ ಡಿಜೆ ಹಾಕಿಯೇ ಗಣೇಶೋತ್ಸವ ಆಚರಿಸುತ್ತೇವೆ. ಯುವಕ ಮಂಡಳಿಗಳು ಡಿಜೆ ಹಾಕೇ ಗಣೇಶ ಹಬ್ಬ ಮಾಡಿ ಎಂಬುದಾಗಿ ಕರೆ ನೀಡಿದರು. ಡಿಜೆ ಹಾಕುವಂತಿಲ್ಲ. ಇದು ಸುಪ್ರೀಂ ಕೋರ್ಟ್ ಆದೇಶ ಅಂತ ಹೇಳುತ್ತಾರೆ. ಅದೇ ಮಸೀದಿಗಳಲ್ಲಿ ಮೈಕ್ ಗಳಲ್ಲಿ ಆಜಾನ್ ಕೂಗುತ್ತಾರಲ್ವ ಅದಕ್ಕೆ…

Read More