Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧವಾಗಿ ಅವರ ಜೊತೆಗೆ ನಮ್ಮ ಕಡೆಯಿಂದಲೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ಅವರಿಗೆ ತಕ್ಷಣವೇ ಪತ್ರ ಬರೆಯಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅವರು ಬುಧವಾರ ಇಲ್ಲಿನ ಖನಿಜ ಭವನದಲ್ಲಿ ರಾಜ್ಯದ ವಿವಿಧ ವೆಚ್ಚ ಹಂಚಿಕೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೈರುತ್ಯ ರೈಲ್ವೆ ಉನ್ನತಾಧಿಕಾರಿಗಳೊಂದಿಗೆ ಮಹತ್ತ್ವದ ಅನುಸರಣ ಸಭೆ (ಫಾಲೋಅಪ್ ಮೀಟಿಂಗ್) ನಡೆಸಿದರು. ಬಳಿಕ ಮಾತನಾಡಿದ ಅವರು, `ವಿಜಯಪುರ-ಬೆಂಗಳೂರು ನಡುವೆ ಈಗ ರೈಲು ಪ್ರಯಾಣಕ್ಕೆ 15 ಗಂಟೆ ಬೇಕಾಗುತ್ತಿದೆ. ಇದನ್ನು 10 ಗಂಟೆಗಳಿಗೆ ಇಳಿಸಲು ಪ್ರಯತ್ನಗಳು ನಡೆಯುತ್ತಿದ್ದು, ಈಗಾಗಲೇ…
ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರಿನಿಂದ ಬಾಗಲಕೋಟೆಗೆ ಹೊಸದಾಗಿ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರಿನಿಂದ ಬಾಗಲಕೋಟೆಗೆ ಹೊಸದಾಗಿ ಎಸಿ ಸ್ಲೀಪರ್ ಬಸ್ ಸೇವೆ ಪ್ರಾರಂಭವಾಗಲಿದೆ. ಇದರ ಸದುಪಯೋಗವನ್ನು ಪ್ರಯಾಣಿಕರು ಪಡೆಯುವಂತೆ ಮನವಿ ಮಾಡಿದೆ. ಹೀಗಿದೆ ಬಸ್ ಸಂಚಾರದ ವೇಳಾಪಟ್ಟಿ ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಬಾಗಲಕೋಟೆಯನ್ನು ಮರು ದಿನ ಬೆಳಗ್ಗೆ 5.15ಕ್ಕೆ ತಲುಪಲಿದೆ. ಇನ್ನೂ ಬಾಗಲಕೋಟೆಯಿಂದ ರಾತ್ರಿ 9 ಗಂಟೆಗೆ ಬಸ್ ಹೊರಟು, ಬೆಂಗಳೂರನ್ನು ಬೆಳಗ್ಗೆ 5.15ಕ್ಕೆ ತಲುಪಲಿದೆ. ಒಂದೊಂದು ಕಡೆಯಿಂದಲೂ ಬರೋಬ್ಬರಿ 498 ಕಿಲೋಮೀಟರ್ ದೂರವಾಗಲಿದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ, ಹೊಸಪೇಟೆ, ಕುಷ್ಟಗಿ, ಇಳಕಲ್, ಹುನಗುಂದ ಮಾರ್ಗವಾಗಿ ಬಾಗಲಕೋಟೆಯನ್ನು ಹೊಸ ಎಸಿ ಸ್ಲೀಪರ್ ಬಸ್ ತಲುಪಲಿದೆ. ಹೀಗಿದೆ ಟಿಕೆಟ್ ದರ ಬೆಂಗಳೂರು ಟು ಹೊಸಪೇಟೆಗೆ ರೂ.900 ಬೆಂಗಳೂರು ಟು ಕುಷ್ಟಗಿ ರೂ.1033 ಬೆಂಗಳೂರು ಟು ಹುನುಗುಂದ…
ನವದೆಹಲಿ: ದಕ್ಷಿಣ ಆಫ್ರಿಕಾದ ವಿರುದ್ಧದ T20I ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ (C), ಶುಭಮನ್ ಗಿಲ್ (VC)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (WK), ಸಂಜು ಸ್ಯಾಮ್ಸನ್ (WK), ಜಸ್ಪ್ರೀತ್ ಬುಮ್ರಾ, ಅರುಣ್ ಸಿಂಗ್, ವರುಣ್ ಚಕ್ರವರ್ತಿ, ಕೆ. ವಾಷಿಂಗ್ಟನ್ ಸುಂದರ್ https://twitter.com/ANI/status/1996189536347369583
ಛತ್ತೀಸ್ಗಢ : ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಐವರು ನಕ್ಸಲರು ಮತ್ತು ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್ಜಿ)ಯ ಒಬ್ಬ ಜವಾನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದರು. ದಂತೇವಾಡ ಜಿಲ್ಲೆಯ ಪಕ್ಕದಲ್ಲಿರುವ ಗಂಗಲೂರ್ ಪ್ರದೇಶದ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ ಪೊಲೀಸರ ಎರಡೂ ಘಟಕಗಳಾದ ಡಿಆರ್ಜಿ ಮತ್ತು ವಿಶೇಷ ಕಾರ್ಯಪಡೆ ಮತ್ತು ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – ಸಿಆರ್ಪಿಎಫ್ನ ಗಣ್ಯ ಘಟಕ) ದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು. ಇಲ್ಲಿಯವರೆಗೆ, ಐದು ನಕ್ಸಲರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದರು. “ಕಾರ್ಯಾಚರಣೆಯ ಸಮಯದಲ್ಲಿ ಒಬ್ಬ ಡಿಆರ್ಜಿ ಸಿಬ್ಬಂದಿ ಹುತಾತ್ಮರಾಗಿದ್ದು, ಇನ್ನೊಬ್ಬ ಜವಾನ್ ಗಾಯಗೊಂಡಿದ್ದಾರೆ” ಎಂದು ಅವರು…
ಶಿವಮೊಗ್ಗ: ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮ ಕೈಗೊಳ್ಳದ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ, ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ದೂರುದಾರರಾದ ದೇವಾಪ್ರಸಾದ್, ಶಾಂತಿನಗರ, ಶಿವಮೊಗ್ಗ, ವ್ಯವಸ್ಥಾಪಕರು ಯೂನಿಯನ್ ಬ್ಯಾಂಕ್, ವಿನೋಬನಗರ ಶಾಖೆ, ಶಿವಮೊಗ್ಗ, ಯೂನಿಯನ್ ಬ್ಯಾಂಕ್, ರೀಜಿನಲ್ ಆಫೀಸ್, ಶಿವಮೊಗ್ಗ, ಇವರ ವಿರುದ್ಧ ದೂರನ್ನು ಸಲ್ಲಿಸಿ, 1ನೇ ಎದುರುದಾರರ ಬ್ಯಾಂಕಿನ ಹಲವು ವರ್ಷಗಳಿಂದ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ದಿ: 24/05/2024 ರಂದು ಸಂಜೆ ಸುಮಾರು 6.34 ಕ್ಕೆ ರೂ.1,85,500/- ಖಾತೆಯಿಂದ ಕಟಾವಾಗಿರುವುದಾಗಿ ದೂರುದಾರರ ಪೋನ್ಗೆ ಸಂದೇಶ ಬಂದಿರುತ್ತದೆ. ಈ ವಿಷಯವನ್ನು ದೂರುದಾರರು 1ನೇ ಎದುರುದಾರ ಬ್ಯಾಂಕ್ಗೆ ವರದಿ ಮಾಡಿ, ಇದು ಅನಧಿಕೃತವಾದ/ಮೋಸದ ವ್ಯವಹಾರವಾಗಿರುತ್ತದೆ. ಆದ್ದರಿಂದ ಸದರಿ ಮೊತ್ತ ಪಾವತಿ ತಡೆ ಹಿಡಿಯಲು ತಿಳಿಸಿದ್ದು, 1ನೇ ಎದುರುದಾರರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ತದನಂತರ, ದೂರುದಾರರು ಸೈಬರ್ ಕ್ರೈಂ ಪೋಲಿಸ್ ಠಾಣೆ, ಶಿವಮೊಗ್ಗ, ಇವರಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ದೂರುದಾರರು 4ನೇ…
ನವದೆಹಲಿ: ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊಬೈಲ್ ಫೋನ್ಗಳಲ್ಲಿ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ. ಇಂದು ಮುಂಜಾನೆ, ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಲೋಕಸಭೆಯಲ್ಲಿ ಸಂಚಾರ್ ಸಾಥಿ ಸುರಕ್ಷತಾ ಅಪ್ಲಿಕೇಶನ್ನೊಂದಿಗೆ ಬೇಹುಗಾರಿಕೆ ಸಾಧ್ಯವಿಲ್ಲ ಅಥವಾ ಅದು ಸಂಭವಿಸುವುದಿಲ್ಲ ಎಂದು ಹೇಳಿದರು. ಸಂಚಾರ್ ಸಾಥಿ ಅಪ್ಲಿಕೇಶನ್ “ನಾ ಸ್ನೂಪಿಂಗ್ ಸಂಭವ ಹೈ, ನಾ ಸ್ನೂಪಿಂಗ್ ಹೋಗಾ” ಎಂದು ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು. ಕೇವಲ ಒಂದು ದಿನದಲ್ಲಿ ಸ್ವಯಂಪ್ರೇರಿತ ಅಪ್ಲಿಕೇಶನ್ ಡೌನ್ಲೋಡ್ಗಳಲ್ಲಿ 10 ಪಟ್ಟು ಏರಿಕೆಯಾದ ನಂತರ, ಸಂಚಾರ್ ಸಾಥಿ ಅಪ್ಲಿಕೇಶನ್ ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ತೆಗೆದುಹಾಕುತ್ತಿರುವುದಾಗಿ ಟೆಲಿಕಾಂ ಇಲಾಖೆ ತಿಳಿಸಿದೆ. “ಬಳಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ, ಮತ್ತು ಅಪ್ಲಿಕೇಶನ್ ಅನ್ನು ಸ್ಥಾಪಿಸುವ ಆದೇಶವು ಈ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಕಡಿಮೆ ಅರಿವುಳ್ಳ ನಾಗರಿಕರಿಗೆ ಅಪ್ಲಿಕೇಶನ್ ಅನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಉದ್ದೇಶಿಸಲಾಗಿತ್ತು. “ಕಳೆದ ಒಂದು ದಿನದಲ್ಲಿ, 6 ಲಕ್ಷ ನಾಗರಿಕರು ಅಪ್ಲಿಕೇಶನ್ ಡೌನ್ಲೋಡ್ ಮಾಡಲು ನೋಂದಾಯಿಸಿಕೊಂಡಿದ್ದಾರೆ, ಇದು…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 90 ಎಸೆತಗಳಲ್ಲಿ 53ನೇ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬುಧವಾರ ರಾಯ್ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ತಮ್ಮ 53 ನೇ ಏಕದಿನ ಶತಕವನ್ನು ಗಳಿಸಿದರು – ಈ ಸ್ವರೂಪದಲ್ಲಿ ಯಾವುದೇ ಬ್ಯಾಟ್ಸ್ಮನ್ನಿಂದ ಗಳಿಸಿದ ಅತಿ ಹೆಚ್ಚು. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವನ್ನು ಗೆದ್ದುಕೊಂಡ ನಂತರ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ 4 ನೇ ಸ್ಥಾನಕ್ಕೆ ಏರಿದ 37 ವರ್ಷದ ಆಟಗಾರ, ರಾಯ್ಪುರದಲ್ಲಿ ಮತ್ತೊಂದು ಅದ್ಭುತ ಶತಕದೊಂದಿಗೆ ಅವರು ನಿಲ್ಲಿಸಿದ್ದ ಸ್ಥಳದಿಂದ ಮುಂದುವರೆದರು. ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ 49 ಏಕದಿನ ಶತಕಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ, ನಂತರ ಕೊಹ್ಲಿಯ ಸಹ ಆಟಗಾರ ರೋಹಿತ್ ಶರ್ಮಾ (33). 2027 ರ ಏಕದಿನ…
ಬೆಂಗಳೂರು: ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಆ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉಪಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗಿದೆ. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನೆಲ್ಲಾ ನೀಡಲಾಗುತ್ತಿದೆ. ಗ್ರಾಮ ಪಂಚಾಯತಿಗಳಿಗೆ ಇದು ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಹಾಗೂ 199ಸಿ ಸೇರಿಸಲಾಗಿರುತ್ತದೆ. ತಿದ್ದುಪಡಿಯನ್ನು ದಿನಾಂಕ: 07.04.2025 ರಂದು ಅಧಿಸೂಚಿಸಲಾಗಿರುತ್ತದೆ. ಅದರನ್ವಯ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು- 2025ನ್ನು ರೂಪಿಸಲಾಗಿದೆ. ಈ ನಿಯಮಗಳು ದಿನಾಂಕ:17.10.2025ರಿಂದ…
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿ ಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ. ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ. ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರೆದರೆ ಮಾತ್ರ ದೆಹಲಿಗೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು…
ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರೆದರೆ ಮಾತ್ರ ದೆಹಲಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು, ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನ್ನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು. https://kannadanewsnow.com/kannada/breaking-central-government-cancels-mandatory-order-to-pre-install-sanchar-sathi-app/ https://kannadanewsnow.com/kannada/breaking-massive-operation-by-ccb-police-in-bengaluru-drugs-worth-28-crore-seized-two-foreign-nationals-arrested/














