Author: kannadanewsnow09

ನವದೆಹಲಿ : ಮಾಸ್ಟರ್ ಕಾರ್ಡ್ ತನ್ನ ಪುನರ್ರಚನೆಯ ಪ್ರಯತ್ನಗಳ ಭಾಗವಾಗಿ ಜಾಗತಿಕವಾಗಿ ತನ್ನ 3 ಪ್ರತಿಶತದಷ್ಟು ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಹಣಕಾಸು ಸೇವಾ ಕಂಪನಿಯು ತನ್ನ ಕಾರ್ಯಾಚರಣೆಗಳನ್ನು ಸುಗಮಗೊಳಿಸುತ್ತದೆ ಮತ್ತು ಮಾರುಕಟ್ಟೆ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಮಾಸ್ಟರ್ ಕಾರ್ಡ್ ವಜಾಗಳು ಕಂಪನಿಯ ಗುರಿಗಳೊಂದಿಗೆ ತನ್ನ ಸಂಪನ್ಮೂಲಗಳನ್ನು ಹೊಂದಿಸಲು ವಿಶ್ವಾದ್ಯಂತ ಅನೇಕ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಉದ್ಯೋಗ ಕಡಿತವು ಸೆಪ್ಟೆಂಬರ್ 30 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಬ್ಲೂಮ್ಬರ್ಗ್ ವರದಿಯ ಪ್ರಕಾರ, ಮಾಸ್ಟರ್ ಕಾರ್ಡ್ ವಿಶ್ವಾದ್ಯಂತ ತನ್ನ 3 ಪ್ರತಿಶತದಷ್ಟು ಉದ್ಯೋಗಿಗಳನ್ನು ಕಡಿತಗೊಳಿಸಲು ಯೋಜಿಸಿದೆ. ಪಿಂಟ್ಸ್ ವರದಿಯ ಪ್ರಕಾರ, ಈ ವರ್ಷದ ಆರಂಭದಲ್ಲಿ ಬಹಿರಂಗಗೊಂಡ ಮರುಸಂಘಟನೆ ಪ್ರಯತ್ನದ ಭಾಗವಾಗಿ ವಜಾಗೊಳಿಸುವಿಕೆಯು ಸುಮಾರು 1,000 ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದು. ಈ ಉದ್ಯೋಗ ಕಡಿತಗಳನ್ನು ಕಂಪನಿಯ ಪುನರ್ರಚನೆಗಾಗಿ ತನ್ನ ಸಂಪನ್ಮೂಲಗಳನ್ನು ಹೊಂದಿಸಲು ಮತ್ತು ದೀರ್ಘಕಾಲೀನ ಬೆಳವಣಿಗೆಗಾಗಿ ಅದರ ಭವಿಷ್ಯದ ಉದ್ದೇಶಗಳನ್ನು ಪೂರೈಸಲು ಮಾಸ್ಟರ್ ಕಾರ್ಡ್ ನ ಕಾರ್ಯತಂತ್ರವಾಗಿ ನೋಡಬಹುದು.…

Read More

ಬೆಂಗಳೂರು: ಪ್ರಸಕ್ತ(2024-25) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು(ಹೊಸ) ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು(ರಿನೀವಲ್), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಈ ಯೋಜನೆಗಳಡಿ ಸಹಾಯಧನ/ ಸಾಲ, ಸೌಲಭ್ಯ ಪಡೆಯಲು ಇಚ್ಛಿಸುವವರಿಂದ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 30 ಕೊನೆಯ ದಿನವಾಗಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಆಗಿರಬೇಕು. ನಿಗಮವು ಅನುಷ್ಠಾನನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ…

Read More

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್, 31 ರವರೆಗೆ ಅರ್ಜಿ ಸಲ್ಲಿಸಬಹುದು. ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಆಗಸ್ಟ್, 31 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ದೀಕ್ಷಾಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ಆಗಸ್ಟ್ 31 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು. ಯಾತ್ರಾರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿಬೇಕು. ಯಾತ್ರಾರ್ಥಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕು ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.…

Read More

ಶಿವಮೊಗ್ಗ : 2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ‍್ಯಾಲಿ ನಡೆಯುವ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಹಾಗೂ ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಜವಾಹರ ನವೋದಯ ಪ್ರವೇಶ ಪರೀಕ್ಷೆ ಆನ್‌ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆ ಪರೀಕ್ಷೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ದಿ: 18/01/2025 ರಂದು ನಡೆಯಲಿದ್ದು, ಆಸಕ್ತರಿಂದ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://navodaya.gov.in ರ ಮೂಲಕ ಸೆಪ್ಟಂಬರ್ 16 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/kpcc-president-dk-shivakumar-orders-protests-at-district-headquarters-across-the-state-on-august-19/ https://kannadanewsnow.com/kannada/breaking-kuruba-community-backs-cm-siddaramaiah-allows-prosecution/

Read More

ಬೆಂಗಳೂರು: ಕಳೆದ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆಯನ್ನು ನೀಡಲಾಗಿತ್ತು. ಈ ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಅದಕ್ಕೆ ರಾಜ್ಯಪಾಲರು ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಅಧಿಕೃತವಾಗಿ ಕರ್ನಾಟಕ ಗೆಜೆಟ್ ನಲ್ಲಿ ಬದಲಾದಂತ ನಿಯಮವಾಳಿಗಳನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರು ಗೆಜೆಟ್ ಅಧಿಸೂಚನೆಯಲ್ಲಿ ಮಾಹಿತಿ ನೀಡಿದ್ದು, The Kannada Language Comprehensive Development Act, 2022 (Karnataka Act No. 13 of 2023)ರ ಪಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Land Revenue (Second Amendment) Act, 2024 (Karnataka Act No. 38 of 2024) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಅಧಿನಿಯಮ, 2024 (2024…

Read More

ಶಿವಮೊಗ್ಗ : ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಹಾಯಧನ-ಸಾಲ ಸೌಲಭ್ಯ ನೀಡಲು ಆನ್‌ಲೈನ್ ಪೋರ್ಟಲ್ ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.16 ಕಡೆಯ ದಿನವಾಗಿದೆ. ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದ್ದು, 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರ/ನಿಗಮದ ಯೋಜನೆಗಳು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್‌ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ), ವಿದೇಶಿ ವ್ಯಾಸಂಗ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದು. ಅರಿವು ಯೋಜನೆಗೆ ಅಭ್ಯರ್ಥಿ ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ವಾರ್ಷಿಕ ವರಮಾನ ರೂ.3.50 ಲಕ್ಷಗಳಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು. ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ನೇ ಕರ್ನಾಟಕ ಅಧಿನಿಯಮದ ಸಂಖ್ಯೆ: 14) ಪ್ರಕರಣ 3ರ ಉಪ-ಪ್ರಕರಣ (2)ರ ಪರಂತುಕದೊಡನೆ ಓದಿಕೊಂಡ, ಸದರಿ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ರಾಜ್ಯ ಸರ್ಕಾರವು ಈ ಮೂಲಕ ಈ ಮುಂದಿನ ನಿಯಮಗಳನ್ನು ರಚಿಸಿದ, ಅಂದರೆ:- 1. ಚಿಕ್ಕ ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024 ಎಂದು ಕರೆಯತಕ್ಕದ್ದು. (2) ಅವು 2022 ಜುಲೈ 01ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು. 2. ಅನ್ವಯ:- (1) ಈ ನಿಯಮಗಳ ಅಥವಾ ಈ ನಿಯಮಗಳ…

Read More

ಬೆಂಗಳೂರು: ದೊಡ್ಡಬಳ್ಳಾಪುರದ ಬಳಿ 25 ಸಾವಿರ ಕೋಟಿ ರೂ. ಹೂಡಿಕೆ ಮೂಲಕ ಬೃಹತ್‌ ಐಫೋನ್‌ ತಯಾರಿಕಾ ಘಟಕ ಸ್ಥಾಪಿಸುತ್ತಿರುವ ತೈವಾನ್‌ ಮೂಲದ ಫಾಕ್ಸ್‌ಕಾನ್‌ ಕಂಪನಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಜೊತೆಗೆ ಎಲ್ಲ ನೆರವನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಾಕ್ಸ್‌ಕಾನ್‌ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಯಂಗ್‌ ಲಿಯು, ರಾಜ್ಯದಲ್ಲಿ ಸದ್ಯದಲ್ಲೇ ಕಾರ್ಯಾಚರಣೆ ಆರಂಭಿಸಲಿರುವ ಘಟಕವು ಚೀನಾದ ನಂತರದ ಎರಡನೇ ಬೃಹತ್‌ ಘಟಕವಾಗಿದೆ. ಇಲ್ಲಿ 40 ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ. ನಮ್ಮ ಹೂಡಿಕೆ ಇಷ್ಟಕ್ಕೆ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಪರಸ್ಪರ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು. ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು. ನವದೆಹಲಿಯಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸರಕಾರದ ಪರವಾಗಿ ಬೃಹತ್ ಮತ್ತು…

Read More

ಬೆಂಗಳೂರು: ಪ್ರಸಕ್ತ(2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಗೆ ಸಲ್ಲಿಸಬಹುದು. https://kannadanewsnow.com/kannada/good-news-for-uppara-community-in-the-state-applications-invited-for-various-loan-facilities/ https://kannadanewsnow.com/kannada/kpcc-president-dk-shivakumar-orders-protests-at-district-headquarters-across-the-state-on-august-19/ https://kannadanewsnow.com/kannada/breaking-kuruba-community-backs-cm-siddaramaiah-allows-prosecution/

Read More

ಬೆಂಗಳೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗಯೋಜನೆ ಈ ಯೋಜನೆಯಡಿ ವಾರ್ಷಿಕ ವರಮಾನವು ರೂ,8 ಲಕ್ಷಗಳ ಮಿತಿಯಲ್ಲಿ ಇರಬೇಕು. ಗಂಗಾ ಕಲ್ಯಾಣ ನೀರಾವರಿ ಯೋಜನೆ ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಹಾಗೂ ಸಣ್ಣ ಅಥವಾ ಅತೀ ಸಣ್ಣ ರೈತರಾಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 16 ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ…

Read More