Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಎಚ್ಚರಿಕೆಯ ನಂತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 6000 ರಸ್ತೆ ಗುಂಡಿಗಳನ್ನು ಹಗಲು, ರಾತ್ರಿ ಶ್ರಮವಹಿಸಿ ಮುಚ್ಚಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ರಮ್ಯಾ, ಐಎಎಸ್ ಅವರು ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯವನ್ನು ಸರಿಯಾಗಿ ನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಗುತ್ತಿಗೆದಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ತರಬೇತಿ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಿಭಾಗದ ಅಭಿಯಂತರರು ಹಾಗೂ ಗುತ್ತಿಗೆದಾರರ ಜೊತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಹಲವು ಕಡೆ ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಗಮನಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿರುವಂತೆ ನೋಡಿಕೋಳ್ಳಲು ಸೂಚನೆ ನೀಡಲಾಯಿತು. ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಎಲ್ಲೆಲ್ಲಿ ವಿದ್ಯುತ್ ಕಂಬಗಳು ಹಾಳಾಗಿವೆ ಎಂಬುದನ್ನು ಪರಿಶೀಲಿಸಿ ಜಿಯೋ ಲೊಕೇಶನ್ ಮೂಲಕ ಪಟ್ಟಿ ಸಿದ್ದಪಡಿಸಬೇಕು. ಅನಂತರ ತ್ವರಿತಗತಿಯಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಹೊರ ವರ್ತುಲ ರಸ್ತೆ, ಪ್ರಮುಖ ರಸ್ತೆಗಳು ಹಾಗೂ ಮೇಲುಸೇತುವೆಗಳಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಅಧಿಕಾರಿಗಳು ಖುದ್ದು…
ಬೈರುತ್: ಲೆಬನಾನ್ ನಲ್ಲಿ ಅಮೆರಿಕ ನಿಯೋಜಿತ ಭಯೋತ್ಪಾದಕ ಗುಂಪು ಹಿಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 2,800 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಲೆಬನಾನ್ ನಲ್ಲಿರುವ ಇರಾನ್ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಲೆಬನಾನ್ ನಲ್ಲಿ ಸ್ಥಳೀಯ ಕಾಲಮಾನ ಮಧ್ಯಾಹ್ನ 3:30ರ ಸುಮಾರಿಗೆ (ಭಾರತೀಯ ಕಾಲಮಾನ ಸಂಜೆ 6 ಗಂಟೆ) ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 2,800 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವ ಫಿರಾಸ್ ಅಬಿಯಾದ್ ದೃಢಪಡಿಸಿದ್ದಾರೆ. ಟೆಲಿವಿಷನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸ್ಫೋಟದಲ್ಲಿ “ಬಾಲಕಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ” ಎಂದು ಹೇಳಿದರು, “ಸುಮಾರು 2,800 ಜನರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ 200 ಕ್ಕೂ ಹೆಚ್ಚು ಜನರು ಗಂಭೀರವಾಗಿದ್ದಾರೆ” ಎಂದು ಹೇಳಿದರು. ಗಾಯಗಳು ಹೆಚ್ಚಾಗಿ ಮುಖ, ಕೈ ಮತ್ತು ಹೊಟ್ಟೆಯ ಮೇಲೆ ಇದ್ದವು…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಅಕ್ಟೋಬರ್.3ರಂದು ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಕೆಇಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್.3ರಂದು ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದಿದೆ. ಅಂದಹಾಗೇ ಸೆಪ್ಟೆಂಬರ್.22ರಂದು ಪಿಎಸ್ಐ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿತ್ತು. ಆದರೇ ಅದೇ ದಿನಾಂಕದಂದು ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ರಾಜ್ಯ ಸರ್ಕಾರದಿಂದ ಗ್ರೂಪ್-ಸಿ ಮತ್ತು ಬಿ ಹುದ್ದೆಗಳಿಗೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶ ಮಾಡಿದ ಕಾರಣ, ಮುಂದೂಡಲಾಗಿದೆ. ಇನ್ನೂ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್ಸಿಯಿಂದ ಸೆಪ್ಟೆಂಬರ್.19ರ ನಾಳೆಯಿಂದ 28ರವರೆಗೆ ಮತ್ತೊಂದು ಅವಕಾಶವನ್ನು ನೀಡಲಾಗಿದೆ. https://kannadanewsnow.com/kannada/here-are-the-highlights-of-the-cabinet-meeting-chaired-by-cm-siddaramaiah-in-kalaburagi/ https://kannadanewsnow.com/kannada/mini-vidhana-soudha-to-be-renamed-as-praja-soudha-deputy-cm-dk-shivakumar/
ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha
ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು ಪ್ರಜಾ ಸೌಧ ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಮಂಗಳವಾರದಂದು ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ತಾಲ್ಲೂಕುಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನೂ ಕೆಲವು ಕಡೆ ಮಾಡಲಿದ್ದೇವೆ. ಇವುಗಳ ಹೆಸರನ್ನು ಮಿನಿ ವಿಧಾನಸೌಧ ಎನ್ನುವ ಬದಲಾಗಿ ಪ್ರಜಾ ಸೌಧ ಎಂಬುದಾಗಿ ಮರು ನಾಮಕರಣ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು. https://kannadanewsnow.com/kannada/here-are-the-highlights-of-the-cabinet-meeting-chaired-by-cm-siddaramaiah-in-kalaburagi/ https://kannadanewsnow.com/kannada/good-news-for-job-seekers-247-pdo-posts-extended-age-relaxation-of-3-years/
ಕಲಬುರ್ಗಿ: 10 ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಂಗಳವಾರದಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಪ್ರಮುಖ ಮುಖ್ಯಾಂಶಗಳನ್ನು ಮುಂದಿದೆ ಓದಿ. ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಯನ್ನಾಗಿ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ಬೀದರ್ ಮತ್ತು ಗುಲಬರ್ಗಾದಲ್ಲಿ ಬರುವಂತ ಎಲ್ಲಾ ಜನವಸತಿಗಳಿಗೆ ಕುಡಿಯುವ ನೀರು ಒದಗಿಸಲು 7200 ಕೋಟಿ ರೂಪಾಯಿಗಳನ್ನು ಅನುದಾನ ನೀಡಲಾಗಿದೆ. ನಾರಾಯಣಪುರದಿಂದ ನೀರು ತಂದು, ಕುಡಿಯುವ ನೀರು ಒದಗಿಸಿ ಕೊಡುವಂತ ಯೋಜನೆಯಾಗಿದೆ. ರಾಜ್ಯ ಸರ್ಕಾರ ಅರ್ಧ, ಕೇಂದ್ರ ಸರ್ಕಾರ ಅರ್ಧ ಹಣವನ್ನು ಭರಿಸಲಿದೆ. 7200 ಕೋಟಿಯಲ್ಲಿ ಬೀದರ್, ಗುಲಬರ್ಗ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವಂತ ಕಾರ್ಯ ಮಾಡಲಾಗುತ್ತದೆ ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಸಚಿವಾಲಯ ಮಾಡಬೇಕು ಎನ್ನುವಂತ ಒತ್ತಾಯವಿತ್ತು. ಇದಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಪ್ರತ್ಯೇಕ ಸಚಿವಾಲಯ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ 247 ಪಿಡಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ. ಅಲ್ಲದೇ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು “ಸಾಮಾನ್ಯ ಅರ್ಹತ- 35 ವರ್ಷಗಳು, ಪವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ ಈ…
ಕಲಬುರ್ಗಿ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ 50 KKRTC ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ ಜನತೆಯ ಸುಖಕರ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಹೌದು ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವೇಗದೂತ ಮಾದರಿಯ ಬಸ್ಸುಗಳನ್ನು ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಇಂದು 50 ಬಸ್ಗಳನ್ನು ಉದ್ಘಾಟನೆ ಮಾಡಲಾಗಿದೆ. ಈ ಬಸ್ಸುಗಳು ಮೇ|| ಅಶೋಕ ಲೈಲಾಂಡ್ ಕಂಪನಿಯಿಂದ ತಯಾರಿಸಲಾಗಿದ್ದು, 109 ಬಸ್ಸುಗಳ ಖರೀದಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ 45.00 ಕೋಟಿಗಳ ಅನುದಾನವನ್ನು ನೀಡಿದೆ. ಈ ಬಸ್ಗಳಲ್ಲಿ 200 HP ಸಾಮರ್ಥ್ಯದ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಸಂಘದಿಂದ ಕಷ್ಟದಲ್ಲಿದ್ದಂತ ಕೆಲ ಸಮುದಾಯದ ಜನರಿಗೆ ಆರ್ಥಿಕವಾಗಿ ನೆರವು ನೀಡಲಾಗಿದೆ. ಹೀಗೆ ಕಷ್ಟದಲ್ಲಿ ಸಹಾಯ ಮಾಡಿದಂತ ಸಂಘಕ್ಕೆ ಅಷ್ಟೇ ವಿನಮ್ರವಾಗಿ ಸಹಾಯ ಪಡೆದವರು ಧನ್ಯವಾದವನ್ನು ಅರ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮೊಗವೀರ ಸಮಾಜದ ಜನತೆ ಕಡಿಮೆ ಇದ್ದರು ಸಹ, ಸಾಗರ ತಾಲೂಕಿನಲ್ಲಿ ತನ್ನದೆ ಆದ ಚಾಪು ಮುಡಿಸಿದೆ. ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುವುದು. ಪ್ರತಿವರ್ಷ ನೋಟ್ ಬುಕ್ ವಿತರಣೆ. ವಿದ್ಯಾರ್ಥಿ ವೇತನ. ಸಮಾಜದವರು ತೀರಿಕೊಂಡಾಗ ಶವ ಸಂಸ್ಕಾರಕ್ಕೆ ಧನ ಸಹಾಯ ಮಾಡುವುದು ಮೊಗವೀರ ಸಮಾಜದ ಗುರಿಯಾಗಿದೆ ಹಾಗೂ ಮಾಡುತ್ತಾ ಬರುತ್ತಿದೆ. ಮತ್ತೆ ಮುಂದೆ ಒಂದು ಹೆಜ್ಜೆ ಇಟ್ಟ ಮೊಗವೀರ ಸಮಾಜ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೆಲವರು ಭೀಕರ ಕಾಯಿಲೆಯಿಂದ ಬಳಲುತ್ತಿರುವುದನ್ನು ಗಮನಿಸಿ, ಸಂಘದ ವತಿಯಿಂದ ಧನ ಸಹಾಯ ಮಾಡಲಾಗುತ್ತಿದೆ. ದೊಡ್ಡ ಪ್ರಮಾಣದ ಖಾಯಿಲೆ ಇದ್ದಾಗ ತುಂಬಾ ಹಣ ಖರ್ಚಾಗಿ, ಆಸ್ಪತ್ರೆ ಬಿಲ್ ನೋಡಿ ಅಲ್ಪ ಪ್ರಮಾಣದ ಸಹಾಯ ಧನ ನೀಡಲಾಗುತ್ತಿದೆ. ಕಡುಬಡತನದಲ್ಲಿ ಇದ್ದವರಿಗೆ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತ ಟೊಂಕವನ್ನೇ ಅಬಕಾರಿ ಇಲಾಖೆ ಕಟ್ಟಿದೆ ಎನ್ನುವಂತೆ, ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರವನ್ನೇ ಇನ್ಸ್ ಪೆಕ್ಟರ್ ಸಾರಿದ್ದಾರೆ. ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ಮುಂದುವರೆಸಿರುವಂತ ಅವರು, ಬರೋಬ್ಬರಿ 50 ಲೀಟರ್ ಅಕ್ರಮ ಮದ್ಯವನ್ನು ಸೀಜ್ ಮಾಡಿದ್ದಾರೆ. ಅಕ್ರಮ ಮದ್ಯ ತಡೆಗೆ ಇನ್ಸ್ ಪೆಕ್ಟರ್ ಸಂದೀಪ್ ಸಮರ ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಇಲಾಖೆಯ ಇನ್ಸ್ ಪೆಕ್ಟರ್ ಸಂದೀಪ್ ಅವರು ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ಸಂಬಂಧ ಸಮರವನ್ನ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಮರಸೆ ಗ್ರಾಮದಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯ ತಿಳಿದು, ದಾಳಿ ನಡೆಸಿ, ಎಣ್ಣೆ ಸೀಜ್ ಮಾಡಿದ್ದರು. ಈಗ ತಾಲ್ಲೂಕಿನಲ್ಲಿ ಮತ್ತೊಂದೆಡೆ ದಾಳಿಯನ್ನು ನಡೆಸಿದ್ದಾರೆ. ಸಾಗರದಲ್ಲಿ ಅಬಕಾರಿ ಇಲಾಖೆಯಿಂದ ಮುಂದುವರೆದ ದಾಳಿ ಸೋಮವಾರದಂದು ಸಾಗರ ತಾಲ್ಲೂಕಿನ ಸೊರಬ ವಿಧಾನಸಭಾ ಕ್ಷೇತ್ರದ ಆಲಹಳ್ಳಿಯ ಮನೆಯೊಂದರಲ್ಲಿ…