Author: kannadanewsnow09

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ  ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು. ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ.  ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು…

Read More

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನವ ವಿವಾಹಿತರು ದೇವಸ್ಥಾನಕ್ಕೆ ತೆರಳಿ, ಮನೆಗೆ ವಾಪಾಸ್ ಹೋಗುತ್ತಿದ್ದಂತ ಸಂದರ್ಭದಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ನವ ವಿವಾಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ರೇ, ಪತಿ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ತಲಪಾಡಿಯಲ್ಲಿ ಮೊನ್ನೆಯಷ್ಟೇ ಮದುವೆಯಾಗಿದ್ದಂತ ಮಾನಸ ಹಾಗೂ ಅನಿಶ್ ಕೃಷ್ಣ ಎಂಬುವರು ದೇಂತಡ್ಕ ದೇವಸ್ಥಾನಕ್ಕೆ ತೆರಳಿ, ಮನೆಗೆ ವಾಪಾಸ್ ಆಗುತ್ತಿದ್ದರು. ಆಲ್ಟೋ ಕಾರಿನಲ್ಲಿ ಮನೆಗೆ ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿದೆ. ರಸ್ತೆ ಡಿವೈಡರ್ ನಂತ್ರ, ಮತ್ತೊಂದು ಬದಿಯಲ್ಲಿ ಬರುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನವ ವಿವಾಹಿತೆ ಮಾನಸ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದಂತ ಅನಿಶ್ ಕೃಷ್ಣ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಆಲ್ಟೋ ಕಾರು ಡಿಕ್ಕಿಯಾದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದರಲ್ಲಿ ಸಿಲುಕಿದ್ದಂತ ನವ ವಿವಾಹಿತರನ್ನು ಹೊರ…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ವಿಶ್ವದ ಅತಿದೊಡ್ಡ ಚಲನಚಿತ್ರೋದ್ಯಮವಾದ ಬಾಲಿವುಡ್ ದೀರ್ಘಕಾಲದಿಂದ ಭಾರತದ ವೈವಿಧ್ಯಮಯ ಕಥೆಗಳು ಮತ್ತು ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದೆ. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ, ಮುಖ್ಯವಾಹಿನಿಯ ಸಿನೆಮಾಗಳಲ್ಲಿ ಹಿಂದೂಫೋಬಿಯಾದ ಗೊಂದಲಕಾರಿ ಪ್ರವೃತ್ತಿ ಹೊರಹೊಮ್ಮಿದೆ. ಇದು ಹಿಂದೂ ಸಮುದಾಯದಲ್ಲಿ ತಮ್ಮ ಧರ್ಮ ಮತ್ತು ಸಂಸ್ಕೃತಿಯ ಚಿತ್ರಣದ ಬಗ್ಗೆ ಕಳವಳವನ್ನು ಹೆಚ್ಚಿಸಿದೆ. ಹಿಂದೂ ಪಾತ್ರಗಳು, ಚಿಹ್ನೆಗಳು ಮತ್ತು ಸಂಪ್ರದಾಯಗಳನ್ನು ನಕಾರಾತ್ಮಕವಾಗಿ ಚಿತ್ರಿಸುವುದು ಪುನರಾವರ್ತಿತ ವಿಷಯವಾಗಿ ಮಾರ್ಪಟ್ಟಿದೆ. ಇದು ಬಾಲಿವುಡ್ ಹಿಂದೂ ವಿರೋಧಿ ಭಾವನೆಯನ್ನು ಶಾಶ್ವತಗೊಳಿಸುತ್ತಿದೆ ಎಂಬ ಆರೋಪಗಳಿಗೆ ಕಾರಣವಾಗಿದೆ. ಹಾಗಾದ್ರೆ ಐಸಿ 814 ವಿವಾದ ಕಾಕತಾಳೀಯವೋ ಅಥವಾ ಉದ್ದೇಶಪೂರ್ವಕವೋ? ಎನ್ನುವ ಬಗ್ಗೆ ಪುಲ್ ಡೀಟೆಲ್ಸ್ ಮುಂದೆ ಓದಿ. ಹಿಂದೂ ಸಂಸ್ಕೃತಿಯನ್ನು ಅವಹೇಳನಕಾರಿಯಾಗಿ ಚಿತ್ರಿಸುವುದು ಬಾಲಿವುಡ್ ನಲ್ಲಿ ಹೊಸತೇನಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ಅದು ಹೆಚ್ಚಾಗಿದೆ ಎಂದು ತೋರುತ್ತದೆ. ಪಿಕೆ (2014) ಮತ್ತು ಓ ಮೈ ಗಾಡ್ (2012) ನಂತಹ ಚಲನಚಿತ್ರಗಳು ಹಿಂದೂ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮತ್ತು ಅಪಹಾಸ್ಯ ಮಾಡುವ ಮೂಲಕ ವಿವಾದವನ್ನು ಹುಟ್ಟುಹಾಕಿದವು.…

Read More

ಬೆಂಗಳೂರು: ರಾಜ್ಯದಲ್ಲಿ ಗಣೇಶ ಹಬ್ಬದ ದಿನವೇ ವಿವಿಧೆಡೆ ಭೀಕರ ಅಪಘಾತಗಳು ಸಂಭವಿಸಿ, ಐವರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಭೈರಾಪುರ ಗೇಟ್ ಬಳಿಯಲ್ಲಿ ಇಂದು ಟಾಟಾ ಏಸ್ ಪಲ್ಟಿಯಾದ ಪರಿಣಾಮ, ಶ್ರೀಧರ್ (20) ಹಾಗೂ ಧನುಷ್ (20) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯನ್ನು ತರೋದಕ್ಕೆ 9 ಯುವಕರು ಟಾಟಾ ಏಸ್ ನಲ್ಲಿ ತೆರಳಿದ್ದರು. ಈ ವೇಳೆಯಲ್ಲಿ ಭೈರಾಪುರ ಗೇಟ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಶ್ರೀಧರ್ ಹಾಗೂ ಧನುಷ್ ಸಾವನ್ನಪ್ಪಿದ್ದಾರೆ. ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನೂ ಬೆಂಗಳೂರಿನಲ್ಲಿ ಕಾರು ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಆಟೋ ಚಾಲಕ ಕಿರಣ್(32) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಮೀನಗಡ ಹೊರವಲಯದಲ್ಲಿ ನಿಂತಿದ್ದ ಟ್ರಾಕ್ಟರ್ ಗೆ ಬೈಕ್ ಹಿಂಬದಿಯಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಶರಣಬಸಯ್ಯ ಬೆನಕನಾಳಮಠ(16) ಹಾಗೂ ಅಮರೇಶ್ ಬಸಯ್ಯ ಬೆನಕನಾಳಮಠ(21)…

Read More

ಬೆಂಗಳೂರು : “ಮಾನ್ಯ ಸಂಸದರೇ ದರ್ಶನ್, ಮುಡಾ ವಿಚಾರ ಎಲ್ಲವನ್ನು ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಈ ಎರಡು ಯೋಜನೆಗಳಿಗೆ ಇರುವ ವಿಘ್ನ ನಿವಾರಣೆ ಮಾಡಿಸಿ ಎಂದು ಇಲ್ಲಿಂದಲೇ ಪ್ರಹ್ಲಾದ ಜೋಶಿಯವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮುಡಾ, ವಾಲ್ಮೀಕಿ ಪ್ರಕರಣದ ಹಾದಿ ತಪ್ಪಿಸಲು ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲಿನ ಒಳಗಡೆ ಇರುವ ಫೋಟೋವನ್ನು ಸರ್ಕಾರವೇ ಬಿಡುಗಡೆ ಮಾಡಿದೆ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಸಿಎಂ ಈ ರೀತಿ ಪ್ರತಿಕ್ರಿಯಿಸಿದರು. ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು “ಮಹದಾಯಿ ವಿಚಾರವಾಗಿ ಸರ್ವ ಪಕ್ಷ ಸಭೆ ಅಥವಾ ನಿಯೋಗದ ಸಭೆ ನಡೆಸುವುದೋ ಎನ್ನುವ ಬಗ್ಗೆ 15 ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು. ಹಾಗೂ ನಮ್ಮ ಹೋರಾಟದ…

Read More

ಬೆಂಗಳೂರು: ಬೆಂಗಳೂರು ನಡೆಯುತ್ತಿರುವದೇ ನಮ್ಮಿಂದಲೇ ಎನ್ನುವಂತ ಹೇಳಿಕೆಯನ್ನು ಹೊರ ರಾಜ್ಯದ ಯುವತಿಯೊಬ್ಬಳು ಹೇಳಿದ್ದಾರೆ. ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಇಂತಹ ಹೇಳಿಕೆ ನೀಡಿದಂತ ಯುವತಿಯ ವಿರುದ್ಧ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಉತ್ತರ ಭಾರತೀಯ ಮೂಲದ ಯುವತಿಯೊಬ್ಬಳು ನೀಡಿರುವಂತ ಹೇಳಿಕೆ, ಈಗ ಸಾಕಷ್ಟು ಆಕ್ರೋಶ, ಜೊತೆ ಜೊತೆಗೆ ಚರ್ಚೆಗೆ ಗ್ರಾಸವಾಗಿದೆ. ನಿನ್ನೆಯಷ್ಟೇ ಓಲಾ ಆಟೋ ಬುಕ್ಕಿಂಗ್ ಸಂಬಂಧ ಆಟೋ ಚಾಲಕ ಮತ್ತು ಯುವತಿಯ ನಡುವೆ ವಾಗ್ವಾದ ನಡೆದಿತ್ತು. ಈಗ ಆಟೋ ಚಾಲಕನ ವಿರುದ್ಧ ಕಾನೂನು ಕ್ರಮ ಕೂಡ ಆಗಿದೆ. ಈ ಬೆನ್ನಲ್ಲೇ ಹೊರ ರಾಜ್ಯದ ಯುವತಿಯೊಬ್ಬರು ನೀಡಿರುವಂತ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ. https://twitter.com/EnigmaticReddy/status/1831878818828898388 ಓಲಾ ಆಟೋದಲ್ಲಿ ನಡೆದಂತ ಘಟನೆಯನ್ನು ಖಂಡಿಸಿ ಮಾತನಾಡಿರುವಂತ ವೀಡಿಯೋವೊಂದನ್ನು ಯುವತಿ ಹಂಚಿಕೊಂಡಿದ್ದು, ಅದರಲ್ಲಿ ಬೇರೆ ಕಡೆಯಿಂದ ಬಂದು ಬಂದು ಇಲ್ಲಿ ಕೆಲಸ ಮಾಡುತ್ತಿರುವ ನಮ್ಮಂಥವರಿಂದಲೇ ಇಡೀ ಬೆಂಗಳೂರು ಭಿವೃದ್ಧಿಯಾಗುತ್ತಿದೆ. ನಾವೆಲ್ಲ ತೆರಿಗೆ ಕಟ್ಟುತ್ತಿದ್ದೇವೆ. ಇವರಿಗೆ ನಾವು ಬಾಡಿಗೆ ಕಟ್ಟುತ್ತಿದ್ದೇವೆ. ಇಡೀ ಬೆಂಗಳೂರಿನ…

Read More

ಚೆನ್ನೈ: ಶಾಲೆಯೊಂದರಲ್ಲಿ ನೀಡಿದ ಹೇಳಿಕೆಗಾಗಿ ಟೀಕೆಗಳನ್ನು ಎದುರಿಸಿದ ಪ್ರೇರಕ ಮತ್ತು ಆಧ್ಯಾತ್ಮಿಕ ಭಾಷಣಕಾರ ‘ಮಹಾ ವಿಷ್ಣು’ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ‘ಮಹಾವಿಷ್ಣು’ ನಗರಕ್ಕೆ ಹಿಂದಿರುಗುತ್ತಿದ್ದಂತೆ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಅವರು ಕರ್ಮ ಮತ್ತು ಪುನರ್ಜನ್ಮದ ಬಗ್ಗೆ ತಮ್ಮ ಹೇಳಿಕೆಗಳ ಬಗ್ಗೆ ವಿವಾದವನ್ನು ಹುಟ್ಟುಹಾಕಿದರು ಮತ್ತು ಶಿಕ್ಷಕರ ದಿನದಂದು ಜೀವನದಲ್ಲಿ ತಮ್ಮ ಹೋರಾಟಗಳಿಗೆ ಮಕ್ಕಳನ್ನು ದೂಷಿಸಿದರು ಎಂದು ಆರೋಪಿಸಲಾಗಿದೆ. ಅವರ ಹೇಳಿಕೆಯ ಬಗ್ಗೆ ವಿವಾದ ಭುಗಿಲೆದ್ದಿದ್ದರಿಂದ, ರಾಜ್ಯ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರು ಸ್ಪೀಕರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಏತನ್ಮಧ್ಯೆ, ‘ಮಹಾವಿಷ್ಣು’ ಅವರನ್ನು ಭಾಷಣ ಮಾಡಲು ಆಹ್ವಾನಿಸಿದ ಎರಡು ಸರ್ಕಾರಿ ಶಾಲೆಗಳು ಸಹ ಟೀಕೆಗಳನ್ನು ಎದುರಿಸಿದವು. https://kannadanewsnow.com/kannada/our-governments-aim-is-to-make-karnataka-no-1-in-investment-congress/ https://kannadanewsnow.com/kannada/passengers-please-note-from-now-on-children-of-this-age-can-travel-by-train-for-free/

Read More

ಬೆಂಗಳೂರು: ಕರ್ನಾಟಕವನ್ನು ಹೂಡಿಕೆಯಲ್ಲಿ ನಂ1 ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪಕ್ಷವು ಹೇಳಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಅಭಿವೃದ್ಧಿಯಲ್ಲಿ ಕರ್ನಾಟಕ ಮಾದರಿ“ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಲ್ಲಿ ಕರ್ನಾಟಕವು ದೇಶದಲ್ಲೇ 2ನೇ ಸ್ಥಾನದಲ್ಲಿರುವುದನ್ನು ಕೇಂದ್ರ ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ ಎಂದಿದೆ. ಕರ್ನಾಟಕದಲ್ಲಿ ಹೂಡಿಕೆ ಸ್ನೇಹಿ ವಾತಾವರಣ ನಿರ್ಮಿಸುವ ಮೂಲಕ ಮುಂದಿನ ದಿನಗಳಲ್ಲಿ ಕರ್ನಾಟಕವನ್ನು ಹೂಡಿಕೆಯಲ್ಲಿ ನಂ1 ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಬಂಡವಾಳ ಹೂಡಿಕೆಯು ಉದ್ಯೋಗವಕಾಶಗಳಿಗೆ, ಆರ್ಥಿಕ ಬೆಳವಣಿಗೆಗೆ, ಅಭಿವೃದ್ಧಿಗೆ ಪ್ರಮುಖ ಕೊಡುಗೆ ನೀಡಲಿದೆ ಎಂದು ತಿಳಿಸಿದೆ. https://twitter.com/INCKarnataka/status/1832338948829671624 https://kannadanewsnow.com/kannada/passengers-please-note-from-now-on-children-of-this-age-can-travel-by-train-for-free/ https://kannadanewsnow.com/kannada/big-news-big-shock-for-illegal-bpl-card-holders-transfer-to-apl-card-soon/

Read More

ನವದೆಹಲಿ: ಕೋವಿಶೀಲ್ಡ್ ಲಸಿಕೆಗಳು ಭಾರತದಲ್ಲಿ ಕೋವಿಡ್ ರೋಗಿಗಳಲ್ಲಿ ಇತರ ಗಂಭೀರ ಅಡ್ಡಪರಿಣಾಮಗಳ ನಡುವೆ ಥ್ರಾಂಬೋಟಿಕ್ ಥ್ರಾಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಮತ್ತು ಥ್ರಾಂಬೋಸೈಟೋಪೆನಿಯಾಗೆ ಕಾರಣವಾಗಿವೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಭಾರತದಲ್ಲಿ ಅಡೆನೊವೆಕ್ಟರ್ ಆಧಾರಿತ ಕೋವಿಡ್ -19 ಲಸಿಕೆಗಳನ್ನು ಅನುಸರಿಸುವ 100,000 ಲಸಿಕೆ ಪಡೆದ ವ್ಯಕ್ತಿಗಳಲ್ಲಿ 1 ಕ್ಕಿಂತ ಕಡಿಮೆ ಆವರ್ತನದಲ್ಲಿ ಥ್ರಾಂಬೋಸಿಸ್ ವಿತ್ ಥ್ರಾಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) (ಕಡಿಮೆ ಪ್ಲೇಟ್ಲೆಟ್ ಎಣಿಕೆಯೊಂದಿಗೆ ದೊಡ್ಡ ರಕ್ತ ಹೆಪ್ಪುಗಟ್ಟುವಿಕೆಯ ರಚನೆ) ನಂತಹ ಗಂಭೀರ ಪ್ರತಿಕೂಲ ಘಟನೆಗಳು ಕಂಡುಬಂದಿವೆ” ಎಂದು ಮಿಂಟ್ ಪರಿಶೀಲಿಸಿದ ಲಸಿಕೆ-ಸಂಬಂಧಿತ ಪ್ರತಿಕೂಲ ಪರಿಣಾಮಗಳ ಪರಿಷ್ಕೃತ ಮಾರ್ಗಸೂಚಿಗಳು ತಿಳಿಸಿವೆ. ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಅಡೆನೊವೆಕ್ಟರ್ ಆಧಾರಿತ ಲಸಿಕೆಯಾಗಿದೆ. 2005 ರ ರಾಷ್ಟ್ರೀಯ ಎಇಎಫ್ಐ (ಪ್ರತಿರಕ್ಷಣೆಯ ನಂತರದ ಪ್ರತಿಕೂಲ ಪರಿಣಾಮಗಳು) ಮಾರ್ಗಸೂಚಿಗಳನ್ನು 2010, 2015 ಮತ್ತು ಈಗ 2024 ರಲ್ಲಿ ಪರಿಷ್ಕರಿಸಲಾಯಿತು. ಯುಕೆಯಲ್ಲಿ ಕೋವಿಡ್ ಲಸಿಕೆಗಳಿಂದ ಸಾವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಇತ್ತೀಚಿನ ಪರಿಷ್ಕರಣೆಗಳು ಬಂದಿವೆ. ಡಿಜಿಟಲ್ ವ್ಯಾಕ್ಸಿನೇಷನ್ ರೆಕಾರ್ಡಿಂಗ್ ಪರಿಷ್ಕೃತ…

Read More

ಬೆಂಗಳೂರು; ರಾಜ್ಯದ ಜನರು ಯಾವುದೇ ಎಸ್ಕಾಂ ವಿಭಾಗದಿಂದ ವಿದ್ಯುತ್ ಸಂಪರ್ಕ ಪಡೆದಿದ್ದರೂ, ಅವರ ಮೀಟರ್ ದೋಷಪೂರಿತವಾಗಿದ್ದರೇ, ಬದಲಾವಣೆಗೆ ಅವಕಾಶವಿದೆ. ಕೇವಲ 8 ಕೆಲಸದ ದಿನಗಳಲ್ಲಿ ಬದಲಾವಣೆ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಇ-ಆಡಳಿತ) ಸಕಾಲ ಮಿಷನ್ ಮಾಹಿತಿ ಹಂಚಿಕೊಂಡಿದ್ದು, ಸಕಾಲ ಕಾಯ್ದೆಯಡಿ ಅಧಿಸೂಚನೆಗೊಂಡಿರುವ ದೋಷಪೂರಿತ ಮೀಟರ್ ಬದಲಾವಣೆ ಸೇವೆಯನ್ನು 8 ಕೆಲಸದ ದಿನಗಳಲ್ಲಿ ಪಡೆಯಬಹುದಾಗಿದೆ ಎಂದು ತಿಳಿಸಿದೆ. ದೋಷಪೂರಿತ ಮೀಟರ್ ಬದಲಾವಣೆಗೆ ಹೀಗೆ ಅರ್ಜಿ ಸಲ್ಲಿಸಿ https://kuwsdb.karnataka.gov.in ಗೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯಲ್ಲಿ ಸೇವೆ ದೊರಕದಿದ್ದಲ್ಲಿ, ಮೇಲ್ಮನವಿ ಸಲ್ಲಿಸಲು https://sakala.kar.nic.in/Online_Appeal/Online/Appeal-I.aspx ಗೆ ಭೇಟಿ ನೀಡಿ, ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 080-44554455 ಸಂಖ್ಯೆಗೆ ಸಂಪರ್ಕಿಸಿ ಪಡೆಯಬಹುದಾಗಿದೆ. https://twitter.com/SakalaMission/status/1831925855440007230 https://kannadanewsnow.com/kannada/good-news-for-sc-st-farmers-applications-invited-for-distribution-of-farm-implements-at-concessional-rates/ https://kannadanewsnow.com/kannada/agni-4-ballistic-missile-successfully-launched-in-odisha/ https://kannadanewsnow.com/kannada/good-news-good-news-for-tb-patients-centre-approves-new-treatment-eliminates-tb-in-6-months/

Read More