Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನಲ್ಲಿ ರೈತರ ಮಕ್ಕಳಿಗಾಗಿ ನಡೆಸುವ 10 ತಿಂಗಳ ತರಬೇತಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಅಥವಾ ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶಿವಮೊಗ್ಗ ಕಛೇರಿಯಿಂದ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಏ.01 ರೊಳಗಾಗಿ ಆಯಾ ಸಂಬಂಧ ಪಟ್ಟ ಕಛೇರಿಗಳಿಗೆ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ತರಬೇತಿಗೆ ಅರ್ಹತೆಗಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತಿರ್ಣರಾಗಿರಬೇಕು ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಹೆಚ್ಚಿನ ವಿವರಗಳಿಗೆ ದೂ. ಸಂ.: 08182-222794/6986950460 ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಶಿವಮೊಗ್ಗ…
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ ಸಂಬಂಧ ಶಂಕಿತ ಆರೋಪಿಯು ಬಿಎಂಟಿಸಿಯ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಸಿದಂತ ಆತಂಕಕಾರಿ ಮಾಹಿತಿ ಬಹಿರಂಗಗೊಂಡಿದೆ. ಆತನ ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ ಅನ್ನೋ ಮಾಹಿತಿ ಮುಂದೆ ಓದಿ. ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಕಕ್ಕೂ ಮುನ್ನಾ, ಶಂಕಿತ ಆರೋಪಿ ಬಿಎಂಟಿಸಿಯ ವೋಲ್ವೋ ಬಸ್ಸಿನಲ್ಲಿ ಪ್ರಯಾಣ ಮಾಡಿರೋ ಮಾಹಿತಿ ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಬೆಂಗಳೂರಿನ ಡಿಪೋ-3ರಕ್ಕೆ ಸೇರಿದಂತ ಕೆಎ-57, ಎಫ್-186 ಬಸ್ಸಿನಲ್ಲಿ ಶಂಕಿತ ಆರೋಪಿ ರೂಟ್ ನಂ.500ಸಿ ನಲ್ಲಿ ಪ್ರಯಾಣಿಸಿದ್ದಾನೆ. ಬನಶಂಕರಿಯಿಂದ ಐಟಿಪಿಎಲ್ ಮಾರ್ಗದ ನಡುವೆ ಸಂಚರಿಸುವಂತ ಈ ಬಸ್ ಸಿಲ್ಕ್ ಬೋರ್ಡ್ ಮೂಲಕ ಕೂಡ ಸಂಚರಿಸುತ್ತೆ. ಇಂತಹ ಬಿಎಂಟಿಸಿ ವೋಲ್ವೋ ಬಸ್ಸನ್ನು ಶಂಕಿತ ಬಾಂಬ್ ಬ್ಲಾಸ್ಟ್ ಆರೋಪಿ ಕುಂದಲಹಳ್ಳಿ ಬಸ್ ನಿಲ್ದಾಣದಲ್ಲಿ ಹತ್ತಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಕುಂದಲಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ, ಸಿಎಂಆರ್ ಐಟಿ ಕಾಲೇಜಿನ ಬಳಿ ಇಳಿದಿರೋ ಮಾಹಿತಿಯನ್ನು ಬಸ್ ಚಾಲಕ, ಕಂಡಕ್ಟರ್ ಮೂಲಕ ಮಾಹಿತಿ…
ಬೆಂಗಳೂರು: ರಾಮೇಶ್ವರಂ ಕೆಫೆ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಹಿಂದೆ ದೊಡ್ಡ ಕಾರ್ಯತಂತ್ರ ಅಡಗಿದೆ.ರಾಜ್ಯ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದರೆ, ಭಯೋತ್ಪಾದಕರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್ ಐಎ ಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಪೋಟಗೊಂಡು ತೀವ್ರವಾಗಿ ಗಾಯಗೊಂಡಿದ್ದರೂ ಅದರ ಗಂಭೀರತೆ ಸರ್ಕಾರಕ್ಕೆ ಇಲ್ಲ. ಅದು ಲಘು ಬಾಂಬ್ ಅಂತ ಹೇಳುತ್ತಾರೆ. ಗಂಭೀರವಾಗಿ ಪರಿಗಣಿಸಲು ಸಾವು ನೋವು ಆಗಬೇಕೆ. ಇದರ ಹಿಂದೆ ದೊಡ್ಡ ಸ್ಲೀಪರ್ ಸೆಲ್ ಇದೆ. ಒಂದು ಕಡೆ ಪಾಕಿಸ್ತಾನ ಜಿಂದಾಬಾದ್ ಅಂತ ಹೇಳಿದ್ದಾರೆ. ಇದೆಲ್ಲದರ ಹಿಂದ ದೊಡ್ಡ ಕಾರ್ಯತಂತ್ರ ಅಡಗಿದೆ. ಈ ಪ್ರಕರಣವನ್ನು ತಕ್ಷಣ ಎನ್ ಐಎ ಗೆ ವಹಿಸಬೇಕು. ಇದರಿಂದ ಅಂತಾರಾಷ್ಟ್ರೀಯ ಮಟ್ಟದ ಲಿಂಕ್ ಇರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ, ಅವರಿಗೆ ಪ್ರೊತ್ಸಾಹ ಕೊಟ್ಡಂತಾಗುತ್ತದೆ ಎಂದು ಹೇಳಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯಿರುವಂತ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಉಂಟಾದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಈ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ನಡೆಸುತ್ತಿರುವಂತ ಸಿಸಿಬಿಯ ಅಧಿಕಾರಿಗಳು ಧಾರವಾಡ, ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರೋದಾಗಿ ತಿಳಿಸಿವೆ. ಅಂದಹಾಗೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಇಲ್ಲಿಯವರೆಗೆ ಪಡೆದ ವಿವಿಧನ್ನ ಸುಳಿವುಗಳ ಆಧಾರದ ಮೇಲೆ ಹಲವಾರು ತಂಡಗಳು ತನಿಖೆಯನ್ನು ನಡೆಸುತ್ತಿವೆ. ಪ್ರಕರಣದ ಸೂಕ್ಷ್ಮತೆ, ಭದ್ರತಾ ದೃಷ್ಠಿಯಿಂದ ಮಾಧ್ಯಮಗಳು ಊಹಾಪೋಹಗಳಲ್ಲಿ ತೊಡಗದಂತೆ, ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/minister-chaluvarayaswamy-accuses-bjp-of-being-involved-in-rameswaram-cafe-blast/
ಬೆಂಗಳೂರು: ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂಬುದಾಗಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಈ ಹಿಂದೆಯೂ ಹಲವು ಬಾರಿ ನಡೆದಂತ ಪ್ರಕರಣಗಳಲ್ಲಿ ಬಿಜೆಪಿಯವರ ಕೈವಾಡವಿತ್ತು. ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಬ್ಲಾಸ್ಟ್ ಪ್ರಕರಣದ ಹಿಂದೆ ಬಿಜೆಪಿಯವರ ಕೈವಾಡ ಇರೋದಾಗಿ ಶಂಕೆ ವ್ಯಕ್ತವಾಗಿದೆ ಎಂದರು. ರಾಮೇಶ್ವರಂ ಕೆಫೆ ಬ್ಲಾಸ್ಟ್ ಬ್ಯುಸಿನೆಸ್ ವೈಷಮ್ಯದಿಂದಲೂ ನಡೆದಿರೋದು ಮೇಲ್ ನೋಟಕ್ಕೆ ಕಂಡು ಬರುತ್ತಿದೆ. ಅವರ ಹೋಟೆಲ್ ಬ್ಯುಸಿನೆಸ್ ಚೆನ್ನಾಗಿ ನಡೆಯುತ್ತಿದೆ. ಬೆಂಗಳೂರಿನ ಹಲವೆಡೆ ಅವರ ಕೆಫೆಗಳಿದ್ದಾವೆ ಎಂದು ಹೇಳಿದರು. ರಾಮೇಶ್ವರಂ ಕೆಫೆ ಸ್ಪೋಟಕದಂತೆ ಇಂತಹ ಹಲವು ಘಟನೆಗಳಲ್ಲಿ ಬಿಜೆಪಿಯವರ ಕೈವಾಡವಿದೆ. ಆದರೇ ನಾನು ಅವರೇ ಮಾಡಿದ್ದಾರೆ ಎಂದು ಹೇಳುತ್ತಿಲ್ಲ. ಇರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರೇ ಮಾಡಿದ್ದಾರೇ, ಇವರು ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕು ಎಂದರು. ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಪೊಲೀಸರು ಶರವೇಗದಲ್ಲಿ ನಡೆಸುತ್ತಿದ್ದಾರೆ.…
ಶಿವಮೊಗ್ಗ: ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಸೂಡಾ ಪರಿಷ್ಕøತ ಮಹಾಯೋಜನೆ(ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಸೋಮಿನಕೊಪ್ಪದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 01 ಎಕರೆ 09 ಗುಂಟೆ…
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಉಂಟಾದಂತ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿರುವಂತ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಂತ ಆಸ್ಪತ್ರೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಬಳಿಕ ಮಾತನಾಡಿದಂತ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಸೂಚಿಸಲಾಗಿದೆ ಎಂದರು. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಆದಾಗ ಮಹಿಳೆ ಸ್ವರ್ಣಾಂಭ ಎಂಬುವರು ಸ್ಥಳದಲ್ಲೇ ಇದ್ದಿದ್ದರಿಂದ ಹೆಚ್ಚು ಗಾಯಗೊಂಡಿದ್ದಾರೆ. ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮೂವರಲ್ಲಿ ಒಬ್ಬರು ಇಂದು ಡಿಚ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಯಾವುದೇ ಭದ್ರತಾ ಲೋಪ ಆಗಿಲ್ಲ. ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಗೂ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೂ ಯಾವುದೇ ಸಂಬಂಧವಿಲ್ಲ. ಪೊಲೀಸರು ಎಲ್ಲಾ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. https://kannadanewsnow.com/kannada/maha-shivratri-2024-heres-the-date-history-significance-puja-timings-other-important-information/ https://kannadanewsnow.com/kannada/good-news-for-job-seekers-bmtc-invites-applications-for-2500-vacancies/
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿ ಸೇರ್ಪಡೆಯಿಂದ ಹಾವೇರಿ ಜಿಲ್ಲಾ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ. ಸಾಮಾಜಿಕವಾಗಿ ಬಿಜೆಪಿಗೆ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನೋಹರ್ ತಹಸೀಲ್ದಾರ್ ಹಾನಗಲ್ ನಲ್ಲಿ ಸುದೀರ್ಘ ರಾಜಕಾರಣದಲ್ಲಿ ಸಕ್ರೀಯರಾಗಿದ್ದರು. 1986 ರಲ್ಲಿ ಸಿಎಂ ಉದಾಸಿಯವರು ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿ ಬಂದ ಮೇಲೆ ಹಾನಗಲ್ ತಾಲೂಕಿನ ರಾಜಕಾರಣ ಇಬ್ಬರ ನಡುವೆ ನಡೆಯಿತು. ಆದರೆ, ಇಬ್ಬರ ನಡುವೆ ಯಾವತ್ತೂ ವೈರತ್ವ ಇರಲಿಲ್ಲ. ಇಬ್ಬರೂ ಒಬ್ಬರಿಗೊಬ್ಬರು ಗೌರವಿಸುತ್ತಿದ್ದರು ಎಂದರು. ಆದರೆ, ಇತ್ತೀಚಿನ ರಾಜಕಾರಣ ಕಲುಷಿತಗೊಂಡಿದೆ ಹಾನಗಲ್ ತಾಲೂಕಿನಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಹಾನಗಲ್ ನಲ್ಲಿ ಯಾವತ್ತೂ ಪೊಲಿಸ್ ಸ್ಟೇಷನ್ ರಾಜಕಾರಣ ಇರಲಿಲ್ಲ ಎಂದರು. ಹಾನಗಲ್ ನಲ್ಲಿ ಕಾಂಗ್ರೆಸ್ ಪಕ್ಷವನ್ಬು ಕಟ್ಡಿದವರು ಮನೋಹರ್ ತಹಸೀಲ್ದಾರ್. ಆದರೆ, ಅಲ್ಲಿ ಅವರ ಪಕ್ಷದ ಕಾರ್ಯಕರ್ತರಿಗೆ ನ್ಯಾಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿನ ರಾಮೇಶ್ವರಂ ಕಫೆ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿದೆ. ಈ ಮೂಲಕ ಹೆಚ್ಎಎಲ್ ಪೊಲೀಸರಿಂದ ಸಿಸಿಬಿ ಪೊಲೀಸರ ತನಿಖೆಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು ಬೆಂಗಳೂರಿನ ರಾಮೇಶ್ವರಂ ಕಫೆ ಬಾಂಬ್ ಸ್ಪೋಟ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸುತ್ತಿರೋದಾಗಿ ತಿಳಿಸಿದೆ. ಹೆಚ್ ಎಎಲ್ ಠಾಣೆಯಿಂದ ಪ್ರಕರಣವನ್ನು ಸಿಸಿಬಿಯ ನವೀನ್ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ನಿನ್ನೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ 10 ಮಂದಿ ಗಾಯಗೊಂಡಿದ್ದರು. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಭೇಟಿಯಾದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಆರೋಗ್ಯ ವಿಚಾರಿಸಿದ್ದರು. ನಿನ್ನೆ ಮಧ್ಯಾಹ್ನದ ವೇಳೆಯಲ್ಲಿ ನಡೆದಿದ್ದಂತ ಈ ಘಟನೆಯಿಂದಾಗಿ ಬೆಂಗಳೂರು ಜನತೆ ಬೆಚ್ಚಿ ಬಿದ್ದಿದ್ದರು. ಆರಂಭದಲ್ಲಿ ಸಿಲಿಂಡರ್ ಬ್ಲಾಸ್ಟ್ ಎನ್ನಲಾಗಿತ್ತು. ಆದ್ರೇ ಸುಧಾರಿತ ಐಇಡಿ ಬಳಸಿ ಸ್ಪೋಟಿಸಿರೋದು ತನಿಖೆಯಲ್ಲಿ ಪತ್ತೆಯಾಗಿತ್ತು. ಜೊತೆಗೆ ಇಡ್ಲಿ ತಿಂದು ಬ್ಯಾಗ್ ಇಟ್ಟು ಹೋಗಿದ್ದಂತ ಶಂಕಿತ ವ್ಯಕ್ತಿಯೊಬ್ಬ ಟೈಮರ್ ಬಳಸಿ ಬ್ಲಾಸ್ಟ್…
ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವಂತ 2,500 ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂ.ಮ.ಸಾ.ಸಂಸ್ಥೆಯು ಮಾಹಿತಿ ನೀಡಿದ್ದು, ದಿನಾಂಕ:02.03.2024 ರಂದು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿ, ಸಂಸ್ಥೆ ಬಗ್ಗೆ ಹಿತ ನುಡಿಗಳನ್ನು ನುಡಿದರು. ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 200 ಮೃತಾವಲಂಭಿತರುಗಳನ್ನು ಕಳೆದ ಅಕ್ಟೋಬರ್ ಮತ್ತು ನವೆಂಬರ್-2023ರಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಅಲ್ಲದೇ, ಪ್ರಸ್ತುತ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿ ಕಿರಿಯ ಸಹಾಯಕ…