Author: kannadanewsnow09

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ವಿರಾಟ್ ಕೊಹ್ಲಿ ಕಾರಣ ಎಂದು ಕರ್ನಾಟಕ ಸರ್ಕಾರ ತನ್ನ ವರದಿಯಲ್ಲಿ ಆರೋಪಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಫಲಿತಾಂಶಗಳನ್ನು ಗೌಪ್ಯವಾಗಿಡುವಂತೆ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡಿದ್ದರೂ, ವರದಿಯನ್ನು ತಡೆಹಿಡಿಯಲು “ಯಾವುದೇ ಕಾನೂನು ಸಮರ್ಥನೆ” ಇಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪೊಲೀಸ್ ಅನುಮೋದನೆಯಿಲ್ಲದೆ ಆರ್‌ಸಿಬಿ ಪೆರೇಡ್ ಆಯೋಜಿಸಿತ್ತು ಎನ್‌ಡಿಟಿವಿ ಪ್ರಕಾರ, ಆರ್‌ಸಿಬಿ ಕಡ್ಡಾಯ ಅನುಮತಿಗಳನ್ನು ಪಡೆಯದೆ ಪೆರೇಡ್ ಆಯೋಜಿಸಿದೆ ಎಂದು ವರದಿ ಹೇಳಿದೆ. ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಜೂನ್ 3 ರಂದು ತಂಡವು ಪೊಲೀಸರಿಗೆ ಮಾಹಿತಿ ನೀಡಿದ್ದರೂ, ಸಂವಹನವು ಕೇವಲ ಸೂಚನೆಯಾಗಿತ್ತು, ಕಾನೂನಿನ ಪ್ರಕಾರ ಅನುಮೋದನೆಗಾಗಿ ಔಪಚಾರಿಕ ವಿನಂತಿಯಾಗಿರಲಿಲ್ಲ. ಇದು ಸೂಚನೆಯ ಸ್ವರೂಪದ್ದಾಗಿತ್ತು, ಕಾನೂನಿನ ಅಡಿಯಲ್ಲಿ ಅಗತ್ಯವಿರುವಂತೆ ಅನುಮತಿಗಾಗಿ ವಿನಂತಿಯಾಗಿರಲಿಲ್ಲ ಎಂದು ವರದಿ ಹೇಳಿದ್ದು, ಕನಿಷ್ಠ ಏಳು ದಿನಗಳ…

Read More

ಬೆಂಗಳೂರು: ಇತ್ತೀಚೆಗೆ ಗೂಗಲ್ ಟ್ರಾನ್ಸಲೇಷನ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಜೊತೆ ಜೊತೆಗೆ ಗೂಗಲ್ ವಿಷಯ ಯಾವುದೇ ಇದ್ದರೂ ಟ್ರಾನ್ಸಲೇಟ್ ಮಾಡಲೇ ಅಂತ ಕೇಳುತ್ತಿರುತ್ತದೆ. ಹೀಗೆ ಗೂಗಲ್ ಟ್ರಾನ್ಸಲೇಟ್ ಮಾಡಿದಂತ ಎಡವಟ್ಟಿಗೆ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದಾರೆ. ಅಲ್ಲದೇ ಗೂಗಲ್ ತಪ್ಪು ತಪ್ಪು ಭಾಷಾಂತರದ ಬಗ್ಗೆ ಮೆಟಾಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ. ಹೌದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೂಗಲ್ ಟ್ರಾನ್ಸಲೇಷನ್ ಎಡವಟ್ಟಿನ ಕುರಿತಂತೆ ಮೆಟಾ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಇದೀಗ ಸಿಎಂ ಸಿದ್ಧರಾಮಯ್ಯ ಮೆಟಾಗೆ ಭಾಷಾಂತರದ ಎಡವಟ್ಟಿನ ಬಗ್ಗೆ ಪತ್ರ ಬರೆದಿರುವಂತ ವಿಷಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಕೂಡ ಆಗುತ್ತಿದೆ. ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹುಭಾಷಾ ನಟಿ ಬಿ.ಸರೋಜಾದೇವಿ ಅಂತಿಮ ದರ್ಶನಕ್ಕೆ ತೆರೆಳಿ, ಅಂತಿಮ ದರ್ಶನ ಪಡೆದು ಬಂದ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಅನ್ನು ಮೆಟಾ ಭಾಷಾಂತರ ಮಾಡಿದಾಗ ತಪ್ಪು ತಪ್ಪು ಅರ್ಥ ಬರುವಂತೆ ಆಗಿತ್ತು. ಇದರ ಬಗ್ಗೆಯೇ ಮೆಟಾಗೇ…

Read More

ಪಾಟ್ನ: ದೇಶದಲ್ಲೇ ಬೆಚ್ಚಿ ಬೀಳಿಸು ಕೃತ್ಯ ಎನ್ನುವಂತೆ ಆಸ್ಪತ್ರೆ ವಾರ್ಡ್ ಗೆ ನುಗ್ಗಿ ಗ್ಯಾಂಗ್ ಸ್ಟರ್ ನನ್ನು ಭೀಕರವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವಂತ ಘಟನೆ ಪಾಟ್ನಾದಲ್ಲಿ ನಡೆದಿದೆ. ಗನ್ ಹಿಡಿದು ಆಸ್ಪತ್ರೆಯ ಐಸಿಯು ವಾರ್ಡ್ ಒಳಗೆ ನುಗ್ಗಿದಂತ ಹಂತಕರು, ಅಲ್ಲಿದ್ದಂತ ಗ್ಯಾಂಗ್ ಸ್ಟರ್ ಒಬ್ಬನನ್ನು ಗುಂಡಿಕ್ಕಿ ಹತ್ಯೆಗೈದಿರುವಂತ ಘಟನೆ ಪಾಟ್ನಾದ ಪರಾಸ್ ಆಸ್ಪತ್ರೆಯಲ್ಲಿ ನಡೆದಿದೆ. ಪಾಟ್ನಾದಾ ಪರಾಸ್ ಆಸ್ಪತ್ರೆಯ ವಾರ್ಡ್ ನಂ 209ರಲ್ಲಿ ಗ್ಯಾಂಗ್ ಸ್ಟರ್ ಆಗಿದ್ದಂತ ಚಂದನ್ ಮಿಶ್ರಾ ಎಂಬಾತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಆಸ್ಪತ್ರೆಗೆ ಗನ್ ಹಿಡಿದು ಎಂಟ್ರಿ ಕೊಟ್ಟಂತ ಐವರು ಹಂತಕರು, ಗ್ಯಾಂಗ್ ಸ್ಟರ್ ಚಂದನ್ ಮಿಶ್ರ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಬಿಹಾರದ ಪಾಟ್ನಾದಲ್ಲಿನ ಪರಾಸ್ ಆಸ್ಪತ್ರೆಯಲ್ಲಿ ಮರ್ಡರ್ ಕೇಸಲ್ಲಿ ಜೈಲುಪಾಲಾಗಿದ್ದಂತ ಚಂದನ್ ಮಿಶ್ರಾ ಚಿಕಿತ್ಸೆ ಪಡೆಯುತ್ತಿದ್ದರು. ಪೆರೋಲ್ ಪಡೆದು ಚಂದನ್ ಮಿಶ್ರಾ ಚಿಕಿತ್ಸೆ ಪಡೆಯುತ್ತಿದ್ದಂತ ವಿಷಯ ತಿಳಿದು ಐವರು ಹಂತಕರು ಆಸ್ಪತ್ರೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಈ ಎಲ್ಲಾ ದೃಶ್ಯ…

Read More

ಬೆಂಗಳೂರು: ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷರಿಗೆ, ನಾಯಕರಿಗೆ ಸವಾಲ್ ಹಾಕಿದ್ದಾರೆ. ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದಿದ್ದಾರೆ. ವಿಜಯೇಂದ್ರ ಅವರಿಗೆ ಓದುವ ಅಭ್ಯಾಸ ಇದ್ದರೆ ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ ಎಂದು ಗುಡುಗಿದ್ದಾರೆ. ಬಂಡಾರುಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ…

Read More

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…

Read More

ಬೆಂಗಳೂರು: ಹಾವು ಕಡಿದಿದೆ ಅಂದ್ರೆ ಸಾವೇ ಗ್ಯಾರಂಟಿ ಎನ್ನುವು ಒಂದು ಕಾಲದ ಮಾತಾಗಿತ್ತು. ಈಗ ಅದು ಬದಲಾಗಿದೆ. ಹಾವು ಕಡಿತಕ್ಕು ಔಷಧಿ ಬಂದಿದೆ. ಹೀಗಾಗಿ ಹಾವು ಕಡಿದಿದೆ ಎಂದ ಮಾತ್ರಕ್ಕೆ ಆತಂಕ ಬೇಡ. ಅದರ ಬದಲಾಗಿ ಕೆಲ ಮುನ್ನೆಚ್ಚರಿಕೆ ವಹಿಸಿದ್ರೇ ಖಂಡಿತವಾಗಿ ಜೀವ ಉಳಿಸಬಹುದು. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಹಾವು ಕಡಿತವು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, ಸೆಕ್ಷನ್ 3ರ ಅಡಿಯಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿರುವುದಾಗಿ ತಿಳಿಸಿದೆ. ಹಾವು ಕಟ್ಟಿದ ಸಂದರ್ಭದಲ್ಲಿ ಏನು ಮಾಡಬೇಕು? ಹೆದರದಿರಿ ಹಾವು ಕಚ್ಚಿದ ವ್ಯಕ್ತಿಯನ್ನು ಸಮಾಧಾನವಾಗಿರಿಸಿ ಹಾವಿನಿಂದ ನಿಧಾನವಾಗಿ ದೂರ ಸರಿಯಿರಿ ಹಾವು ಕಚ್ಚಿದ ದೇಹದ ಭಾಗವನ್ನು ಏನೂ ಮಾಡದಿರಿ ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಟ್ ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಿರಿ. ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಹಾವು ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಿ.…

Read More

ಬೆಂಗಳೂರು: ಅನೇಕ ಪೊಲೀಸ್ ಪೇದೆಗಳು ಕ್ಯಾಪ್ ಬದಲಾವಣೆ ಬಗ್ಗೆ ಮನವಿ ಬಂದಿತ್ತು. ಮಳೆ ಸಂದರ್ಭದಲ್ಲಿ ಸಮಸ್ಯೆಯಾಗುತ್ತಿತ್ತು. ಸಿಎಂ ಅವರು ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಿದ್ದಾರೆ. ಸದ್ಯದಲ್ಲೆ ಪರಿಚಯಿಸುತ್ತೇವೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇಡೀ ದೇಶದಲ್ಲಿ ಮೊದಲ ಬಾರಿಗೆ ಕಾರಾಗೃಹ ಅಕಾಡೆಮಿಯ ಕಟ್ಟಡವನ್ನು ಉದ್ಘಾಟಿಸಲಾಗಿದೆ. ಅಲ್ಲದೇ, ಇಷ್ಟು ದೊಡ್ಡ ಕೆಎಸ್ಆರ್‌ಪಿ ಸಮುದಾಯ ಭವನವನ್ನು ನಿರ್ಮಿಸಿಲ್ಲ. ಇದರ ನಿರ್ಮಾಣಕ್ಕೆ ಬಿಎಂಆರ್‌ಸಿಎಲ್ 40 ಕೋಟಿ ರೂ. ನೀಡಿದ್ದಾರೆ. ಶೇಷಾದ್ರಿಪುರ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ. ನಮ್ಮ ಇಲಾಖೆ ಮಾನವ ಸಂಪನ್ಮೂಲಗಳ ಇಲಾಖೆ. ನಮ್ಮ ಇಲಾಖೆಯಲ್ಲಿ ದೊಡ್ಡ ಯೋಜನೆಗಳಿಲ್ಲ. ಆದರೆ, ಪೊಲೀಸರೆ ನಮ್ಮ ಇಲಾಖೆಯ ಸಂಪತ್ತು ಎಂದರು. ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವ್ಥೆ, ಸಾರ್ವಜನಿಕರ ಆಸ್ತಿ ಕಾಪಾಡಲು,…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ಎಲ್ ಆರ್ ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 17.07.2025 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಅನ್ವರ್ ಲೇಔಟ್, ಕಾವೇರಿ ನಗರ, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ.ಮುಖ್ಯ ರಸ್ತೆ, ಭುವನೇಶ್ವರಿ ನಗರ, ಡಿ.ಜೆ.ಹಳ್ಳಿ, ಕೆ.ಜಿ. ಕಾಲೋನಿ, ಕೆ.ಜಿ. ಹಳ್ಳಿ, ಗಣೇಶ ಬ್ಲಾಕ್, ಆತ್ಮಾನಣದ ನಗರ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್ ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗಾರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ನಾಳೆ  ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಶುಕ್ರವಾರ ವಿದ್ಯುತ್‌ ವ್ಯತ್ಯಯದ ವಿವರ:…

Read More

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳ ಹಿತಾದೃಷ್ಡಿಯಿಂದ ಆರೋಗ್ಯ ತಪಾಸಣಾ ವೆಚ್ಚವನ್ನು 1500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಇದೆ ಎಂದು ಹೈದ್ರಾಬಾದ್ ವಿಶ್ವವಿದ್ಯಾಲಯ ಹೇಳಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ನಮ್ಮ ಪೊಲೀಸರು ಪಾರಿತೋಷಕ ತಂದಿದ್ದಾರೆ ಎಂದು ಶ್ಲಾಘಿಸಿದರು. ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್‌ನಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವ್ಥೆ ಕೆಟ್ಟಿದ್ದರೆ ಇಷ್ಟೊಂದು ಹೂಡಿಕೆ ಬರುತ್ತಿರಲಿಲ್ಲ. ರಾಜ್ಯಕ್ಕೆ ಬಂಡಾವಾಳ ಹೂಡಿಕೆ ಬರುವಲ್ಲಿ, ನಿಮ್ಮ ಉತ್ತಮ ಕಾರ್ಯವೈಖರಿಯಿಂದ ಸಾಧ್ಯವಾಗಿದೆ ಎಂದರು. ಸಿಎಂ ಅವರು ಬಜೆಟ್ ಸಿದ್ಧಪಡಿಸುವಾಗ, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬೇಡಿಕೆಗಳನ್ನು ಅವರ ಮುಂದಿಟ್ಟು ಸಾವಿರಾರು ಕೋಟಿ…

Read More

ಇಸ್ರೇಲ್: ಈ ವಾರದ ಆರಂಭದಲ್ಲಿ ಯುನೈಟೆಡ್ ಟೋರಾ ಯಹೂದಿ ಪಕ್ಷವು ನಿರ್ಗಮಿಸಿದ ನಂತರ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರವು ಬುಧವಾರ ತನ್ನ ಬಹುಮತವನ್ನು ಕಳೆದುಕೊಂಡಿತು. ಆಗ ಅಲ್ಟ್ರಾ-ಆರ್ಥೊಡಾಕ್ಸ್ ಶಾಸ್ ಪಕ್ಷವು ಒಕ್ಕೂಟವನ್ನು ತೊರೆದಿತು. 11 ಸ್ಥಾನಗಳನ್ನು ಹಿಂತೆಗೆದುಕೊಳ್ಳುವುದರೊಂದಿಗೆ, ನೆತನ್ಯಾಹು ಈಗ 120 ನೆಸ್ಸೆಟ್ ಸ್ಥಾನಗಳಲ್ಲಿ ಕೇವಲ 61 ಸ್ಥಾನಗಳನ್ನು ಮಾತ್ರ ಉಳಿಸಿಕೊಂಡಿದೆ. ಇದರಿಂದಾಗಿ ಅವರು ಅವಿಶ್ವಾಸ ಮತಗಳಿಗೆ ಗುರಿಯಾಗುತ್ತಾರೆ. ನೆತನ್ಯಾಹು ತಮ್ಮ ಧಾರ್ಮಿಕ ಘಟಕಗಳನ್ನು ಕಡ್ಡಾಯ ಮಿಲಿಟರಿ ಸೇವೆಯಿಂದ ವಿನಾಯಿತಿ ನೀಡುವ ಕಾನೂನನ್ನು ಅಂಗೀಕರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟಿಸಿ ರಾಜೀನಾಮೆ ನೀಡಿದ್ದಕ್ಕಾಗಿ ಶಾಸ್ “ಟೋರಾ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ” ವನ್ನು ಉಲ್ಲೇಖಿಸಿದ್ದಾರೆ. ಒಕ್ಕೂಟವನ್ನು ಸಕ್ರಿಯವಾಗಿ “ದುರ್ಬಲಗೊಳಿಸುವುದಿಲ್ಲ” ಎಂದು ಶಾಸ್ ಪ್ರತಿಜ್ಞೆ ಮಾಡಿದರೂ, ಅದರ ನಿರ್ಗಮನವು ಶಾಸಕಾಂಗ ಪ್ರಯತ್ನಗಳು ಆರಂಭಿಕ ಚುನಾವಣೆಗಳನ್ನು ಪ್ರಚೋದಿಸುವ ಅಪಾಯಗಳನ್ನು ಹೊಂದಿದೆ. ಮಿಲಿಟರಿ ಬಲವಂತದ ಕುರಿತು ಇಸ್ರೇಲ್‌ನ ಸ್ಫೋಟಕ ಚರ್ಚೆಯಿಂದ ಈ ಕುಸಿತ ಉಂಟಾಗಿದೆ. ಇಸ್ರೇಲ್‌ನ ಜನಸಂಖ್ಯೆಯ ಶೇ. 13 ರಷ್ಟಿರುವ ಅಲ್ಟ್ರಾ-ಆರ್ಥೊಡಾಕ್ಸ್ ಯಹೂದಿಗಳು (ಹರೇಡಿಮ್)…

Read More