Subscribe to Updates
Get the latest creative news from FooBar about art, design and business.
Author: ವಸಂತ್ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 20ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಶುಲ್ಕ ಪಾವತಿಗೆ ಏ.22 ಕೊನೆ ದಿನ. ಏ.8ಕ್ಕೆ ಇದ್ದ ಕೊನೆ ದಿನಾಂಕವನ್ನು ಅಭ್ಯರ್ಥಿಗಳ ಕೋರಿಕೆ ಮೇಲೆ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ಮಾರತ್ತಹಳ್ಳಿಯ ಖ್ಯಾತ ಚರ್ಮರೋಗ ತಜ್ಞೆ (Dermatologist) ಕೃತಿಕಾ ರೆಡ್ಡಿ ಅವರ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬಲವಾದ ತಾಂತ್ರಿಕ ಸಾಕ್ಷ್ಯ ಲಭ್ಯವಾಗಿದೆ. ಹಣದಾಸೆ ಮತ್ತು ಪ್ರೇಯಸಿಯ ಜೊತೆ ಜೀವಿಸುವ ಹಂಬಲದಿಂದ ಪತ್ನಿಯನ್ನೇ ಕೊಂದಿದ್ದ ಪತಿ ಮಹೇಂದ್ರ ರೆಡ್ಡಿ, ಕೃತ್ಯದ ಬಳಿಕ ತನ್ನ ಪ್ರಿಯತಮೆಗೆ ‘ಫೋನ್ ಪೇ’ (PhonePe) ಮೂಲಕ ಕಳುಹಿಸಿದ್ದ ಚಾಟ್ ಮೆಸೇಜ್ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಯಶಸ್ವಿಯಾಗಿ ರಿಟ್ರೀವ್ ಮಾಡಿದೆ. ಕೊಲೆ ನಡೆದಿದ್ದು ಹೇಗೆ? ಆರಂಭದಲ್ಲಿ ಕೃತಿಕಾ ರೆಡ್ಡಿ ಅವರದ್ದು ನೈಸರ್ಗಿಕ ಸಾವು ಎಂದು ಬಿಂಬಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರ ದೇಹಕ್ಕೆ ‘ಅನಸ್ತೇಷಿಯಾ’ (Anesthesia) ಚುಚ್ಚುಮದ್ದು ನೀಡಿರುವುದು ದೃಢಪಟ್ಟಿತ್ತು. ಪತಿ ಮಹೇಂದ್ರ ರೆಡ್ಡಿಯೇ ಐವಿ ಫ್ಲ್ಯೂಯೆಡ್ ಮೂಲಕ ಅನಸ್ತೇಷಿಯಾ ನೀಡಿ ಪತ್ನಿಯನ್ನು ಹತ್ಯೆ ಮಾಡಿದ್ದ ಎಂದು ಪೊಲೀಸರು ಪತ್ತೆಹಚ್ಚಿ ಆತನನ್ನು ಬಂಧಿಸಿದ್ದರು. ರಿಟ್ರೀವ್ ಆದ ಸ್ಫೋಟಕ ಮೆಸೇಜ್ಗಳಲ್ಲೇನಿದೆ? ಪೋಲೀಸರ ಕಣ್ಣು ತಪ್ಪಿಸಲು ಆರೋಪಿ ಮಹೇಂದ್ರ ರೆಡ್ಡಿ ಸಾಮಾನ್ಯ ವಾಟ್ಸಾಪ್ ಬದಲು ಫೋನ್ ಪೇ ಮೆಸೇಜ್ ಬಳಸಿದ್ದ.…
ತಮಿಳುನಾಡು: ತಮಿಳುನಾಡು ವಿಧಾನಸಭೆ ಚುನಾವಣೆಯ ಅಖಾಡ ರಂಗೇರಿದ್ದು, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ತಿರುಚ್ಚಿರಾಪಳ್ಳಿ ಪೂರ್ವ ಮತ್ತು ಪೆರಂಬೂರ್ ಕ್ಷೇತ್ರದ ಅಭ್ಯರ್ಥಿ ವಿಜಯ್, ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ನೇತೃತ್ವದ ಮೈತ್ರಿಕೂಟವನ್ನು ಅವರು “ಕ್ಯಾಶ್ ಬಾಕ್ಸ್ ಮೈತ್ರಿಕೂಟ” (ಹಣದ ಪೆಟ್ಟಿಗೆ ಮೈತ್ರಿಕೂಟ) ಎಂದು ಲೇವಡಿ ಮಾಡಿದ್ದಾರೆ. ತಿರುನಲ್ವೇಲಿಯಲ್ಲಿ ಬುಧವಾರ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟಗಳು ಹೊರನೋಟಕ್ಕೆ ಬೇರೆ ಬೇರೆಯಾಗಿ ಕಂಡರೂ, ಒಳಗಿನಿಂದ ಎರಡೂ ಒಂದೇ ಎಂದು ಕಿಡಿಕಾರಿದರು. ವಿಜಯ್ ಅವರ ಭಾಷಣದ ಪ್ರಮುಖಾಂಶಗಳು: ನನ್ನನ್ನು ತಡೆಯುವುದೇ ಇವರ ಗುರಿ: “ನಾನು ಅಧಿಕಾರಕ್ಕೆ ಬರುವುದನ್ನು ತಡೆಯುವುದೇ ಈ ಎರಡೂ ಮೈತ್ರಿಕೂಟಗಳ ಏಕೈಕ ಉದ್ದೇಶವಾಗಿದೆ. ನಾನು ರಾಜಕೀಯಕ್ಕೆ ಬಂದಾಗಿನಿಂದ ಅವರ ಭ್ರಷ್ಟಾಚಾರದ ಜಾಲಗಳನ್ನು ಬಯಲಿಗೆಳೆದಿರುವುದರಿಂದ ನನ್ನ ಮೇಲೆ ಅವರು ಕೋಪಗೊಂಡಿದ್ದಾರೆ,” ಎಂದು ವಿಜಯ್ ಆರೋಪಿಸಿದರು. ಧೂಳೀಪಟವಾದ ಲೆಕ್ಕಾಚಾರ: ಮೈತ್ರಿಕೂಟದ ಒಳಗಿರುವವರು ಒಬ್ಬರಿಗೊಬ್ಬರು…
ಬೆಂಗಳೂರು: ಬಿಜೆಪಿ ಅಥವಾ ಎನ್ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ ಎಂದಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ ಸ್ಪಷ್ಟಪಡಿಸುತ್ತಿದ್ದೇನೆ. ಇವು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ…
ನವದೆಹಲಿ: ಸತತ 40 ದಿನಗಳ ಭೀಕರ ಸಂಘರ್ಷದ ನಂತರ ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮವನ್ನು ಭಾರತ ಶ್ವೇತಪೂರ್ವಕವಾಗಿ ಸ್ವಾಗತಿಸಿದೆ. ಪಶ್ಚಿಮ ಏಷ್ಯಾದಲ್ಲಿ ಕಂಡುಬಂದಿರುವ ಈ ಸಕಾರಾತ್ಮಕ ಬೆಳವಣಿಗೆಯು ಉಕ್ರೇನ್ನಲ್ಲಿಯೂ ಶಾಂತಿ ಸ್ಥಾಪನೆಗೆ ಪ್ರೇರಣೆಯಾಗಲಿ ಎಂದು ಭಾರತ ಆಶಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಾವು ಮೊದಲಿನಿಂದಲೂ ಹೇಳುತ್ತಿರುವಂತೆ ರಾಜತಾಂತ್ರಿಕ ಮಾತುಕತೆ ಮತ್ತು ಶಾಂತಿಯ ಮೂಲಕ ಮಾತ್ರ ಸಂಘರ್ಷಕ್ಕೆ ಅಂತ್ಯ ಹಾಡಲು ಸಾಧ್ಯ. ಈ ಕದನ ವಿರಾಮವು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಗೆ ದಾರಿಯಾಗಲಿ” ಎಂದು ತಿಳಿಸಿದರು. ಸುದ್ದಿಯ ಪ್ರಮುಖ ಮುಖ್ಯಾಂಶಗಳು: ಹೊರ್ಮುಜ್ ಜಲಸಂಧಿಯ ಭದ್ರತೆ: ಜಾಗತಿಕ ಇಂಧನ ಪೂರೈಕೆಯ ಶೇ. 50ರಷ್ಟು ತೈಲ ಸಾಗಣೆಯಾಗುವ ಹೊರ್ಮುಜ್ ಜಲಸಂಧಿಯಲ್ಲಿ ನೌಕೆಗಳ ಸಂಚಾರಕ್ಕೆ ಯಾವುದೇ ಅಡೆತಡೆ ಇರಬಾರದು ಎಂದು ಭಾರತ ಒತ್ತಿಹೇಳಿದೆ. ಸಂಘರ್ಷದಿಂದಾಗಿ ಜಾಗತಿಕ ವ್ಯಾಪಾರ ಮತ್ತು ಇಂಧನ ಸರಬರಾಜಿಗೆ ಭಾರಿ ಧಕ್ಕೆಯಾಗಿದೆ ಎಂದು ಜೈಸ್ವಾಲ್ ಕಳವಳ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ-ಚೀನಾ…
ಅಬುಧಾಬಿ: ಇತ್ತೀಚಿನ ಘಟನೆಗಳಿಗೆ ಸಂಬಂಧಿಸಿದಂತೆ ದೃಶ್ಯಗಳನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ದಾರಿ ತಪ್ಪಿಸುವ ಮಾಹಿತಿ ಮತ್ತು ವದಂತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ರಾಷ್ಟ್ರಗಳ 375 ವ್ಯಕ್ತಿಗಳನ್ನು ಅಬುಧಾಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹೆಚ್ಚಿನ ಕಾನೂನು ಕ್ರಮಕ್ಕಾಗಿ ಸಾರ್ವಜನಿಕ ಪ್ರಾಸಿಕ್ಯೂಷನ್ಗೆ ಒಪ್ಪಿಸಲಾಗಿದೆ. ಚಾಲ್ತಿಯಲ್ಲಿರುವ ಕಾನೂನುಗಳ ಅಡಿಯಲ್ಲಿ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸುದ್ದಿಯ ಪ್ರಮುಖ ಅಂಶಗಳು: ಕಟ್ಟುನಿಟ್ಟಿನ ಎಚ್ಚರಿಕೆ: ಪೊಲೀಸರು ಪದೇ ಪದೇ ಎಚ್ಚರಿಕೆ ನೀಡಿದ್ದರೂ ಸಹ, ಕೆಲವು ವ್ಯಕ್ತಿಗಳು ಸೂಚನೆಗಳನ್ನು ಉಲ್ಲಂಘಿಸಿ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಮತ್ತು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವಂತಹ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕಾನೂನು ಉಲ್ಲಂಘನೆ: ಸಮಾಜದ ಭದ್ರತೆ ಮತ್ತು ಸ್ಥಿರತೆಯನ್ನು ಕಾಪಾಡುವ ಉದ್ದೇಶದಿಂದ ಜಾರಿಯಲ್ಲಿರುವ ನಿಯಮಗಳನ್ನು ಈ ವ್ಯಕ್ತಿಗಳು ನೇರವಾಗಿ ಉಲ್ಲಂಘಿಸಿದ್ದಾರೆ. ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಅಥವಾ ಸಾರ್ವಜನಿಕ ಅಭಿಪ್ರಾಯವನ್ನು ದಾರಿ ತಪ್ಪಿಸುವ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಧಿಕೃತ ಮೂಲಗಳನ್ನೇ…
ಬೆಂಗಳೂರು: ಪತ್ರಿಕೋದ್ಯಮದ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ, ಶತಮಾನೋತ್ಸವದ ಸಂಭ್ರಮದತ್ತ ದಾಪುಗಾಲು ಹಾಕುತ್ತಿರುವ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ (KUWJ) ತನ್ನ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸಜ್ಜಾಗಿದೆ. ಈ ಬಾರಿ ಸೂಫಿ ಸಂತರ ಬೀಡು, ಕಲ್ಯಾಣ ಕ್ರಾಂತಿಯ ಹರಿಕಾರ ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯಲ್ಲಿ ಏಪ್ರಿಲ್ 11 ಮತ್ತು 12 ರಂದು ಅದ್ದೂರಿ ಸಮ್ಮೇಳನ ನಡೆಯಲಿದೆ ಎಂಬುದಾಗಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಡಿವಿಜಿಯವರಿಂದ ಆರಂಭವಾದ ಮಹಾನ್ ಪರಂಪರೆ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮೊದಲ ದೇಣಿಗೆ ಹಾಗೂ ಕನ್ನಡದ ಅಪ್ರತಿಮ ವಿದ್ವಾಂಸ ಡಿ.ವಿ. ಗುಂಡಪ್ಪ (ಡಿವಿಜಿ) ಅವರ ದೂರದೃಷ್ಟಿಯಿಂದ ಸ್ಥಾಪಿತವಾದ ಈ ಸಂಘವು, 1956ರ ಏಕೀಕರಣದ ನಂತರ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ವಾಗಿ ವಿಸ್ತಾರಗೊಂಡಿತು. ಅಂದಿನಿಂದ ಇಂದಿನವರೆಗೆ ಪತ್ರಕರ್ತರ ಹಿತರಕ್ಷಣೆ ಮತ್ತು ಅಭ್ಯುದಯಕ್ಕಾಗಿ ಸಂಘವು ನಿರಂತರವಾಗಿ ಶ್ರಮಿಸುತ್ತಿದೆ. ಕಳೆದ ಒಂದು ದಶಕದ ಆಶಾದಾಯಕ ಪಯಣ ಸಂಘವು ಕಳೆದ ಹತ್ತು ವರ್ಷಗಳಲ್ಲಿ ಪತ್ರಕರ್ತರ ವೃತ್ತಿಪರ…
ಶಿವಮೊಗ್ಗ: ಜ್ಞಾನದ ಹರಿವು ಮತ್ತು ಅಕ್ಷರ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಸಾಗರದ ಹೆಮ್ಮೆಯ ಸಾಧಕ, ಶಿಕ್ಷಣ ಸಂಯೋಜಕ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿ.ಟಿ. ಸ್ವಾಮಿ ಅವರ ಮುಕುಟಕ್ಕೆ ಮತ್ತೊಂದು ಗೌರವದ ಗರಿ ಸೇರ್ಪಡೆಯಾಗಿದೆ. ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ವಿಜಯ ಜ್ಯೋತಿ ಎಜ್ಯುಕೇಶನ್ ಸಮೂಹ ಶಿಕ್ಷಣ ಸಂಸ್ಥೆಯು ಪ್ರತಿಷ್ಠಿತ ರಾಜ್ಯಮಟ್ಟದ ‘ವಿಜಯಶ್ರೀ ಪುರಸ್ಕಾರ’ ನೀಡಿ ಗೌರವಿಸಿದೆ. ಬಹುಮುಖ ಪಾಂಡಿತ್ಯದ ಸಾಧಕ ಕಳೆದ ಮೂರೂವರೆ ದಶಕಗಳಿಂದ (35 ವರ್ಷ) ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿ.ಟಿ. ಸ್ವಾಮಿ ಅವರು ಕೇವಲ ಅಧಿಕಾರಿಯಲ್ಲ, ಬದಲಿಗೆ ಓರ್ವ ನಿರಂತರ ವಿದ್ಯಾರ್ಥಿ. ಅವರ ಶೈಕ್ಷಣಿಕ ಹಸಿವು ಬೆರಗುಗೊಳಿಸುವಂತದ್ದು: ಕನ್ನಡದಲ್ಲಿ ಎಂ.ಎ. ಪದವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MA-MCJ) ಸ್ನಾತಕೋತ್ತರ ಪದವಿ ಹಾಗೂ ಜರ್ನಲಿಸಂ ಡಿಪ್ಲಮೋ. ಅಪರೂಪದ ‘ಪ್ರಾಕೃತ’ ಭಾಷೆಯಲ್ಲೂ ಎಂ.ಎ. ಪದವಿ ಪಡೆದ ಅನ್ವೇಷಕ. ಅಕ್ಷರ ಲೋಕದ ಅನನ್ಯ ಸೇವೆ ಸಾಹಿತ್ಯ…
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು. ಅರಳು- ಮರಳು ರೀತಿ ಮಾತನಾಡಬಾರದು. ಇವರ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಖಂಡನೀಯ. ದೇಶದಾದ್ಯಂತ ಜನರು ಇವರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೊಲ್ಲಲು ಪ್ರಚೋದನೆ ನೀಡುವುದು ಸರಿ ಅಲ್ಲ ಎಂದರು. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಂಗೀಕಾರ ದೊರೆತಿದೆ. ಆ ಮಸೂದೆ ಅನ್ವಯ ಖರ್ಗೆ ಅವರ ರೀತಿ ಪ್ರಚೋದನಾಕಾರಿಯಾಗಿ ಮಾತನಾಡಿದರೆ ಪ್ರಕರಣ ದಾಖಲು ಮಾಡಬಹುದು. ಆದ್ದರಿಂದ ಬಿಜೆಪಿ ದೂರು ನೀಡಿದೆ. ಖರ್ಗೆ ಅವರ ಹೇಳಿಕೆ ಖಂಡಿಸಿ ಬಿಜೆಪಿಯ ಕಾರ್ಯಕರ್ತರು ಸಿಡಿದೆದ್ದು ಎಲ್ಲಾ ಕಡೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು. ರಜಾಕರಿಂದ ತಮ್ಮ ಕುಟುಂಬದ ಮೇಲೆ…














