Author: kannadanewsnow09

ಮಂಡ್ಯ : ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳು, ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡುವ ಮೂಲಕ ಸತ್ಪ್ರಜೆಗಳನ್ನು ರೂಪಿಸಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ತಿಳಿಸಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮದ್ದೂರು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿ ಗುರುವಿನ ಸ್ಥಾನಕೆ ತನ್ನದೆಯಾದ ವಿಶೇಷ ಸ್ಥಾನ ಮತ್ತು ಮಹತ್ವವಿದೆ. ಶ್ರೇಷ್ಠ ಶಿಕ್ಷಕರಿಂದ ಶಿಕ್ಷಕ ವೃಂದಕ್ಕೆ ಗೌರವ ಸಿಗುತ್ತದೆ. ಪ್ರತಿಯೊಬ್ಬ ಶಿಕ್ಷಕರು ಶ್ರೇಷ್ಠ ಶಿಕ್ಷಕರಾಗುವ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಆದರ್ಶವಾಗಬೇಕೆಂದು ಕಿವಿಮಾತು ಹೇಳಿದರು. ಶಿಕ್ಷಕರು ಆಜೀವ ಕಲಿಕೆಗೆ ಪ್ರೋತ್ಸಾಹ, ಬೆಂಬಲ ಮತ್ತು ಸಮರ್ಪಣೆಯನ್ನು ನೀಡುತ್ತಾರೆ, ವಿಮರ್ಶಾತ್ಮಕ ಚಿಂತನೆಯನ್ನು ಪ್ರೇರೇಪಿಸುತ್ತಾರೆ ಮತ್ತು ಕಲಿಕೆಯ ಪ್ರೀತಿಯನ್ನು ನೀಡುತ್ತಾರೆ. ಇದಲ್ಲದೆ, ಶೈಕ್ಷಣಿಕ ಬೆಳವಣಿಗೆ ಮೂಲಕ ನೈತಿಕ ವ್ಯಕ್ತಿಗಳ ಅಭಿವೃದ್ಧಿಯಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಾರೆ ಎಂದರು. ಕೆ.ಎಂ.ಉದಯ್…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ,  ಕಾರ್ಕಳದಲ್ಲಿ ಟೆಕ್ಸ್ ಪಾರ್ಕ್ ಸ್ಥಾಪನೆ ಸೇರಿದಂತೆ 36 ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಆ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿಯನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೀಡಿದರು. ಇಂದು ಒಟ್ಟು 36 ವಿಷಯಗಳ ಬಗ್ಗೆ ಚರ್ಚೆಯಾಗಿದೆ. 35 ವಿಷಯಗಳಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಪಟ್ಟಿಯಲ್ಲಿಲ್ಲದ ಮೂರು ವಿಷಯ ಚರ್ಚೆಯಾಗಿದೆ ಎಂದರು. ಮಹದಾಯಿ ಯೋಜನೆಗೆ ಅನುಮತಿ ತಡೆ ವಿಚಾರವಾಗಿ ವನ್ಯಜೀವಿ‌ಮಂಡಳಿ ಅನುಮೋದನೆ ನೀಡಿಲ್ಲ. ಕೆಲವು ಕಾರಣ ಕೊಟ್ಟು ಮುಂದೂಡಿದೆ. ಇದು ಕನ್ನಡಿಗರಿಗೆ ನಿರಾಸೆ ತಂದಿದೆ. ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ ಆಗ್ತಿದೆ. ಗೋವಾದ 400 ವಿದ್ಯುತ್ ಮಾರ್ಗಕ್ಕೆ ಒಪ್ಪಿಗೆ ನೀಡುತ್ತೆ. ಆದರೆ ನಮ್ಮ ಪ್ರಪೋಸಲ್ ಮುಂದೂಡಿದೆ. 435 ಎಕರೆ ವಿದ್ಯುತ್ ಮಾರ್ಗಕ್ಕೆ ಅರಣ್ಯ ಭೂಮಿ ಬಳಕೆಯಾಗಿದೆ. ಗೋವಾ ತಮ್ನೂರು ವಿದ್ಯತ್ ಮಾರ್ಗಕ್ಕೆ…

Read More

ಸಕಲೇಶಪುರ : “ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ನಂಬಿದ್ದೇನೆ. ಈ ಯೋಜನೆ ಬಗ್ಗೆ ಟೀಕೆ ಮಾಡಿದವರಿಗೆ ಮಾಧ್ಯಮಗಳ ಕ್ಯಾಮೆರಾಗಳೇ ಉತ್ತರ ನೀಡುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಕಲೇಶಪುರದ ದೊಡ್ಡನಗರದ ಡಿ.ಸಿ- 3 ಪಂಪ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಈ ಘಳಿಗೆಯಲ್ಲಿ ಒಂದು ವಿಶಿಷ್ಟ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ. ಆಲಮಟ್ಟಿ ಯೋಜನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಶಂಕುಸ್ಥಾಪನೆ ಮಾಡಿದ್ದರು. 2006ರಲ್ಲಿ ಅಬ್ದುಲ್ ಕಲಾಂ ಅವರು ಯೋಜನೆ ಉದ್ಘಾಟನೆ ಮಾಡಿದ್ದರು. ಆಲಮಟ್ಟಿ ಯೋಜನೆ ಜಾರಿ ನಂತರ ಎತ್ತಿನಹೊಳೆ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಯಾಗಿದೆ. 2014 ಮಾರ್ಚ್ 5ರಂದು ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈಗ ಅವರ ನೇತೃತ್ವದಲ್ಲಿ ಈ ಯೋಜನೆ ಉದ್ಘಾಟನೆಯಾಗುತ್ತಿದೆ. 10 ವರ್ಷಗಳು ಕಳೆದಿದ್ದು, ಬೇಕಾದಷ್ಟು ಟೀಕೆ ಟಿಪ್ಪಣಿಗಳು ಕೇಳಿ ಬಂದವು. ಎಲ್ಲವನ್ನೂ ಮೆಟ್ಟಿನಿಂತು ಯೋಜನೆ…

Read More

ಬೆಂಗಳೂರು: ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಮಹಾದಾಯಿ ಯೋಜನೆಯ ಅರಣ್ಯ ಭೂಮಿ ವರ್ಗಾವಣೆಯ ವಿಷಯವನ್ನು ಮುಂದೂಡಿರುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ತೀವ್ರ  ಕಳವಳ ವ್ಯಕ್ತಪಡಿಸಿತು ಮತ್ತು ಈ ಕುರಿತು ಸರ್ವಪಕ್ಷಗಳ ಸಭೆಯನ್ನು ನಡೆಸಲು ಹಾಗೂ ದೆಹಲಿಗೆ ಪ್ರಧಾನ ಮಂತ್ರಿಯವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲು  ತೀರ್ಮಾನಿಸಲಾಯಿತು. ರಾಜ್ಯ ಸಂಪುಟವು ವನ್ಯ ಜೀವಿ ಮಂಡಳಿಯ ನಿರ್ಣಯದ ಬಗ್ಗೆ ಅಸಮಾದಾನ ಮತ್ತು ಕಳವಳ ವ್ಯಕ್ತಪಡಿಸಿ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಕ್ಕೆ ಪರಿಶೀಲಿಸಲು ಕಾನೂನು ಇಲಾಖೆಗೆ ಸೂಚಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು. ಸಚಿವ ಸಂಪುಟದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಸಭೆಯ ನಿರ್ಣಯಗಳ ಬಗ್ಗೆ ವಿವರಿಸಿದ ಕಾನೂನು ಸಚಿವರು ಕೇಂದ್ರ ಸರ್ಕಾರದ ವನ್ಯ ಜೀವಿ ಮಂಡಳಿಯ 79ನೇ ಸಭೆಯ ನಡವಳಿಯ ಉದೃತ ಭಾಗವನ್ನು ಪತ್ರಿಕಾಗೋಷ್ಠಿಯಲ್ಲಿ ಓದಿ ಹೇಳಿದರು. 79ನೇ SC-NBWL ಸಭೆಯ ನಡಾವಳಿಯ ಉಧೃತಭಾಗ ಕೆಳಕಂಡಂತಿದೆ: “ಮಹದಾಯಿ ಯೋಜನಾ…

Read More

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಯಲ್ಲಿ ನಡೆಸಲು ಮುಖ್ಯಮಂತ್ರಿ ಗಳಾದ ಸಿದ್ದ ರಾಮಯ್ಯ ಅವರು ಹಾಗೂ ಸಂಪುಟದ ಎಲ್ಲ‌ ಸಚಿವರು ಒಪ್ಪಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಈ‌ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಅವರಿಗೆ ಕಲಬುರಗಿ ಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದ್ದು ಸಭೆಯ ದಿನಾಂಕ ಸಧ್ಯದಲ್ಲೇ ನಿಗದಿಪಡಿಸಲಾಗುವುದು ಎಂದು‌ ಸಚಿವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗಾಗಿ ಸಂವಿಧಾನ ಕಲಂ 371ಕ್ಕೆ ತಿದ್ದುಪಡಿ ತಂದು ಜೆ ಸೇರಿಸಿ ಶಿಕ್ಷಣ, ಉದ್ಯೋಗ ಹಾಗೂ ಅನುದಾನ ಒದಗಿಸಿಕೊಡುವುದಕ್ಕೆ ವಿಶೇಷ…

Read More

ಬೆಂಗಳೂರು: ನಗರದ ಆಸ್ತಿ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಆಸ್ತಿ ತೆರಿಗೆ ಪಾವತಿಸಲು ಸಮಯವನ್ನು ವಿಸ್ತರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಇಂದು ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಬೆಂಗಳೂರ ನಾಗರಿಕಕರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ ಮಾಡುವಂತ ತೀರ್ಮಾನ ಕೈಗೊಳ್ಳಲಾಗಿದೆ. ದಿನಾಂಕ 30-11-2024ರವರೆಗೆ ಸಮಯ ವಿಸ್ತರಣೆಯ ನಿರ್ಧಾರವನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು. ಪೆರಿಪರಲ್ ರಸ್ತೆಗೆ ಬಂಡವಾಳ ಸಂಗ್ರಹ ಮಾಡಲು ಸಮಯ ವಿಸ್ತರಣೆ ಮಾಡಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಸಂಗ್ರಹಕ್ಕೆ ಸಮ್ಮತಿ ನೀಡಲಾಗಿದೆ ಎಂದರು. ರಾಜ್ಯಪಾಲರು 11 ಬಿಲ್ ವಾಪಸ್ ಕಳಿಸಿದ್ದಾರೆ. 5 ಬಿಲ್‌ಗಳಿಗೆ ನಾವು ಉತ್ತರ ಕೊಟ್ಟಿದ್ದೇವೆ. ಸಂಪೂರ್ಣ ಮಾಹಿತಿಯನ್ನ ಒದಗಿಸಿದ್ದೇವೆ. 6 ಬಿಲ್ ಗಳಿಗೆ ಮಾಹಿತಿ ಸಂಗ್ರಹಿಸಿ‌ ಕಳಿಸಬೇಕಿದೆ ಎಂದು ತಿಳಿಸಿದರು. https://kannadanewsnow.com/kannada/big-shock-to-ineligible-bpl-cardholders-legal-action-will-be-taken-soon-minister-k-h-muniyappa/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/ https://kannadanewsnow.com/kannada/ramesh-babu-alleges-rs-23-crore-scam-in-distribution-of-free-sarees-under-bhagyalakshmi-scheme/

Read More

ಬೆಂಗಳೂರು: ರಾಜ್ಯದಲ್ಲಿ ಅನರ್ಹತೆಯನ್ನು ಹೊಂದಿದ್ದರೂ ಬಿಪಿಎಲ್ ಕಾರ್ಡ್ ಪಡೆದಿರುವಂತವರಿಗೆ ಬಿಗ್ ಶಾಕ್ ಎನ್ನುವಂತೆ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಎಪಿಎಲ್ ಕಾರ್ಡ್ ದಾರರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಅರ್ಹರಲ್ಲದವರೂ ಪಡೆದಿರುವುದು ತಿಳಿದಿದೆ. ಅರ್ಹ ಫಲಾನುಭವಿಗಳ ಹೊರತಾಗಿ, ಅನರ್ಹರಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬಿಪಿಎಲ್ ಕಾರ್ಡ್ ದಾರರಿಗೆ ಈಗ ಕೊಡುತ್ತಿರುವ ಅಕ್ಕಿ ಮುಂದುವರಿಕೆ ಮಾಡಲಾಗುತ್ತಿದೆ. ಅಕ್ಕಿ ಜೊತೆಗೆ ಬೇಳೆಕಾಳು ನೀಡಬೇಕು ಎನ್ನುವಂತ ಬೇಡಿಕೆ ಇದೆ. ಈ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಆದರೇ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾದಂತ ಚರ್ಚೆಯೊಂದಿಗೆ ತೀರ್ಮಾನಿಸಲಾಗುತ್ತದೆ ಎಂದರು. https://kannadanewsnow.com/kannada/world-democratic-day-to-be-observed-on-september-15-siddaramaiah/ https://kannadanewsnow.com/kannada/22-special-trains-to-run-on-ganesh-chaturthi-dussehra-diwali/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/

Read More

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 km ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ. ಪ್ರಜಾಪ್ರಭುತ್ವ ನಾಶಕ್ಕೆ ಯತ್ನಿಸುತ್ತಿರುವವರನ್ನು ನಾವು ಮೆಟ್ಟಿ ನಿಲ್ಲೋಣ ಎಂದು ಸಿಎಂ ಅಭಿಪ್ರಾಯಪಟ್ಟರು. ಬೀದರ್ ನಿಂದ ಚಾಮರಾಜನಗರದವರೆಗೂ ನಡೆಯುತ್ತಿರುವ ಅಭೂತಪೂರ್ವ , ಐತಿಹಾಸಿಕ ಮಾನವ ಸರಪಳಿ ಚಳವಳಿಯನ್ನು ಯಶಸ್ವಿಗೊಳಿಸಬೇಕು. ನಾನೂ ವಿಧಾನಸೌಧದ ಎದುರು ಮಾನವ ಸರಪಳಿಯಲ್ಲಿ ಇರುತ್ತೇನೆ. ಎಲ್ಲರೂ ಭಾಗವಹಿಸಿ ಎಂದು ಕರೆ ನೀಡಿದರು. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ಮಾತ್ರ ದೇಶದ ಅಭಿವೃದ್ಧಿ ಮತ್ತು ಸಾಮಾಜಿಕ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಮಾಹಿತಿ ನೀಡುವಂತೆ ರಾಜ್ಯಪಾಲರಿಗೆ ರಾಷ್ಟ್ರಪತಿಗಳು ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಪಾಲರಿಂದ ರಾಷ್ಟ್ರಪತಿಗಳಿಗೆ ರಾಜ್ಯದ ವಿದ್ಯಾಮಾನಗಳ ಇಂಚಿಂಚೂ ಮಾಹಿತಿಯನ್ನು ರವಾನಿಸಲಾಗಿದೆ. ಮುಡಾ ಹಗರಣದ ವಿಚಾರ ರಾಷ್ಟ್ರದ ರಾಜಧಾನಿ ನವದೆಹಲಿಯನ್ನು ತಲುಪಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಪಾಲರಿಗೆ ಪತ್ರ ಬರೆದು ಮಾಹಿತಿ ನೀಡುವಂತೆ ಕೋರಿದ್ದರ ಹಿನ್ನಲೆಯಲ್ಲಿ, ಕರ್ನಾಟಕದ ವಿದ್ಯಮಾನಗಳ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರು ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮುಡಾ ಹಗರಣದ ವಿಚಾರವಾಗಿ ನಡೆದ ಪ್ರತಿಭಟನೆ, ರಾಜಭವನದ ಮೇಲೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಒತ್ತಡ, ಕಾಂಗ್ರೆಸ್ ನಾಯಕರಿಂದ ರಾಜಭವನಕ್ಕೆ ನುಗ್ಗುವುದಾಗಿ ಬೆದರಿಕೆ ಹಾಕಿದ ಮಾಹಿತಿಯನ್ನು ರಾಷ್ಟ್ರಪತಿಗಳಿಗೆ ವರದಿ ರೂಪದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದಾರೆ. ಇದಷ್ಟೇ ಅಲ್ಲದೇ ರಾಜ್ಯಾಧ್ಯಂತ ಮುಡಾ ಹಗರಣದ ಸಂಬಂಧ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ವಿಚಾರವನ್ನೂ ನೀಡಿರುವುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮುಡಾ ಹಗರಣ ಸಂಬಂಧ ರಾಜ್ಯದಲ್ಲಿನ ಹಲವು ಅಂಶಗಳನ್ನು ರಾಜ್ಯಪಾಲರು ರಾಷ್ಟ್ರಪತಿಗಳ ಸೂಚನೆ…

Read More

ಬೆಂಗಳೂರು: ಸೆಪ್ಟಂಬರ್.7ರಂದು ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ನಗರದಲ್ಲಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ವಾಹನ ಸವಾರರಿಗೆ ಸಂಚಾರ ದಟ್ಟಣೆ ಉಂಟಾಗದಂತೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ( Bengaluru City Traffic Police ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ದಿನಾಂಕ 07.09.2024 ರಿಂದ ದಿನಾಂಕ:- 09.09.2024 ವರೆಗೆ ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000 ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವಿರುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಕಂಡ ದಿನಾಂಕಗಳಂದು ಸಂಜೆ 04-00 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದಿದ್ದಾರೆ. ಸಂಚಾರ ನಿರ್ಬಂಧ: > ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್…

Read More