Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ 20,000/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು. ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು. 28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು…
ನವದೆಹಲಿ: ತಮ್ಮನ್ನು ಏಕವಚನದಲ್ಲಿ ಕೀಳಾಗಿ ನಿಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಮಟ್ಟದಲ್ಲಿ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಿಕೆಶಿಯನ್ನು ನಪುಂಸಕ ಎಂದು ಕರೆದರು. ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿ.ಕೆ.ಶಿವಕುಮಾರ್ ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ಸಂಪುಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್..ಹುಷಾರು! ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು. ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು…
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು, ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಜೆಪಿ ಪಾದಯಾತ್ರೆಯ ನಡುವೆ ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ʼನಾನು ಕಳ್ಳ ಅಲ್ಲ, ನನ್ನ ಬಿಟ್ಟುಬಿಡಿʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗಿಂತ ಮುಂದೆ ಹೋಗಿ ಹೇಳುತ್ತಿದ್ದಾರೆ. ಈ ಹಿಂದೆ ರೀಡು ಮಾಡಿದವರು ಕೂಡ ಇವರೇ. ಅದರ ಸಂಬಂಧ ರಚನೆಯಾದ ಕೆಂಪಣ್ಣ ಆಯೋಗವನ್ನು ಮುಚ್ಚಿ ಹಾಕಿದ್ದಾರೆ. ಈಗ ದೇಸಾಯಿ ಆಯೋಗ ರಚಿಸಿದ್ದಾರೆ ಎಂದು ದೂರಿದರು. ಟಿ.ಜೆ.ಅಬ್ರಹಾಂ ಕಳ್ಳ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಅಬ್ರಹಾಂ ಅವರನ್ನು ಬೆಂಬಲಿಸಿದ್ದರು. ಅಬ್ರಹಾಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಅಬ್ರಹಾಂ ಫ್ರಾಡ್ ಆಗಿದ್ದರೆ ಆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆಯಲಿ. ಬಿಜೆಪಿ…
ನವದೆಹಲಿ: ಬಾರ್ಕ್ಲೇಸ್-ಹುರುನ್ ಇಂಡಿಯಾ ವರದಿಯ ಅತ್ಯಂತ ಮೌಲ್ಯಯುತ ಕುಟುಂಬ ವ್ಯವಹಾರಗಳ ಪಟ್ಟಿಯಲ್ಲಿ ಅಂಬಾನಿ ಕುಟುಂಬವು 25.75 ಟ್ರಿಲಿಯನ್ ಮೌಲ್ಯದೊಂದಿಗೆ ಅಗ್ರಸ್ಥಾನದಲ್ಲಿದೆ. ಇದು ಭಾರತದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾಗಿದೆ. ಶ್ರೇಯಾಂಕಗಳು ಮಾರ್ಚ್ 20, 2024 ರಂತೆ ಕಂಪನಿಯ ಮೌಲ್ಯಮಾಪನಗಳನ್ನು ಆಧರಿಸಿವೆ ಮತ್ತು ಖಾಸಗಿ ಹೂಡಿಕೆಗಳು ಮತ್ತು ದ್ರವ ಸ್ವತ್ತುಗಳನ್ನು ಹೊರಗಿಡುತ್ತವೆ ಮತ್ತು ದ್ವಿಗುಣ ಎಣಿಕೆಯನ್ನು ತಡೆಗಟ್ಟಲು ಅಡ್ಡ-ಹಿಡುವಳಿಗಳಿಗೆ ಸರಿಹೊಂದಿಸುತ್ತವೆ. ಅಂಬಾನಿ ಕುಟುಂಬದ ನಂತರ ಬಜಾಜ್ ಕುಟುಂಬ 7.13 ಟ್ರಿಲಿಯನ್ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ನೀರಜ್ ಬಜಾಜ್ ನೇತೃತ್ವ ವಹಿಸಿದ್ದಾರೆ. ಬಿರ್ಲಾ ಕುಟುಂಬವು 5.39 ಟ್ರಿಲಿಯನ್ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ, ಅಗ್ರ ಮೂರು ಕುಟುಂಬ ವ್ಯವಹಾರಗಳ ಹಿತಾಸಕ್ತಿಗಳು 460 ಬಿಲಿಯನ್ ಡಾಲರ್ ಮೌಲ್ಯದ್ದಾಗಿದೆ, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ವರದಿ ತಿಳಿಸಿದೆ. ಈ ಪಟ್ಟಿಯಲ್ಲಿ 4.71 ಟ್ರಿಲಿಯನ್ ಮೌಲ್ಯದ ಸಜ್ಜನ್ ಜಿಂದಾಲ್ ನೇತೃತ್ವದ ಕುಟುಂಬ ನಾಲ್ಕನೇ ಸ್ಥಾನದಲ್ಲಿದ್ದರೆ, ನಾಡರ್ ಕುಟುಂಬ 4.30 ಟ್ರಿಲಿಯನ್ ಮೌಲ್ಯದ ಐದನೇ ಸ್ಥಾನದಲ್ಲಿದೆ.…
ಮೈಸೂರು: ಮೂಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ? ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇಂದು ಮೈಸೂರಿನಲ್ಲಿ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು. ಆ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪರಿಣಾಮ ಅವರು ಪರಿಹಾರ ಅರ್ಜಿ ಹಾಕಿದರು. ನನ್ನಂತಹವನಾಗಿದ್ದರೆ ಶೇ.100ರಷ್ಟು ಪರಿಹಾರ ನೀಡಿ ಎಂದು ಹೋರಾಟ ಮಾಡುತ್ತಿದ್ದೆ. ಆದರೆ ಪಾರ್ವತಿ ಅವರು ಮುಡಾದವರು 50:50 ಅನುಪಾತದಲ್ಲಿ ಪರಿಹಾರ ಪಡೆಯಲು ಒಪ್ಪಿದರು. ಅವರು ಪರಿಹಾರದ ಅರ್ಜಿ ಹಾಕುವಾಗ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಕೇಳಿಲ್ಲ. ಮೂಡಾದವರು ತಮ್ಮ ತಪ್ಪಿನ ಅರಿವಾಗಿ ಒಂದು ನಿರ್ಣಯಕ್ಕೆ ಬಂದು ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರು ನನ್ನ ಪತ್ನಿಗೆ ನಿವೇಶನ ನೀಡಿ ಎಂದು ಒತ್ತಡ ಹಾಕಿದ್ದಾರಾ?…
ಮೈಸೂರು: ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನೀವು ಆಪರೇಶನ್ ಕಮಲದ ಮೂಲಕ ಈ ಹಿಂದೆ ಅನೇಕ ಸರ್ಕಾರ ತೆಗೆದಿದ್ದೀರಿ. ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮುಖಂಡತ್ವದಲ್ಲಿ ಕೇವಲ 19 ಸೀಟುಗಳನ್ನು ಮಾತ್ರ ಗೆದ್ದಿದ್ದೀರಿ. ಈ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 136 ಸೀಟು ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದರೂ ಈ ಕಾಂಗ್ರೆಸ್ ಅಳಿಸಲು ಆಗಲಿಲ್ಲ. ಬಡವರ ಶಕ್ತಿಯಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವನ್ನು ನೀನು ಎರಡು ಜನ್ಮ ಎತ್ತಿ ಬಂದರೂ ಅಳಿಸಲು ಸಾಧ್ಯವಿಲ್ಲ. ನೀನು ಏನೇ ಕುತಂತ್ರ ಮಾಡಿದರೂ ಕಾಂಗ್ರೆಸ್ ಅಳಿಸಲು ಸಾಧ್ಯವಿಲ್ಲ ಎಂಬುದಾಗಿ ಡಿಸಿಎಂ ಡಿಕೆಶಿ ಗುಡುಗಿದ್ದಾರೆ. ವಿಜಯೇಂದ್ರ, ಅಶೋಕ, ಕುಮಾರಸ್ವಾಮಿ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯನ ಜತೆ ಇದೆ. ಈ ಬಂಡೆ ಜತೆ 135 ಶಾಸಕರೂ ಇದ್ದಾರೆ. ಕೋಟ್ಯಂತರ ಜನ ಸಿದ್ದರಾಮಯ್ಯನವರ ಜತೆಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಳ್ಳಿ. ಹೀಗಾಗಿ ನಿಮ್ಮಿಂದ ಏನೂ…
ಮೈಸೂರು: ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ನನಗೆ ಅವರ ವಿಚಾರ ಗೊತ್ತಿರಲಿಲ್ಲ. ಅವರ ವಿರುದ್ಧ ಸುಮಾರು 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವನ್ನು ಹೊರಗೆ ತರುತ್ತೇನೆ. ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಚಾರಣೆ ನಡೆಸಲು ಲೋಕಾಯುಕ್ತದವರು ರಾಜ್ಯಪಾಲರಿಗೂ ಪತ್ರ ಬರೆದಿದ್ದಾರಂತೆ. ಆದರೆ ಕುಮಾರಸ್ವಾಮಿ ಯೂಟರ್ನ್ ಮಾಡಿಕೊಂಡು ಈಗ ಬಿಜೆಪಿ ಮೊರೆ ಹೋಗಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿಯನ್ನು ನಡೆಸಿದ್ದಾರೆ. ಮೈಸೂರಿನ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ವಿಜಯೇಂದ್ರ ನಿಮ್ಮ ತಂದೆ ಎರಡು ಸಾರಿ ರಾಜೀನಾಮೆ ಕೊಟ್ಟಿದ್ದೇಕೆ? ಎಂದು ಲೆಕ್ಕ ಕೊಡು. ನಾಳೆ ನೀನು ಮೈಸೂರಿಗೆ ಬಂದು ಸಭೆ ಮಾಡುವಾಗ ಲಕ್ಷ್ಮಿ ವಿಲಾಸ್ ಬ್ಯಾಂಕ್ ನಿಂದ ವಿದೇಶಕ್ಕೆ ಆರ್ಟಿಜಿಎಸ್ ಮಾಡಿದ್ದೀಯಲ್ಲಾ, ಅದು ಯಾಕೆ? ನಿಮ್ಮ ತಂದೆ ಕಣ್ಣೀರು ಹಾಕಿದ್ದು ಏಕೆ? ಎಂದು ವಿವರಿಸು. ಇಲ್ಲಿ ಯಾರು ರಾಜೀನಾಮೆ ನೀಡಬೇಕು ಎಂದು ಕಾಲ ತೀರ್ಮಾನ ಮಾಡುತ್ತದೆ. ನಾನು ಮಂಡ್ಯದಲ್ಲಿ ನಮ್ಮ ನಾಯಕರ ಮಾತನ್ನು ನಂಬಬೇಡಿ, ಕೇವಲ ಯಡಿಯೂರಪ್ಪ, ಕುಮಾರಸ್ವಾಮಿ, ವಿಜಯೇಂದ್ರ, ಅಸ್ವತ್ಥ್ ನಾರಾಯಣ, ಯೋಗೇಶ್ವರ್,…
ಬೆಂಗಳೂರು: ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಆಗಸ್ಟ್.10ರ ನಾಳೆಯಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಸ್ಕಾಂ, ದಿನಾಂಕ 10.08.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದೆ. ಈ ಪ್ರದೇಶಗಳಲ್ಲಿ ಪವರ್ ಕಟ್ “ಬ್ರಾಡ್ ವೇ ರಸ್ತೆ, ಕಾಕರ್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ಲರ್ಸ್ ರಸ್ತೆ, ಸ್ಲಾಟರ್ ಹೌಸ್ ಮತ್ತು ಸುತ್ತಲಿನ ಪ್ರದೇಶ. ಕನ್ನಿಂಗ್ಹ್ಯಾಂಮ್ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಪಾರ್ಕ್ ರಸ್ತೆ, ನಳ ರಸ್ತೆ, ನೋಹ ಸ್ಟ್ರೀಟ್, ಚಾಂದನಿ ಚೌಕ್, ಮಿಲ್ಲರ್ ಟ್ಯಾಂಕ್ಬಂಡ್…
ಧಾರವಾಡ: ಹೊರಗುತ್ತಿಗೆ ನೌಕರರಿಗೂ ಮಾತೃತ್ವ ರಜೆ ಅನ್ವಯವಾಗಲಿದೆ. ಮಾತೃತ್ವ ರಜೆಯ ಬಳಿಕವೂ ಉದ್ಯೋಗ ಮುಂದುವರೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ಧಾರವಾಡದ ಹೈಕೋರ್ಟ್ ನ್ಯಾಪೀಠದಲ್ಲಿ ವಿಜಯಪುರ ಜಿಲ್ಲೆಯ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದ ಚಾಂದ್ವಿ ಬಳಿಗಾರ್ ಎಂಬುವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು ಈ ತೀರ್ಪು ನೀಡಿದ್ದಾರೆ. ಚಾಂದ್ವಿ ಬಳಿಗಾರ್ ಅವರು 2014ರಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರ ಮೇಲೆ ಅಕೌಂಟೆಂಟ್ ಆಗಿ ಕೆಲಸಕ್ಕೆ ಸೇರಿದ್ದರು. 2024ರವರೆಗೂ ಕೆಲಸ ಮಾಡಿದ್ದಂತ ಅವರು, ನಂತ್ರ ಮಾತೃತ್ವರ ರಜೆಗಾಗಿ ಅರ್ಜಿಯನ್ನು ಸಲ್ಲಿಸಿ, ತೆರಳಿದ್ದರು. ಆದರೇ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದಿಂದ ಅಕೌಟೆಂಟ್ ಹುದ್ದೆಗೆ ಚಾಂದ್ವಿ ಬಳಿಗಾರ ಮಾತೃತ್ವ ರಜೆಯಲ್ಲಿ ತೆರಳಿದ ನಂತ್ರ ಬೇರೆಯವರನ್ನು ಇಲಾಖೆ ನೇಮಕ ಮಾಡಿತ್ತು. ರಜೆ ಮುಗಿಸಿಕೊಂಡು ಬಂದಂತ ಚಾಂದ್ವಿ ಬಳಿಗಾರ ಅವರಿಗೆ ಬೇರೆಯವರನ್ನು ನೇಮಕ ಮಾಡಲಾಗಿದೆ. ನಿಮ್ಮನ್ನು ತೆಗೆದು ಹಾಕಲಾಗಿದೆ ಎಂಬುದಾಗಿ ಇಲಾಖೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಅವರು…
ಮೈಸೂರು: ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು. ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ.…