Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಳೆಯಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನಂದಿನಿ ಹಾಲಿನ ದರವನ್ನು ರೂ.2 ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಏನು ಸ್ಪಷ್ಟನೆ ಕೊಟ್ಟಿದ್ದಾರೆ ಅಂತ ಮುಂದೆ ಓದಿ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಂದಿನಿ ಹಾಲಿನ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧಲೀಟರ್ ಹಾಲಿನ ಪ್ಯಾಕೇಟ್ ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್ ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ ಅಂತ ತಿಳಿಸಿದ್ದಾರೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್ ಸಂಸ್ಥೆ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಹೇಳಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ…
ಶಿವಮೊಗ್ಗ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂ ಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ ಬಗ್ಗೆ ಗೌರವವಿದೆ. ನಮ್ಮ ಸಂಪೂರ್ಣ ಬೆಂಬಲ ಕೂಡ ಇದೆ. ನಿಮ್ಮನ್ನು ಖಾಯಂ ಗೊಳಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯೂ ಆಗಿದೆ ಎಂಬುದಾಗಿ ಘೋಷಿಸಿದರು. ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರನ್ನು ತರಲಾಗಿದೆ. ಇಲ್ಲಿನ ಅನೇಕ ಅಂಗನವಾಡಿ ಕಾರ್ಯಕರ್ತೆಯರು ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದೀರಿ ಎಂದರು. ಡೆಂಗ್ಯೂ ನಿಯಂತ್ರಣ ಕ್ರಮ ವಹಿಸಬೇಕು. ನಿಮ್ಮೆಲ್ಲರ ಸಹಕಾರದಿಂದ ಸಾಗರ ತಾಲೂಕಿನಲ್ಲಿ ಡೆಂಗ್ಯೂ ನಿಯಂತ್ರಣವಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಕೆಲಸ ಮಾಡುವಂತೆ…
ಮುಂಬೈ: ಪುಣೆ ಪೋರ್ಷೆ ವಿಮಾನ ದುರಂತ ಪ್ರಕರಣದ ಹದಿಹರೆಯದ ಆರೋಪಿಯನ್ನು ವೀಕ್ಷಣಾ ಗೃಹದಲ್ಲಿ ಮುಂದುವರಿಸುವುದು ಕಾನೂನುಬಾಹಿರ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ.ಹದಿಹರೆಯದವರ ಕಸ್ಟಡಿಯನ್ನು ಅವನ ತಂದೆಯ ಚಿಕ್ಕಮ್ಮನಿಗೆ ಹಸ್ತಾಂತರಿಸುವಂತೆ ಎಂದು ಹೈಕೋರ್ಟ್ ನಿರ್ದೇಶಿಸಿದೆ. ನಾವು ಕಾನೂನು, ಬಾಲನ್ಯಾಯ ಕಾಯ್ದೆಯ ಉದ್ದೇಶಗಳು ಮತ್ತು ಉದ್ದೇಶಗಳಿಗೆ ಬದ್ಧರಾಗಿದ್ದೇವೆ ಮತ್ತು ಅಪರಾಧದ ಗಂಭೀರತೆಯ ಹೊರತಾಗಿಯೂ ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಯಾವುದೇ ಮಗುವಿನಂತೆ ಅವನನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮೇ 19 ರಂದು ಪುಣೆಯಲ್ಲಿ ಐಷಾರಾಮಿ ಕಾರಿನೊಂದಿಗೆ ಕುಡಿದ ಅಮಲಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಹದಿಹರೆಯದವರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಎಂಜಿನಿಯರ್ಗಳಾದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸಾವನ್ನಪ್ಪಿದ್ದರು. https://kannadanewsnow.com/kannada/breaking-delhi-delhi-high-court-stays-bail-order-of-delhi-cm-arvind-kejriwal/ https://kannadanewsnow.com/kannada/david-warners-international-retirement-confirmed-after-australia-exit/
ಪುಣೆ: ಪುಣೆ ಕಾರು ಅಪಘಾತ ಪ್ರಕರಣದ ಬಾಲಾಪರಾಧಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಈ ಮೂಲಕ ಐಶಾರಾಮಿ ಕಾರು ಅಪಘಾತದ ಬಾಲಾಪರಾಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. https://twitter.com/ANI/status/1805534372134896106 ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಬಾಲಾಪರಾಧಿಯನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ ಮತ್ತು ಆತನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸುವ ರಿಮಾಂಡ್ ಆದೇಶಗಳನ್ನು ರದ್ದುಗೊಳಿಸುವಂತೆ ಕೋರಿ ಆತನ ಚಿಕ್ಕಮ್ಮ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಗೆ ಅನುಮತಿ ನೀಡಿದೆ. “ಕಾನೂನುಬಾಹಿರ ಮತ್ತು ನಿರಂಕುಶ” ರೀತಿಯಲ್ಲಿ ಅವನನ್ನು ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಚಿಕ್ಕಮ್ಮ ಹೇಳಿಕೊಂಡಿದ್ದರು. ಮೇ 19 ರ ಮುಂಜಾನೆ, ಅಪ್ರಾಪ್ತ ವಯಸ್ಕನು ಕುಡಿದ ಅಮಲಿನಲ್ಲಿ ಪೋರ್ಷೆ ಕಾರನ್ನು ಅತಿ ವೇಗದಲ್ಲಿ ಓಡಿಸುತ್ತಿದ್ದಾಗ ವಾಹನವು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ವೇರ್ ಎಂಜಿನಿಯರ್ಗಳಾದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸಾವನ್ನಪ್ಪಿದ ಘಟನೆ ಪುಣೆಯ ಕಲ್ಯಾಣಿ ನಗರದಲ್ಲಿ ನಡೆದಿದೆ. ಕಸ್ಟಡಿ ಆದೇಶವು ಕಾನೂನುಬಾಹಿರ ಮತ್ತು ನ್ಯಾಯವ್ಯಾಪ್ತಿ ಇಲ್ಲದೆ ಅಂಗೀಕರಿಸಲ್ಪಟ್ಟಿದೆ ಎಂದು ನ್ಯಾಯಾಲಯವು…
ಬೆಂಗಳೂರು: ಕೆಎಂಎಫ್ ನಿಂದ ರಾಜ್ಯಾಧ್ಯಂತ ನಂದಿನಿ ಹಾಲಿನ ( Nandini Milk ) ದರ ಏರಿಕೆಯ ನಿರ್ಧಾರವನ್ನು ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ನಂದಿನಿ ವಿವಿಧ ಹಾಲಿನ ದರಗಳು ನಾಳೆಯಿಂದ ಹೆಚ್ಚಳವಾಗಲಿದ್ದಾವೆ. ಹಾಗಾದ್ರೇ ನಂದಿನಿ ಹಾಲಿನ ಉತ್ಪನ್ನಗಳಲ್ಲಿ ಯಾವುದಕ್ಕೆ ಎಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ( KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಹಕಾರ ಹಾಲು ಮಹಾಮಂಡಳವಾಗಿ ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ರಾಷ್ಟ್ರದಲ್ಲಿಯೇ ಎರಡನೆಯ ದೊಡ್ಡ ಮಹಾಮಂಡಳವಾಗಿದ್ದು, ದಕ್ಷಿಣ ಭಾರತದ ಕಾರ್ಯನಿರ್ವಹಿಸುತ್ತಿರುತ್ತದೆ. ಕಹಾಮವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 27 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡ್ನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ ಎಂದಿದೆ. ಪ್ರಸ್ತುತ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸೋಮವಾರ ರಾತ್ರಿ ಸೇಂಟ್ ವಿನ್ಸೆಂಟ್ನಲ್ಲಿ ಅಫ್ಘಾನಿಸ್ತಾನವು ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಡೇವಿಡ್ ವಾರ್ನರ್ ಅವರ 15 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನವು ಕೊನೆಗೊಂಡಿತು. ಈ ಮೂಲಕ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಇದು ನಂಬಲಾಗದ ಸಂಗತಿಯಾಗಿದೆ. ನಾವು ಖಂಡಿತವಾಗಿಯೂ ಅವರನ್ನು ಗುಂಪಿನಲ್ಲಿ, ಮೈದಾನದ ಹೊರಗೆ ಮತ್ತು ಮೈದಾನದ ಹೊರಗೆ ಕಳೆದುಕೊಳ್ಳುತ್ತೇವೆ – ಅದ್ಭುತ ಆಲ್-ಫಾರ್ಮ್ಯಾಟ್ ವೃತ್ತಿಜೀವನ,” ಎಂದು ಇಎಸ್ಪಿಎನ್ ಕ್ರಿಕ್ಇನ್ಫೋ ಆಸೀಸ್ ಆರಂಭಿಕ ಆಟಗಾರನ ಬಗ್ಗೆ ಜೋಶ್ ಹೇಜಲ್ವುಡ್ ಅವರನ್ನು ಉಲ್ಲೇಖಿಸಿದೆ. ವಾರ್ನರ್ 110 ಪಂದ್ಯಗಳಲ್ಲಿ 3277 ರನ್ ಗಳಿಸಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ತಂಡವು 2024 ರ ಟಿ 20 ವಿಶ್ವಕಪ್ನಲ್ಲಿ ಸೆಮಿಫೈನಲ್ಗೆ ಪ್ರವೇಶಿಸಿದೆ. ಬಾಂಗ್ಲಾದೇಶ ವಿರುದ್ಧದ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಮೊದಲ ಬಾರಿಗೆ ಟಿ 20 ವಿಶ್ವಕಪ್ನ ಸೆಮಿಫೈನಲ್ಗೆ ಅರ್ಹತೆ ಪಡೆಯಿತು. ಈ ಪಂದ್ಯದಲ್ಲಿ ಅಫ್ಘಾನಿಸ್ತಾನದ ಗೆಲುವಿನೊಂದಿಗೆ, ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ತಂಡದ ಪ್ರಯಾಣ ಕೊನೆಗೊಂಡಿತು. ಆಸ್ಟ್ರೇಲಿಯಾ ತಂಡವು ಪಂದ್ಯಾವಳಿಯಿಂದ ನಿರ್ಗಮಿಸುವುದರೊಂದಿಗೆ,…
ಸಾಲದ ಹೊರೆಯನ್ನು ಸಹಿಸಲಾಗಲಿಲ್ಲ. ಕೆಲವರು ಊರು ಬಿಟ್ಟು ಓಡಿ ಹೋಗುವಂತಾಗಿದೆ ಎಂದು ದೂರುವುದನ್ನು ಕೇಳಿದ್ದೇವೆ. ಇಂತಹ ದೊಡ್ಡ ಸಾಲದ ಹೊರೆಯಿಂದ ನರಳುತ್ತಿರುವವರಿಗೂ ಈ ಗಣೇಶ ಪರಿಕರಂ ಪರಿಹಾರ ನೀಡಬಲ್ಲದು. ಸಾಲದ ಹೊರತಾಗಿ ಇತರ ಅಡೆತಡೆಗಳಿವೆ. ಆ ಅಡಚಣೆಯನ್ನು ಮುರಿಯಲು ಈ ಆಚರಣೆಯನ್ನೂ ಮಾಡಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ಬೆಂಗಳೂರು: ಸನಾತನ ಧರ್ಮದ ಕುರಿತಂತೆ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಜಾಮೀನು ಮಂಜೂರಾಗಿದೆ. ಇಂದು ಈ ಪ್ರಕರಣ ಕುರಿತಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಉದಯನಿಧಿ ಸ್ಟಾಲಿನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಗರದ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ, ನ್ಯಾಯಾಲಯವು ಉದಯನಿಧಿ ಸ್ಟಾಲಿನ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದು ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಅವರು ಕೋರ್ಟ್ ಗೆ ಖುದ್ದು ವಿಚಾರಣೆಗೆ ಹಾಜರಾಗಿದ್ದರು. ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ. ಅಲ್ಲದೇ ಸುಪ್ರೀಂ ಕೋರ್ಟ್ ನಲ್ಲಿ ಎಲ್ಲಾ ಕೇಸ್ ಗಳನ್ನು ಒಂದೇ ಕಡೆ ವಿಚಾರಣೆ ವರ್ಗಾವಣೆ ಕೋರಿದ್ದಂತ ಅರ್ಜಿಯ ಸಂಬಂಧ ಪ್ರತಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಆಗಸ್ಟ್.8ಕ್ಕೆ ಮುಂದೂಡಿದೆ. ಅಂದಹಾಗೇ ಕಳೆದ ಸೆಪ್ಟೆಂಬರ್.4, 2024ರಂದು ಚೆನ್ನೈನ ತೇನಂ ಪೇಟೆಯಲ್ಲಿ ನಡೆದಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಂತ ಉದಯನಿಧಿ ಸ್ಟಾಲಿನ್ ಅವರು, ಸನಾತನ ಧರ್ಮ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದೆ. ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎನ್ನುವ ಕೂಗು ಕೇಳಿ ಬಂದಿದೆ. ಇದಕ್ಕೆ ಸಕಾರಾತ್ಮಕವಾಗೇ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡೋದಕ್ಕೆ ಸಮ್ಮತಿ ಸೂಚಿಸಿದ್ದಾರೆ. ಇಂದು ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದಂತ ರೇಣುಕಾಸ್ವಾಮಿ ಅವರ ತಂದೆ, ತಾಯಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡರು. ಜೊತೆಗೆ ಪೊಲೀಸ್ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗೇ ಸ್ಪಂದಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/korean-plane-crashes-to-25000-feet-in-15-minutes-13-passengers-hospitalised/ https://kannadanewsnow.com/kannada/big-news-suraj-revanna-to-undergo-medical-examination-today-in-unnatural-sexual-assault-case-suraj-revanna/
ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ನಾಳೆ ತುಮಕೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ನಾಳಿನ ತುಮಕೂರು ಬಂದ್ ಗೆ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದಾವೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ರೈತಪರ, ಕನ್ನಡಪರ ಸಂಘಟನೆಗಳು, ವಕೀಲರ ಸಂಘ, ಹೋಟೆಲ್ ಅಸೋಷಿಯೇಷನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದಾವೆ. ನಾಳೆ ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ನಿಂದ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಕಾರರು ತೆರಳಲಿದ್ದಾರೆ. ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲೂ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ಅದರಲ್ಲೂ ಹೇಮಾವತಿ ಲಿಂಕ್ ನಾಲಾ ವ್ಯಾಪ್ತಿಯ ಗುಬ್ಬಿ, ತುರುವೇಕೆರೆ ತಾಲೂಕು ಹಾಗೂ ತುಮಕೂರು ನಗರದಲ್ಲಿ ನಾಳೆಯ ಬಂದ್ ಗೆ ಅತಿಹೆಚ್ಚು ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ನಾಳೆ ತುಮಕೂರು ನಗರ ಸೇರಿದಂತೆ 10 ತಾಲ್ಲೂಕಿನಲ್ಲಿ ಹೇಮಾವತಿ ಲಿಂಕ್ ವಿರೋಧಿಸಿ ಬಂದ್…