Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾನಹಾನಿ ಹೇಳಿಕೆ ಸಂಬಂಧದ ಪ್ರಕರಣದಲ್ಲಿ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಾರ್ಕಳ ಅವರ ವಿರುದ್ಧ ವಿಚಾರಣಾ ನ್ಯಾಯಾಲಯ ಜಾರಿಗೊಳಿಸಿದ್ದಂತ ವಾರೆಂಟ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಮಾಜಿ ಸಚಿವ ಸುನೀಲ್ ಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಮೇ.14, 2023ರಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಾರ್ಕಳ ಅವರು ಮಾನಹಾನಿ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸೆಪ್ಟೆಂಬರ್.7, 2023ರಂದು ಬೆಂಗಳೂರಿನ ಸಿಜೆಎಂ ಕೋರ್ಟ್ ಗೆ ಖಾಸಗಿ ದೂರು ದಾಖಲಿಸಿದ್ದರು. ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದಂತ ಮಾನಹಾನಿ ಹೇಳಿಕೆಯ ಖಾಸಗಿ ದೂರನ್ನು ವಿಚಾರಣೆ ನಡೆಸಿದ್ದಂತ ನ್ಯಾಯಾಲಯವು, ಸುನೀಲ್ ಕುಮಾರ್ ಗೆ ವಾರಂಟ್ ಜಾರಿಗೊಳಿಸಿತ್ತು. ಇಂತಹ ವಿಚಾರಣಾ ನ್ಯಾಯಾಲಯದ ವಾರಂಟ್ ಪ್ರಶ್ನಿಸಿ ಸುನೀಲ್ ಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಆರಂಭದಲ್ಲಿ ವಾರಂಟ್ ಗೆ ತಡೆ ನೀಡಲು ನಿರಾಕರಿಸಿತು ಆದರೂ, ಪಕ್ಷವು ವಿಪ್ ಜಾರಿಗೊಳಿಸಿದ್ದರಿಂದ ವಿಚಾರಣೆಗೆ ವಿ.ಸುನೀಲ್…
ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು ಪಡೆದುಕೊಂಡಿವೆ. ನಾಗರ ಹಾವು ಮತ್ತು ಕಾಳ ಸರ್ಪವು ಅತ್ಯಂತ ಶಕ್ತಿಯುತವಾದ ಹಾಗೂ ದೈವ ಶಕ್ತಿಯನ್ನು ಪಡೆದಿರುವ ಸರೀಸೃಪ. ಇವುಗಳನ್ನು ಸಾಯಿಸುವುದು ಅಥವಾ ಹಿಂಸಿಸುವುದು ಮಾಡಿದರೆ ನಮ್ಮ ಜನ್ಮಕ್ಕೆ ಕಳಂಕ ಹಾಗೂ ಮಹಾ ಪಾಪ ಅಂಟಿಕೊಳ್ಳುವುದು. ಒಮ್ಮೆ ಹಾವು ದ್ವೇಷವನ್ನು ಹೊಂದಿದ್ದರೆ 12 ವರ್ಷಗಳ ಕಾಲ ಕಾಯುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…
ಚಿತ್ರದುರ್ಗ: ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಕಾಡುಗೊಲ್ಲ ಮುಖಂಡರು ಸಿಡಿದೆದ್ದಿದ್ದಾರೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಇಂದು ಡಿಸಿ ಕಚೇರಿ ಮುಂದೆ ಸಾಂಕೇತಿಕ ಧರಣಿ, ಪ್ರತಿಭಟನೆಯನ್ನು ನಡೆಸಲಿದ್ದಾರೆ. ಈ ಕುರಿತಂತೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಿ.ಶಿವು ಯಾದವ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಜನಾಂಗದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಿನಾಂಕ 09-08-2024ರ ಇಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಒಂದು ದಿನದ ಸಾಂಕೇತಿಕ ಧರಣಿಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ, ಕೇಂದ್ರ ಸರ್ಕಾರಕ್ಕೆ ಕಾಡುಗೊಲ್ಲ ಜನಾಂಗದ ಜಾತಿ ಪ್ರಮಾಣಪತ್ರ ನೀಡುವಂತೆ ಮನವಿ ಪತ್ರವನ್ನು ನೀಡಿ ಒತ್ತಾಯಿಸಲಾಗುತ್ತದೆ. ಅಲ್ಲದೇ ಅಲೆಮಾರಿ ಪಟ್ಟಿಗೆ ಸೇರಿಸಬೇಕು. ಈ ತಕ್ಷಣವೇ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಆಗ್ರಹಿಸಲಾಗುವುದು ಎಂದಿದ್ದಾರೆ. ಇನ್ನೂ ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಕಾಡುಗೊಲ್ಲರ ಹಟ್ಟಿಗಳಲ್ಲಿ ಸರ್ಕಾರದ ವತಿಯಿಂದ ಜಾಗೃತಿ ಕಾರ್ಯಕ್ರಮ ಏರ್ಪಡಿಸುವಂತೆ ಮನವಿ…
ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಮಂತ್ರಾಕ್ಷತೆಯ ಮಹಿಮೆ ಏನು ಎಂದು ತಿಳಿಯೋಣ ಬನ್ನಿ ಶ್ರೀ ಕ್ಷೇತ್ರ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ವಿಘ್ನೇಶ್ವರ ಭಟ್ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಗಳಲ್ಲಿ ನಿಮ್ಮ ಕಷ್ಟಗಳಿಗೆ ಫೋನಿನ ಮುಖಾಂತರ ಪರಿಹಾರ ಸೂಚಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿಯೂ ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಖಚಿತ ನಿಮ್ಮ ಗುಪ್ತ ಸಮಸ್ಯೆಗಳಿಗೂ ಹಾಗೂ ನಿಮ್ಮ ಮನೆಚ ಕಾರ್ಯಗಳಿಗೂ ಇಲ್ಲಿ 💯 ಗ್ಯಾರಂಟಿ ಪರಿಹಾರ ಶತಸಿದ್ಧ ಇಂದೇ ಕರೆ ಮಾಡಿ. 9535839666 ರಾಯರ ಸನ್ನಿಧಾನದಲ್ಲಿ ಸಿಗುವಂತಹ ಮಂತ್ರಾಕ್ಷತೆ ಎಷ್ಟು ಪವರ್ಫುಲ್ ಎಂದು ತಿಳಿದುಕೊಳ್ಳೋಣ ಈ ಮಂತ್ರಾಕ್ಷತೆಯಿಂದ ಆರೋಗ್ಯ ಸಮಸ್ಯೆ ಎನ್ನುವುದು ನಿವಾರಣೆ ಆಗುತ್ತದೆ ಪ್ರತಿದಿನ ನೀವು ಸ್ನಾನ ಮಾಡಿ ನಂತರ ಮಂತ್ರಾಕ್ಷತೆಯನ್ನು ನಿಮ್ಮ ತಲೆಯ ಮೇಲೆ ಹಾಕಿಕೊಂಡು ಹೊರಗಡೆ ಹೋಗುವುದರಿಂದ ನಿಮ್ಮ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುತ್ತವೆ. ಹೌದು ವೀಕ್ಷಕರೇ ಪ್ರತಿ ಗುರುವಾರ ನೀವು ರಾಯರ ಮಠಕ್ಕೆ ಹೋಗಿ ಅಲ್ಲಿ ಸಿಗುವ ಮಂತ್ರಾಕ್ಷತೆಯನ್ನು…
ಬೆಂಗಳೂರು: ನಗರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ವಾಕಿಂಗ್ ಮಾಡುತ್ತಿದ್ದಂತ ಮಹಿಳೆಯೊಬ್ಬರಿಗೆ ಏಕಾಏಕಿ ಕಲ್ಲಿನಿಂದ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸಹಕಾರ ನಗರದಲ್ಲಿ ಇಂದು ಈ ಘಟನೆ ನಡೆದಿದೆ. ವಾಕಿಂಗ್ ಮಾಡುತ್ತಿದ್ದಂತ ಸುನೀತಾ ಎಂಬುವರ ಮೇಲೆ ಏಕಾಏಕಿ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿದ್ದಾನೆ. ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದಂತ ಸುನೀತಾರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅಲ್ಲದೇ ಮಹಿಳೆಗೆ ಜಜ್ಜಿದಂತ ಅಪರಿಚಿತ ವ್ಯಕ್ತಿಯನ್ನು ಹಿಡಿದು ಥಳಿಸಿದಂತ ಜನರು, ಕೊಡಿಗೆಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂದಹಾಗೇ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಭಿಕ್ಷಾಟನೆ ಮಾಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/ask-rtos-to-check-dl-of-lorry-drivers-in-bengaluru-ramesh-babu-writes-to-cm/ https://kannadanewsnow.com/kannada/sc-leaders-support-bjps-fight-mlc-chalavadi-narayanasamy/
ಬೆಂಗಳೂರು: ನಗರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಉಗ್ರರ ಕರಿನೆರಳಿನ ಮುನ್ಸೂಚನೆ ತಿಳಿದು ಬಂದಿದೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಬೆಂಗಳೂರು ನಗರ ಪೊಲೀಸರು ಹೈ ಎಲರ್ಟ್ ಆಗಿದ್ದು, ಹೋಟೆಲ್ ಗಳಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಬಗ್ಗೆ ಮಾಹಿತಿ ನೀಡುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ದಿನಾಂಕ 15-08-2024ರಂ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕವಾಯತು ಮತ್ತು ಸಮಾರಂಭಗಳು ನಡೆಯಲಿದೆ ಎಂದಿದ್ದಾರೆ. ಉಗ್ರಗಾಮಿಗಳು ಬೆಂಗಳೂರು ನಗರವನ್ನು ಗುರಿಯಾಗಿಟ್ಟುಕೊಂಡಿರುವ ಹಿನ್ನಲೆಯಲ್ಲಿ ತಾವು ಸಂಘದಲ್ಲಿ ಸದಸ್ಯರಾಗಿರುವ ಹೋಟೆಲ್ ಗಳ ಮಾಲೀಕರಿಗೆ, ಹೋಟೆಲ್ ಗಳ ಮ್ಯಾನೇಜರ್ ಹಾಗೂ ಇತರೆ ನೌಕರರಿಗೆ ಹೋಟೆಲ್ ಗಳಲ್ಲಿ ತಂಗುವ ವಿದೇಶಿಯರು ಮತ್ತು ಸಂಶಯಾಸ್ಪದ ಹಾಗೂ ಅಪರಿಚಿತ ವ್ಯಕ್ತಿಗಳು ಹೋಟೆಲ್ ಗಳಲ್ಲಿ ತಂಗಿದಲ್ಲಿ ಅವರ ಬಗ್ಗೆ ನಿಗಾವಹಿಸಿ, ವಿಶೇಷವೇನಾದರೂ ಕಂಡು ಬಂದಲ್ಲಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಈ ಭದ್ರತಾ ಕಾರ್ಯದಲ್ಲಿ ಪೊಲೀಸರಿಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು…
ಬೆಂಗಳೂರು : ಕಾಳ್ಗಿಚ್ಚು ಎಚ್ಚರಿಕೆ, ಗಸ್ತುಪಡೆ ಎಚ್ಚರಿಕೆ, ಅರಣ್ಯ ಹೊದಿಕೆ ಬದಲಾವಣೆ ಎಚ್ಚರಿಕೆ ಆಪ್, ಇ-ಎಫ್.ಐ.ಆರ್ ಸೇರಿದಂತೆ ಅರಣ್ಯ ಮತ್ತು ವೃಕ್ಷ ಸಂಪತ್ತಿನ ಸಂರಕ್ಷಣೆಗಾಗಿ ಕರ್ನಾಟಕ ಅರಣ್ಯ ಇಲಾಖೆ ಐಸಿಟಿ ವಿಭಾಗ ಸಿದ್ಧಪಡಿಸಿರುವ ವಿವಿಧ ಆನ್ವಯಿಕ (ಆಪ್)ಗಳ ಬಗ್ಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪ್ರಶಂಸೆ ವ್ಯಕ್ತಪಡಿಸಿದರು. ಅರಣ್ಯ ಭವನಕ್ಕಿಂದು ಭೇಟಿ ನೀಡಿ ಅರಣ್ಯ ಇಲಾಖೆ ಇಸ್ರೋ ಸಹಯೋಗದಲ್ಲಿ ರೂಪಿಸಿರುವ ವಿವಿಧ ಆಪ್ ಗಳ ಪ್ರಾತ್ಯಕ್ಷಿಕೆ ವೀಕ್ಷಿಸಿ, ಮಾಹಿತಿ ಪಡೆದ ಅವರು ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಬಳಿಕ ಅರಣ್ಯ ಸಂರಕ್ಷಣೆಗೆ ನೀಡಿರುವ ಆದ್ಯತೆ ಮತ್ತು ತೋರುತ್ತಿರುವ ಕಾಳಜಿಗೆ ಪ್ರಶಂಸೆ ವ್ಯಕ್ತಪಡಿಸಿದರು. 2023-24ನ ಸಾಲಿನಲ್ಲಿ 5 ಕೋಟಿ 48 ಲಕ್ಷ ಸಸಿಗಳನ್ನು ನೆಟ್ಟು, ಅವುಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಜಿಯೋ ಟ್ಯಾಗ್ ಮಾಡಿ, ಆಡಿಟ್ ಮಾಡಿಸುತ್ತಿರುವ ಕರ್ನಾಟಕದ ಕ್ರಮ ಎಲ್ಲ ರಾಜ್ಯಗಳಿಗೂ ಅನುಕರಣೀಯ ಎಂದು ಅಭಿಪ್ರಾಯಪಟ್ಟರು. ಈ ಎಲ್ಲ ತಂತ್ರಾಂಶಗಳ ಬಗ್ಗೆ ತಮ್ಮ ಅಧಿಕಾರಿಗಳಿಗೂ ತರಬೇತಿ…
ವಿಜಯಪುರ: ಭೀಮಾತೀರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಇನ್ನೋವಾ ಕಾರು ಹತ್ತಿಸಿ ವಕೀಲನನ್ನು ಕಿಲೋಮೀಟರ್ ದೂರದವರೆಗೆ ಹೊತ್ತೊಯ್ದು, ಸತ್ತ ಮೇಲೆ ಕಾರು ಸಹಿತ ಪರಾರಿಯಾಗಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಜಲಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಂತ ಭೀಮಾತಿರದ ಹಂತ ಕುಖ್ಯಾತಿಯ ಭಾಗಪ್ಪ ಅವರ ಸಂಬಂಧಿ ಹಾಗೂ ವಕೀಲ ರವಿ ಮೇಲಿನಮನಿ(37)ಗೆ ಇನ್ನೋವ ಕಾರೊಂದು ಡಿಕ್ಕಿ ಹೊಡೆಯಲಾಗಿದೆ. ಆ ಬಳಿಕ ಇನ್ನೋವಕಾರು ಬಸವನಗರದಿಂದ ಜಿ.ಪ ಪ್ರವೇಶದ್ವಾರದವರೆಗೆ ಸುಮಾರು ಎರಡೂವರೆ ಕಿಲೋಮೀಟರ್ ಹೊತ್ತೊಯ್ದಿದೆ ಎನ್ನಲಾಗಿದೆ. ರವಿ ಮೇಲಿನಮಲಿ ಸಾವನ್ನಪ್ಪಿದ ನಂತ್ರ, ಇನ್ನೋವ ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ. ಇದೊಂದು ವ್ಯವಸ್ಥಿತ ಕೃತ್ಯ, ಕೊಲೆ ಎಂಬುದಾಗಿ ಶಂಕಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ, ಎಎಸ್ ಪಿ, ಡಿವೈಎಸ್ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/muhammad-yunus-takes-oath-as-head-of-interim-bangladesh-government/ https://kannadanewsnow.com/kannada/good-day-moment-see-map-kumaraswamys-brothers-property-documents-released-dk-shivakumar/ https://kannadanewsnow.com/kannada/ask-rtos-to-check-dl-of-lorry-drivers-in-bengaluru-ramesh-babu-writes-to-cm/
ಢಾಕಾ: ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಮೈಕ್ರೋಲೆಂಡಿಂಗ್ನಲ್ಲಿ ಪ್ರವರ್ತಕ ಕೆಲಸಕ್ಕಾಗಿ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದ 84 ವರ್ಷದ ಯೂನುಸ್ ಅವರನ್ನು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಸಂಸತ್ತನ್ನು ವಿಸರ್ಜಿಸಿದ ನಂತರ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಿಸಲಾಯಿತು. ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯಿಂದಾಗಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಬೇಕಾಯಿತು. ಅವರು ಪ್ರಸ್ತುತ ಭಾರತದಲ್ಲಿದ್ದಾರೆ. ಗುರುವಾರ, ಯೂನುಸ್ ತನ್ನ ನಾಗರಿಕರಿಗೆ ಸುರಕ್ಷತೆಯ ಭರವಸೆ ನೀಡುವ ಸರ್ಕಾರವನ್ನು ತಲುಪಿಸುವುದಾಗಿ ಭರವಸೆ ನೀಡಿದರು. ನೊಬೆಲ್ ಪ್ರಶಸ್ತಿ ವಿಜೇತರು ಈ ಹಿಂದೆ ಪ್ರಮಾಣ ವಚನ ಸ್ವೀಕರಿಸಲು ಪ್ಯಾರಿಸ್ ನಿಂದ ಪ್ರತಿಭಟನಾ ಪೀಡಿತ ಬಾಂಗ್ಲಾದೇಶಕ್ಕೆ ಮರಳಿದರು. ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್, ಹಿರಿಯ ಅಧಿಕಾರಿಗಳು, ವಿದ್ಯಾರ್ಥಿ ಮುಖಂಡರು ಮತ್ತು ನಾಗರಿಕ ಸಮಾಜದ ಸದಸ್ಯರು ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ಭಾವನಾತ್ಮಕ…
ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-9-2024 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಒಂದು ಬಾರಿ ಪರಿಹಾರ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರಕ್ಕೆ ಬಿಬಿಎಂಪಿ ಕೃತಜ್ಞತೆ ಸಲ್ಲಿಸುತ್ತದೆ ಮತ್ತು ನಾಗರೀಕರ ಮನವಿಗಳ ಮೇರೆಗೆ ಒಂದು ಬಾರಿ ಪರಿಹಾರ ಯೋಜನೆಯನ್ನು ದಿನಾಂಕ:30-9-2024ರವರೆಗೆ ವಿಸ್ತರಿಸಲಾಗಿದೆ ಎಂದಿದೆ. ಒಂದು ಬಾರಿ ಪರಿಹಾರ ಯೋಜನೆ & ಅದರ ಪ್ರಮುಖಾಂಶಗಳು: * ಸಂಪೂರ್ಣ ಬಡ್ಡಿ ಮನ್ನಾ * ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. * ವಸತಿ ಮತ್ತು ಮಿಶ್ರ ಬಳಕೆಯ ಆಸ್ತಿಗಳ ಆಸ್ತಿ ತೆರಿಗೆ ಬಾಕಿ ವಸೂಲಾತಿ ಪರಿಷ್ಕರಣೆ ಮತ್ತು ಮೌಲ್ಯಮಾಪನ ಮಾಡದ ಆಸ್ತಿಗಳಿಗೆ 5-ವರ್ಷಗಳಿಗೆ ಸೀಮಿತವಾಗಿರುತ್ತದೆ. ಎಲ್ಲಾ ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸುವ ಮೂಲಕ ಮುಖ್ಯಧಾರೆಗೆ ಸೇರಲು ಈ ಐತಿಹಾಸಿಕ ಕೊನೆಯ ಅವಕಾಶದ ಪ್ರಯೋಜನವನ್ನು…