Subscribe to Updates
Get the latest creative news from FooBar about art, design and business.
Author: kannadanewsnow09
ಸಾಮಾನ್ಯವಾಗಿ ಶ್ರೀಚಕ್ರದ ಹೆಸರು ಕೇಳಿರುತ್ತೀವಿ, ದೇವಿ ದೇವಾಲಯಗಳಲ್ಲಿ ಹೆಚ್ಚಾಗಿ ಶ್ರೀಚಕ್ರ ಸ್ಥಾಪಿಸಿರುತ್ತಾರೆ. ಕೆಲವಾರು ಮನೆಗಳಲ್ಲಿಯೂ ಸಹ ಶ್ರೀಚಕ್ರವನ್ನು ಇಟ್ಟು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಇಂತಹ ಮನೆಗಳಲ್ಲಿ ದೇವಿ ನೆಲೆಸಿರುತ್ತಾಳೆ, ಇದರಿಂದ ದಾರಿದ್ರ್ಯ ನಾಶವಾಗಿ, ಸುಖ ,ಸಮೃದ್ಧಿ, ಶಾಂತಿ ನೆಲಸುತ್ತದೆ. ಅಂತಹ ಮನೆಗಳಲ್ಲಿ ನಕಾರಾತ್ಮಕವಾಗಿ ಶಕ್ತಿಯ ಪ್ರವೇಶಕ್ಕೆ ಅಸ್ಪದವಿರುವುದಿಲ್ಲ. ಈ ಯಂತ್ರವು ಸ್ತ್ರೀ ಹಾಗೂ ಪುರುಷ ಶಕ್ತಿ (ಶಿವಶಕ್ತಿ)ಗಳೆರಡರ ಪ್ರತೀಕ. ಇದರ ಬಗ್ಗೆ ಉಪನಿಷತ್ಗಳ ಕಾಲದಿಂದಲೂ ಉಲ್ಲೇಖವಿದೆ. ಇದರ ಪೂಜೆ ಸಂಪತ್ತಿನ ಜೊತೆಗೆ ಇಹಪರಗಳೆರಡರ ಉನ್ನತಿಗೆ ಸಾಧನವಾಗಿದೆ. ಇದನ್ನು ಪೂರ್ವಾಭಿಮುಖವಾಗಿ ಇಟ್ಟು, ಪೂಜಿಸುವವರು ಉತ್ತರಾಭಿಮುಖವಾಗಿ ಕುಳಿತು ಪೂಜಿಸಬೇಕು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ…
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಸಿದ್ಧರಾಮಯ್ಯ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ನಡೆಸಿ ಮಾತನಾಡಿದಂತ ಅವರು, ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ…
ಬೆಂಗಳೂರು: ರಾಜ್ಯದಲ್ಲಿ ದೇವದಾಸಿ ಪದ್ಧತಿ ನಿಷೇಧಿಸಲಾಗಿದೆ. ಈ ಪದ್ದತಿ ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದ್ರೆ ಆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ಎಚ್ವರಿಕೆ ನೀಡಿದರು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಪ್ರಶ್ನಿಸಿದರು. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ…
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation’s – ISRO) ಐತಿಹಾಸಿಕ 100 ನೇ ಮಿಷನ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಕ್ಷಣಗಣನೆ ಮಂಗಳವಾರ ಪ್ರಾರಂಭವಾಗಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐ ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೋದ ನೂತನ ಅಧ್ಯಕ್ಷ ವಿ.ನಾರಾಯಣನ್ ಅವರ ನೇತೃತ್ವದಲ್ಲಿ ಜಿಎಸ್ಎಲ್ವಿ ರಾಕೆಟ್ನಲ್ಲಿ ನ್ಯಾವಿಗೇಷನ್ ಉಪಗ್ರಹದ ಉಡಾವಣೆ ಬುಧವಾರ ಬೆಳಿಗ್ಗೆ ನಡೆಯಲಿದೆ. ನಾರಾಯಣನ್ ಅವರು ಜನವರಿ 13ರಂದು ಅಧಿಕಾರ ವಹಿಸಿಕೊಂಡರು. ದೇಶೀಯ ಕ್ರಯೋಜೆನಿಕ್ ಮೇಲಿನ ಹಂತವನ್ನು ಹೊಂದಿರುವ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಜಿಎಸ್ಎಲ್ವಿ) ತನ್ನ 17 ನೇ ಹಾರಾಟದಲ್ಲಿ ನ್ಯಾವಿಗೇಷನ್ ಉಪಗ್ರಹ ಎನ್ವಿಎಸ್ -02 ಅನ್ನು ಹೊತ್ತೊಯ್ಯಲಿದ್ದು, ಜನವರಿ 29 ರಂದು ಬೆಳಿಗ್ಗೆ 6.23 ಕ್ಕೆ ಉಡಾವಣೆಯಾಗಲಿದೆ. ಲಿಫ್ಟ್ ಆಫ್ ಸಮಯಕ್ಕೆ 27 ಗಂಟೆಗಳ ಮೊದಲು ಕ್ಷಣಗಣನೆ ಪ್ರಾರಂಭವಾಯಿತು. “27.30 ಗಂಟೆಗಳ ಕ್ಷಣಗಣನೆ ಮಂಗಳವಾರ ಮುಂಜಾನೆ 02.53 ಕ್ಕೆ ಪ್ರಾರಂಭವಾಯಿತು” ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.…
ಬೆಂಗಳೂರು: 2024-25ನೇ ಸಾಲಿನ ಬಿಇಡಿ ಸೀಟುಗಳ ದಾಖಲಾತಿ ಪ್ರಕ್ರಿಯೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲು ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೂಲಕ ಬಿಇಡಿ ದಾಖಲಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಕೇಂದ್ರೀಕೃತ ದಾಖಲಾತಿ ಘಟಕದಿಂದ ಅಭ್ಯರ್ಥಿಗಳಿಗೆ ಸೂಚನೆಯನ್ನು ಹೊರಡಿಸಿದ್ದು, 2024-25ನೇ ಸಾಲಿನ ಸರ್ಕಾರಿ ಕೋಟಾದ ಬಿ.ಇಡಿ ಸೀಟುಗಳ ಹಂಚಿಕೆ ಪ್ರಕ್ರಿಯೆಯು 4ನೇ ಹಾಗೂ ಅಂತಿಮ ಸುತ್ತು ದಿನಾಂಕ:20/01/2025ರಂದು ಪೂರ್ಣಗೊಂಡಿರುತ್ತದೆ. 4ನೇ ಸುತ್ತಿನ ನಂತರ ಸೀಟು ಹಂಚಿಕೆ ಆಗದ ಕೆಲವು ಅಭ್ಯರ್ಥಿಗಳಿಗೆ ಈ ರೀತಿ ** ಗುರುತು ಬಂದಿರುವ ಮತ್ತು ಬಯಸಿದ ಕಾಲೇಜು ಸಿಗದ ಕಾರಣ ದಾಖಲಾತಿ ಪತ್ರ ಪಡೆಯದೆ ಇರುವ ಕೆಲವು ಅಭ್ಯರ್ಥಿಗಳು ಮತ್ತೊಮ್ಮೆ Option Entryಗೆ ಅವಕಾಶ ನೀಡುವಂತೆ ಕೋರಿರುತ್ತಾರೆ. ಉಲ್ಲೇಖಿತ ಪತ್ರದ ಆದೇಶದಂತೆ ಸದರಿ ಅಭ್ಯರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳ ಮಾಟ್ರಿಕ್ಸ್ನ್ನು 5ನೇ ಸುತ್ತಿಗೆ ದಿನಾಂಕ:28/01/2025ರಂದು ಪ್ರಕಟಿಸಲಾಗುತ್ತದೆ. 5ನೇ ಸುತ್ತಿಗೆ ಕಾಲೇಜುಗಳ ಆಯ್ಕೆಗಾಗಿ eroth Option Entryrt DOB:29/01/2025 ರಿಂದ ದಿ:01/02/2025ರ ವರೆಗೆ ಅವಕಾಶ ನೀಡಲಾಗಿದೆ. ಅದಕ್ಕಾಗಿ 4ನೇ ಸುತ್ತಿನಲ್ಲಿ **…
ಉದ್ಯೋಗಿಗಳು ತಮ್ಮ ಮೌಲ್ಯಮಾಪನ ನಮೂನೆಗಳನ್ನು ಭರ್ತಿ ಮಾಡುವ ಮತ್ತು ಹಿಂದಿನ ವರ್ಷ ಅವರು ಮಾಡಿದ ಎಲ್ಲಾ ಕಠಿಣ ಪರಿಶ್ರಮಕ್ಕಾಗಿ ಅವರ ಕಾರ್ಯಕ್ಷಮತೆ ಪರಿಶೀಲನಾ ಸಭೆಗಳನ್ನು ನಡೆಸುವ ವರ್ಷದ ಸಮಯ ಇದು. ಇದೇ ರೀತಿ, ಫುಜೈ ಎಂಬ ಚೀನಾದ ಪೊಲೀಸ್ ನಾಯಿ ಇತ್ತೀಚೆಗೆ ತನ್ನ ಕಾರ್ಯಕ್ಷಮತೆಯನ್ನು ಪರಿಶೀಲಿಸಿತು. ಆದಾಗ್ಯೂ, ಕಳೆದ ವರ್ಷದಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೂ, ನಾಯಿ ಪೋಲೀಸ್ ವಿಲಕ್ಷಣ ಕಾರಣಕ್ಕಾಗಿ ವರ್ಷಾಂತ್ಯದ ಬೋನಸ್ ಕಳೆದುಕೊಂಡಿದ್ದಾರೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (ಎಸ್ಸಿಎಂಪಿ) ವರದಿ ಮಾಡಿದೆ. ಇದರ ಹಾಸ್ಯಮಯ ವೀಡಿಯೊವನ್ನು ಚೀನಾದ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ ಮತ್ತು ಇದು ಅನೇಕ ನೆಟ್ಟಿಗರಿಗೆ ಸಂಬಂಧಿಸಿದೆ ಎಂದು ತೋರುತ್ತದೆ, ಏಕೆಂದರೆ ಅಂದಿನಿಂದ ಇದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಉತ್ತರ ಚೀನಾದ ಪೊಲೀಸ್ ಶ್ವಾನ ತರಬೇತಿ ನೆಲೆಗೆ ಸೇರಿದಾಗ ಕಾರ್ಗಿಯಾದ ಫುಜೈ ಕೆಲವೇ ತಿಂಗಳ ಮಗುವಾಗಿದ್ದಾಗ ಎಂದು ಎಸ್ಸಿಎಂಪಿ ವರದಿ ಮಾಡಿದೆ. ಜನವರಿ 2024 ರಲ್ಲಿ, ಫುಜೈ ಸ್ಫೋಟಕಗಳನ್ನು ಪತ್ತೆಹಚ್ಚುವ ತರಬೇತಿಯನ್ನು ಪ್ರಾರಂಭಿಸಿತು. ಅವರ…
ಬೆಂಗಳೂರು: ದಿನಾಂಕ 29.01.2025ರ ಬುಧವಾರದ ನಾಳೆ ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 17:30 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜ.29ರ ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ಗ್ರೋವ್, ದೇವಮತ ಶಾಲೆ, ಅಮರ್ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್ಗಾರ್ಡನ್, ಸುಂದರಾಂಜನೇಯದೇವಸ್ಥಾನ,…
ಬೆಂಗಳೂರು: ರಾಜ್ಯದ ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ ನೀಡಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಈ ಮೂಲಕ ಇ-ಖಾತಾ ಇಲ್ಲದ ನಗರ ಪ್ರದೇಶದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ…
ನವದೆಹಲಿ: ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 41 ಎ (ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಸೆಕ್ಷನ್ 35) ಪ್ರಕಾರ ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಆರೋಪಿ / ಶಂಕಿತರಿಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಸಿಆರ್ಪಿಸಿ, 1973/ ಬಿಎನ್ಎಸ್ಎಸ್, 2023 ರ ಅಡಿಯಲ್ಲಿ ಗುರುತಿಸಲ್ಪಟ್ಟ ಮತ್ತು ಸೂಚಿಸಿದ ಸೇವಾ ವಿಧಾನಕ್ಕೆ ಪರ್ಯಾಯವಾಗಿ ಅಥವಾ ಬದಲಿಯಾಗಿ ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ನೋಟಿಸ್ ಸೇವೆಯನ್ನು ಪರಿಗಣಿಸಲಾಗುವುದಿಲ್ಲ ಅಥವಾ ಗುರುತಿಸಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಿಆರ್ಪಿಸಿ ಸೆಕ್ಷನ್ 160 / ಬಿಎನ್ಎಸ್ಎಸ್, 2023 ರ ಸೆಕ್ಷನ್ 179 ಮತ್ತು ಸಿಆರ್ಪಿಸಿಯ ಸೆಕ್ಷನ್ 175 / ಬಿಎನ್ಎಸ್ಎಸ್ನ ಸೆಕ್ಷನ್ 195 ರ ಅಡಿಯಲ್ಲಿ ಆರೋಪಿಗಳಿಗೆ ನೋಟಿಸ್ ನೀಡಬಹುದು ಅಥವಾ ಸಿಆರ್ಪಿಸಿ / ಬಿಎನ್ಎಸ್ಎಸ್ ಅಡಿಯಲ್ಲಿ ಸೂಚಿಸಿರುವ ಸೇವಾ ವಿಧಾನದ ಮೂಲಕ ಮಾತ್ರ ನೀಡಬಹುದು ಎಂದು ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ಮತ್ತು ನ್ಯಾಯಮೂರ್ತಿ…
ಬೆಂಗಳೂರು: ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು. ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ…








