Author: kannadanewsnow09

ಬೆಂಗಳೂರು: ರಾಜ್ಯದ ಆಡಳಿತದ ಶಕ್ತಿ ಸೌಧ ಎಂಬುದಾಗಿಯೇ ಕರೆಯಲ್ಪಡುವಂತ ಬೆಂಗಳೂರಿನ ವಿಧಾನಸೌಧದ ಮುಂದೆಯೇ ಮಾಲೀಕನೊಬ್ಬ ತನ್ನ ಬೈಕಿಗೆ ಬೆಂಕಿ ಹಂಚಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಧಾನಸೌಧದ ಮುಂಭಾಗದಲ್ಲೇ ವ್ಯಕ್ತಿಯೊಬ್ಬ ತನ್ನ ಎಲೆಕ್ಟ್ರಿಕ್ ಬೈಕಿಗೆ ಬೆಂಕಿ ಇಟ್ಟಿರುವಂತ ಘಟನೆ ನಡೆದಿದೆ. ಆರಂಭದಲ್ಲಿ ಇದು ಬಾಕಿ ಹಣ ಪಾವತಿಸೋದಕ್ಕೆ ಸಾಧ್ಯವಾಗದ ಕಾರಣಕ್ಕೆ ಎನ್ನಲಾಗಿತ್ತು. ಆದರೇ ಆ ಬಳಿಕ ಪೊಲೀಸರ ಮೇಲಿನಿಂದ ಮಾಲೀಕ ಎಲೆಕ್ಟ್ರಿಕ್ ಬೈಕಿಗೆ ಬೆಂಕಿ ಇಟ್ಟಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಕೆಲ ದಿನಗಳ ಹಿಂದೆ ಬೈಕ್ ಮಾಲೀಕ ಪೃಥ್ವಿ ಟ್ರಕ್ಕಿಂಗ್ ಗೆ ಹೋಗಿದ್ದರು. ಈ ಸಂದರ್ಭದಲ್ಲಿ ಅವರ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಈ ವೇಳೆಯಲ್ಲಿ ಪೊಲೀಸರು ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಬೇಸರದಲ್ಲಿಯೇ ಪೃಥ್ವಿರಾಜ್ ಅವರು ಇಂದು ವಿಧಾನಸೌಧದ ಮುಂದೆಯೇ ತನ್ನ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರಹಾಕಿದ್ದಾರೆ ಎನ್ನಲಾಗುತ್ತಿದೆ. ಇದೀಗ ವಿಧಾನಸೌಧ ಠಾಣೆಯ ಪೊಲೀಸರು ಪೃಥ್ವಿರಾಜ್ ನನ್ನು ವಶಕ್ಕೆ…

Read More

ಬೆಂಗಳೂರು: ನಗರದ ಜೆಪಿ ನಗರದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲೇ ಅನುಮಾನಾಸ್ಪದವಾಗಿ ನಿಗೂಢ ರೀತಿಯಲ್ಲಿ ಸ್ಪೋಟವೊಂದು ಆಗಿದ್ದಾಗಿ ತಿಳಿದು ಬಂದಿತ್ತು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಜೆಪಿ ನಗರದ ಮನೆಯೊಂದರಲ್ಲಿ ಅಡುಗೆ ಮಾಡಲು ಇರಿಸಲಾಗಿದ್ದಂತ ಕುಕ್ಕರ್ ನಿಗೂಢ ರೀತಿಯಲ್ಲಿ ಸ್ಪೋಟಗೊಂಡಿತ್ತು. ಆ ಬಳಿಕ ಕುಕ್ಕರ್ ಬಲ್ಬಿಗೆ ತಾಗಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಡೀ ಮನೆಗೆ ಬೆಂಕಿ ಆವರಿಸಿತ್ತು. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದಂತ ಸಮೀರ್ ಮತ್ತು ಮೋಸಿನ್ ಎಂಬುವರು ಗಾಯಗೊಂಡಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಮೋಸಿನ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಸೋಮವಾರ ಬೆಳಿಗ್ಗೆ 10 ಗಂಟೆಗೆ ಈ ಸ್ಪೋಟ ಸಂಭವಿಸಿತ್ತು. ಗಾಯಗೊಂಡಿದ್ದಂತ ಇಬ್ಬರು ಉತ್ತರ ಪ್ರದೇಶದ ಮೂಲದವರು ಎನ್ನಲಾಗಿತ್ತು. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/farmers-of-the-state-note-get-e-kyc-done-immediately-to-deposit-pm-kisan-money/ https://kannadanewsnow.com/kannada/breaking-team-india-announced-for-duleep-trophy-iyer-gill-gaikwad-named-captains-duleep-trophy/

Read More

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು www.ssp.postmartic.karnataka.gov.in ವೆಬ್‌ಸೈಟ್ ಮೂಲಕ ದಿ:15/09/2024 ರೊಳಗಾಗಿ ಸಲ್ಲಿಸುವುದು. ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‌ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in ,ದೂ.ಸಂ.: 1902 ನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/important-information-for-farmers-applications-invited-for-availing-various-facilities-including-farm-ponds/ https://kannadanewsnow.com/kannada/farmers-of-the-state-note-get-e-kyc-done-immediately-to-deposit-pm-kisan-money/

Read More

ಬೆಂಗಳೂರು: ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ…

Read More

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಸೆ.12 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9110278031, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/finance-ministry-exempts-uidai-from-payment-of-income-tax/ https://kannadanewsnow.com/kannada/guarantee-scheme-wont-stop-even-if-bjp-takes-100-births-dk-shivakumar-shivakumar-clarifies/ https://kannadanewsnow.com/kannada/farmers-of-the-state-note-get-e-kyc-done-immediately-to-deposit-pm-kisan-money/

Read More

ಬೆಂಗಳೂರು : “ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟನೆ ಮಾಡಿದ ನಂತರ ಸಭೆಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಇಂದಿರಾ ಗಾಂಧಿ ಅವರು ವೃದ್ಧಾಪ್ಯ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗೆ 10 ಹೆಚ್.ಪಿ ಉಚಿತ ವಿದ್ಯುತ್, ಕೃಷ್ಣ ಅವರ ಕಾಲದಲ್ಲಿ ಸ್ತ್ರೀಶಕ್ತಿ ಸಂಘ ಯೋಜನೆ ಜಾರಿಗೆ ಬಂದಿತು. ಇದರಲ್ಲಿ ಯಾವುದಾದರೂ ಒಂದು ಯೋಜನೆಯನ್ನು ನಿಲ್ಲಿಸಲಾಗಿದೆಯೇ? ಬಡವರಿಗೆ ನಿವೇಶನ, ಮನೆ ನೀಡುವ ಯೋಜನೆ ನಿಂತಿದೆಯೇ? ಇಲ್ಲ. ಅದೇ ರೀತಿ ಬಿಜೆಪಿಯವರು ನೂರು ಜನ್ಮ ತಳೆದರೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ” ಎಂದು ವಾಗ್ದಾಳಿ ನಡೆಸಿದರು. “ಪದ್ಮನಾಭನಗರದಲ್ಲಿ ನಮ್ಮ ಕಾರ್ಯಕರ್ತರ…

Read More

ಬೆಂಗಳೂರು: ರಾಜ್ಯಾಧ್ಯಂತ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತನಿಖಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಜುಲೈ.2024ರ ತಿಂಗಳಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 3695 ಪ್ರಯಾಣಿಕರಿಗೆ ದಂಡವನ್ನು ವಸೂಲಿ ಮಾಡಿದ್ದಾರೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜುಲೈ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44879 ವಾಹನಗಳನ್ನು ತನಿಖೆಗೊಳಪಡಿಸಿ 3593 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ ಎಂದಿದೆ. ತನಿಖೆಯಲ್ಲಿ ಪತ್ತೆಯಾದಂತ 3695 ಟಿಕೇಟ್ ರಹಿತ ಪ್ರಯಾಣಿಕರಿಂದ   6,03,642/- ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 83,747/- ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ಹೇಳಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ…

Read More

ನವದೆಹಲಿ: 2027-28ರ ಹಣಕಾಸು ವರ್ಷದವರೆಗೆ ಐದು ವರ್ಷಗಳವರೆಗೆ ಆದಾಯ ತೆರಿಗೆ ಪಾವತಿಸುವುದರಿಂದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (ಯುಐಡಿಎಐ) ಆದಾಯಕ್ಕೆ ಹಣಕಾಸು ಸಚಿವಾಲಯ ವಿನಾಯಿತಿ ನೀಡಿದೆ. ಅದರಂತೆ, ಕೇಂದ್ರ ಸರ್ಕಾರದಿಂದ ಪಡೆದ ಅನುದಾನಗಳು / ಸಬ್ಸಿಡಿಗಳು; ಆರ್ಟಿಐ ಶುಲ್ಕ, ಟೆಂಡರ್ ಶುಲ್ಕ, ಸ್ಕ್ರ್ಯಾಪ್ ಮಾರಾಟ, ಪಿವಿಸಿ ಕಾರ್ಡ್ ಸೇರಿದಂತೆ ಶುಲ್ಕಗಳು / ಚಂದಾದಾರಿಕೆಗಳು; ಸ್ವೀಕರಿಸಿದ ದೃಢೀಕರಣ, ದಾಖಲಾತಿ ಮತ್ತು ನವೀಕರಣ ಸೇವಾ ಶುಲ್ಕಗಳು, ಅವಧಿ / ಸ್ಥಿರ ಠೇವಣಿಗಳು; ಮತ್ತು ಯುಐಡಿಎಐ ಗಳಿಸಿದ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿಯನ್ನು ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗುವುದು. ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಈ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯು 2024-2025, 2025-2026, 2026-2027, 2027-2028 ಮತ್ತು 2028-2029 ರ ಮೌಲ್ಯಮಾಪನ ವರ್ಷಕ್ಕೆ ಅನ್ವಯಿಸುತ್ತದೆ. ಯುಐಡಿಎಐ ಆಧಾರ್ ಕಾಯ್ದೆ, 2016 ರ ನಿಬಂಧನೆಗಳ ಅಡಿಯಲ್ಲಿ ಸ್ಥಾಪಿಸಲಾದ ಶಾಸನಬದ್ಧ ಪ್ರಾಧಿಕಾರವಾಗಿದ್ದು, ಆಧಾರ್ ಕಾಯ್ದೆಯ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು…

Read More

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮುಂಭಾಗದ ಸಮೀಪವೇ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕ್ಷಣ ಮಾತ್ರದಲ್ಲಿ ಇತರೆಡೆಗೆ ಆವರಿಸಿದ್ದರಿಂದ, ಹೊತ್ತಿ ಉರಿದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಲಾಗಿದೆ. ಮಾಲೀಕನೇ ತನ್ನ ಬೈಕ್ ಅನ್ನು ವಿಧಾನಸೌಧದ ಮುಂಭಾಗದಲ್ಲಿ ನಿಲ್ಲಿಸಿ ಬೆಂಕಿ ಇಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಎಲೆಕ್ಟ್ರಿಕ್ ಬೈಕ್ ನ ಬಾಕಿ ಹಣ ಪಾವತಿ ಆಗದೇ ಇದ್ದ ಕಾರಣಕ್ಕೆ ಸಿಟ್ಟಿನಿಂದ ವಿಧಾನಸೌಧದ ಸಮೀಪವೇ ಬೆಂಕಿ ಹಚ್ಚಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/morne-morkel-appointed-india-bowling-coach-report/ https://kannadanewsnow.com/kannada/farmers-of-the-state-note-get-e-kyc-done-immediately-to-deposit-pm-kisan-money/

Read More

ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಸ್ಪರ್ಧಿಸಲು ಫ್ರಾನ್ಸ್ಗೆ ಪ್ರಯಾಣಿಸಲು ಸಜ್ಜಾಗಿರುವ 84 ಸದಸ್ಯರ ಭಾರತೀಯ ಕ್ರೀಡಾಪಟುಗಳ ಪಟ್ಟಿಯನ್ನು ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿ ಪ್ರಕಟಿಸಿದೆ. ಈ ಘೋಷಣೆಯೊಂದಿಗೆ, ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ 2024 ರ ತುಕಡಿಗಳ ಪಟ್ಟಿಯು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅತ್ಯಧಿಕ ಭಾರತೀಯ ಕ್ರೀಢಾಪಟುಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. https://twitter.com/PCI_IN_Official/status/1823615756665594167 ‘X’ ನಲ್ಲಿ ಬಳಕೆದಾರರು ಹಂಚಿಕೊಂಡಂತೆ 84 ಸದಸ್ಯರ ಪಟ್ಟಿಯನ್ನು ಈ ಕೆಳಗಿಗೆ ಪರಿಶೀಲಿಸಿ: https://twitter.com/Blazie_Harsh/status/1823620281518186776 https://twitter.com/Blazie_Harsh/status/1823620281518186776 https://kannadanewsnow.com/kannada/good-news-for-farmers-in-karnataka-minister-ishwar-khandre-says-dont-worry-about-removal-of-encroachments/ https://kannadanewsnow.com/kannada/morne-morkel-appointed-india-bowling-coach-report/

Read More