Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಮಗೆ ತೀರ್ಥ, ಪ್ರಸಾದ ಬೇಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ಶಾಲೆಗೆ ಹೋಗಿ ಬರೋದಕ್ಕೆ ಬಸ್ ಕೊಡಿ ಎಂದು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರ ಬರೆದಿದ್ದರು. ಹೀಗೆ ಸಿಎಂ ಸಿದ್ಧರಾಮಯ್ಯಗೆ ವಿದ್ಯಾರ್ಥಿನಿ ಬರೆದಂತ ಪತ್ರ ವೈರಲ್ ಆಗಿತ್ತು. ಈ ಬೆನ್ನಲ್ಲೇ ಬೆಂಗಳೂರಲ್ಲಿ ಉತ್ತಮ ಸಾರಿಗೆ ಸೇವೆ ಒದಗಿಸುತ್ತಿರುವಂತ BMTCಯಿಂದ ಈ ಕೆಳಗಿನಂತೆ ಸ್ಪಷ್ಟನೆ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ BMTCಯು, ಕುಮಾರಿ ಹರ್ಷಿನ್ ವಿ.ವೈ. 8ನೇ ತರಗತಿ ವಿದ್ಯಾರ್ಥಿನಿಯು ತಾವರೆಕೆರೆಯಿಂದ ಶ್ರೀನಗರಕ್ಕೆ ನೇರ ಬಸ್ ವ್ಯವಸ್ಥೆಯನ್ನು ನೀಡುವಂತೆ ಕೋರಿರುವ ಮನವಿಯನ್ನು ಹಾಗೂ ಸದರಿ ವಿದ್ಯಾರ್ಥಿನಿಯ ಮನವಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊನ್ನಗನಹಟ್ಟಿ, ಚನ್ನೇನಹಳ್ಳಿ, ಜಟ್ಟಿಪಾಳ್ಯ, ಸೀಗೇಹಳ್ಳಿಗಳಿಂದ ಬೆಂಗಳೂರು ನಗರಕ್ಕೆ ಬಸ್ ಸೌಲಭ್ಯವಿಲ್ಲವೆಂದು ಪ್ರಕಟವಾದ ಸುದ್ದಿಗೆ ಕೆಳಕಂಡಂತೆ ವಿವರಣೆ ನೀಡಲಾಗಿದೆ ಎಂದಿದೆ. ಕುಮಾರಿ ಹರ್ಷಿನ್ ವಿ.ವೈ. 8ನೇ ತರಗತಿ ವಿದ್ಯಾರ್ಥಿನಿಯು ತಾವರೆಕೆರೆಯಿಂದ ಶ್ರೀನಗರಕ್ಕೆ ನೇರ ಸಾರಿಗೆ ಸೌಲಭ್ಯವನ್ನು ಕೋರಿದ್ದು, ಪ್ರಸ್ತುತ ತಾವರೆಕೆರೆಯಿಂದ ಹಾಗೂ ತಾವರೆಕೆರೆ ಮಾರ್ಗವಾಗಿ ಕೆಂಪೇಗೌಡ ಬಸ್…
ಬೆಂಗಳೂರು: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭಗೊಂಡಿದೆ. ಮೊದಲ ಮತವನ್ನೇ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಚಲಾಯಿಸಿದರು. ಈವರೆಗೆ 39 ಶಾಸಕರಿಂದ ಮತದಾನ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಈವರೆಗೆ ಕಾಂಗ್ರೆಸ್ ಪಕ್ಷದ ಐವರು, ಬಿಜೆಪಿಯ 30 ಹಾಗೂ ಜೆಡಿಎಸ್ ಪಕ್ಷದ ನಾಲ್ವರು ಸೇರಿದಂತೆ 39 ಮಂದಿ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಅಡ್ಡ ಮತದಾನದ ಭೀತಿಯ ನಡುವೆ ಮಂಗಳವಾರದಂದು ಚುನಾವಣೆಯಲ್ಲಿ ಕಡ್ಡಾಯವಾಗಿ ಭಾಗಿಯಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತ ಶಾಸಕರಿಗೆ ಎಲ್ಲಾ ಪಕ್ಷಗಳು ವಿಪ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ 134, ಬಿಜೆಪಿ 66, ಜೆಡಿಎಸ್ 19, ಇತರರು 4 ಶಾಸಕರನ್ನು ಹೊಂದಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಪಕ್ಷೇತರರು ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರ ಬೆಂಬಲವಿದೆ…
ಮಂಡ್ಯ: ಜಿಲ್ಲೆಯಲ್ಲಿ ಆಸ್ತಿ ವಿಚಾರವಾಗಿ ಉಂಟಾದಂತ ಜಗಳದಲ್ಲಿ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವಂತ ಶಾಕಿಂಗ್ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಸುಂಡಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಪುತ್ರ ಮಹದೇವ್ ಹಾಗೂ ತಂದೆ ನಂಜಪ್ಪ ನಡುವೆ ಗಲಾಟೆಯಾಗಿತ್ತು. ಈ ಗಲಾಟೆಯ ಬಳಿಕ ತಂದೆ ನಂಜಪ್ಪ(65) ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಯನ್ನು ಪುತ್ರ ಮಹದೇವ್ ಮಾಡಿರೋದಾಗಿ ತಿಳಿದು ಬಂದಿದೆ. ಮಗಳ ಹೆಸರಿಗೆ ಆಸ್ತಿ ಬರೆದುಕೊಟ್ಟಿದ್ದ ನಂಜಪ್ಪನ ಜೊತೆಗೆ ಪುತ್ರ ಮಹದೇವ್ ಕಿರಿಕ್ ತೆಗೆದಿದ್ದಾನೆ. ಆಸ್ತಿ ಕೊಡಲಿಲ್ಲವೆಂದು ಆಕ್ರೋಶಗೊಂಡಿದ್ದಂತ ಮಹದೇವಪ್ಪ ಇಂದು ಬೆಳಗಿನ ಜಾವ ರಸ್ತೆಯಲ್ಲಿ ಒಡಾಡಿಸಿಕೊಂಡು ನಂಜಪ್ಪ ಅವರನ್ನು ಹಲ್ಲೆ ಮಾಡಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದಾನೆ. ಗಲಾಟೆಯ ವೇಳೆಯಲ್ಲಿ ಅಡ್ಡಬಂದ ತಾಯಿ ಮಹದೇವಮ್ಮಳಿಗೂ ಗಾಯವಾಗಿದೆ. ಹತ್ಯೆಯ ಬಳಿಕ ಮಗ ಮಹದೇವ ಎಸ್ಕೇಪ್ ಆಗಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಪ್ರಕರಮ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ವರದಿ: ಗಿರೀಶ್ ರಾಜ್,…
ಬೆಂಗಳೂರು: ನಾನು ಯಾವುದೇ ರೀತಿಯ ಅಡ್ಡಮತದಾನವನ್ನು ರಾಜ್ಯಸಭಾ ಚುನಾವಣೆಯಲ್ಲಿ ಮಾಡುವುದಿಲ್ಲ. ನನ್ನ ಮತ ಜೆಡಿಎಸ್ ಅಭ್ಯರ್ಥಿಗೆ ಹೊರತು ಬೇರೆ ಯಾರಿಗೂ ಇಲ್ಲ ಎಂಬುದಾಗಿ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು ನಾನು ಯಾವುದೇ ರೀತಿಯ ಅಡ್ಡಮತದಾನ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷದವರು ನನ್ನನ್ನು ಸಂಪರ್ಕಿಸಿದ್ದಾರೆ ಎಂಬುದು ಎಲ್ಲ ಸುಳ್ಳು ಎಂಬುದಾಗಿ ಹೇಳಿದರು. ನಾನು ಯಾವತ್ತೂ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಪರವಾಗಿದ್ದೇನೆ. ನಾನು ಯಾವುದೇ ರೀತಿಯ ಅಡ್ಡಮತದಾನ ಮಾಡುವುದಿಲ್ಲ. ನಾನು ಜೆಡಿಎಸ್ ಅಭ್ಯರ್ಥಿ ಪರವಾಗಿ ಮತ ಹಾಕುತ್ತೇನೆ ಎಂಬುದಾಗಿ ತಿಳಿಸಿದರು. ನಾನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ನಿಜ. ಸಿಎಂ, ಡಿಸಿಎಂ ಭೇಟಿ ಮಾಡಿದ್ದು ಕ್ಷೇತ್ರದ ಅನುದಾನದ ವಿಚಾರವಾಗಿಯೇ ಆಗಿದೆ. ಅದರ ಹೊರತಾಗಿ ಭೇಟಿಯ ವೇಳೆಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದರು. https://kannadanewsnow.com/kannada/voting-process-begins-for-4-rajya-sabha-seats-s-suresh-kumar-casts-his-vote/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/
ಬೆಂಗಳೂರು: ಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಆರಂಭಗೊಂಡಿದೆ. ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇದೀಗ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಬೆಂಗಳೂರಿನ ವಿಧಾನಸೌಧದ 106 ಕೊಠಡಿಯಲ್ಲಿ ಮತದಾನ ಪ್ರಾರಂಭಗೊಂಡಿದೆ. ರಾಜ್ಯಸಭೆ 4 ಸ್ಥಾನಗಳ ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೇ, ಮೊದಲು ಬಿಜೆಪಿಯ ರಾಜಾಜಿನಗರ ಕ್ಷೇತ್ರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮತದಾನ ಮಾಡಿದರು. ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲುವು ಖಚಿತ ಅಡ್ಡ ಮತದಾನದ ಭೀತಿಯಲ್ಲೇ ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ಅಡ್ಡ ಮತದಾದನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದರಲ್ಲಿ ಸದಸ್ಯರನ್ನು ಸ್ಥಳಾಂತರಿಸಿದೆ. ರಾಜ್ಯಸಭೆಯಲ್ಲಿ ಕರ್ನಾಟಕದಿಂದ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ತುಂಬಲು ದ್ವೈವಾರ್ಷಿಕ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಸೋಮವಾರ ತನ್ನ ಎಲ್ಲಾ ಶಾಸಕರನ್ನು ಹೋಟೆಲ್ ಗೆ…
ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಇದೇ ವೇಳೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ, ಜೆಡಿಎಸ್ ವಿರುದ್ಧ ಆಪರೇಷನ್ ಬಾಂಬ್ ಆರೋಪ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರಿನ ಹಿಲ್ಟನ್ ಹೋಟೆಲ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಮ್ಮ 42 ಶಾಸಕರನ್ನು ಬಿಜೆಪಿ, ಜೆಡಿಎಸ್ ನವರು ಸಂಪರ್ಕಿಸಿ, ಆಪರೇಷನ್ ಮಾಡೋ ಪ್ರಯತ್ನ ನಡೆಸಿದ್ದಾರೆ. ಅವರಿಗೆ ರಾಜಕೀಯದ ಬಗ್ಗೆ ಬೇಸಿಕ್ ಕಾಮನ್ ಸೆನ್ಸ್ ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು. ಹಣ ಇದೆ ಎಂದು ಕುದುರೆ ವ್ಯಾಪರ ಮಾಡ್ತಿದ್ದಾರೆ. ಹೆದರಿಸಿ, ಬೆದರಿಸಿ ಚುನಾವಣೆ ಮಾಡೋದು ಸರಿಯಲ್ಲ ಎಂಬುದಾಗಿ ಕಿಡಿಕಾರಿದರು. ಶ್ಯಾಮನೂರು ಅವರಿಗೆ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಕರೆ ಮಾಡಿದ್ದಾರೆ. ನೆಂಟಸ್ತನ ಬೇರೆ, ಬೀಗರ ತನ ಬೇರೆ, ರಾಜಕೀಯವೇ ಬೇರೆ. ರಾಜಕೀಯದಲ್ಲಿ ಯಾವುದು ಕೂಡ ಶಾಶ್ವತವಲ್ಲ ಎಂಬುದಾಗಿ ಗುಡುಗಿದರು. https://kannadanewsnow.com/kannada/fearing-job-loss-paytm-employee-hangs-self-to-death/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/
ಬೆಂಗಳೂರು: ರಾಜ್ಯದ ಹಿರಿಯ ನ್ಯಾಯವಾದಿಯಾಗಿದ್ದಂತ ಕೆ.ಟಿ ಡಾಕಪ್ಪ ಅವರು, ಕಳೆದ ರಾತ್ರಿ ಜರುಗಿದಂತ ರಸ್ತೆ ಅಪಘಾತದಲ್ಲಿ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಹಿರಿಯ ನ್ಯಾಯವಾದಿ ಡಿ.ಎಲ್ ಜಗದೀಶ್ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೌರಿ ಮೂಲ ಹಿರಿಯ ನ್ಯಾಯವಾದಿ ಕೆ.ಟಿ. ಡಾಕಪ್ಪ ಅವರು ಕಳೆದ ರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೃತರ ಕಳೆ ಬರಹವನ್ನು ಜಯನಗರದ ಎನ್ ಎಂಕೆಆರ್ ವಿ ಕಾಲೇಜು ಸಮೀಪ ಇರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/fearing-job-loss-paytm-employee-hangs-self-to-death/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಈ ಭೇಟಿಯು ಪ್ರಮುಖ ಯೋಜನೆಗಳನ್ನು ಉದ್ಘಾಟಿಸುವುದು, ನಡೆಯುತ್ತಿರುವ ಉಪಕ್ರಮಗಳನ್ನು ಪರಿಶೀಲಿಸುವುದು ಮತ್ತು ವಿವಿಧ ಕ್ಷೇತ್ರಗಳಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಕೇರಳದಲ್ಲಿ ಬಾಹ್ಯಾಕಾಶ ಕ್ಷೇತ್ರದ ಯೋಜನೆಗಳ ಉದ್ಘಾಟನೆ ಕೇರಳದ ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ) ಪ್ರಧಾನಿ ಮೋದಿ ತಮ್ಮ ಭೇಟಿ ನೀಡಲಿದ್ದಾರೆ. ಪಿಎಸ್ಎಲ್ವಿ ಏಕೀಕರಣ ಸೌಲಭ್ಯ (ಪಿಐಎಫ್) ಮತ್ತು ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಎಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ ಸೇರಿದಂತೆ ಒಟ್ಟು 1800 ಕೋಟಿ ರೂ.ಗಳ ಯೋಜನೆಗಳನ್ನು ಅನಾವರಣಗೊಳಿಸಲಾಗುವುದು. ಈ ಉಪಕ್ರಮಗಳು ಭಾರತದ ಬಾಹ್ಯಾಕಾಶ ಸಾಮರ್ಥ್ಯಗಳನ್ನು ಹೆಚ್ಚಿಸುವ ಮತ್ತು ಉಪಗ್ರಹ ಉಡಾವಣೆಗಳ ಆವರ್ತನವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಗಗನಯಾನ ಮಿಷನ್ ಮೇಲೆ ಗಮನ ಕೇಂದ್ರೀಕರಿಸಿ ತಮ್ಮ ಭೇಟಿಯ ಸಮಯದಲ್ಲಿ, ಪಿಎಂ ಮೋದಿ ಭಾರತದ ಮೊದಲ ಮಾನವ ಬಾಹ್ಯಾಕಾಶ ಯೋಜನೆ ಗಗನಯಾನ ಮಿಷನ್ನ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಅವರು ನಿಯೋಜಿತ…
1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ…
ನವದೆಹಲಿ: ಪೇಟಿಎಂ ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿರುವ ಸಮಯದಲ್ಲಿ, ಫಿನ್ಟೆಕ್ ಕಂಪನಿಯ ಉದ್ಯೋಗಿಯೊಬ್ಬರು ಕೆಲಸದಿಂದ ವಜಾಗೊಳಿಸಲ್ಪಡುವ ಭಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಗೌರವ್ ಗುಪ್ತಾ ಇಂದೋರ್ನ ಪೇಟಿಎಂನಲ್ಲಿ ಫೀಲ್ಡ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಗೌರವ್ ಮದುವೆಯಾಗಿ ಸುಮಾರು ಎಂಟು ವರ್ಷಗಳಾಗಿದ್ದು, ಪತ್ನಿ ಮೋಹಿನಿ ಮತ್ತು ಏಳು ಮತ್ತು ಒಂದೂವರೆ ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಆತ್ಮಹತ್ಯೆ ಪತ್ರದ ಬಗ್ಗೆ ಅಧಿಕಾರಿಗಳು ಪ್ರಸ್ತುತ ತನಿಖೆ ನಡೆಸುತ್ತಿದ್ದು, ಅವರ ಸಾವಿನ ಬಗ್ಗೆ ನಿಖರ ಕಾರಣ ಏನು ಎಂಬುದನ್ನು ತನಿಖೆಯಿಂದ ಪತ್ತೆ ಹಚ್ಚೋ ಕಾರ್ಯದಲ್ಲಿ ತೊಡಗಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿದ ಮೃತನ ಪತ್ನಿ, ಗೌರವ್ ಕೆಲವು ದಿನಗಳಿಂದ ಕೆಲಸದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಿದರು. ಗೌರವ್ ತನ್ನ ಕೆಲಸವನ್ನು ಕಳೆದುಕೊಳ್ಳುವ ಭಯದಲ್ಲಿದ್ದನು. ಈ ಭಯವು ಅವರನ್ನು ಇಂತಹ ಕಠಿಣ ಕ್ರಮ ತೆಗೆದುಕೊಳ್ಳಲು ಪ್ರೇರೇಪಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಏತನ್ಮಧ್ಯೆ, ಗೌರವ್ ಅವರ ಕುಟುಂಬ ಸದಸ್ಯರು ಶವದೊಂದಿಗೆ ಗ್ವಾಲಿಯರ್ಗೆ ತೆರಳಿದ್ದಾರೆ. https://kannadanewsnow.com/kannada/uttar-pradesh-6-dead-8-injured-after-jeep-collides-with-pick-up-truck-in-ballia/…