Author: kannadanewsnow09

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಬಿಜೆಪಿ ವಿರುದ್ಧವಾಗಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್‌ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ. https://kannadanewsnow.com/kannada/breaking-big-relief-for-paytm-customers-rbi-takes-a-major-step-upi-account-transfer-easier/ https://kannadanewsnow.com/kannada/inhuman-incident-in-karnataka-woman-thrashed-in-uttara-kannada/

Read More

ಬೆಂಗಳೂರು: ಬಿಜೆಪಿ ವಿರುದ್ಧ 40% ಕಮೀಷನ್ ಆರೋಪ ಮಾಡಿ, ವಿಧಾನಸಭಾ ಚುನಾವಣೆಯ ವೇಳೆಯಲ್ಲೇ ರೇಟ್ ಕಾರ್ಡ್ ಜಾಹೀರಾತು ಬಿಡುಗಡೆ ಮಾಡಿದ್ದರ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಮಾರ್ಚ್.28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಲಾಗಿದ್ದಂತ ಕರೆಷ್ಷನ್ ರೇಟ್ ಕಾರ್ಡ್ ಜಾಹೀರಾತಿನಿಂದಾಗಿ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂಬುದಾಗಿ ಆರೋಪಿಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ಪಕ್ಷದಿಂದ ಖಾಸಗಿ ದೂರು ನೀಡಲಾಗಿತ್ತು. ಇಂದು ಈ ದೂರಿನ ವಿಚಾರಣೆಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶ ಜೆ.ಪ್ರೀತ್ ನಡೆಸಿದರು. ನ್ಯಾಯಾಪೀಠದ ಮುಂದೆ ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ವಾದ ಮಂಡಿಸಿ, ಕಾಂಗ್ರೆಸ್ ಪಕ್ಷ ನೀಡಿದ್ದಂತ ಜಾಹೀರಾತಿನಿಂದಾಗಿ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂಬುದಾಗಿ ಆರೋಪಿಸಿದರು. ಈ ಆರೋಪದ ನಂತ್ರ ನ್ಯಾಯಪೀಠವು ಮಾರ್ಚ್.28ರಂದು ಕೋರ್ಟ್ ಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್…

Read More

ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮುಂಬೈ-ಅಹಮದಾಬಾದ್ ನಡುವಿನ ಭಾರತದ ಮೊದಲ ಬುಲೆಟ್ ರೈಲು ಪ್ರಾರಂಭದ ದಿನಾಂಕದ ಬಗ್ಗೆ ದೊಡ್ಡ ಸುದ್ದಿ ನವೀಕರಣವನ್ನು ನೀಡಿದ್ದಾರೆ. ಅದೇ 2026ರ ವೇಳೆಗೆ ದೇಶದ ಮೊದಲ ಬುಲೆಟ್ ರೈಲು ಸಂಚಾರ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ. ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಕಾರಿಡಾರ್ನ ಸೂರತ್-ಬಿಲಿಮೋರಾ ವಿಭಾಗವು 2026 ರ ಜುಲೈ-ಆಗಸ್ಟ್ ವೇಳೆಗೆ ಕಾರ್ಯನಿರ್ವಹಿಸಬಹುದು ಎಂದು ಅಶ್ವಿನಿ ವೈಷ್ಣವ್ ಇಂದು ಪ್ರಕಟಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ನಂತರ ಒಂದರ ನಂತರ ಒಂದರಂತೆ ಇತರ ವಿಭಾಗಗಳನ್ನು ತೆರೆಯಲಾಗುವುದು ಎಂದು ಅವರು ಹೇಳಿದರು. ಬುಲೆಟ್ ರೈಲು ಕಾರಿಡಾರ್ ‘ಸೀಮಿತ ನಿಲುಗಡೆ’ ಮತ್ತು ‘ಆಲ್ ಸ್ಟಾಪ್’ ಸೇವೆಗಳನ್ನು ಹೊಂದಿರುತ್ತದೆ. ಸೀಮಿತ ನಿಲುಗಡೆ ರೈಲುಗಳು ಮುಂಬೈ ಮತ್ತು ಅಹಮದಾಬಾದ್ ನಡುವಿನ ದೂರವನ್ನು ಕೇವಲ ಎರಡು ಗಂಟೆಗಳಲ್ಲಿ ಕ್ರಮಿಸಿದರೆ, ಇತರ ಸೇವೆಯು ಸುಮಾರು 2 ಗಂಟೆ 45 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವರು ಹೇಳಿದರು. ಮುಂಬೈ-ಅಹಮದಾಬಾದ್…

Read More

ಬೆಂಗಳೂರು: ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2023ಕ್ಕೆ ರಾಷ್ಟ್ರಪತಿಗಳಿಂದ ಅಂಕಿತ ದೊರೆತಿದೆ.  ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ  ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್.ಕೆ ಪಾಟೀಲ್ ಅವರು ಮಾಹಿತಿ ಹಂಚಿಕೊಂಡರು. ಸಣ್ಣ ಮತ್ತು ದುರ್ಬಲ ರೈತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿರುವ ವ್ಯಕ್ತಿಗಳು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದೀರ್ಘಕಾಲಿಕ ವ್ಯಾಜ್ಯವನ್ನು ಎದುರಿಸಲು ಸುಸ್ಥಿರ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಅಂಥ ವ್ಯಕ್ತಿಗಳಿಗೆ ಭದ್ರತೆಯನ್ನು ಒದಗಿಸಲು ಸಿವಿಲ್ ಪ್ರಕ್ರಿಯಾ ಸಂಹಿತೆ, 1908 (1908ರ ಕೇಂದ್ರ ಅಧಿನಿಯಮ 5)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ವಿಹಿತವಾಗಿರುವುದರಿಂದ ಅಂಥ ಪ್ರಕರಣಗಳಿಗೆ ಯುಕ್ತವಾದ ಕಾಲಾವಧಿಯನ್ನು ಗೊತ್ತುಪಡಿಸುವ ಮೂಲಕ ಶೀಘ್ರ ನಿಗಧಿತ ಕಾಲದಲ್ಲಿ ನ್ಯಾಯದೊಂದಿಗೆ ಕಾರ್ಯಕ್ಷಮತೆಯ ಮೇಲೆ ವಿಲೇವಾರಿ ಮಾಡತಕ್ಕದ್ದು, ಅಂಥ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಸೂಕ್ತ ಕಾರ್ಯವಿಧಾನವನ್ನು ರೂಪಿಸುವುದು ಮತ್ತು ಮೇಲಿನ ಉದ್ದೇಶಗಳನ್ನು ಈಡೇರಿಸುವುದು ಅವಶ್ಯಕತೆಯನ್ನು ಮನಗೊಂಡು ಎಂದರು. ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಮಕ್ಕಳಿಂದಲೇ ಅಪಾಯಕಾರಿ ಕೆಲಸ ಮಾಡಿಸಿ, ಶಾಲಾ ಶಿಕ್ಷಕರು ಎಡವಟ್ಟು ಮಾಡಿರುವಂತ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಉರ್ದು ಸರ್ಕಾರಿ ಶಾಲೆಯ ಮಕ್ಕಳಿಂದ ಶಾಲಾ ಶಿಕ್ಷಕರು ಹುಂಚಗಳ ಮೇಲೆ ನಡೆದು ಕಸಗುಡಿಸೋ ಕೆಲಸಕ್ಕೆ ಇಟ್ಟಿರೋ ವೀಡಿಯೋ ಈಗ ವೈರಲ್ ಆಗಿದೆ. ಮಂಡಗದ್ದೆಯ ಉರ್ದು ಶಾಲೆಯ ಶಾಲಾ ಮಕ್ಕಳು ಶಾಲೆಯ ಮೇಲ್ಛಾವಣಿಯ ಕಸವನ್ನು ಗುಡಿಸುತ್ತಿರುವಂತ ವೀಡಿಯೋ ದೃಶ್ಯಾವಳಿಯಲ್ಲಿದ್ದು, ಶಾಲಾ ಮಕ್ಕಳು ಮೇಲ್ಛಾವಣಿಯಿಂದ ಕೆಳಗೆ ಬಿದ್ದರೇ ಗತಿ ಏನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಉರ್ದು ಶಾಲೆಯಲ್ಲಿ ಶಾಲಾ ಶಿಕ್ಷಕರು ಮಕ್ಕಳಿಂದ ಮಾಡಿಸಿದಂತ ಹೆಂಚುಗಳ ಮೇಲಿನ ಕಸಗುಡಿಸುವ ವೀಡಿಯೋ ವೈರಲ್ ಆಗಿದ್ದು, ಶಾಲಾ ಶಿಕ್ಷಕರ ವಿರುದ್ಧ ಆಕ್ರೋಶ ಹೊರ ಬಿದ್ದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೀಸಲಾಗಿದೆ. https://kannadanewsnow.com/kannada/in-bangalore-saras-mela-to-be-held-from-may-29-womens-products-to-be-showcased-sold/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಬೆಂಗಳೂರು: ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ಸಂಬಂಧ ಶುಕ್ರವಾರ ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಸ್.ಟಿ.ಸೋಮಶೇಖರ್, ಶ್ರೀನಿವಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು,ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೃಹತ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಇದೇ ತಿಂಗಳ 29ರಿಂದ ಮಾ.9ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ರಾಷ್ಟ್ರೀಯ ಸರಸ್ ಮೇಳವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಲ್ಲಿ ದೇಶಾದ್ಯಂತದ 250 ಸ್ವ-ಸಹಾಯ ಗುಂಪುಗಳು…

Read More

ಉತ್ತರ ಕನ್ನಡ: ರಾಜ್ಯದಲ್ಲಿ ಯುಪಿ ಮಾದರಿಯಲ್ಲೇ ಅಮಾನವೀಯ ಎನ್ನುವಂತೆ ಮತ್ತೊಂದು ಘಟನೆಯೊಂದು ನಡೆದಿದೆ. ಅದೇ ಉತ್ತರ ಕನ್ನಡದಲ್ಲಿ ನಡು ರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ಹಲ್ಲೆ ನಡೆಸಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ನಡುರಸ್ತೆಯಲ್ಲೇ ಮಹಿಳೊಬ್ಬರ ಬಟ್ಟೆಯನ್ನು ಹರಿದಿರುವಂತ ನಾಲ್ವರು ಮಹಿಳೆಯರು, ಆಕೆಯ ಮೇಲೆ ಹಲ್ಲೆ ಮಾಡಿರೋ ಘಟನೆ ನಡೆದಿದೆ. ಫೆಬ್ರವರಿ.5ರಂದು ಈ ಘಟನೆ ನಡೆದಿದ್ದು, ಹರಿದ ಬಟ್ಟೆಯಲ್ಲೇ  ಅಂಕೋಲ ಬಸ್ ನಿಲ್ದಾಣದಲ್ಲಿ ಯಲ್ಲಾಪುರ ಪೊಲೀಸ್ ಠಾಣೆಗೆ ಹಲ್ಲೆಗೆ ಒಳಗಾಗಿದ್ದಂತ ರಾಜೇಶ್ವರಿ ತೆರಳಿ ದೂರು ದಾಖಲಿಸೋದಕ್ಕೆ ಕೋರಿದರು, ಪೊಲೀಸರು ಮಾತ್ರ ದೂರು ದಾಖಲಿಸಿಕೊಳ್ಳೋದಕ್ಕೆ ಹಿಂದೇಟು ಹಾಕಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಫೆ.5ರಂದು ನಡೆದಿದ್ದಂತ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಂತೆ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/apmc-amendment-bill-passed-in-legislative-council/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಬೆಂಗಳೂರು: ಜಿಲ್ಲೆಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಪಂಚಾಯ್ತಿ ಸದಸ್ಯರ ನಡುವೆಯೇ ಮಾರಾಮಾರಿ ನಡೆದಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಇಂದು ಸದಸ್ಯ ಮಂಜುನಾಥ್ ಹಾಗೂ ನಾಗರಾಜು ಎಂಬುವರ ನಡುವೆ ಮಾರಾಮಾರಿ ಘಟನೆ ನಡೆದಿದೆ. ಕೋನಸಂದ್ರ ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ಮಹಾಂತಲಿಂಗಾಪುರ ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜು ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಮಂಜುನಾಥ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಪಿಡಿಓ, ಕಾರ್ಯದರ್ಶಿ ಹಾಗೂ ಇತರೆ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸದಸ್ಯರ ಸಮ್ಮುಖದಲ್ಲೇ ಸದಸ್ಯ ಮಂಜುನಾಥ್ ಹಾಗೂ ನಾಗರಾಜು ನಡುವೆ ಮಾರಾಮಾರಿ ನಡೆದಿರೋದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಜಿಗಣಿ ಠಾಣೆಯ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/apmc-amendment-bill-passed-in-legislative-council/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಬೆಂಗಳೂರು: ಎಪಿಎಂಸಿ ಮಾರುಕಟ್ಟೆಗಳಿಗೆ ಮತ್ತಷ್ಟು ಬಲ ಸೇರಿದಂತೆ ವಿವಿಧ ಮಾರ್ಪಾಡಿಗಳಿಗೆ ಅವಕಾಶ ನೀಡುವಂತ ಎಪಿಎಂಸಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್ತಿನಲ್ಲೂ ಅಂಗೀಕಾರಗೊಂಡಿದೆ. ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದಂತ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು, ಇಂದು ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಂಡಿಸಲಾಗಿತ್ತು. ಇಂತಹ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಈ ಹಿನ್ನಲೆಯಲ್ಲಿ ವಿಧಾನಪರಿಷತ್ತಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಂತೆ ಆಗಿದ್ದು, ಶೀಘ್ರವೇ ಕಾಯ್ದೆಯಾಗಿ ಗೆಜೆಟ್ ಅಧಿಸೂಚನೆಯ ಮೂಲಕ ಹೊರ ಬೀಳಲಿದೆ. https://kannadanewsnow.com/kannada/are-you-a-second-puc-pass-apply-for-these-posts-without-fail-from-march-4/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೀವು ದ್ವಿತೀಯ ಪಿಯುಸಿ ಪಾಸ್ ಆಗಿದ್ದರೇ, ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಮಾರ್ಚ್.4ರಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ ಎಂದು ತಿಳಿಸಿದೆ. ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್.3 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್.6ರವರೆಗೆ ಶುಲ್ಕಪಾವತಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದೆ. ಮಾರ್ಚ್.4ರಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ನೀವು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೇ ಕೆಇಎಯ ಅಧಿಕೃತ ಜಾಲತಾಣ http://kea.kar.nic.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿಯೂ ಕೆಇಎ ವೆಬ್ ಸೈಟ್ ಗೆ…

Read More