Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಟಾಚಾರದ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಈ ಸರ್ಕಾರದ ನಕ್ಷೆಯಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನು ಮೂಡಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಪಕ್ಷಾತೀತವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆದು ಹೋರಾಟ ಮಾಡಲು ಸನ್ನದ್ಧರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಯೋಜನೆಗಳು ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿ ಅದಕ್ಕೆ ಪರಿಹಾರ ಸಿಗುತ್ತದೆ ಎಂದು ಜನರು ನಿರೀಕ್ಷೆ ಮಾಡಿದ್ದರು. ಕಾಟಾಚಾರಕ್ಕೆ ಈ ಸರ್ಕಾರ ಬೆಳಗಾವಿ ಅಧಿವೇಶನ ನಡೆಸಿತು. ರೈತ ಸಮುದಾಯ ಇರುವಂತಹ ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಬೀಸುವುದರಿಂದ ಹಿಡಿದು. ಸದನದಲ್ಲಿ ನಡೆದ ಘಟನೆಗೆ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ಸಿಟಿ ರವಿಯವರನ್ನು ಬಂಧನ ಮಾಡಿ, ಅವರಿಗೆ ಹಿಂಸೆ ನೀಡಿ ರಾತಿಯೆಲ್ಲ ಸುತ್ತಾಡಿಸಿ. ಪೊಲೀಸರ ಲಾಠಿಯಿಂದ ಹಿಡಿದು ಪೊಲೀಸರ ಬಂಧನದವರೆಗೆ ಅಧಿವೇಶನ ನಡೆದಿದೆ. ಒಂದು ರೀತಿ ಪೊಲೀಸ್ ರಾಜ್ಯವಾಗಿದೆ. ಸಿಟಿ ರವಿಯವರ…
ನೈಋತ್ಯ ಟರ್ಕಿಯಲ್ಲಿ ಭಾನುವಾರ (ಡಿಸೆಂಬರ್ 22) ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಆಸ್ಪತ್ರೆಯ ಕಟ್ಟಡಕ್ಕೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದಾಗ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಮುಗ್ಲಾ ತರಬೇತಿ ಮತ್ತು ಸಂಶೋಧನಾ ಆಸ್ಪತ್ರೆಯಿಂದ ಇಬ್ಬರು ಪೈಲಟ್ಗಳು, ವೈದ್ಯರು ಮತ್ತು ಇನ್ನೊಬ್ಬ ವೈದ್ಯಕೀಯ ಕಾರ್ಯಕರ್ತನನ್ನು ಹೊತ್ತೊಯ್ಯುತ್ತಿತ್ತು ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. https://twitter.com/AviationSafety/status/1870759411121303555 ನೆಲಕ್ಕೆ ಅಪ್ಪಳಿಸುವ ಮೊದಲು ಹೆಲಿಕಾಪ್ಟರ್ ಮೊದಲು ಆಸ್ಪತ್ರೆಯ ಕಟ್ಟಡದ ನಾಲ್ಕನೇ ಮಹಡಿಗೆ ಅಪ್ಪಳಿಸಿತು ಎಂದು ಮುಗ್ಲಾ ಪ್ರಾದೇಶಿಕ ಗವರ್ನರ್ ಇಡ್ರಿಸ್ ಅಕ್ಬಿಯಿಕ್ ಸುದ್ದಿಗಾರರಿಗೆ ತಿಳಿಸಿದರು. ಕಟ್ಟಡದ ಒಳಗೆ ಅಥವಾ ನೆಲದ ಮೇಲೆ ಯಾರಿಗೂ ಗಾಯಗಳಾಗಿಲ್ಲ. ದಟ್ಟ ಮಂಜಿನ ಸಮಯದಲ್ಲಿ ಸಂಭವಿಸಿದ ಅಪಘಾತದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ಅಪಘಾತದ ಅವಶೇಷಗಳು ಆಸ್ಪತ್ರೆಯ ಕಟ್ಟಡದ ಹೊರಗಿನ ಪ್ರದೇಶದ ಸುತ್ತಲೂ ಹರಡಿಕೊಂಡಿರುವುದನ್ನು ಸ್ಥಳದ ದೃಶ್ಯಾವಳಿಗಳು ತೋರಿಸಿವೆ, ಹಲವಾರು ಆಂಬ್ಯುಲೆನ್ಸ್ಗಳು ಮತ್ತು ತುರ್ತು ತಂಡಗಳು ಘಟನಾ ಸ್ಥಳದಲ್ಲಿವೆ. https://kannadanewsnow.com/kannada/allu-arjan-urges-fans-not-to-use-any-kind-of-abusive-language/ https://kannadanewsnow.com/kannada/breaking-cm-siddaramaiah-inaugurates-hi-tech-jayadeva-heart-hospital-in-kalaburagi/ https://kannadanewsnow.com/kannada/good-news-for-those-heading-home-for-christmas-special-train-services-will-be-arranged-on-this-route/
ಹೈದ್ರಾಬಾದ್: ಅಭಿಮಾನಿಗಳೇ ಜವಾಬ್ದಾರಿಯಿಂದ ನಡೆದುಕೊಳ್ಳಿ. ನನ್ನ ವಿಚಾರವಾಗಿ ಯಾವುದೇ ರೀತಿಯ ನಿಂದನಾತ್ಮಕ ಭಾಷೆ ಬಳಸಬೇಡಿ. ಗೌರವಯುತವಾಗಿ ನಡೆದುಕೊಳ್ಳಿ. ಯಾವುದೇ ಭಾವನೆಗೂ ಧಕ್ಕೆ ತರುವ ಕೆಲಸ ಮಾಡಬೇಡಿ ಎಂಬುದಾಗಿ ನಟ ಅಲ್ಲು ಅರ್ಜುನ್ ಮನವಿ ಮಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನನ್ನ ಎಲ್ಲಾ ಅಭಿಮಾನಿಗಳು ತಮ್ಮ ಭಾವನೆಗಳನ್ನು ಯಾವಾಗಲೂ ಜವಾಬ್ದಾರಿಯುತವಾಗಿ ವ್ಯಕ್ತಪಡಿಸಬೇಕು. ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಯಾವುದೇ ರೀತಿಯ ನಿಂದನಾತ್ಮಕ ಭಾಷೆ ಅಥವಾ ನಡವಳಿಕೆಯನ್ನು ತೋರಬೇಡಿ ಎಂಬುದಾಗಿ ಮನವಿ ಮಾಡಿದ್ದಾರೆ. https://twitter.com/ANI/status/1870776095861297615 https://kannadanewsnow.com/kannada/kuwait-bestows-its-highest-honour-mubarak-al-kabeer-order-on-pm-modi/ https://kannadanewsnow.com/kannada/breaking-cm-siddaramaiah-inaugurates-hi-tech-jayadeva-heart-hospital-in-kalaburagi/
ಕುವೈತ್ : ಗಲ್ಫ್ ರಾಷ್ಟ್ರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್ ನಲ್ಲಿ ಭವ್ಯ ಸ್ವಾಗತ ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು. ಕುವೈತ್ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಸಾಂಪ್ರದಾಯಿಕ ಗೌರವ ರಕ್ಷೆ ನೀಡಲಾಯಿತು. ಕುವೈತ್ ನ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಭೆಯ ವಿವರಗಳನ್ನು ವಿದೇಶಾಂಗ ಸಚಿವಾಲಯದ ವಕ್ತಾರರು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. https://twitter.com/MEAIndia/status/1870740128508891211 “ಐತಿಹಾಸಿಕ ಭೇಟಿಗೆ ವಿಶೇಷ ಸ್ವಾಗತ! ಕುವೈತ್ ನ ಬಯಾನ್ ಪ್ಯಾಲೇಸ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಾರ್ಡ್ ಆಫ್ ಹಾನರ್ ಸ್ವಾಗತ ನೀಡಲಾಯಿತು. ಕುವೈತ್ ಪ್ರಧಾನಿ ಗೌರವಾನ್ವಿತ ಶೇಖ್ ಅಹ್ಮದ್ ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಅಮೀರ್, ಯುವರಾಜ ಮತ್ತು ಕುವೈತ್ ಪ್ರಧಾನಿ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಯಲಿದೆ. ನಂತರ ಪ್ರಧಾನಮಂತ್ರಿಯವರು ಕುವೈತ್ ನ ಅಮೀರ್ ಅವರೊಂದಿಗೆ ಸಭೆ ನಡೆಸಿದರು. ಕುವೈತ್ ರಾಜ್ಯದ ಅಮೀರ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ನ್ಯಾಯಾಲಯವು ಜನವರಿ 7 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ರಾಹುಲ್ ಗಾಂಧಿಗೆ ನೋಟಿಸ್ ನೀಡಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಂಘ ಸಂಘಟನೆಯ ಮಂಡಲ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಲಾಗಿದೆ. ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಪಾಠಕ್ ಆಗಸ್ಟ್ನಲ್ಲಿ ಶಾಸಕ-ಮಧ್ಯಪ್ರದೇಶ ನ್ಯಾಯಾಲಯ / ಸಿಜೆಎಂ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ, ಆಗಸ್ಟ್ 27ರಂದು ನ್ಯಾಯಾಲಯ ಈ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಪಾಠಕ್ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದರು. ಇದು ಪ್ರಸ್ತುತ ಸಮನ್ಸ್ಗೆ ಕಾರಣವಾಯಿತು. ಪಾಠಕ್ ಅವರನ್ನು ಪ್ರತಿನಿಧಿಸುವ ವಕೀಲ ವೀರೇಂದ್ರ ಪಾಲ್ ಗುಪ್ತಾ, ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ಅವರು “ದುರ್ಬಲ…
ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ 2 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06589/06590) ರೈಲು ಸಂಚಾರ ರೈಲು ಸಂಖ್ಯೆ 06533 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 22 ಮತ್ತು 24 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿರುವ ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಪುನಃ ಇದೇ ರೈಲು (06590) ಕಲಬುರಗಿಯಿಂದ ಡಿಸೆಂಬರ್ 23 ಮತ್ತು 25ರಂದು ಬೆಳಿಗ್ಗೆ 9.34ಕ್ಕೆ ಹೊರಡಲಿರುವ ರೈಲು ಇದೇ ಮಾರ್ಗವಾಗಿ, ಅದೇ ದಿನ ರಾತ್ರಿ…
ಬೆಂಗಳೂರು: ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ವಿವಿಧ ಗಣ್ಯರನ್ನು ಭೇಟಿಯಾಗಿ ತಮ್ಮ ಮದುವೆಗೆ ಆಹ್ವಾನಿಸಿದ್ದರು. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ, ತಮ್ಮ ಮದುವೆಗೆ ಆಹ್ವಾನಿಸಿದರು. ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಕನ್ನಡದ ಖ್ಯಾತ ನಟ ಡಾಲಿ ಧನಂಜಯ ಭೇಟಿ ನೀಡಿದರು. ಅಲ್ಲದೇ ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರಿಗೆ ನೀಡಿದರು. ಇದಲ್ಲದೇ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರಿಗೂ ಆಮಂತ್ರಣ ಪತ್ರ ನೀಡಿದರು. https://kannadanewsnow.com/kannada/one-more-pregnant-woman-dies-at-bims-hospital-in-belagavi/ https://kannadanewsnow.com/kannada/one-nation-one-election-bills-unlikely-to-be-passed-in-parliament-digvijaya-singh/ https://kannadanewsnow.com/kannada/breaking-cm-siddaramaiah-inaugurates-hi-tech-jayadeva-heart-hospital-in-kalaburagi/
ಬೆಳಗಾವಿ: ಹೆರಿಗೆಗಾಗಿ ದಾಖಲಾಗಿದ್ದಂತ ಬಾಣಂತಿಯೋರ್ವಳು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವಂತ ಘಟನೆ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿವೆ. ನಿನ್ನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ಹುಕ್ಕೇರಿ ತಾಲ್ಲೂಕಿ ಗೌಡವಾಡ ಗ್ರಾಮ ವೈಶಾಲಿ ಬಾಳಪ್ಪ ಎಂಬುವರನ್ನು ದಾಖಲಿಸಲಾಗಿತ್ತು. ಇಂದು ದಿಢೀರ್ ಎದೆನೋವು ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬಾಣಂತಿ ವೈಶಾಲಿ ಬಾಳಪ್ಪ ಸಾವು ವೈದ್ಯರ ನಿರ್ಲಕ್ಷ್ಯದಿಂದ ಆಗಿರುವಂತದ್ದು. ಅವರಿಗೆ ಯಾವ ಮೆಡಿಸಿನ್ ಕೊಟ್ಟಿದ್ದಾರೋ ಗೊತ್ತಿಲ್ಲ. ಇದಂತೂ ವೈದ್ಯರ ನಿರ್ಲಕ್ಷ್ಯದಿಂದ ಆಗಿರುವಂತದ್ದು ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಣಂತಿ ವೈಶಾಲಿ ಬಾಳಪ್ಪ ಮರಣೋತ್ತರ ಪರೀಕ್ಷೆಗೆ ಬಿಡುವುದಿಲ್ಲ. ಬಾಣಂತಿ ಸಾವಿಗೆ ನ್ಯಾಯ ಸಿಗೋವರೆಗೂ ಬಿಡುವುದಿಲ್ಲ ಅಂತ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/mandya-sahitya-sammelana-distributed-despite-controversy-police-seize/ https://kannadanewsnow.com/kannada/one-nation-one-election-bills-unlikely-to-be-passed-in-parliament-digvijaya-singh/ https://kannadanewsnow.com/kannada/breaking-cm-siddaramaiah-inaugurates-hi-tech-jayadeva-heart-hospital-in-kalaburagi/
ಕಲಬುರಗಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಗತಿಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಬೇಗ ತೀರ್ಮಾನ…
ಮಂಡ್ಯ: ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದಲ್ಲಿ ವಿವಾದದ ನಡುವೆಯೂ ಬಾಡೂಟವನ್ನು ಹಂಚಿಕೆ ಮಾಡಲಾಗಿದೆ. ಹೀಗೆ ಹಂಚಿಕೆ ಮಾಡುತ್ತಿದ್ದಂತ ಆಹಾರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊನೆಗೂ ಬಾಡೂಟ ಹಂಚಿಕೆ ಮಾಡಲಾಗಿದೆ. ಪ್ರಗತಿಪರರಿಂದ ಮೊಟ್ಟೆ, ಚಿಕನ್, ಕಬಾಬ್, ಕೋಳಿ ಸಾರು ಹಾಗೂ ರಾಗಿ ಮುದ್ದೆಯನ್ನು ಹಂಚಿಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನದ ಬಳಿಯಲ್ಲೇ ಬಾಡೂಟವನ್ನು ಸಾರ್ವಜನಿಕರಿಗೆ ಪ್ರಗತಿಪರರಿಂದ ಹಂಚಿಕೆ ಮಾಡಿ, ಬಡಿಸಲಾಯಿತು. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಹಾಗೂ ಪ್ರಗತಿಪರರ ನಡುವೆ ವಾಗ್ವಾದ ಕೂಡ ನಡೆಯಿತು. ಪೊಲೀಸರು ಹಾಗೂ ಪ್ರಗತಿಪರರ ನಡುವೆ ಜಟಾಪಟಿಯ ನಡುವೆಯೂ ಕೊನೆಗೂ ಸಾರ್ವಜನಿಕರಿಗೆ ಹಂಚಿಕೆ ಮಾಡುತ್ತಿದ್ದಂತ ಬಾಡೂಟವನ್ನು ವಶಕ್ಕೆ ಪಡಿಸಿಕೊಂಡರು. https://kannadanewsnow.com/kannada/one-nation-one-election-bills-unlikely-to-be-passed-in-parliament-digvijaya-singh/ https://kannadanewsnow.com/kannada/bengaluru-power-outages-in-these-areas-on-december-24/














