Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ನಿರ್ದೇಶಕರ ಆಯ್ಕೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಜೂನ್ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ವಿವಿಧ ಕ್ಷೇತ್ರದಿಂದ 13 ನಿರ್ದೇಶಕರ ಆಯ್ಕೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ ಒಬ್ಬರಂತೆ ವಿವಿಧ ಸಹಕಾರ ಸಂಘಗಳಿಂದ ಚುನಾಯಿಸಲ್ಪಡುವ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ಸಂಸ್ಕರಣ ಸಂಘಗಳ ವತಿಯಿಂದ ಇಬ್ಬರು ಸದಸ್ಯರು, ಪಟ್ಟಣ ಸಹಕಾರ ಸಂಘಗಳು ಮತ್ತು ವ್ಯವಸಾಯೇತರ ಸಹಕಾರ ಸಂಘಗಳ ವತಿಯಿಂದ ಇಬ್ಬರು, ಇನ್ನಿತರೆ ಸಹಕಾರ ಸಂಘಗಳಿಂದ ಇಬ್ಬರು ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜೂನ್.24ರಂದು ಮತದಾನ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ…
ಬೆಂಗಳೂರು : ಸಮಸ್ಯೆಗಳ ಆಗರವಾಗಿದ್ದ ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಮತ್ತುಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿ ವೈದ್ಯರ ಕಾರ್ಯವೈಖರಿಗೆ ಕೆಂಡಮಂಡಲರಾದರು. ಮೊದಲು ಕಿದ್ವಾಯಿ ಆಸ್ಪತ್ರೆಗೆ ಭೇಟಿ ಕೊಟ್ಟ ಅವರು ಫಾಸ್ಟ ಟ್ರಾಕ್ (fast track) ವಾರ್ಡ್ನಲ್ಲಿ ಪರಿಶೀಲನೆ ನಡೆಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ವಸತಿ ಸೌಲಭ್ಯ ಹೇಗಿದೆ? ಯಾವೆಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೀರಿ? ಎಷ್ಟು ರೋಗಿಗಳು ಇಲ್ಲಿ ದಾಖಲಾಗುತ್ತಿವೆ ಎಂದು ಕಿದ್ವಾಯಿ ಆಸ್ಪತ್ರೆಯ ಆಡಳಿತಾಧಿಕಾರಿ ಮಂಜುಶ್ರೀ ಹಾಗೂ ನಿರ್ದೇಶಕರಾದ ಡಾ. ಲೋಕೇಶ್ ಅವರನ್ನು ಪ್ರಶ್ನೆ ಮಾಡಿದರು. ರೋಗಿಗಳಿಗೆ ಚಿಕಿತ್ಸೆ ಕೊಡಲು ಎಷ್ಟು ದಿನ ಬೇಕು? ಕ್ಯಾನ್ಸರ್ ಪತ್ತೆಗೆ ಎಷ್ಟು ದಿನ ತೆಗೆದುಕೊಳ್ಳುತ್ತದೆ? ಚಿಕಿತ್ಸೆ, ಅಂತಿಮ ಚಿಕಿತ್ಸೆ ನೀಡಲು ಎಷ್ಟು ದಿನ ತೆಗೆದುಕೊಳ್ಳುತ್ತೀದ್ದೀರಿ? ಕ್ಯಾನ್ಸರ್ ಪತ್ತೆ ಬಳಿಕಯಾದ ಬಳಿಕ ರೋಗಿಯನ್ನು ಎಷ್ಟು ದಿನದ ನಂತರ ದಾಖಲು ಮಾಡಿಕೊಳ್ಳುತ್ತಿದ್ದೀರಿ? ಯಾವ ಸಮಯದಲ್ಲಿ ಗರಿಷ್ಠ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.…
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು. ಜೊತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್. ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದ ರಾಮಪ್ಪ ಉಪಸ್ಥಿತರಿದ್ದರು. https://kannadanewsnow.com/kannada/state-government-launches-project-chandana-scheme-for-sickle-cell-anaemia-patients/ https://kannadanewsnow.com/kannada/will-farmers-get-relief-if-electricity-poles-and-transformers-are-installed-in-their-fields-heres-the-real-truth/
ಮೈಸೂರು: ಸಿಕಲ್ ಸಿಲ್ ಅನೀಮಿಯಾ ಹರಡದಂತೆ ತಡಗಟ್ಟುವ ನಿಟ್ಟಿನಲ್ಲಿ ‘ಪ್ರಾಜೆಕ್ಟ್ ಚಂದನ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೈಸೂರಿನಲ್ಲಿ ಇಂದು ಚಾಲನೆ ನೀಡಿದರು. ಈ ಬಳಿಕ ಮಾತನಾಡಿದ ಸಚಿವರು, ಈಗಾಗಲೇ ಆರೋಗ್ಯ ಇಲಾಖೆ ಸಿಕಲ್ ಸೆಲ್ ಗೆ ತುತ್ತಾಗಿರುವವರಿಗೆ ಉಚಿತ ಚಿಕಿತ್ಸೆ, ಉತ್ತಮ ಆರೈಕೆ ಒದಗಿಸಲಾಗುತ್ತಿದ್ದು, ರೋಗ ಹರಡದಂತೆ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಇದೀಗ ‘ಪ್ರಾಜೆಕ್ಟ್ ಚಂದನ’ದ’ ಮೂಲಕ ಮುಂದಿನ ಎರಡು ವರ್ಷಗಳಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ 256000 ಲಕ್ಷ ಬಡಕಟ್ಟು ಜನರ ತಪಾಸಣೆ ನಡೆಸುವುದರ ಜೊತೆಗೆ ಅಗತ್ಯ ಚಿಕಿತ್ಸೆ ಕಲ್ಪಿಸಲಾಗುವುದು ಎಂದರು. ಈ ರೋಗದ ವಿರುದ್ಧ ಹೋರಾಡಲು ಅನೇಕ ಎನ್ಜಿಒಗಳು ಸಕ್ರಿಯವಾಗಿ ತೊಡಗಿಸಿಕೊಂಡಿವೆ. ವಿಶೇಷವಾಗಿ ಭಾರತೀಯ ವಿಜ್ಞಾನ ಸಂಸ್ಥೆಯು 2 ವರ್ಷಗಳ ಅವಧಿಗೆ ಸಂಪೂರ್ಣ ತಪಾಸಣೆ, ತರಬೇತಿ, ಜಾಗೃತಿ, ಮಾದರಿ ಸಾರಿಗೆ ಮತ್ತು ಸಂಪರ್ಕ ಸೇವೆಗಳಿಗಾಗಿ ಮೈಸೂರು, ಚಾಮರಾಜನಗರ ಮತ್ತು ಕೊಡಗಿನ 3 ಜಿಲ್ಲೆಗಳನ್ನು ದತ್ತು ತೆಗೆದುಕೊಳ್ಳುವ ಪ್ರಸ್ತಾವನೆಯೊಂದಿಗೆ GoK ಅನ್ನು ಸಂಪರ್ಕಿಸಿದೆ. IISc ಪ್ರೊಫೆಸರ್ ಸಾಯಿ ಅವರು ಸಂಶೋಧಿಸಿರುವ…
ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. 2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧ ಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ. ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ ಹಾಗೂ ಹೆಚ್ಆರ್ಎಂಎಸ್-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿಯು ಲಭ್ಯವಿದ್ದು, ಸದರಿ ಮಾಹಿತಿಯನ್ನು ಹೆಚ್ಆರ್ಎಂಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್ಆರ್ಎಂಎಸ್-1 ತಂತ್ರಾಂಶದಲ್ಲಿ…
ಶಿವಮೊಗ್ಗ : ಶಿವಗಂಗಾ ಯೋಗ ಕೇಂದ್ರದಲ್ಲಿ ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ,ಪಶು ವೈದ್ಯಕೀಯ ಕಾಲೇಜು, ಕಾಶಿಪುರ, ನೆಹರು ಯುವ ಕೇಂದ್ರ, ಶಿವಮೊಗ್ಗ ಸಹಯೋಗದೊಂದಿಗೆ ದಿನಾಂಕ 19.06.2024 ರಿಂದ 3 ದಿನಗಳ ಕಾಲ ಶಿವಗಂಗಾ ಯೋಗ ಕೇಂದ್ರದಲ್ಲಿ ಯೋಗ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ತರಬೇತುದಾರರಾಗಿ ವೀಣಾ, ಅನುರಾಧ ರವರು ಶಿಬಿರಾರ್ಥಿಗಳಿಗೆ ಯೋಗದಿಂದ ಮನಸ್ಸಿನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು, ಯೋಗದಿಂದ ಆಗುವ ಪ್ರಯೋಜನಗಳೇನು, ಯೋಗಾಸನದಲ್ಲಿ ಎಷ್ಟು ಆಸನಗಳಿವೆ ಯಾವ ಆಸನದಿಂದ ಏನು ಪ್ರಯೋಜನವೆಂದು ತಿಳಿಸಿಕೊಡಲಿದ್ದಾರೆ. ಇಂದು ಶಿಬಿರದಲ್ಲಿ ಸುಮಾರು 80 ಜನ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ. ಶಿಬಿರದಲ್ಲಿ ಪಶು ವೈದ್ಯಕೀಯ ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿಯಾದ ಡಾ. ರವಿಕುಮಾರ್, ಡಾ. ಯೋಗೇಶ್ , ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯಾದ ಉಲ್ಲಾಸ್ ಕೆ.ಟಿ.ಕೆ, ಲೆಕ್ಕಾಧಿಕಾರಿಯಾದ ರಮೇಶ್, ಕಾರ್ಯಕರ್ತನಾದ ಶೇಖ್ ಹಸೇನ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಯೋಗ ಮಾಡಲು ಆಸಕ್ತಿವುಳ್ಳ ಶಿಬಿರಾರ್ಥಿಗಳು ಈ ಶಿಬಿರದಲ್ಲಿ…
ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಭುಗಿಲೆದ್ದ ಭೀಕರ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಡಿಪೋರಾ-ಬಾರಾಮುಲ್ಲಾ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ. https://twitter.com/ChinarcorpsIA/status/1803385566974579058 ಬಾರಾಮುಲ್ಲಾ ಜಿಲ್ಲೆಯ ವಾಟರ್ಗಾಮ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಕಾರ್ಯಾಚರಣೆ ಪ್ರಾರಂಭವಾಯಿತು. ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು, ಭಯೋತ್ಪಾದಕರು ಸೈನಿಕರ ಮೇಲೆ ಗುಂಡು ಹಾರಿಸಿದಾಗ, ಪ್ರತಿದಾಳಿಯನ್ನು ನಡೆಸಲಾಯಿತು. ಈ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. “ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಇಂದು ಬೆಳಿಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್ಗಾಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಭಯೋತ್ಪಾದಕರು ನಮ್ಮ ಪಡೆಗಳ ಮೇಲೆ ಗುಂಡು ಹಾರಿಸಲು…
ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) 2024 ರ 10 ಮತ್ತು 12 ನೇ ತರಗತಿ ಸುಧಾರಣಾ ಪರೀಕ್ಷೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ತಮ್ಮ ಹಿಂದಿನ ಪ್ರಯತ್ನದಿಂದ ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ತಮ್ಮ ಅಂಕಗಳನ್ನು ಸುಧಾರಿಸಲು ಬಯಸುವ ಎಲ್ಲರೂ ಅಧಿಕೃತ ವೆಬ್ಸೈಟ್ – cisce.org ನಲ್ಲಿ ಸಂಪೂರ್ಣ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಅಧಿಸೂಚನೆಯ ಪ್ರಕಾರ, ಐಸಿಎಸ್ಇ ಸುಧಾರಣಾ ಪರೀಕ್ಷೆಯನ್ನು ಜುಲೈ 1 ರಿಂದ 12 ರವರೆಗೆ ನಡೆಸಲಾಗುವುದು ಮತ್ತು ಐಎಸ್ಸಿ ಸುಧಾರಣಾ ಪರೀಕ್ಷೆಯನ್ನು ಜುಲೈ 1 ರಿಂದ 16 ರವರೆಗೆ ನಡೆಸಲಾಗುವುದು. ವಿಷಯವಾರು ಐಸಿಎಸ್ಇ, ಐಎಸ್ಸಿ ಸುಧಾರಣಾ ಪರೀಕ್ಷೆ 2024 ವೇಳಾಪಟ್ಟಿಯನ್ನು ಕೆಳಗೆ ನೀಡಲಾದ ಕೋಷ್ಟಕದಲ್ಲಿ ಪರಿಶೀಲಿಸಬಹುದು. ಹೀಗಿದೆ ಐಸಿಎಸ್ಇ ಸುಧಾರಣಾ ಪರೀಕ್ಷೆ ವೇಳಾಪಟ್ಟಿ 2024 ( ICSE Improvement Exam Schedule 2024 ) ಜುಲೈ 1 ರಂದು ಬೆಳಗ್ಗೆ 11 ಗಂಟೆ: ಇಂಗ್ಲಿಷ್ ಭಾಷೆ – ಇಂಗ್ಲಿಷ್ ಪೇಪರ್ 1 ಜುಲೈ…
ಚನ್ನಪಟ್ಟಣ : ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಇಲ್ಲಿನ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಂಗಲ್ ಆಂಜನೇಯ ದೇವಾಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು; “ರಾಮನ ಭಂಟ ಆಂಜನೇಯ ಸೇವೆಯ ಪ್ರತೀಕ. ಅದೇ ರೀತಿ ನಾನು ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಬಂದಿದ್ದೇನೆ. ಅತಿ ಚಿಕ್ಕ ವಯಸ್ಸಿಗೆ ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದು ನಿಮ್ಮ ಆಶೀರ್ವಾದದಿಂದ. ಚನ್ನಪಟ್ಡಣದ ಮಹಾಜನತೆಯ ಆಶೀರ್ವಾದ ನಮಗೆ ಬೇಕಾಗಿದೆ. ಜನರು ಪಕ್ಷಬೇಧವನ್ನು ಮರೆತು ಸರ್ಕಾರದ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನನ್ನ ಅಧಿಕಾರವನ್ನು ಚನ್ನಪಟ್ಟಣದ ಬದಲಾವಣೆಗೆ ಉಪಯೋಗಿಸಿಕೊಳ್ಳಬೇಕು. ನನಗೆ ಬುದ್ಧಿವಾದ ಹೇಳಲು ಜನರು ಸೋಲಿಸಿದ್ದಾರೆ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಸೋಲಾಗಿದೆ ಎಂದರೆ ನನ್ನಲ್ಲೇ ಏನೂ ನ್ಯೂನ್ಯತೆ ಇದೆ ಎಂದು ಕ್ಷೇತ್ರದ ಜನ ಅರ್ಥ ಮಾಡಿಸಿದ್ದಾರೆ. ನನಗೆ ಬುದ್ಧಿವಾದ ಹೇಳಲು ಜನರು ಈ ತೀರ್ಮಾನ ನೀಡಿದ್ದಾರೆ. ಇದನ್ನು ನಾನು…
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಶಸ್ತ್ರ ಸೀಮಾ ಬಲ್ (ಎಸ್ಎಸ್ಎಫ್) ಸೈನಿಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ವಾಸ್ತವವಾಗಿ, ಎಸ್ಎಸ್ಎಫ್ ಜವಾನ್ಗೆ ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಗುಂಡು ಹಾರಿಸಲಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ತಲುಪಿ ಶವವನ್ನು ವಶಪಡಿಸಿಕೊಂಡರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾಹಿತಿಯ ಪ್ರಕಾರ, ಈ ಪ್ರಕರಣವು ಅಯೋಧ್ಯೆಯಲ್ಲಿ ತಡರಾತ್ರಿ ನಡೆದಿದೆ. ಅಂಬೇಡ್ಕರ್ ನಗರದ ನಿವಾಸಿ ಎಸ್ಎಸ್ಎಫ್ ಜವಾನ್ ಶತ್ರುಘ್ನ ವಿಶ್ವಕರ್ಮ ಅವರನ್ನು ರಾಮ ಜನ್ಮಭೂಮಿಯ ಭದ್ರತೆಗೆ ನಿಯೋಜಿಸಲಾಗಿತ್ತು. ತಡರಾತ್ರಿ ಆಯುಧವನ್ನು ಸರಿಯಾಗಿ ನಿರ್ವಹಿಸದ ಕಾರಣ, ಹೇಗೋ ಹಠಾತ್ ಗುಂಡಿನ ದಾಳಿ ನಡೆಯಿತು, ಅದು ಎಸ್ಎಸ್ಎಫ್ ಜವಾನ್ಗೆ ಅಪ್ಪಳಿಸಿತು ಎಂದು ಅಧಿಕಾರಿಗಳು ಹೇಳುತ್ತಾರೆ. ಗುಂಡಿನ ಶಬ್ದ ಕೇಳಿ ಹತ್ತಿರದಲ್ಲಿದ್ದ ಇತರ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಯುವಕ ಶತ್ರುಘ್ನ ವಿಶ್ವಕರ್ಮ ಗಾಯಗೊಂಡಿರುವುದನ್ನು ನೋಡಿದರು. ಗಾಯಗೊಂಡ ಸ್ಥಿತಿಯಲ್ಲಿದ್ದ ಯೋಧನನ್ನು ಭದ್ರತಾ ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ…