Author: kannadanewsnow09

ಚಿಕ್ಕಮಗಳೂರು : ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು. ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು. ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು. ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ…

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( Delhi Chief Minister Arvind Kejriwal ) ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜುಲೈ 3 ರವರೆಗೆ ವಿಸ್ತರಿಸಿದೆ. ನಿಯಮಿತ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು. ಈಗ ಹಿಂತೆಗೆದುಕೊಂಡ ಮದ್ಯ ನೀತಿ ಪ್ರಕರಣದಲ್ಲಿ ( Dehli  Liquor Policy Case ) ಅರವಿಂದ್ ಕೇಜ್ರಿವಾಲ್ 100 ಕೋಟಿ ರೂ.ಗಳ ಕಿಕ್ಬ್ಯಾಕ್ಗೆ ಬೇಡಿಕೆ ಇಟ್ಟಿರುವುದಕ್ಕೆ ಪುರಾವೆಗಳಿವೆ ಎಂದು ಜಾರಿ ನಿರ್ದೇಶನಾಲಯವು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಲ್ಲಿಸಲಾದ ಚಾರ್ಜ್ಶೀಟ್ ಅನ್ನು ನ್ಯಾಯಾಲಯವು ಪರಿಗಣಿಸಿದೆ ಎಂದು ಹೇಳಿದರು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಸಹ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದು ನ್ಯಾಯಾಲಯವು ಮನಿ ಲಾಂಡರಿಂಗ್ ಆರೋಪವನ್ನು ಸ್ವೀಕರಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು…

Read More

ನವದೆಹಲಿ: ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ HD ಕುಮಾರಸ್ವಾಮಿ ಅವರು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರಕಾರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ರೈಲ್ವೆ ಭವನದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ಮಾನ್ಯ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ. ರೈಲ್ವೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು. ಅಲ್ಲದೆ; ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು…

Read More

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಡೋದಕ್ಕೆ ಮುಂದಾಗಿದೆ. ಅದೇ ಶೀಘ್ರದಲ್ಲೇ ನೀರಿನ ದರ ಏರಿಕೆಯನ್ನು ಮಾಡುವಂತ ಸುಳಿವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಪರಿಣಾಮ ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ. ಬಿಡಬ್ಲ್ಯೂ ಎಸ್ ಎಸ್ ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್ ಗಳು ಮುಂದೆ ಬರುತ್ತಿಲ್ಲ. ಸಧ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ ಪೂರ್ಣಗೊಳ್ಳುತ್ತಿದೆ ಎಂದರು. ಪ್ರತಿ ವರ್ಷ ನಷ್ಟ ಎದುರಾಗುತ್ತಿರುವುದರಿಂದ ಪರಿಹಾರದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಶ್ವ ಬ್ಯಾಂಕ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಮಂಡಳಿ ನಷ್ಟದಿಂದ ಮೇಲೆ ಬರುವ ಪರ್ಯಾಯ ವಿಧಾನವನ್ನು ಕೇಳುತ್ತಿವೆ ಎಂದು ಹೇಳಿದರು. ಕಾವೇರಿಯ 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ನಾನು ಆದೇಶ ಹೊರಡಿಸಿದ್ದು, ಮತ್ತೊಂದು ಹಂತದ ಯೋಜನೆ ಅಗತ್ಯವಿದೆ. ಹೀಗಾಗಿ ನೀರಿನ ದರ ಪರಿಷ್ಕರಣೆ ವಿಚಾರವಾಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ…

Read More

ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣ ಪ್ರವಾಸದ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ ಅವರು, “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು…

Read More

ಬೆಂಗಳೂರು: ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳ ರಕ್ತ, ಕೂಲದಿನ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ. https://kannadanewsnow.com/kannada/nehas-father-niranjans-pa-vinay-kidnapped-by-three-men-in-hubballi/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/

Read More

ಹುಬ್ಬಳ್ಳಿ: ಇಂದು ಮುಂಜಾಗನೇ ಮೃತ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಅವರ ಆಪ್ತ ಸಹಾಯಕ ಆಗಿರುವಂತ ವಿನಯ್ ಎಂಬಾತನನ್ನು ಮೂವರು ಅಪರಿಚಿತರು ಕಿಡ್ನ್ಯಾಪ್ ಮಾಡೋದಕ್ಕೆ ಯತ್ನಿಸಿರುವಂತ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಇಂದು ಮುಂಜಾಗನೆ ವಾಲ್ವೇಕರ್ ಗಲ್ಲಿಯಲ್ಲಿನ ಗಜಾನನ ಬ್ಯಾಂಕ್ ಎದುರು ಮೂವರು ನಿರಂಜನ್ ಅವರ ಪಿಎ ವಿನಯ್ ಆಲಿಯಾಸ್ ಈರಣ್ಣ ಎಂಬುವರನ್ನು ಕಾರನ್ನು ಹತ್ತುವಂತೆ ಬೆದರಿಸಿ, ಕಿಡ್ನ್ಯಾಪ್ ಮಾಡೋದಕ್ಕೆ ಯತ್ನಿಸಿದ್ದಾರೆ. ಈ ವೇಳೆಯಲ್ಲಿ ಕೂಡಲೇ ಅಲರ್ಟ್ ಆದಂತೆ ನಿರಂಜನ್ ಪಿಎ ವಿನಯ್ ತಮ್ಮ ಮೊಬೈಲ್ ತೆಗೆದುಕೊಂಡು ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ. ಇದರಿಂದ ಹೆದರಿದಂತ ಮೂವರು ಅಪರಿಚಿತರು ಅಲ್ಲಿಂದ ಪರಾರಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಘಟನೆಯ ಬಳಿಕ ನಿರಂಜನ್ ಪಿಎ ವಿನಯ್ 112ಗೆ ಕರೆ ಮಾಡಿ, ಪೊಲೀಸರಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ದೂರು ದಾಖಲಿಸಿದ್ದು, ಕಿಡ್ನ್ಯಾಪ್ ಗೆ ಯತ್ನಿಸಿದಂತ ಮೂವರ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. https://kannadanewsnow.com/kannada/neet-pg-2024-admit-card-released/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/

Read More

ನವದೆಹಲಿ: ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (ಎನ್ಬಿಇಎಂಎಸ್) ನೀಟ್ ಪಿಜಿ 2024 ಪ್ರವೇಶ ಪತ್ರವನ್ನು ಜೂನ್ 19, 2024 ರಂದು ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ಈಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ 2024 ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ – natboard.edu.in ರಿಂದ ಡೌನ್ಲೋಡ್ ಮಾಡಬಹುದು. ನೀಟ್ ಪಿಜಿ 2024 ಪರೀಕ್ಷೆಯನ್ನು ಜೂನ್ 23 ರಂದು ನಡೆಸಲಾಗುವುದು. ರಾಷ್ಟ್ರವ್ಯಾಪಿ ಸ್ನಾತಕೋತ್ತರ ವೈದ್ಯಕೀಯ ಕಾರ್ಯಕ್ರಮಗಳ ಪ್ರವೇಶಕ್ಕೆ ಈ ಸಿಬಿಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅತ್ಯಗತ್ಯವಾಗಿದೆ. ಎನ್ಬಿಇ ಅಧಿಸೂಚನೆಯಲ್ಲಿ, “ಪ್ರವೇಶ ಪತ್ರಗಳನ್ನು ಇಂದಿನಿಂದ “ಬ್ಯಾಚ್ವಾರು” ನೀಡಲಾಗುವುದು. ನೀಟ್-ಪಿಜಿ 2024 ರ ಅರ್ಜಿದಾರರು ತಮ್ಮ ಅರ್ಜಿದಾರರ ಲಾಗಿನ್ ಖಾತೆಗಳನ್ನು ಎನ್ಬಿಇಎಂಎಸ್ ವೆಬ್ಸೈಟ್ನಲ್ಲಿ ನೀಟ್-ಪಿಜಿ 2024 ಸೂಚ್ಯಂಕ ಪುಟದಲ್ಲಿ https://natboard.edu.in ಪ್ರವೇಶ ಪತ್ರಕ್ಕಾಗಿ ನಿಯತಕಾಲಿಕವಾಗಿ ಪರಿಶೀಲಿಸಲು ಸೂಚಿಸಲಾಗಿದೆ. ನೀಟ್ ಪಿಜಿ 2024 ಫಲಿತಾಂಶವು ಜುಲೈ 15, 2024 ರಂದು ಪ್ರಕಟವಾಗಲಿದೆ. ನೀಟ್ ಪಿಜಿ 2024 ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿವೆ. ಈ ಬೆಳವಣಿಗೆಯನ್ನು ಕಾಶ್ಮೀರದ ಐಜಿಪಿ ಟೈಮ್ಸ್ ನೌಗೆ ದೃಢಪಡಿಸಿದ್ದಾರೆ. ಇದಕ್ಕೂ ಮುನ್ನ ಜಿಲ್ಲೆಯ ಹಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು. ಎನ್ಕೌಂಟರ್ ಸಮಯದಲ್ಲಿ ಒಬ್ಬ ಪೊಲೀಸ್ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಿಶೇಷವೆಂದರೆ, ಇದು 48 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡನೇ ಎನ್ಕೌಂಟರ್ ಆಗಿದೆ. https://twitter.com/KashmirPolice/status/1803354834151571736 https://kannadanewsnow.com/kannada/actor-darshan-and-gang-murder-case-police-to-conduct-dna-test-of-accused/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳನ್ನು ಡಿಎನ್ ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆರೋಪಿಗಳ ಕೂದಲು, ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಪೊಲೀಸರು ಆರೋಪಿಗಳ ಸಮ್ಮಖದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಸ್ಥಳದಲ್ಲಿ ಸಿಕ್ಕಿರುವಂತ ಕೂದಲು, ರಕ್ತದ ಮಾದರಿಯನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈಗ ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ರೇ, ಕೊಲೆ ಸ್ಥಳದಲ್ಲಿ ಸಿಕ್ಕಂತ ರಕ್ತದ ಮಾದರಿ, ಕೂದಲಿಗೂ ಹೋಲಿಕೆ ಆದ್ರೇ, ಪ್ರಕರಣ ಸಂಬಂಧ ಬಲವಾದಂತ ಸಾಕ್ಷ್ಯ ಸಿಗಲಿದೆ ಎನ್ನುವುದು ಪೊಲೀಸರ ನಿಲುವಾಗಿದೆ. ಈ ಹಿನ್ನಲೆಯಲ್ಲಿ ಎ1 ಆರೋಪಿ ಪವಿತ್ರಾಗೌಡ, ಎ2…

Read More