Author: kannadanewsnow09

ಶಿವಮೊಗ್ಗ: ಕೆಪಿಟಿಸಿಎಲ್ ಇಂಜಿನಿಯರ್ ಶಾಂತ ಕುಮಾರಸ್ವಾಮಿ ಯಾರು ಎಂಬುದೇ ಗೊತ್ತಿಲ್ಲ. ಆತ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲೂ ಇಲ್ಲ. ನಾನು ಹಣಕ್ಕೂ ಬೇಡಿಕೆ ಇಟ್ಟಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳ ಮುಂದೆ ನಾನು ಹಣ ಪೀಕಲು ಪ್ರಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಅಂತಹ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ದಾಖಲಿಸುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ನಲ್ಲಿ ಇಂಜಿನಿಯರ್ ‘ಶಾಂತಕುಮಾರ ಸ್ವಾಮಿ’ಗೆ ಬೆದರಿಕೆ, ಸುಳ್ಳು ಕೇಸ್ ಆರೋಪ: ಸಾಗರ ಶಾಸಕ, DYSP ಹೇಳಿದ್ದೇನು? ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಸುದ್ದಿಯ ಬಳಿಕ ಪ್ರತಿಕ್ರಿಯಿಸಿರುವಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ನಾನು ಶಾಂತ ಕುಮಾರಸ್ವಾಮಿಯನ್ನು ನೋಡಿಯೇ ಇಲ್ಲ. ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲೂ ಅವರು ಕಾರ್ಯನಿರ್ವಹಿಸುತ್ತಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಆನಂದಪುರದಲ್ಲಿ ಇಂಜಿನಿಯರ್ ಆಗಿದ್ದಾರೆ ಎನ್ನಲಾಗುತ್ತಿತ್ತು. ಆದರೇ ಆ ರೀತಿಯ ಹೆಸರಿನ ಯಾರು ಅಲ್ಲಿ ಇಲ್ಲ. ತಾಳಗುಪ್ಪ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ಇಂಜಿನಿಯರ್ ಆಗಿದ್ದರು ಎಂಬುದಾಗಿ ಮಾಹಿತಿಯಿದೆ. ತಾಳಗುಪ್ಪ ಸೊರಬ ಕ್ಷೇತ್ರದ ವ್ಯಾಪ್ತಿಗೆ ಬರಲಿದೆ. ನಾನು…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಮೈಸೂರು ಚಲೋ ಪಾದಯಾತ್ರೆಯನ್ನು ಬಿಜೆಪಿ-ಜೆಡಿಎಸ್ ನಡೆಸುತ್ತಿದೆ. ಈ ಬೆನ್ನಲ್ಲೇ ನಾಳೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಾಳಿನ ಸುದ್ದಿಗೋಷ್ಠಿಯಲ್ಲೇ ಮುಡಾ ಹಗರಣದ ಬಗ್ಗೆ ಮತ್ತಷ್ಟು ಮಹತ್ವದ ದಾಖಲೆಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ : 07.08.2024ರ ಬುಧವಾರ ಬೆಳಗ್ಗೆ 10.00 ಗಂಟೆಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ ಅಂತ ತಿಳಿಸಿದೆ. ನಾಳಿನ ಸಿಎಂ ಸಿದ್ಧರಾಮಯ್ಯ ಅವರ ಸುದ್ದಿಗೋಷ್ಠಿಯಲ್ಲಿ ರಾಜ್ಯ ರಾಜಕೀಯ ವಿದ್ಯಮಾನ, ರಾಜ್ಯಪಾಲರ ನಡೆಯ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಅಲ್ಲದೇ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಚಾರಗಳನ್ನು ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಚ್ಚಿಡೋ ಸಾಧ್ಯತೆ ಇದೆ. ಆ ಬಗ್ಗೆ ನಾಳೆಯ ವರೆಗೆ ಕಾದು ನೋಡಬೇಕಿದೆ. https://kannadanewsnow.com/kannada/breaking-ex-bangladesh-it-minister-arrested-for-trying-to-flee-the-country/ https://kannadanewsnow.com/kannada/breaking-kamala-harris-picks-tim-walz-as-us-vice-presidential-candidate/

Read More

ಬೆಂಗಳೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ ಎಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ. ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ, ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು…

Read More

ಬೆಂಗಳೂರು: ಇಂದು ಹೈಕೋರ್ಟ್ ನಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಸಾಗರದ ಸಹಾಯಕ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಎಂಬುವರು ಸಾಗರ ಡಿವೈಎಸ್ಪಿ ವಿರುದ್ಧ ಬೆದರಿಕೆ ಆರೋಪ, ಶಾಸಕ ಬೇಳೂರು ಗೋಪಾಲಕೃಷ್ಣ ನನ್ನಿಂದ ಹಣ ಪೀಕಲು ಯತ್ನಿಸಿದ ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೇ ಶಾಸಕರು, ಡಿವೈಎಸ್ಪಿ ಹಾಗೆ ಮಾಡಿದ್ದಾರಾ.? ಹೇಳೋದು ಏನು.? ಹೈಕೋರ್ಟ್ ನಲ್ಲಿ ಏನಾಯ್ತು ಎನ್ನುವ ಬಗ್ಗೆ ಮುಂದೆ ಓದಿ. ಇಂದು ಹೈಕೋರ್ಟ್ ನಲ್ಲಿ ನಡೆದಿದ್ದೇನು? ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಸಹಾಯ ಇಂಜಿನಿಯರ್ ಆಗಿ, ಅಮಾನತುಗೊಂಡಿರುವಂತ ಶಾಂತಕುಮಾರ ಸ್ವಾಮಿ ಎಂ.ಜಿ ಎನ್ನುವವರು ಹೈಕೋರ್ಟ್ ನಲ್ಲಿ ಇಂದು ನನ್ನನ್ನು ಕಾಪಾಡಿ. ನನಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಡಿವೈಎಸ್ಪಿ ಕಿರುಕುಳ ಕೊಡ್ತಾ ಇದ್ದಾರೆ. ನನಗೆ ಭರವಸೆ ನೀಡುವವರೆಗೂ ಕೋರ್ಟ್ ಬಿಟ್ಟು ಹೋಗುವುದಿಲ್ಲ ಎಂಬುದಾಗಿ ಕೈಮುಗಿದು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಮುಂದೆ ಅಂಗಲಾಚಿದರು. ಮಧ್ಯಾಹ್ನದ ಊಟಕ್ಕೆ ಹೊರಟಿದ್ದಂತ ಅವರು ಸಾವಧಾನವಾಗಿ ಇಂಜಿನಿಯರ್ ಶಾಂತಕುಮಾರಸ್ವಾಮಿ ಹೇಳಿದ್ದನ್ನು ಕೇಳಿದರು. ಹೈಕೋರ್ಟ್ ನ್ಯಾಯಮೂರ್ತಿಯ ಮುಂದೆ ಅವರು ನನಗೆ ವಿವಾಹ…

Read More

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಮನೆ ಬದಲಿಸಿದವರಿಗೂ ಗೃಹ ಜ್ಯೋತಿ ಸೌಲಭ್ಯದ ಅವಕಾಶವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಗೃಹ ಜ್ಯೋತಿ ಫಲಾನುಭವಿಗಳಿಗೆ ಮನೆ ಬದಲಿಸಿದರೂ ಡಿ-ಲಿಂಕ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಈ ಆದೇಶ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. ಡಿ-ಲಿಂಕ್‌ ಮಾಡುವುದು ಹೇಗೆ? ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory…

Read More

ಅಮೇರಿಕಾ: ಜೋ ಬೈಡನ್ ಹಿಂದೆ ಸರಿದ ನಂತರ 2024 ರ ಯುಎಸ್ ಅಧ್ಯಕ್ಷೀಯ ಸ್ಪರ್ಧೆಗೆ ಪ್ರವೇಶಿಸಿದ ಯುನೈಟೆಡ್ ಸ್ಟೇಟ್ಸ್ ಉಪಾಧ್ಯಕ್ಷ ಮತ್ತು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಮಾಜಿ ಪ್ರೌಢಶಾಲಾ ಶಿಕ್ಷಕ ಮತ್ತು ಕಾಂಗ್ರೆಸ್ ಸದಸ್ಯ ಟಿಮ್ ವಾಲ್ಜ್ ಅವರನ್ನು ಉಪಾಧ್ಯಕ್ಷ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಫಿಲಡೆಲ್ಫಿಯಾದ ಟೆಂಪಲ್ ಯೂನಿವರ್ಸಿಟಿಯಲ್ಲಿ ಅದೇ ಸಂಜೆ ತನ್ನ ಆಯ್ಕೆಯೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೊದಲು ಡೆಮಾಕ್ರಟಿಕ್ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮಂಗಳವಾರ ಗಡುವು ವಿಧಿಸಿತ್ತು. ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಅವರು ಈಗಾಗಲೇ ಉಪಾಧ್ಯಕ್ಷ ಅಭ್ಯರ್ಥಿಯ ಹುಡುಕಾಟವನ್ನು ಮಿನ್ನೆಸೋಟದ ಗವರ್ನರ್ಗಳಾದ ಟಿಮ್ ವಾಲ್ಜ್ ಮತ್ತು ಪೆನ್ಸಿಲ್ವೇನಿಯಾದ ಜೋಶ್ ಶಾಪಿರೊ ಅವರಿಗೆ ಸೀಮಿತಗೊಳಿಸಿದ್ದಾರೆ. ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ಗೆ ಸವಾಲೊಡ್ಡಲು ಆತುರಾತುರವಾಗಿ ಅಭಿಯಾನವನ್ನು ಒಟ್ಟುಗೂಡಿಸಿದ ಹ್ಯಾರಿಸ್ ಅವರ ರಾಜಕೀಯ ವೃತ್ತಿಜೀವನದ ಅತ್ಯಂತ ಪರಿಣಾಮಾತ್ಮಕ ನಿರ್ಧಾರಗಳಲ್ಲಿ ಅಭ್ಯರ್ಥಿಯ ಆಯ್ಕೆಯೂ ಒಂದಾಗಿದೆ. ಆಗಸ್ಟ್ 5 ರಂದು ಹ್ಯಾರಿಸ್ ಔಪಚಾರಿಕವಾಗಿ ಡೆಮಾಕ್ರಟಿಕ್ ಅಧ್ಯಕ್ಷೀಯ…

Read More

ನವದೆಹಲಿ: ಇ-ಕಾಮರ್ಸ್ ದೈತ್ಯ ಅಮೆಜಾನ್ ಇಂಡಿಯಾದಲ್ಲಿ ಎಂಟು ವರ್ಷಗಳ ಕಾಲ ಕೆಲಸ ಮಾಡಿದ ನಂತರ ಅಕ್ಟೋಬರ್ ನಲ್ಲಿ ಕಂಪನಿಯ ಮುಖ್ಯಸ್ಥ ಮನೀಶ್ ತಿವಾರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಕಂಪನಿ ಮಂಗಳವಾರ ತಿಳಿಸಿದೆ. ತಿವಾರಿ ಬೇರೆಡೆ ಮತ್ತೊಂದು ಪಾತ್ರವನ್ನು ಹೊಂದಿದ್ದಾರೆ ಎಂದು ಅಮೆಜಾನ್ ವಿವರಿಸದೆ ಹೇಳಿದೆ. https://kannadanewsnow.com/kannada/heavy-rains-lash-bengaluru-from-today-till-august-10-red-alert-sounded-in-these-districts-of-the-state/ https://kannadanewsnow.com/kannada/all-departments-geared-up-for-disaster-management-in-the-state-cm-siddaramaiah/

Read More

ಬೆಂಗಳೂರು: ನಗರದಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಸಿಲಿಕಾನ್ ಸಿಟಿ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಈ ಬಗ್ಗೆ ಹವಾಮಾನ ತಜ್ಞ ಜಿಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಮಳೆ ಸಾಧ್ಯತೆ ಇದೆ. ಇವತ್ತು ಕರಾವಳಿ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಿದೆ ಎಂದರು. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿರಾಲಿಯಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ. ಬೆಂಗಳೂರಲ್ಲಿ 4 ಸೆಂಟಿ ಮೀಟರ್ ಆಗಿದೆ ಎಂದು ತಿಳಿಸಿದರು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಾಳೆ, ನಾಡಿದ್ದು ಭಾರೀ ಮಳೆಯಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ನೀಡಲಾಗಿದೆ ಅಂತ ಹೇಳಿದರು. https://kannadanewsnow.com/kannada/breaking-ex-bangladesh-it-minister-arrested-for-trying-to-flee-the-country/ https://kannadanewsnow.com/kannada/all-departments-geared-up-for-disaster-management-in-the-state-cm-siddaramaiah/

Read More

ಆದಿ ಮಾಸ ಶ್ರಾವಣ ಮಾಸ ದಲ್ಲಿ ಅಂಬಾಲನ್ನು ಪೂಜಿಸುವುದರಿಂದ ಮಳೆಗಾಲ ಮಾತ್ರ ಬರುವುದಿಲ್ಲ. ನಮ್ಮ ಮನೆಯಲ್ಲೂ ಸಂಪತ್ತು ಮಳೆಯಾಗುತ್ತದೆ. ಅಂಬಾಲ್ ಮನಸ್ಸನ್ನು ತಂಪಾಗಿಸಲು ಮೂರು ಪ್ರಮುಖ ಪದಾರ್ಥಗಳನ್ನು ಹೊಂದಿದೆ. ಅದನ್ನು ಖರೀದಿಸಿ ನಾಳೆ ಅಂಬಾಲಿನ ಮುಂದೆ ಪೂಜಿಸಿದರೆ ದೇವಿಯು ಪ್ರಸನ್ನಳಾಗುತ್ತಾಳೆ ಮತ್ತು ನಮ್ಮ ಮನೆಯಲ್ಲಿ ಸಂಪತ್ತು ಮಳೆಯಾಗುತ್ತದೆ. ಆ ಮೂಲಕ ನಾಳೆ ನಮ್ಮ ಮನೆಯಲ್ಲಿ ಅಂಬಾಲನ ಮುಂದೆ ಇಡಬೇಕಾದ 3 ಪ್ರಮುಖ ವಸ್ತುಗಳು ಯಾವುವು ಎಂಬುದನ್ನು ತಿಳಿಯಲು ಈ ಆಧ್ಯಾತ್ಮಿಕ ಪೋಸ್ಟ್ ಆಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ರಾಜ್ಯದಲ್ಲಿ ವಿಪತ್ತು ನಿರ್ವಹಣೆಗಾಗಿ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣೆಗೆ ಎಲ್ಲಾ ಇಲಾಖೆಗಳು ಸಜ್ಜುಗೊಳಿಸಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಸಮಸ್ಯೆಯಾದ ಎಲ್ಲ ಕಡೆ ಭೇಟಿ ನೀಡುತ್ತಿದ್ದೇನೆ. ರಸ್ತೆ, ವಿದ್ಯುತ್‌, ಕುಡಿಯುವ ನೀರು, ಕಾಳಜಿ ಕೇಂದ್ರ ಸೇರಿದಂತೆ ಅಗತ್ಯ ಪರಿಹಾರೋಪಾಯಗಳನ್ನು ಆರಂಭಿಸಲಾಗಿದೆ. ಮುಂದಿನ ವಾರ ಇನ್ನೂ ಹೆಚ್ಚಿನ ಮಳೆ ಬೀಳುವ ಮುನ್ಸೂಚನೆ ಇದೆ. ವಿಪತ್ತು ನಿರ್ವಹಣೆಗೆ ಎಲ್ಲ ಇಲಾಖೆಗಳನ್ನೂ ಸಜ್ಜುಗೊಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/applications-invited-for-state-level-best-teacher-award-heres-how-to-apply/ https://kannadanewsnow.com/kannada/we-did-not-take-out-padayatra-out-of-greed-for-power-by-vijayendra/ https://kannadanewsnow.com/kannada/breaking-another-complaint-filed-with-governor-against-cm-siddaramaiah/

Read More