Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದು ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿಮ್ಹಾನ್ಸ್ನಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಆಹಾರ ಸುರಕ್ಷತಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಇಲಾಖೆಯ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರ ಸಮ್ಮುಖದಲ್ಲಿ ಭಾಷಣ ಮಾಡಿದ ಸಚಿವ ಡಾ. ಪಾಟೀಲ್, ಅನೈರ್ಮಲ್ಯ ಮತ್ತು ಕಲಬೆರಕೆ ಆಹಾರದಿಂದ ಉಂಟಾಗುವ ಗಂಭೀರ ಆರೋಗ್ಯ ಅಪಾಯಗಳನ್ನು ತಡೆಗಟ್ಟಬೇಕಾಗಿದೆ ಎಂದರು. “ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟವಾಗುವ ಕಡಿಮೆ ಗುಣಮಟ್ಟದ ಆಹಾರದಿಂದ ಮಕ್ಕಳು ಮತ್ತು ವೃದ್ಧರ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತಿದೆ. ಸುರಕ್ಷತೆಯನ್ನು…
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ಕೋರಿ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ಈ ಬಾರಿ ಮುಖ್ಯಮಂತ್ರಿ ಆದ ನಂತರ ದೇವಾಲಯಗಳು ಮತ್ತು ಮಸೀದಿ ಸೇರಿದಂತೆ ಎಲ್ಲಾ ಧರ್ಮದ ಪ್ರಾರ್ಥನಾ ಮಂದಿರಗಳ ಶ್ರೇಯೋಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ ಎಂದರು. ಈ ಮೂಲಕ ನಮ್ಮ ಸರ್ಕಾರ ಎಲ್ಲಾ ಧರ್ಮದವರನ್ನು ಸಮಾನವಾಗಿ ಕಾಣುವ ಮತ್ತು ಗೌರವ ಕೊಡುವ ಕೆಲಸ ಮಾಡುತ್ತಿದೆ ಎಂದು ಸುರೇಶ್ ಹೇಳಿದರು. ಸಮಾಜದಲ್ಲಿ ಎಲ್ಲರೂ ಶಾಂತಿ, ಸಹಬಾಳ್ವೆಯಿಂದ ಇದ್ದಾಗ ಮಾತ್ರ ರಾಜ್ಯ, ದೇಶ ಮತ್ತು ಮಾನವ ಸಂಕುಲ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ತ್ಯಾಗದ ಸಂಕೇತವಾದ ಬಕ್ರೀದ್ ಹಬ್ಬದ ಈ ಶುಭ ಸಂದರ್ಭದಲ್ಲಿ ಎಲ್ಲರೂ ಸಮಾಜದ ಒಳಿತಿಗಾಗಿ ಸಂಕಲ್ಪ ಮಾಡೋಣ ಎಂದು ಅವರು ಕರೆ…
ಮಂಡ್ಯ : ದೇವಾಲಯದಲ್ಲಿ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ. ಮುಸುಕುಧಾರಿಯೊಬ್ಬ ಕದಲೂರು ಗ್ರಾಮದ ಶ್ರೀ ಪಟ್ಟಲದಮ್ಮ ದೇಗುಲದಲ್ಲಿ ಗುರುವಾರ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ದೇವಾಲಯದ ಸುತ್ತ ಗಮನಿಸಿದ್ದಾನೆ. ಆದರೆ, ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಪ್ರಕರಣ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿ : ಗಿರೀಶ್ ರಾಜ್, ಮಂಡ್ಯ
ಬೆಂಗಳೂರು: “ನನ್ನ ಮೇಲೆ ಅಸೂಯೆಪಡುವುದರಿಂದ, ನನ್ನನ್ನು ಟೀಕೆ ಮಾಡುವುದರಿಂದ, ನನ್ನನ್ನು ಬಯ್ಯುವುದರಿಂದ ಕುಮಾರಸ್ವಾಮಿ ಅವರಿಗೆ ಖುಷಿಯಾಗಿ, ಅವರ ಆರೋಗ್ಯ ಸುಧಾರಣೆ ಆಗುವುದಾದರೆ ಅವರು ನನ್ನ ನಿಂದನೆ ಮುಂದುವರೆಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. “ನಾನು ಕುಮಾರಸ್ವಾಮಿ ಅವರನ್ನು ಗಮನಿಸುತ್ತಿದ್ದೇನೆ. ಅವರು ತಮ್ಮ ಖುಷಿಗೆ ಮಾತಾಡುತ್ತಿದ್ದಾರೆ. ಅವರು ಏನಾದರೂ ಮಾತನಾಡಲಿ. ಇದರಿಂದ ಅವರಿಗೆ ಖುಷಿಯಾಗಿ ಆರೋಗ್ಯ ಸುಧಾರಣೆ ಆಗುವುದಾದರೆ ಆಗಲಿ. ಅವರ ಆರೋಗ್ಯ ಸುಧಾರಣೆಯಾಗುವುದು ನನಗೆ ಮುಖ್ಯ” ಎಂದು ಹೇಳಿದರು. https://kannadanewsnow.com/kannada/good-news-for-the-beneficiaries-of-the-states-bhagyalakshmi-scheme-the-maturity-amount-has-been-approved/ https://kannadanewsnow.com/kannada/calamitous-disaster-where-is-rahul-gandhi-who-pokes-his-nose-into-everything-now-shobha-karandlaje-questions/
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 1470 ಫಲಾನುಭವಿಗಳು ನೋಂದಣಿಯಾಗಿದ್ದು, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಎಲ್.ಐ.ಸಿ ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದ್ದು ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಕೇಂದ್ರ ಇಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ಕೇಂದ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bengalurus-disaster-should-make-a1-cm-a2-dycm-and-a3-home-minister-araga-jnanendra-insists/ https://kannadanewsnow.com/kannada/calamitous-disaster-where-is-rahul-gandhi-who-pokes-his-nose-into-everything-now-shobha-karandlaje-questions/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದ ಸಾವಿಗೆ ರಾಜ್ಯ ಸರ್ಕಾರವೇ ಕಾರಣ. ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಬೇಕು ಎಂಬುದಾಗಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಇಂದು ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಲ್ತುಳಿತ ಪ್ರಕರಣದ ಸಾವಿಗೆ ಸರ್ಕಾರ ಕಾರಣ. ಎ-1ಸಿಎಂ ,ಎ-2ಡಿಸಿಎಂ,ಎ-3 ಗೃಹಸಚಿವರನ್ನ ಮಾಡಬೇಕು. ರಾಜ್ಯಾಪಾಲರು ಸಿಎಂ ಡಿಸಿಎಂ ಇದ್ದ ಕಾರ್ಯಕ್ರಮ. ಆದರೆ ಅಲ್ಲಿ ಪ್ರೊಟೋಕಾಲ್ ಇರಲಿಲ್ಲ. ಸೆಲ್ಪಿ ತೆಗೆದುಕೊಳ್ಳುವಲ್ಲಿ ಇವರು ಬ್ಯುಸಿ ಆಗಿದ್ರು. ರಾಜೀನಾಮೆ ಕೊಟ್ಟು ಜನರ ಕ್ಷಮೆ ಕೇಳಬೇಕಿತ್ತು ಎಂದರು. ಅಧಿಕಾರಿಗಳು ಬಂದೊಬಸ್ತ್ ಮಾಡಲು ಸಾಧ್ಯವಿಲ್ಲವೆಂದಿದ್ದಾರೆ. ಆದರೂ ಇವರು ಕಾರ್ಯಕ್ರಮ ಮಾಡಿದ್ದಾರೆ. ಪೆಹಲ್ಗಾಮ್ ಬಗ್ಗೆ ಏನ್ ಹೇಳಿದ್ರಿ. ಭದ್ರತಾ ಲೋಪ ಎಂದಿದ್ದರು. ಅದಕ್ಕೂ ಇದಕ್ಕೂ ಹೋಲಿಕೆ ಮಾಡಬಾರದಿತ್ತು. ಈ ಕಾರ್ಯಕ್ರಮ ಮುಂದೂಡುವ ಅವಕಾಶ ಇಲ್ಲಿತ್ತು. ಈ ಕಾರ್ಯಕ್ರಮಕ್ಕೆ ನೀವೇ ಕರೆದಿದ್ದು. ಗೃಹ ಮಂತ್ರಿಯನ್ನ ನೆಗ್ಲೇಟ್ ಮಾಡಿದ್ದಾರೆ. ಅವರವರ ರಾಜಕೀಯಕ್ಕೆ ಜನ ಬಲಿಯಾಗಿದ್ದಾರೆ. ನನ್ನನ್ನ ಕೇಳದೆ ಏನು ಮಾಡಬಾರದು ಅನ್ನೋ ಮನಸ್ಥಿತಿ ಎಂಬುದಾಗಿ ಕೈ ನಾಯಕರ ವಿರುದ್ಧ ಅರಗ ಜ್ಙಾನೇಂದ್ರ…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯ ಬಗ್ಗೆ ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂಬುದಾಗಿ ಬಿಸಿಸಿಐ ಮೊದಲ ಪ್ರತಿಕ್ರಿಯೆ ನೀಡಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು, ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಖಾಸಗಿ ವ್ಯವಹಾರವಾಗಿದೆ. ಆದರೇ ಭಾರತದಲ್ಲಿ ಕ್ರಿಕೆಟಿಗೆ ಬಿಸಿಸಿಐ ಜವಾಬ್ದಾರರಾಗಿದ್ದೇವೆ. ಕೆಲವು ಹಂತದಲ್ಲಿ ಬಿಸಿಸಿಐ ಏನನ್ನಾದ್ರೂ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಆರ್ ಸಿ ಬಿ ವಿಜಯೋತ್ಸವದ ಸಂಭ್ರಮಾಚರಣೆಗೆ ಮಾರ್ಗಸೂಚಿ ಪರಿಚಯಿಸಲು ಬಿಸಿಸಿಐ ಯೋಚಿಸುತ್ತಿದೆ ಎಂಬುದಾಗಿ ಹೇಳಿದ್ದಾರೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ಪ್ರಶಸ್ತಿ ಗೆಲುವಿನ ಸಂಭ್ರಮಾಚರಣೆ ದುರಂತ ಘಟನೆಯಾಗಿ ಮಾರ್ಪಟ್ಟ ನಂತರ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಮಂಗಳವಾರ ನಡೆದ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್ಸಿಬಿ 6 ರನ್ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಎತ್ತಿ…
1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ…
ಬೆಂಗಳೂರು: ನಗರದಲ್ಲಿ ನಾಗರಿಕರಿಗೆ ಸುರಕ್ಷತೆ ಮತ್ತು ನಡೆಯಲು ಅನುಕೂಲಕರವಾಗುವಂತೆ, ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವು ಕಾರ್ಯ ನಡೆಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸುಸಜ್ಜಿತ ಹಾಗೂ ಅನುಕೂಲಕರವಾದ ಪಾದಾಚಾರಿ ಮಾರ್ಗ ನಿರ್ಮಿಸುವ ಸಲುವಾಗಿ, ಅವರು ಇಂದು ಮಹದೇವಪುರ ವಲಯದ ಸೀತಾರಾಂಪಾಳ್ಯ ಮೆಟ್ರೋ ನಿಲ್ದಾಣದಿಂದ ಬಿಇಎಂಎಲ್ ಲೇಔಟ್ ಮೇನ್ ರೋಡ್ ವರೆಗೆ ಪಾದಾಚಾರಿ ಮಾರ್ಗಗಳನ್ನು ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ಐ.ಟಿ.ಪಿ.ಎಲ್ ಮುಖ್ಯ ರಸ್ತೆಯಲ್ಲಿ ರಸ್ತೆಗೆ ಮರ ಬಾಗಿಕೊಂಡಿರುವುದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಬಿಳುವ ಹಂತದಲ್ಲಿರುವುದರಿಂದ ಕೂಡಲೇ ಮರವನ್ನು ತೆರವುಗೊಳಿಸಲು ಸೂಚಿಸಿದರು. ಹಾಗೂ ಇದೇ ರೀತಿ ಬೇರೆ ಅಪಾಯಕಾರಿ/ ಒಣಗಿದ ಮರ ರೆಂಬೆ ಕೊಂಬೆ ತೆರವುಗೊಳಿಸಲು ಸೂಚಿಸಿದರು. ಬ್ರಿಗೇಡ್ ಟೆಕ್ ಗಾರ್ಡನ್ ಸಂಸ್ಥೆಯವರು ಪಾದಚಾರಿಗೆ ಅಡ್ಡಲಾಗಿ ಕರ್ಬ್ ಗಳನ್ನು ಅಳವಡಿಸಿದ್ದು, ಇದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ತೆರವುಗೊಳಿಸಿ ಸಮತಟ್ಟಾಗಿ ಪಾದಚಾರಿ ನಿರ್ಮಿಸಲು ಸೂಚಿಸಿದರು. ಐ.ಟಿ.ಪಿ.ಎಲ್. ಮುಖ್ಯ ರಸ್ತೆಯಲ್ಲಿರುವ ಶಿವಶಕ್ತಿ ಬಾರ್ ನವರು…
ಬೆಂಗಳೂರು: 18 ವರ್ಷಗಳ ನಂತ್ರ ಆರ್ ಸಿ ಬಿ ಐಪಿಎಲ್ ಕಪ್ ಗೆದ್ದರು ಅಂತ ರಾಜ್ಯ ಕಾಂಗ್ರೆಸ್ ಸರ್ಕಾರವು ವಿಜಯೋತ್ಸವ ಆಚರಣೆ ಮಾಡೋದರಿಂದ ಹೆಸರು ಬರುತ್ತೆ ಅಂತ ಹೋಗಿ ಮಾಡಬಾರದ್ದು ಮಾಡಿ ಬಿಟ್ರು. ಒಂದು ವಾರ ಬಿಟ್ಟು ಮಾಡಬಹುದಿತ್ತು. ಕಾಲ್ತುಳಿತ ದುರಂತದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡಬೇಕು ಅಂಕ ಕೇಂದ್ರ ರಾಜ್ಯ ಖಾತೆಯ ರೈಲ್ವೆ ಸಚಿವ ವಿ.ಸೋಮಣ್ಣ ಆಗ್ರಹಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಕಾಲ್ತುಳಿದಲ್ಲಿ 11 ಜನರ ಸಾವಿನ ಪ್ರಕರಣ ವಿಚಾರವಾಗಿ ಮಾತನಾಡಿ, ನೋಡಿ, ಇದು ಲಜ್ಜಗೇಡಿ ಸರ್ಕಾರವಾಗಿದೆ. 18 ವರ್ಷದ ನಂತರ ಗೆದ್ರು. ಅದಕ್ಕೆ ಹೆಸರು ಬರುತ್ತೆ ಅಂತ ಹೀಗೆ ಮಾಡಿದ್ರು. ಒಂದು ವಾರ ಬಿಟ್ಟು ಮಾಡ್ಬಹುದಿತ್ತು. ಏನೇನ್ ಮಾಡಬಾರದಿತ್ತೋ ಎಲ್ಲಾ ಮಾಡಿದ್ರು. ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಸಿದ್ದರಾಮಯ್ಯನವರ ವಿವೇಚನೆ ಎಲ್ಲಿ ಹೋಗಿತ್ತು? ತಕ್ಷಣ ನಿರ್ಧಾರ ತೆಗೆದುಕೊಂಡ್ರುಯ ದಕ್ಷ ಕಮೀಷನರ್ಗೆ ನೋವು ಕೊಟ್ಟಿದ್ದೀರಿ. ನೀವು ಮಾಡಿರುವ ಅಕ್ಷಮ್ಯ ಅಪರಾಧ ಇದು ಎಂಬುದಾಗಿ ಕೇಂದ್ರ ಸಚಿವ ವಿ.ಸೋವಣ್ಣ ಕಿಡಿಕಾರಿದರು. https://kannadanewsnow.com/kannada/union-minister-h-d-kumaraswamy-is-relentless-in-telling-lies-former-mp-d-k-suresh/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/