Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳ ರಕ್ತ, ಕೂಲದಿನ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ. https://kannadanewsnow.com/kannada/nehas-father-niranjans-pa-vinay-kidnapped-by-three-men-in-hubballi/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/
ಹುಬ್ಬಳ್ಳಿ: ಇಂದು ಮುಂಜಾಗನೇ ಮೃತ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಅವರ ಆಪ್ತ ಸಹಾಯಕ ಆಗಿರುವಂತ ವಿನಯ್ ಎಂಬಾತನನ್ನು ಮೂವರು ಅಪರಿಚಿತರು ಕಿಡ್ನ್ಯಾಪ್ ಮಾಡೋದಕ್ಕೆ ಯತ್ನಿಸಿರುವಂತ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಇಂದು ಮುಂಜಾಗನೆ ವಾಲ್ವೇಕರ್ ಗಲ್ಲಿಯಲ್ಲಿನ ಗಜಾನನ ಬ್ಯಾಂಕ್ ಎದುರು ಮೂವರು ನಿರಂಜನ್ ಅವರ ಪಿಎ ವಿನಯ್ ಆಲಿಯಾಸ್ ಈರಣ್ಣ ಎಂಬುವರನ್ನು ಕಾರನ್ನು ಹತ್ತುವಂತೆ ಬೆದರಿಸಿ, ಕಿಡ್ನ್ಯಾಪ್ ಮಾಡೋದಕ್ಕೆ ಯತ್ನಿಸಿದ್ದಾರೆ. ಈ ವೇಳೆಯಲ್ಲಿ ಕೂಡಲೇ ಅಲರ್ಟ್ ಆದಂತೆ ನಿರಂಜನ್ ಪಿಎ ವಿನಯ್ ತಮ್ಮ ಮೊಬೈಲ್ ತೆಗೆದುಕೊಂಡು ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ. ಇದರಿಂದ ಹೆದರಿದಂತ ಮೂವರು ಅಪರಿಚಿತರು ಅಲ್ಲಿಂದ ಪರಾರಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಘಟನೆಯ ಬಳಿಕ ನಿರಂಜನ್ ಪಿಎ ವಿನಯ್ 112ಗೆ ಕರೆ ಮಾಡಿ, ಪೊಲೀಸರಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ದೂರು ದಾಖಲಿಸಿದ್ದು, ಕಿಡ್ನ್ಯಾಪ್ ಗೆ ಯತ್ನಿಸಿದಂತ ಮೂವರ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. https://kannadanewsnow.com/kannada/neet-pg-2024-admit-card-released/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/
ನವದೆಹಲಿ: ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (ಎನ್ಬಿಇಎಂಎಸ್) ನೀಟ್ ಪಿಜಿ 2024 ಪ್ರವೇಶ ಪತ್ರವನ್ನು ಜೂನ್ 19, 2024 ರಂದು ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ಈಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ 2024 ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ – natboard.edu.in ರಿಂದ ಡೌನ್ಲೋಡ್ ಮಾಡಬಹುದು. ನೀಟ್ ಪಿಜಿ 2024 ಪರೀಕ್ಷೆಯನ್ನು ಜೂನ್ 23 ರಂದು ನಡೆಸಲಾಗುವುದು. ರಾಷ್ಟ್ರವ್ಯಾಪಿ ಸ್ನಾತಕೋತ್ತರ ವೈದ್ಯಕೀಯ ಕಾರ್ಯಕ್ರಮಗಳ ಪ್ರವೇಶಕ್ಕೆ ಈ ಸಿಬಿಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅತ್ಯಗತ್ಯವಾಗಿದೆ. ಎನ್ಬಿಇ ಅಧಿಸೂಚನೆಯಲ್ಲಿ, “ಪ್ರವೇಶ ಪತ್ರಗಳನ್ನು ಇಂದಿನಿಂದ “ಬ್ಯಾಚ್ವಾರು” ನೀಡಲಾಗುವುದು. ನೀಟ್-ಪಿಜಿ 2024 ರ ಅರ್ಜಿದಾರರು ತಮ್ಮ ಅರ್ಜಿದಾರರ ಲಾಗಿನ್ ಖಾತೆಗಳನ್ನು ಎನ್ಬಿಇಎಂಎಸ್ ವೆಬ್ಸೈಟ್ನಲ್ಲಿ ನೀಟ್-ಪಿಜಿ 2024 ಸೂಚ್ಯಂಕ ಪುಟದಲ್ಲಿ https://natboard.edu.in ಪ್ರವೇಶ ಪತ್ರಕ್ಕಾಗಿ ನಿಯತಕಾಲಿಕವಾಗಿ ಪರಿಶೀಲಿಸಲು ಸೂಚಿಸಲಾಗಿದೆ. ನೀಟ್ ಪಿಜಿ 2024 ಫಲಿತಾಂಶವು ಜುಲೈ 15, 2024 ರಂದು ಪ್ರಕಟವಾಗಲಿದೆ. ನೀಟ್ ಪಿಜಿ 2024 ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು…
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿವೆ. ಈ ಬೆಳವಣಿಗೆಯನ್ನು ಕಾಶ್ಮೀರದ ಐಜಿಪಿ ಟೈಮ್ಸ್ ನೌಗೆ ದೃಢಪಡಿಸಿದ್ದಾರೆ. ಇದಕ್ಕೂ ಮುನ್ನ ಜಿಲ್ಲೆಯ ಹಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು. ಎನ್ಕೌಂಟರ್ ಸಮಯದಲ್ಲಿ ಒಬ್ಬ ಪೊಲೀಸ್ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಿಶೇಷವೆಂದರೆ, ಇದು 48 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡನೇ ಎನ್ಕೌಂಟರ್ ಆಗಿದೆ. https://twitter.com/KashmirPolice/status/1803354834151571736 https://kannadanewsnow.com/kannada/actor-darshan-and-gang-murder-case-police-to-conduct-dna-test-of-accused/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳನ್ನು ಡಿಎನ್ ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆರೋಪಿಗಳ ಕೂದಲು, ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಪೊಲೀಸರು ಆರೋಪಿಗಳ ಸಮ್ಮಖದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಸ್ಥಳದಲ್ಲಿ ಸಿಕ್ಕಿರುವಂತ ಕೂದಲು, ರಕ್ತದ ಮಾದರಿಯನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈಗ ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ರೇ, ಕೊಲೆ ಸ್ಥಳದಲ್ಲಿ ಸಿಕ್ಕಂತ ರಕ್ತದ ಮಾದರಿ, ಕೂದಲಿಗೂ ಹೋಲಿಕೆ ಆದ್ರೇ, ಪ್ರಕರಣ ಸಂಬಂಧ ಬಲವಾದಂತ ಸಾಕ್ಷ್ಯ ಸಿಗಲಿದೆ ಎನ್ನುವುದು ಪೊಲೀಸರ ನಿಲುವಾಗಿದೆ. ಈ ಹಿನ್ನಲೆಯಲ್ಲಿ ಎ1 ಆರೋಪಿ ಪವಿತ್ರಾಗೌಡ, ಎ2…
ಹೈದರಾಬಾದ್: ಚಿರಂಜೀವಿ ಅವರ ಮಗಳು ಶ್ರೀಜಾ ಕೊನಿಡೆಲಾ ಅವರ ಮಾಜಿ ಪತಿ ಶಿರೀಶ್ ಭಾರದ್ವಾಜ್ ಅವರು ಹಠಾತ್ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಶ್ವಾಸಕೋಶದ ಹಾನಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದಾಗಿ ಶಿರೀಶ್ ಭಾರದ್ವಾಜ್ ನಿಧನರಾದರು. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಇದು ಅವರ ಅಕಾಲಿಕ ಸಾವಿಗೆ ಕಾರಣವಾಯಿತು. ಶ್ರೀಜಾ ಕೊನಿಡೆಲಾ ಮತ್ತು ಶಿರೀಶ್ ಭಾರದ್ವಾಜ್ ಅವರ 2007 ರ ವಿವಾಹವು ಆ ಸಮಯದಲ್ಲಿ ಸಾಕಷ್ಟು ವಿವಾದಾತ್ಮಕವಾಗಿತ್ತು, ಏಕೆಂದರೆ ಅದು ಅವರ ಕುಟುಂಬಗಳ ಇಚ್ಛೆಗೆ ವಿರುದ್ಧವಾಗಿತ್ತು. ಆದಾಗ್ಯೂ, ಹೊಂದಾಣಿಕೆಯಾಗದ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿ ದಂಪತಿಗಳು 2014 ರಲ್ಲಿ ವಿಚ್ಛೇದನ ಪಡೆದರು. ಶ್ರೀಜಾ ನಂತರ 2016 ರಲ್ಲಿ ಬೆಂಗಳೂರಿನಲ್ಲಿ ಉದ್ಯಮಿ ಕಲ್ಯಾಣ್ ದೇವ್ ಅವರನ್ನು ವಿವಾಹವಾದರು. ಕಳೆದ ವರ್ಷ ಬೇರ್ಪಡುವ ಮೊದಲು ದಂಪತಿಗೆ ಹೆಣ್ಣು ಮಗುವಿತ್ತು. ಶಿರೀಶ್ ಭಾರದ್ವಾಜ್ ಕೂಡ 2019 ರಲ್ಲಿ ಮರುಮದುವೆಯಾಗಿ ರಾಜಕೀಯದಲ್ಲಿ ಸಕ್ರಿಯರಾದರು, ಬಿಜೆಪಿಗೆ ಸೇರಿದರು. https://kannadanewsnow.com/kannada/ksrtc-bus-ticket-price-hike-fixed-in-karnataka-transport-minister/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/
ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ನಿಮ್ಮ ಕನ್ನಡ ನ್ಯೂಸ್ ನೌ, ಕೆಲ ದಿನಗಳ ಹಿಂದೆಯೇ ಸುದ್ದಿಯಲ್ಲಿ ಪ್ರಕಟಿಸಿತ್ತು. ಈಗ ಕರ್ನಾಟಕದಲ್ಲಿ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಫಿಕ್ಸ್ ಎನ್ನುವುದನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ. ಇಂದು ನಗರದಲ್ಲಿ ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಅವರು, ತೈಲ ಬೆಲೆ ಏರಿಕೆಯಿಂದ ಸಾಗಾಣಿಕೆ ವೆಚ್ಚ ಕೂಡ ಹೆಚ್ಚಾಗಿದೆ. ರಾಜ್ಯದಲ್ಲಿ ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಹೀಗಾಗಿ ನಿಗಮಗಳಿಂದ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಬಂದ್ರೆ ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದರು. ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು 2020ರಲ್ಲಿ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ KSRTC ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿಲ್ಲ. ನಿಗಮಕ್ಕೆ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರದಿಂದ 1100 ಕೋಟಿ ಬರಬೇಕಿದೆ. ಸಾರಿಗೆ ನಿಗಮಗಳಿಂದ ದರ ಪರಿಷ್ಕರಣೆ…
ಬೆಂಗಳೂರು: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸೋದನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕಡ್ಡಾಯಗೊಳಿಸಲಾಗಿತ್ತು. ಕರ್ನಾಟಕದಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕೂಡ ಅಳವಡಿಸಿಕೊಂಡಿದ್ದಾರೆ. ಇನ್ನೂ ಕೆಲವರು ಅಳವಡಿಸಿಕೊಳ್ಳೋದು ಬಾಕಿ ಇದೆ. ಈ ಹಿನ್ನಲೆಯಲ್ಲಿ ಈ ಹಿಂದೆ ಕರ್ನಾಟಕ ಹೈಕೋಟ್ರ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜುಲೈ.4ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ ಗಡವುನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಸೆಪ್ಟೆಂಬರ್.15ರವರೆಗೆ ಹೆಚ್ ಎಸ್ ಆರ್…
ಬೆಂಗಳೂರು: ಕೇಂದ್ರ ಸರ್ಕಾರದ ನೀಟ್ ಅಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷ ಸಿಡಿದೆದ್ದಿದೆ. ನೀಟ್ ಅಕ್ರಮ ಖಂಡಿಸಿ, ಅನ್ಯಾಯವಾದಂತ ವಿದ್ಯಾರ್ಥಿಗಳಿಗೆ ನ್ಯಾಯದೊರಕಿರಿಸಿ ಕೊಡುವಂತೆ ಆಗ್ರಹಿಸಿ, ಜೂನ್.21ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು, ನೀಟ್-ಯುಜಿ 2024 ನಡವಳಿಕೆ ಮತ್ತು ಫಲಿತಾಂಶಗಳ ಸುತ್ತಲಿನ ಹಲವಾರು ದೂರುಗಳು ಮತ್ತು ಕಳವಳಗಳನ್ನು ಪರಿಹರಿಸುವ ತುರ್ತು ಅವಶ್ಯಕತೆಯಿದೆ. ನಿಮಗೆ ತಿಳಿದಿರುವಂತೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024 ರ ಫಲಿತಾಂಶಗಳನ್ನು ಜೂನ್ 4, 2024 ರಂದು ಬಿಡುಗಡೆ ಮಾಡಿತು. ಕೆಲವು ಆಕಾಂಕ್ಷಿಗಳ ಅಂಕಗಳು ಹೆಚ್ಚಾದ ನಂತರ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳಿಂದ ಫಲಿತಾಂಶಗಳು ವಿದ್ಯಾರ್ಥಿಗಳ ಜೀವನ ಹಾಳು ಮಾಡಿದ್ದಾವೆ ಅಂತ ಕಿಡಿಕಾರಿದ್ದಾರೆ. ಹೆಚ್ಚಿದ ಅಂಕಗಳು ಮತ್ತು ಅಕ್ರಮಗಳ ಬಗ್ಗೆ ಗಮನಾರ್ಹ ಕಳವಳಗಳಿವೆ. ವಿಧಾನವನ್ನು ಬಹಿರಂಗಪಡಿಸದೆ ಗ್ರೇಸ್ ಅಂಕಗಳನ್ನು ನೀಡುವುದು ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕುತ್ತದೆ. ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಮತ್ತೊಂದು ಬಿಗ್ ರಿಲೀಫ್ ನೀಡಲಾಗಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಸೆ.15ರವರೆಗೆ ವಿಸ್ತರಿಸಿ ಆದೇಶಿಸಿದೆ. ಈಗಾಗಲೇ ರಾಜ್ಯ ಸರ್ಕಾರದಿದಂ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಜೂನ್.12ರವರೆಗೆ ಗಡುವು ನೀಡಲಾಗಿತ್ತು. ಆದ್ರೇ ಅನೇಕ ವಾಹನ ಸವಾರರು ನಂಬರ್ ಪ್ಲೇಟ್ ಅಳವಡಿಸಿರಲಿಲ್ಲ. ಹೀಗಾಗಿ ಮತ್ತು ಜುಲೈ.4ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಅವಧಿ ವಿಸ್ತರಿಸಿ ಆದೇಶಿಸಿದೆ. https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/