Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿದಂತ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಆರೋಗ್ಯ ಇಲಾಖೆ ದಂಡದ ಮೂಲಕ ಬಿಗ್ ಶಾಕ್ ನೀಡಿದೆ. 16 ಸಂಸ್ಥೆಗಳ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ್ದರೇ, 2 ಸಂಸ್ಥೆಗಳ ವಿರುದ್ಧ FIR ದಾಖಲಿಸಲಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್, ಪುನರ್ವಸತಿ ಕೇಂದ್ರಗಳ ಒಟ್ಟು 39 ಪ್ರಕರಣಗಳನ್ನು ಮಂಡಿಸಲಾಗಿತ್ತು. ಸದರಿ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ಈ ಕೆಳಕಂಡ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. 16 ಸಂಸ್ಥೆಗಳ ವಿರುದ್ಧ ದಂಡ ಕೆಪಿಎಂಇ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಬೆಂಗಳೂರಿನ ಸುಂಕದಕಟ್ಟೆಯಲ್ಲಿನ ಕೀರ್ತನ ಫೌಂಡೇಶನ್ ಗೆ ರೂ.50,000 ದಂಡವನ್ನು ವಿಧಿಸಲಾಗಿದೆ. ಹೆಚ್ ಎಸ್ ಆರ್ ಲೇಔಟ್ ನ ಕೋಸ್ಮೆಡಿಕ್ಸ್ ಕ್ಲಿನಿಕ್ ಗೆ ರೂ.25,000 ದಂಡ ಹಾಕಲಾಗಿದೆ. ಇನ್ನೂ ಗಿಡ್ಡಕೊನ್ನೇನಹಳ್ಳಿಯಲ್ಲಿನ ಅನನ್ಯ ಆಸ್ಪತ್ಪೆಗೆ ರೂ.50,000, ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿನ ಸಮೃದ್ಧಿ…

Read More

ಮಂಗಳೂರು: ಜಿಲ್ಲೆಯ ಕಾರಾಗೃಹದಲ್ಲಿ ಪುಡ್ ಪಾಯಿಸನ್ ಆಗಿದ್ದರಿಂದ 40ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥಗೊಂಡಿದ್ದರು. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರಲ್ಲಿ ಓರ್ವ ಕೈದಿಯ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜೈಲಿಗೆ ಭೇಟಿ ನೀಡಿ, ನೀರಿನ ಸ್ಯಾಂಪಲ್ ಹಾಗೂ ಆಹಾರದ ಮಾದರಿಯನ್ನು ಸಂಗ್ರಹಿಸಿದ್ದಾರೆ. ಈ ವೇಳೆ ಅವಲಕ್ಕಿ, ಅನ್ನ, ಸಾಂಬಾರ್ ಊಟವನ್ನು ಮಧ್ಯಾಹ್ನ ಖೈದಿಗಳಿಗೆ ನೀಡಿರೋದಾಗಿ ತಿಳಿದು ಬಂದಿದೆ. ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರು ಮಾತನಾಡಿ, ಇಂದು ಸಂಜೆ 4.30ಕ್ಕೆ ಕೈದಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 45 ಕೈದಿಗಳ ಪೈಕಿ ಓರ್ವನ ಸ್ಥಿತಿ ಗಂಭೀರಗೊಂಡಿದೆ ಎಂದಿದ್ದಾರೆ. ಪುಡ್ ಪಾಯಿಸನ್ ಹೇಗೆ ಆಯ್ತು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತದೆ. ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ಬಳಿಕ ಕಾರಣ ತಿಳಿಯಲಿದೆ ಎಂದರು. https://kannadanewsnow.com/kannada/cabinet-approves-revised-livestock-health-programme-pm-modi/ https://kannadanewsnow.com/kannada/job-fair-to-be-held-in-kodagu-on-mar-8/

Read More

ಮಡಿಕೇರಿ: ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ. ಮಾ.06ರ ನಾಳೆ ವಿದ್ಯುತ್ ವ್ಯತ್ಯಯ 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಎಫ್3 ಶನಿವಾರಸಂತೆ ಮಾರ್ಗದಲ್ಲಿ, ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು…

Read More

ನವದೆಹಲಿ: ಪರಿಷ್ಕೃತ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ (ಎಲ್ಎಚ್ಡಿಸಿಪಿ) ಕೇಂದ್ರ ಸಚಿವ ಸಂಪುಟದ ಅನುಮೋದನೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಶ್ಲಾಘಿಸಿದ್ದಾರೆ. ಇದು ಪ್ರಾಣಿಗಳ ಆರೋಗ್ಯವನ್ನು ಸುಧಾರಿಸುವ, ಉತ್ಪಾದಕತೆಯನ್ನು ಹೆಚ್ಚಿಸುವ ಮತ್ತು ರೈತರನ್ನು ಬೆಂಬಲಿಸುವ ಮಹತ್ವದ ಹೆಜ್ಜೆ ಎಂದು ಕರೆದಿದ್ದಾರೆ. “ಪರಿಷ್ಕೃತ ಎಲ್ಎಚ್ಡಿಸಿಪಿ ರೋಗ ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುತ್ತದೆ, ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ವಿಸ್ತರಿಸುತ್ತದೆ, ಹೆಚ್ಚಿನ ಸಂಚಾರಿ ಪಶುವೈದ್ಯಕೀಯ ಘಟಕಗಳನ್ನು ನಿಯೋಜಿಸುತ್ತದೆ ಮತ್ತು ಪ್ರಾಣಿಗಳಿಗೆ ಕೈಗೆಟುಕುವ ಔಷಧಿಗಳನ್ನು ಖಚಿತಪಡಿಸುತ್ತದೆ” ಎಂದು ಪಿಎಂ ಮೋದಿ ಹೇಳಿದರು. https://twitter.com/narendramodi/status/1897277823666282686?ref_src=twsrc%5Etfw%7Ctwcamp%5Etweetembed%7Ctwterm%5E1897277823666282686%7Ctwgr%5Ed47ae95bbd65a485a362f3aeb19bffd9b9f4fc0c%7Ctwcon%5Es1_&ref_url=https%3A%2F%2Fwww.indiatvnews.com%2Fnews%2Findia%2Fcabinet-approves-livestock-health-programme-boosts-rural-farmers-pm-modi-lhdcp-2025-03-05-979268 https://kannadanewsnow.com/kannada/cards-of-26-lakh-fake-workers-cancelled-in-karnataka-santosh-lad/ https://kannadanewsnow.com/kannada/minister-santosh-lad-gives-good-news-to-construction-workers-who-were-expecting-release-of-child-marriage-incentive/

Read More

ಧಾರವಾಡ : ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹಕ್ಕೆ ದೊರೆಯುವ ಪ್ರೋತ್ಸಾಹಧನ 2024-25ನೇ ಸಾಲಿನಲ್ಲಿ ಮಂಜೂರಾಗಿರುವ 23,121 ಫಲಾನುಭವಿಗಳ ಪೈಕಿ 6,595 ಫಲಾನುಭವಿಗಳಿಗೆ ಸಹಾಯ ಧನದ ಮೊತ್ತವನ್ನು ಅವರ ಖಾತೆಗೆ ಡಿಬಿಟಿ ಮೂಲಕ ನೇರ ಜಮಾ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ತಿಳಿಸಿದರು. ಅವರು ಇಂದು (ಮಾ.5) ಬೆಳಿಗ್ಗೆ ವಿಧಾನ ಸಭೆಯ ಕಲಾಪದಲ್ಲಿ ಭಾಗವಹಿಸಿ, ಹುಬ್ಬಳ್ಳಿ ಧಾರವಾಡ ಕೇಂದ್ರಿಯ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 2022 ರಿಂದ ಇಲ್ಲಿಯವರೆಗೆ ಮದುವೆ ಧನ ಸಹಾಯಕ್ಕಾಗಿ 2022-23 ನೇ ಸಾಲಿನಲ್ಲಿ 66,514 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 48,366 ಅರ್ಜಿಗಳು ಮಂಜೂರಾಗಿವೆ. 2023-24 ನೇ ಸಾಲಿನಲ್ಲಿ 50,398 ಅರ್ಜಿಗಳು ಸಲ್ಲಿಕೆಯಾಗಿದ್ದು, 34,604 ಅರ್ಜಿಗಳು ಮಂಜೂರಾಗಿವೆ. ಮತ್ತು 2024-25 ನೇ ಸಾಲಿನಲ್ಲಿ 40,262 ಅರ್ಜಿಗಳು ಸಲ್ಲಿಕೆಯಾಗಿದ್ದು, 23,121 ಅರ್ಜಿಗಳು ಮಂಜೂರಾಗಿವೆ. ಒಟ್ಟಾರೆಯಾಗಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು ರಾಜ್ಯಾಂದತ್ಯ 1,57,174 ಅರ್ಜಿಗಳು ಮದುವೆ…

Read More

ಎಷ್ಟೇ ಜನ ಮಗುವಿನ ಲಾಲನೆ ಪಾಲನೆ ಮಾಡಿದರೂ ತಾಯಿಯನ್ನು ನೋಡಿಕೊಂಡಂತೆ ಆಗುವುದಿಲ್ಲ ಎನ್ನುತ್ತಾರೆ. ಕುಟುಂಬ ದೇವತೆಯ ಆರಾಧನೆಯ ವಿಷಯವೂ ಇದೇ ಆಗಿದೆ. ನಾವು ಎಷ್ಟೇ ಸಾವಿರ ದೇವರನ್ನು ಪೂಜಿಸಿದರೂ ನಮಗೆ ಕಷ್ಟ ಬಂದಾಗ ಮೊದಲು ಬಂದು ಸಹಾಯ ಮಾಡುವವರು ನಮ್ಮ ಕುಲದೇವರು. ಕುಲದೇವತೆಯಲ್ಲಿ ಹೃದಯ ಕರಗಿ ನಿಂತರೆ ಇತರ ದೇವತೆಗಳು ಕೇಳಿ ಪಡೆಯದ ವರಗಳೂ ತಾನಾಗಿಯೇ ಆಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಈ ಒಂದು ಕಾರ್ಯವನ್ನು ಮಾಡಿದರೆ ಅಂತಹ ಶಕ್ತಿಶಾಲಿ ಕುಲದೇವತೆಯನ್ನು ನಮ್ಮ ಮನೆಯಲ್ಲಿ ಸದಾ ಇರಿಸಬಹುದು ಎಂದು ಹೇಳಲಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ಏನು ಮತ್ತು ಹೇಗೆ ಮಾಡಬೇಕೆಂದು ನೀವು ಕಂಡುಹಿಡಿಯಬಹುದು . ಆರಾಧನಾ ದೇವತೆಯ ಆರಾಧನೆಯು ನಮ್ಮೊಂದಿಗೆ ಮಾತ್ರ ಮಾಡಬಹುದಾದ ವಿಷಯವಲ್ಲ. ಇದು ನಮ್ಮ ಪೂರ್ವಜರು ಪೂಜಿಸಿದ ಮತ್ತು ನಾವು ಪೂಜಿಸುವ ದೇವತೆ ಮತ್ತು ನಮ್ಮ ಮುಂದಿನ ಪೀಳಿಗೆಯೂ ಪೂಜಿಸಬೇಕು. ಈ ದೇವತೆ ಸದಾ ನಮ್ಮೊಂದಿಗಿದ್ದರೆ…

Read More

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ, ರಾಜ್ಯದಲ್ಲಿ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ನಿರಂತರ ಜ್ಯೋತಿ ಯೋಜನೆ ಮೂಲಕ ದಿನದ 7 ಗಂಟೆ 3 ಫೇಸ್ ಹಾಗೂ ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ರಾಜ್ಯದಲ್ಲಿನ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ರದ್ದು: ಸಚಿವ ಸಂತೋಷ್ ಲಾಡ್ ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್ ನಕಲಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿದ್ದಂತ ಬರೋಬ್ಬರಿ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದು ಪಡಿಸಲಾಗಿದೆ. ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್ ನಕಲಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿದ್ದಂತ ಬರೋಬ್ಬರಿ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದು ಪಡಿಸಲಾಗಿದೆ. ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897261520423411874 ಪ್ರಗತಿ ಪಥ ಯೋಜನೆಯಡಿ 7,110 ಕಿಲೋಮೀಟರ್ ಗ್ರಾಮೀಣ ರಸ್ತೆ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ ಪಿಎಂಜಿಎಸ್‌ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ₹5,190 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ…

Read More

ಬೆಂಗಳೂರು: ದೇವಸ್ಥಾನಗಳಿಗೆ ತೆರಳುವಂತ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೇಸಿಗೆಯ ಬಿಸಿಲ ಈ ಸಂದರ್ಭದಲ್ಲಿ ಮುಜರಾಯಿ ದೇವಸ್ಥಾನಗಳಲ್ಲಿ ನೆರಳಿನ ವ್ಯವಸ್ಥೆ ಮಾಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1897257839703282012 https://kannadanewsnow.com/kannada/another-shock-to-the-people-of-the-state-smart-meter-prices-hiked-by-400-800/ https://kannadanewsnow.com/kannada/big-news-good-news-for-the-farmers-of-the-state-government-launches-new-scheme-for-land-acquisition-watch-video/

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ದೂರದ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಂದಿನಿ ಹಾಲಿನ ಕೋ-ಪ್ಯಾಕಿಂಗ್ ಮತ್ತು ಮಾರಾಟವನ್ನು ಪ್ರಾರಂಭಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಹಾಲು ಮಹಾಮಂಡಳದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ರಾಷ್ಟ್ರದಲ್ಲಿಯೇ ಎರಡನೇಯ ದೊಡ್ಡ ಹಾಲು ಸಹಕಾರ ಸಂಸ್ಥೆಯಾಗಿದೆ. ಕೆಎಂಎಫ್ ಸಂಸ್ಥೆಯು ಸದಸ್ಯ ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ 26 ಲಕ್ಷಕ್ಕೂ ಹೆಚ್ಚಿನ ಹೈನುಗಾರ ರೈತರಿಂದ ಹಾಲನ್ನು ಖರೀದಿಸಿ, ಸಂಸ್ಕರಿಸಿ “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ರಾಂಡ್ ಅಡಿಯಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸ್ಪರ್ಧಾತ್ಮಕ ಬೆಲೆಗಳಲ್ಲಿ ಕಳೆದ 05 ದಶಕಗಳಿಂದ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ. ಕೆಎಂಎಫ್ ಸಂಸ್ಥೆಯು “ನಂದಿನಿ” ಬ್ರಾಂಡ್‌ ಉತ್ಪನ್ನಗಳ ಮಾರಾಟವನ್ನು ಕರ್ನಾಟಕ ರಾಜ್ಯಕ್ಕೆ ಮಾತ್ರ ಸಿಮೀತಗೊಳಿಸದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲಿಯೂ ಸಹ ಮಾರಾಟ ಜಾಲ ವಿಸ್ತರಣೆಯನ್ನು ಸತತವಾಗಿ…

Read More