Author: kannadanewsnow09

ಬೆಂಗಳೂರು : ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics. ನಾನು good economics ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಉತ್ತರ ನೀಡಿದರು. 15 ನೇ ಹಣಕಾಸು ಆಯೋಗ ರಾಜ್ಯಕ್ಕೆ ಒಟ್ಟಾರೆ 11495 ಕೋಟಿ ರೂ. ಶಿಫಾರಸ್ಸು ಮಾಡಿದ್ದನ್ನು ರಾಜ್ಯಕ್ಕೆ ಒತ್ತಾಯಿಸಿ ತನ್ನಿ ಎಂದು ಅಂದಿನ ಸರ್ಕಾರಕ್ಕೆ ತಿಳಿಸಿದ್ದೆ. ಕೇಂದ್ರದ ಬಜೆಟ್ 2023-24 ರಲ್ಲಿ ಭದ್ರಾ ಮೇಲ್ದಂಡೆಗೆ 5300 ಕೋಟಿ ರೂ. ನೀಡಲಾಗುವುದು ಎಂದು ಹೇಳಿ ಇದಕ್ಕೆ ಯಾವುದೇ ಷರತ್ತುಗಳನ್ನು ಆಗ ಉಲ್ಲೇಖಿಸಿರಲಿಲ್ಲ. ಈ ಬಗ್ಗೆ ಆ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರೂ ಉಲ್ಲೇಖಿಸಿದ್ದಾರೆ. ಆದರೆ ಈ ವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಹೀಗಾಗಿ ಕೇಂದ್ರದಿಂದ 5300 ಕೋಟಿ ಸಹಾಯಧನವನ್ನು ಬೊಮ್ಮಾಯಿಯವರು ಕೊಡಿಸಲಿ ಎಂದು…

Read More

ವರದಿ: ವಸಂತ ಬಿ ಈಶ್ವರಗೆರೆ ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1 ಅನ್ನು ದಿನಾಂಕ 25-03-2024 ರಿಂದ 06-04-2024ರವರೆಗೆ ನಡೆಸಲಾಗುತ್ತಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಅನ್ನು ದಿನಾಂಕ 01-03-2024ರಿಂದ ದಿನಾಂಕ 22-03-2024ರವರೆಗೆ ನಡೆಸಲು ತಿರ್ಮಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕರು ಮಾಹಿತಿ ನೀಡಿದ್ದು,2024ರ ಎಸ್.ಎಸ್‌.ಎಲ್.ಸಿ. ಪರೀಕ್ಷೆ-Iನ್ನು ದಿನಾಂಕ: 25.03.2024 ರಿಂದ 06.04.2024ರವರೆಗೆ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ನ್ನು ದಿನಾಂಕ: 01.03.2024 ರಿಂದ 22.03.2024858 ನಡೆಸಲು ತೀರ್ಮಾನಿಸಿ, ಅಂತಿಮ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಜಿಲ್ಲಾ ಉಪನಿರ್ದೇಶಕರು (ಪ.ಪೂ.ಶಿ)ರವರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಅಂತಿಮ ವೇಳಾಪಟ್ಟಿಗಳನ್ನು…

Read More

ವರದಿ: ವಸಂತ ಬಿ ಈಶ್ವರಗೆರೆ ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಆ ಪರೀಕ್ಷೆಗಳು ವಿಷಯವಾರು ಈ ಕೆಳಗಿನ ದಿನಾಂಕದಂತೆ ನಡೆಯಲಿವೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಎಸ್‌ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್​ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಜೂನ್​ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು. ಅಲ್ಲದೆ, ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ. ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಪರೀಕ್ಷೆಗೆ ಹಾಜರಾಗಬೇಕು. ಮೂರು ಪರೀಕ್ಷೆಯಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ ಸರಣಿ ಪತ್ರ ಬರೆದಿರುವುದನ್ನು ವಿವರಿಸಿದರು. ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡುವ ವೇಳೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನರ ಪರವಾಗಿ, ರಾಜ್ಯದ ಪಾಲಿನ ಹಕ್ಕನ್ನು ಪಡೆದುಕೊಳ್ಳಲು ನಡೆಸಿದ ಪ್ರಯತ್ನಗಳನ್ನೆಲ್ಲಾ ಸದನಕ್ಕೆ ವಿವರಿಸಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ ನಾವು ಸಂಘರ್ಷಕ್ಕೆ ಇಳಿದಿಲ್ಲ. ರಾಜ್ಯದ ಪಾಲಿನ‌ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುವುದಿಲ್ಲ ಎಂದರು. ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು‌. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, “ನಿಮ್ಮ ಪತ್ರ ತಲುಪಿದೆ” ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ. ಕೇಂದ್ರದ ಅನುದಾನ…

Read More

ಬೆಂಗಳೂರು: ನಗರ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ವಿರುದ್ಧ ರಾಜ್ಯ ಸರ್ಕಾರದ ಕೆಂಗಣ್ಣು ಬೀರಿದೆ ಎನ್ನುವಂತೆ ಹೇಳಲಾಗುತ್ತಿದೆ. ಇದೀಗ ಅವರ ಅವಧಿಯಲ್ಲಿನ ವಿವಿಧ ನೇಮಕಾತಿ, ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸೋದಕ್ಕೆ ಸರ್ಕಾರ ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ. ಹಲವು ವರ್ಷಗಳ ಅವಧಿಯ ವರೆಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ.ಮಂಜುನಾಥ್ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರು ನಿರ್ದೇಶಕರ ಹುದ್ದೆಯಿಂದ ನಿವೃತ್ತರಾಗಿದ್ದರು. ಈ ಬೆನ್ನಲ್ಲೇ ಅವರ ಅವಧಿಯಲ್ಲಿ ನಡೆದ ನೇಮಕಾತಿ,ಮೈಸೂರು ಸೇರಿದಂತೆ ವಿವಿದೆಡೆ ನಿರ್ಮಿಸಲಾದ ಕಟ್ಟಡ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಜ್ಜಾಗುತ್ತಿದೆ ಎನ್ನಲಾಗುತ್ತಿದೆ. ಒಂದೆರಡು ದಿನಗಳಲ್ಲಿ ತನಿಖೆಗೆ ಆದೇಶ ಇತ್ತೀಚೆಗಷ್ಟೇ ಜಯದೇವ ಹೃದ್ರೋಗ ಸಂಸ್ಥೆಯ ಸೇವೆಯಿಂದ ಡಾ.ಮಂಜುನಾಥ್ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ಸಂಸತ್ ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಸಜ್ಜಾಗುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯಗಳಲ್ಲಿ ಹಬ್ಬಿರುವ ಕಾಲದಲ್ಲೇ ತನಿಖೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧದ ಕಡತಗಳನ್ನು ಹಗಲಿರುಳು ಅಧಿಕಾರಿಗಳು…

Read More

ಬೆಂಗಳೂರು : ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ , ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಗಾಳಿ ಇಲ್ಲದೆ ಕೆಟ್ಟು ನಿಂತಿರುವ ಬಸ್ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ನೀಡಿದ್ದ ಹೇಳಿಕೆಗೆ ಇಂದು ವಿಧಾನಸಭೆಯಲ್ಲಿ ಉತ್ತರ ನೀಡಿ ತಿರುಗೇಟು ನೀಡಿದರು. ನಮ್ಮ ಸರ್ಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಕಿಂತಲೂ ಹೆಚ್ಚಿನ ಹಾಲು ಉತ್ಪಾದನೆಯಾಗಿದೆ. 2023- 24 ರಲ್ಲಿ 84.41 ಲಕ್ಷ ಲೀಟರ್ ಹಾಲು ಹೆಚ್ಚು ಉತ್ಪಾದನೆಯಾಗಿದೆ ಎಂದು ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕರು ಪತ್ರದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು. ರೈತರಿಗೆ ನೀಡಬೇಕಿದ್ದ ಪ್ರೋತ್ಸಾಹ ಧನಕ್ಕಾಗಿ 2019 ರಿಂದ ಇಲ್ಲಿಯವರೆಗೆ 1178 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಈ ವರ್ಷ 1172 ಕೋಟಿ ರೂ.ಗಳಲ್ಲಿ 971 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ 3.00…

Read More

ಬೆಂಗಳೂರು: ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ನಡುವೆ ಕಾಟೇರಾ ಸಿನಿಮಾದ ಟೈಟಲ್ ವಿವಾದ ತಾರಕಕ್ಕೇರಿದೆ. ನಟ ದರ್ಶನ್ ಅಯ್ಯೋ ತಗಡೆ ರಾಬರ್ಟ್ ಟೈಟಲ್ ಕೊಟ್ಟಿದ್ದೇ ನಾನು ಅಂದರೇ, ನಿರ್ಮಾಪಕ ಉಮಾಪತಿ ಮಾತ್ರ ನಾನು ಈಗ ಏನು ಹೇಳಲ್ಲ. ಅವರ ಎತ್ತರಕ್ಕೆ ಬೆಳೆದಾಗ ಮಾತನಾಡುವೆ ಅಂತ ಹೇಳಿದ್ದಾರೆ. ಇಂದು ಕಾಟೇರ ಚಿತ್ರದ 50ನೇ ದಿನ ಸಂಭ್ರಮಾಚರಣೆಯಲ್ಲಿ ಬಾಗಿಯಾಗಿ ಮಾತನಾಡಿದಂತ ನಟ ದರ್ಶನ್ ಅವರು, ಕಾಟೇರ ಚಿತ್ರದ ಕತೆ ಹೇಳಿದ್ದು ನಾನು, ಟೈಟಲ್ ಕೊಟ್ಟಿದ್ದು ನಾನೇ ಎಂಬುದಾಗಿ ಹೇಳಿದಂತ ನಿರ್ಮಾಪಕ ಉಮಾಪತಿಗೆ ಅಯ್ಯೋ ತಗಡೇ, ನಿನಗೆ ರಾಬರ್ಟ್ ಕಥೆ ಕೊಟ್ಟಿದ್ದೇ ನಾನು ಎಂಬುದಾಗಿ ಖಡಕ್ ತಿರುಗೇಟು ನೀಡಿದ್ದಾರೆ. ಮುಂದುವರೆದು ಮಾತನಾಡಿದಂತ ಅವರು ಕೆಲವರು ಕಾಟೇರ ಚಿತ್ರದ ಕತೆ, ಟೈಟಲ್ ನಾನು ಕೊಟ್ಟಿದ್ದು ಅಂತ ಹೇಳಿಕೊಳ್ಳುತ್ತಿದ್ದಾರೆ. ಯಾಕಪ್ಪ ಬಂದು ಬಂದು ನನ್ನ ಹತ್ತಿರವೇ ಗುಮ್ಮಿಸಿಕೊಳ್ತೀಯಾ ಅಂತ ಪರೋಕ್ಷವಾಗಿ ನಿರ್ಮಾಪಕ ಉಮಾಪತಿ ಬಗ್ಗೆ ವಾಗ್ಧಾಳಿ ನಡೆಸಿದರು. ರಾಬರ್ಟ್ ಚಿತ್ರದ ಕತೆ ಕೊಟ್ಟಿದ್ದೇ ನಾನು. ನೀನು…

Read More

ಬೆಂಗಳೂರು: BMTC ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನಗರದ ಈ ಮಾರ್ಗದಲ್ಲಿ ವಾಯು ವಜ್ರ ಹಾಗೂ ಸಾಮಾನ್ಯ ಸಾರಿಗೆ ಬಸ್ ಸಂಚಾರವನ್ನು ನಿಗಮದಿಂದ ಪರಿಚಯಲಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವಾ ಸಂಸ್ಥೆಯು, ಬೆಂಗಳೂರು ನಗರ ಹಾಗೂ ಹೊರ ವಲಯದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸುವ ಧ್ಯೇಯದೊಂದಿಗೆ ಪ್ರಯಾಣಿಕರಿಗೆ ದಕ್ಷ, ಉತ್ತಮ, ಸುಲಭ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಹೊಣೆಗಾರಿಕೆಯಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25.0 ಕಿ.ಮೀ. ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಒದಗಿಸುವ ಏಕೈಕ ಸಾರಿಗೆ ಸಂಸ್ಥೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿದಿನ 5,584 ಬಸ್ಸುಗಳಿಂದ 57,820 ಸುತ್ತುವಳಿಗಳನ್ನು 11.40 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದಿದೆ. ಬೆಂಗಳೂರು ನಗರದ ಪ್ರಯಾಣಿಕರ…

Read More

ಬೆಂಗಳೂರು: ಕೇರಳ ರಾಜ್ಯದ ವಯನಾಡ್‍ನಲ್ಲಿ ಇತ್ತೀಚೆಗೆ ಆನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರಕಾರವು ರೂ. 15 ಲಕ್ಷ ಪರಿಹಾರವನ್ನು ಘೋಷಿಸಿದೆ. ಕಾಂಗ್ರೆಸ್ ಮುಖಂಡ, ಕೇರಳ ರಾಜ್ಯದ ಸಂಸದ ರಾಹುಲ್ ಗಾಂಧಿಯವರ ಆದೇಶದ ಮೇರೆಗೆ ಇಲ್ಲಿನ ರಾಜ್ಯ ಸರಕಾರ 15 ಲಕ್ಷ ಕೊಟ್ಟಿರುವುದನ್ನು ಬಿಜೆಪಿ ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಂದು ಕಡೆ ರಾಜ್ಯದಲ್ಲಿ ಬರಗಾಲವಿದ್ದು, ರೈತರಿಗೆ ಹೆಕ್ಟೇರಿಗೆ 2 ಸಾವಿರವನ್ನು ಭಿಕ್ಷೆಯಂತೆ ಕೊಡಲಾಗುತ್ತಿದೆ. ಇನ್ನೊಂದೆಡೆ ರಾಹುಲ್ ಗಾಂಧಿ, ಕಾಂಗ್ರೆಸ್ ಹೈಕಮಾಂಡನ್ನು ತೃಪ್ತಿಪಡಿಸಲು, ರಾಹುಲ್ ಗಾಂಧಿ ಹೇಳಿದ್ದಾರೆಂದು ನಮ್ಮ ರಾಜ್ಯದ ತೆರಿಗೆಯನ್ನು ದುರುಪಯೋಗಪಡಿಸಿಕೊಂಡದ್ದು ಖಂಡನೀಯ ಎಂದು ತಿಳಿಸಿದರು. ರಾಜ್ಯ ಸರಕಾರ ಯಾರನ್ನು ಕೇಳಿ ಇಂಥ ನಿರ್ಧಾರ ಮಾಡಿದೆ ಎಂದು ಪ್ರಶ್ನಿಸಿದ ಅವರು, ನಿಮ್ಮ ನಾಯಕರನ್ನು ಖುಷಿ ಪಡಿಸಲು ಏನು ಬೇಕಾದರೂ ನಿರ್ಧಾರ ಮಾಡಿದ್ದೀರಿÉ. ಹೇಳುವವರು ಕೇಳುವವರು ಯಾರೂ ಇದ್ದಂತಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು…

Read More

ಸಂಸಾರದಲ್ಲಿನ ಕಷ್ಟಗಳೆಲ್ಲ ನಿವಾರಣೆಯಾಗಲು ಮಾಡಬೇಕಾದ ಪೂಜೆಯೇ ಈ ಅಷ್ಟಲಕ್ಷ್ಮಿ ಪೂಜೆ. ಅಷ್ಟಲಕ್ಷ್ಮಿಯ ಆಶೀರ್ವಾದ ಸಿಕ್ಕರೆ ಸಾಕು. ನೀವು ಜೀವನದಲ್ಲಿ ಎಲ್ಲಾ ಕಷ್ಟಗಳನ್ನು ಕೊನೆಗೊಳಿಸಬಹುದು. ಆದರೆ ಈ ಅಷ್ಟಲಕ್ಷ್ಮಿಯರ ಆಶೀರ್ವಾದ ಪಡೆಯುವುದು ಸುಲಭದ ಮಾತಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…

Read More