Author: ವಸಂತ್‌ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಂಡ್ಯ : ಮದ್ದೂರು ಕ್ಷೇತ್ರದಲ್ಲಿ ಅಪೂರ್ಣ ಮತ್ತು ಹೊಸ ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಅನುದಾನ ನೀಡುವಂತೆ ಹಲವು ಬಾರಿ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಿದರು ಸಹ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಶಾಸಕ ಕೆ.ಎಂ.ಉದಯ್ ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಮದ್ದೂರು ತಾಲೂಕಿನ ಮಾಲಗಾರನಹಳ್ಳಿ ಹಾಗೂ ನಗರಕೆರೆ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ನಗರಕೆರೆ ಗ್ರಾಮದ ದಲಿತ ಮುಖಂಡರು ನಮ್ಮ ಗ್ರಾಮಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಶಾಸಕ ಉದಯ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭವನಗಳು ಅನುದಾನದ ಕೊರತೆಯಿಂದ ಅಪೂರ್ಣಗೊಂಡಿದ್ದು, ಹೀಗಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರಿಗೆ ಅನುದಾನ ಬಿಡುಗಡೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸಹ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಮತ್ತೋಮ್ಮೆ ಸಚಿವರನ್ನು ಭೇಟಿ ಮಾಡಿ ಅಪೂರ್ಣ…

Read More

ನೀವು ರೂ.10,000 ಗಳಿಸಬಹುದು ಮತ್ತು ಕೆಲವೇ ದಿನಗಳಲ್ಲಿ ನಿಮ್ಮ ಆದಾಯವನ್ನು ರೂ.15,000 ಅಥವಾ ರೂ.20,000 ಕ್ಕೆ ಹೆಚ್ಚಿಸಲು ಬಯಸಿದರೆ, ನೀವು ಈ ತಾಂತ್ರಿಕ ಪರಿಹಾರವನ್ನು ಪ್ರಯತ್ನಿಸಬಹುದು. ಇದೊಂದು ಉದಾಹರಣೆಯಷ್ಟೆ. ನೀವು ಗಳಿಸುವ ಯಾವುದೇ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಲು ಈ ಪರಿಹಾರವು ಸಹಾಯ ಮಾಡುತ್ತದೆ. ಎಲ್ಲಾ ತಾಂತ್ರಿಕವು ಆಧ್ಯಾತ್ಮಿಕತೆಯ ಪರಿಹಾರವಾಗಿದೆ. ಆದ್ದರಿಂದ ನೀವು ನಿಮ್ಮ ಕುಲದೇವತೆಗಾಗಿ ಈ ಪರಿಹಾರವನ್ನು ಮಾಡಲಿದ್ದೀರಿ. ಇದು ತುಂಬಾ ಸರಳವಾದ ಪರಿಹಾರವಾಗಿದೆ. ಶುಕ್ರವಾರದಂದು ಈ ಪರಿಹಾರವನ್ನು ಮಾಡುವುದು ವಿಶೇಷ. ಶುಕ್ರವಾರ ಮಾಡಲಾಗದವರು ಹುಣ್ಣಿಮೆಯ ದಿನ ಸಂಜೆ 6 ಗಂಟೆಯ ನಂತರ ಮನೆಯಲ್ಲಿ ದೀಪವನ್ನು ಹಚ್ಚಿ ಈ ಪರಿಹಾರವನ್ನು ಮಾಡಬಹುದು. ಖರೀದಿಸಿದ ಹಣವನ್ನು ಹಲವು ಪಟ್ಟು ಹೆಚ್ಚಿಸುವ ಮಾಂತ್ರಿಕತೆ ಏನು ಎಂಬುದನ್ನು ನಾವೂ ತಿಳಿದುಕೊಳ್ಳೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು…

Read More

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡ ಮತ್ತಷ್ಟು ಕಪ್ಪಾಗುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸರಣಿ ಡೆಡ್‌ಲೈನ್‌ಗಳು ಇಡೀ ಜಗತ್ತನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದೆ. ಇರಾನ್‌ನ ಪ್ರಮುಖ ಜಲಸಂಧಿಯಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ (Strait of Hormuz) ಅನ್ನು ಮುಕ್ತಗೊಳಿಸಲು ಟ್ರಂಪ್ ನೀಡಿದ್ದ 48 ಗಂಟೆಗಳ ಗಡುವು ಈಗ ಬರೋಬ್ಬರಿ 408 ಗಂಟೆಗಳಿಗೆ ವಿಸ್ತರಣೆಯಾಗಿದ್ದು, ಇಂದಿನ (ಏಪ್ರಿಲ್ 7) ಗಡುವು ಅಂತಿಮವೇ ಎಂಬ ಪ್ರಶ್ನೆ ಮೂಡಿದೆ. ಬಾಂಬ್ ಎಚ್ಚರಿಕೆ ಮತ್ತು ಸರಣಿ ವಿಳಂಬ ಮಾರ್ಚ್ 22 ರಂದು ಟ್ರಂಪ್ ತಮ್ಮ ಮೊದಲ ಗಂಭೀರ ಎಚ್ಚರಿಕೆ ನೀಡಿದ್ದರು. “ಇರಾನ್ ತಕ್ಷಣವೇ ಜಲಸಂಧಿಯನ್ನು ತೆರೆಯದಿದ್ದರೆ, ಅಲ್ಲಿನ ಅತಿದೊಡ್ಡ ವಿದ್ಯುತ್ ಸ್ಥಾವರಗಳಿಂದ ಹಿಡಿದು ಇಂಧನ ಕೇಂದ್ರಗಳವರೆಗೆ ಎಲ್ಲವನ್ನೂ ಧ್ವಂಸ ಮಾಡುತ್ತೇವೆ” ಎಂದು ಗುಡುಗಿದ್ದರು. ಆದರೆ, ಅಂದಿನಿಂದ ಇಂದಿನವರೆಗೆ ಟ್ರಂಪ್ ಮೂರು ಬಾರಿ ಗಡುವನ್ನು ವಿಸ್ತರಿಸುವ ಮೂಲಕ ಜಗತ್ತನ್ನು ಅಚ್ಚರಿಯಲ್ಲಿ ಹಾಕಿದ್ದಾರೆ. ಟ್ರಂಪ್ ಅವರ ‘ವಾರ್ ಗೇಮ್’ ಸಾಗಿಬಂದ ಹಾದಿ: ಮಾರ್ಚ್ 22:…

Read More

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ತಾರಕಕ್ಕೇರಿದೆ. ಇರಾನ್‌ನ ಪ್ರಮುಖ ಜಲಸಂಧಿಯಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ (Strait of Hormuz) ಅನ್ನು ಮುಕ್ತಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವನ್ನು ಮಂಗಳವಾರದವರೆಗೆ ವಿಸ್ತರಿಸಿದ್ದಾರೆ. ಆದರೆ, ಇದೇ ವೇಳೆ ಇರಾನ್‌ನ ಇಂಧನ ಕೇಂದ್ರಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಭೀಕರ ದಾಳಿ ನಡೆಸುವುದಾಗಿ ಅವರು ತೀವ್ರ ಎಚ್ಚರಿಕೆ ನೀಡಿದ್ದಾರೆ. 48 ಗಂಟೆಗಳ ಗಡುವು ಈಗ 408 ಗಂಟೆಗಳಿಗೆ ವಿಸ್ತರಣೆ! ಟ್ರಂಪ್ ಅವರು ಇರಾನ್‌ಗೆ ನೀಡುತ್ತಿರುವ ಗಡುವುಗಳನ್ನು ಪದೇ ಪದೇ ವಿಸ್ತರಿಸುತ್ತಾ ಬಂದಿದ್ದಾರೆ. ಆರಂಭದಲ್ಲಿ ಕೇವಲ 48 ಗಂಟೆಗಳ ಕಾಲಾವಕಾಶ ನೀಡಿದ್ದ ಟ್ರಂಪ್, ನಂತರ ಅದನ್ನು ಮೂರು ಬಾರಿ ಮುಂದೂಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಈ ಗಡುವು ಏಪ್ರಿಲ್ 7ರ ಮಂಗಳವಾರ ರಾತ್ರಿ (ಅಮೆರಿಕ ಕಾಲಮಾನ 8 ಗಂಟೆಗೆ) ಅಂತ್ಯಗೊಳ್ಳಲಿದೆ. ಮೂಲ 48 ಗಂಟೆಗಳ ಗಡುವು ಈಗ ಒಟ್ಟು 408 ಗಂಟೆಗಳವರೆಗೆ ವಿಸ್ತರಣೆಯಾದಂತಾಗಿದೆ. “ಮಂಗಳವಾರ ಇರಾನ್ ಪಾಲಿಗೆ ವಿದ್ಯುತ್ ಸ್ಥಾವರಗಳ…

Read More

ನವದೆಹಲಿ: ಪ್ರಸಕ್ತ ತಿಂಗಳಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಆದೇಶ ಹೊರಡಿಸಿದೆ. ಏಪ್ರಿಲ್ 9ರ ಬೆಳಿಗ್ಗೆ 7 ಗಂಟೆಯಿಂದ ಏಪ್ರಿಲ್ 29ರ ಸಂಜೆ 6.30ರವರೆಗೆ ಯಾವುದೇ ರೀತಿಯ ‘ಎಕ್ಸಿಟ್ ಪೋಲ್’ (ಮತದಾನೋತ್ತರ ಸಮೀಕ್ಷೆ)ಗಳನ್ನು ನಡೆಸುವುದಾಗಲಿ ಅಥವಾ ಅವುಗಳ ಫಲಿತಾಂಶವನ್ನು ಪ್ರಸಾರ ಮಾಡುವುದಾಗಲಿ ಮಾಡುವಂತಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಖಚಿತ! ಚುನಾವಣಾ ಆಯೋಗದ ಈ ಆದೇಶವನ್ನು ಮೀರಿ ಸಮೀಕ್ಷೆಗಳನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 126A ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಈ ನಿಯಮವನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ, ಇಲ್ಲವೇ ಎರಡನ್ನೂ ವಿಧಿಸಲಾಗುವುದು ಎಂದು ಆಯೋಗ ಎಚ್ಚರಿಕೆ ನೀಡಿದೆ. https://twitter.com/ECISVEEP/status/2041087447891874251 ಚುನಾವಣಾ ವೇಳಾಪಟ್ಟಿ ಮತ್ತು ಸ್ಥಿತಿಗತಿ: ಏಪ್ರಿಲ್ 9: ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 23: ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 23…

Read More

ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ (LPG) ಮತ್ತು ಸಿಎನ್‌ಜಿ (CNG) ಬಂಕ್‌ಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಎಚ್ಚರಿಕೆ ನೀಡಿದ್ದಾರೆ. ಗ್ರಾಹಕರಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದ್ದು, ನಿಯಮ ಮೀರುವವರ ವಿರುದ್ಧ ‘ಅಗತ್ಯ ವಸ್ತುಗಳ ಕಾಯ್ದೆ’ ಅಡಿಯಲ್ಲಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಪ್ರಮುಖ ಮುಖ್ಯಾಂಶಗಳು: ನಿಗದಿತ ದರದಲ್ಲೇ ಮಾರಾಟ ಕಡ್ಡಾಯ: ಸರ್ಕಾರ ಮತ್ತು ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಇಂಧನವನ್ನು ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ. ದರ ಪ್ರದರ್ಶನ ಫಲಕ ಕಡ್ಡಾಯ: ಪ್ರತಿ ಬಂಕ್‌ನಲ್ಲಿ ತೈಲ ಕಂಪನಿಗಳು ನಿಗದಿಪಡಿಸಿದ ದರದ ವಿವರವನ್ನು ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು. ಖಾಸಗಿ ಸಂಸ್ಥೆಗಳ ಬಂಕ್‌ಗಳಿಗೂ ಈ ನಿಯಮ ಅನ್ವಯವಾಗಲಿದೆ. ಕಟ್ಟುನಿಟ್ಟಿನ ಕಾನೂನು ಕ್ರಮ: ಒಂದು…

Read More

ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಇದೆಯೇ ಎಂಬುದನ್ನು ಪರಿಶೀಲಿಸಿದ ಅವರು ರೋಗಿಗಳೊಂದಿಗೆ ಕೇಂದ್ರದಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾತನಾಡಿದರು. ಬಳಿಕ ಹತ್ತಿರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮೊದಲು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಖುದ್ದಾಗಿ ಪರಿಶೀಲನೆ ನಡೆಸಿದರು. ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಶುಚಿಗೊಳಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು. ನಿಲಯದ ಆವರಣ ಮತ್ತು ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ: ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಓದಿಗೆ ಪೂರಕವಾದ ವಾತಾವರಣವಿದೆಯೇ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿದೆಯೇ ಎಂದು ವಿಚಾರಿಸಿದರು. https://kannadanewsnow.com/kannada/modern-lhb-coaches-to-be-installed-in-talaguppa-mysore-express-from-tomorrow/…

Read More

ಮೈಸೂರು: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಅತ್ಯಾಧುನಿಕ ಲಿಂಕ್ ಹಾಫ್ಮನ್ ಬುಶ್ (LHB) ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ. ಈ ಹೊಸ ಸುಧಾರಿತ ಬೋಗಿಗಳ ಸೇವೆಯು ಏಪ್ರಿಲ್ 8, 2026 ರಿಂದ ತಾಳಗುಪ್ಪ ಮತ್ತು ಮೈಸೂರು ಎರಡೂ ನಿಲ್ದಾಣಗಳಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ. ಈ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯ ನಂತರ ಈ ರೈಲು ಒಟ್ಟು 18 ಎಲ್ಎಚ್’ಬಿ ಬೋಗಿಗಳೊಂದಿಗೆ ಸಂಚರಿಸಲಿದೆ. ಇದರಲ್ಲಿ ಒಂದು ಎಸಿ ಚೇರ್ ಕಾರ್, ಐದು ದ್ವಿತೀಯ ದರ್ಜೆ ಚೇರ್ ಕಾರ್ ಬೋಗಿಗಳು ಹಾಗೂ ಹತ್ತು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಇರಲಿವೆ. ಇದರೊಂದಿಗೆ ದಿವ್ಯಾಂಗ ಸ್ನೇಹಿ ಸೌಲಭ್ಯವನ್ನು ಹೊಂದಿರುವ ದ್ವಿತೀಯ ದರ್ಜೆ ಮತ್ತು ಲಗೇಜ್ ಬ್ರೇಕ್ ವ್ಯಾನ್ ಹಾಗೂ ಇನ್ನೊಂದು ಲಗೇಜ್-ಕಮ್-ಬ್ರೇಕ್ ವ್ಯಾನ್ ಈ ರೈಲಿನ ಸಂಯೋಜನೆಯಲ್ಲಿ ಇರಲಿವೆ. ಈ ಆಧುನಿಕೀಕರಣದಿಂದಾಗಿ ಪ್ರಯಾಣಿಕರು ಇನ್ನು ಮುಂದೆ ಮೈಸೂರು ಮತ್ತು ತಾಳಗುಪ್ಪ ನಡುವೆ ಸುಲಲಿತ, ಸುರಕ್ಷಿತ…

Read More

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ, ಮತದಾನದ ದಿನವಾದ ಏಪ್ರಿಲ್ 9, 2026 (ಗುರುವಾರ) ರಂದು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕರ್ನಾಟಕ ಸರ್ಕಾರವು ‘ವೇತನ ಸಹಿತ ರಜೆ’ ಘೋಷಿಸಿ ಆದೇಶ ಹೊರಡಿಸಿದೆ. ರಜೆ ಘೋಷಣೆಯಾಗಿರುವ ಕ್ಷೇತ್ರಗಳು: 24-ಬಾಗಲಕೋಟೆ ವಿಧಾನಸಭಾ ಕ್ಷೇತ್ರ. 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ. ಯಾರಿಗೆಲ್ಲ ರಜೆ ಅನ್ವಯಿಸುತ್ತದೆ? ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಈ ಕೆಳಗಿನ ಸಂಸ್ಥೆಗಳಿಗೆ ರಜೆ ಅನ್ವಯಿಸಲಿದೆ: ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು. ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ). ರಾಷ್ಟ್ರೀಯಕೃತ ಬ್ಯಾಂಕುಗಳು, ಜೀವ ವಿಮಾ ನಿಗಮ (LIC) ಮತ್ತು ಹಣಕಾಸು ಸಂಸ್ಥೆಗಳು. ವ್ಯಾಪಾರ, ಕೈಗಾರಿಕಾ ಸಂಸ್ಥೆಗಳು ಹಾಗೂ ಇನ್ನಿತರೆ ಉದ್ಯಮಗಳಲ್ಲಿ (Business, trade, industrial undertaking or any other establishment) ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ. ಪ್ರಮುಖ ಅಂಶಗಳು: ವೇತನ ಸಹಿತ ರಜೆ: ಈ ರಜೆಯು ವೇತನ ಸಹಿತವಾಗಿದ್ದು, ಮತದಾನ…

Read More

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ವಲಸೆ ಕಾರ್ಮಿಕರಿಗೆ ವಿತರಿಸಲಾಗುವ 5 ಕೆಜಿಯ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ದೈನಂದಿನ ಪ್ರಮಾಣವನ್ನು ದುಪ್ಪಟ್ಟುಗೊಳಿಸಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶಿಸಿದೆ. ಈ ಕುರಿತು ಸಚಿವಾಲಯದ ಕಾರ್ಯದರ್ಶಿ ಡಾ. ನೀರಜ್ ಮಿತ್ತಲ್ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಪತ್ರ ಬರೆದಿದ್ದಾರೆ. https://twitter.com/ANI/status/2041462076044870027 ಸುದ್ದಿಯ ಮುಖ್ಯಾಂಶಗಳು: ಪೂರೈಕೆ ಪ್ರಮಾಣ ಹೆಚ್ಚಳ: ಈ ಹಿಂದೆ ಮಾರ್ಚ್ 21, 2026 ರಂದು ನೀಡಿದ್ದ ಪತ್ರದಲ್ಲಿ ವಿಧಿಸಲಾಗಿದ್ದ ಶೇ. 20 ರಷ್ಟು ಮಿತಿಯನ್ನು ಮೀರಿ, ಈಗ ಸಿಲಿಂಡರ್‌ಗಳ ಪ್ರಮಾಣವನ್ನು ಹೆಚ್ಚಿಸಲಾಗಿದೆ. 2026ರ ಮಾರ್ಚ್ 2 ಮತ್ತು 3ರ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಸರಬರಾಜು ಮಾಡಲಾದ ಸರಾಸರಿ ದೈನಂದಿನ ಪ್ರಮಾಣವನ್ನು ಆಧರಿಸಿ ಈ ಕೋಟಾವನ್ನು ದುಪ್ಪಟ್ಟುಗೊಳಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರಗಳ ವಿವೇಚನೆಗೆ: ಹೆಚ್ಚುವರಿ 5 ಕೆಜಿ ಎಫ್‌ಟಿಎಲ್ ಸಿಲಿಂಡರ್‌ಗಳು…

Read More