Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಇರಾನ್ನಿಂದ ಕಚ್ಚಾ ತೈಲವನ್ನು ಖರೀದಿಸಿದೆ ಎಂಬ ಕೆಲವು ಮಾಧ್ಯಮಗಳ ಇತ್ತೀಚಿನ ವರದಿಗಳನ್ನು ಸಂಸ್ಥೆಯು ನಿರಾಕರಿಸಿದೆ. ಇಂಥ ವರದಿಗಳು ನಿರಾಧಾರವಾಗಿದ್ದು, ತಪ್ಪು ಮಾಹಿತಿಯನ್ನು ಒಳಗೊಂಡಿದೆ. ಹಾಗೂ ದಿಕ್ಕು ತಪ್ಪಿಸುವಂಥದ್ದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಸ್ಪಷ್ಟಪಡಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯನ್ನು ನಿಯಂತ್ರಿಸುವ ಸಲುವಾಗಿ ಅಮೆರಿಕವು ಇರಾನ್ ವಿರುದ್ಧದ ತನ್ನ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಿಲಯನ್ಸ್ ಇರಾನ್ ಮೂಲದಿಂದ ಕಚ್ಚಾ ತೈಲವನ್ನು ಖರೀದಿಸಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದು ಸಂಪೂರ್ಣ ಆಧಾರ ರಹಿತ ಎಂದು ರಿಲಯನ್ಸ್ ಇಂಡಸ್ಟ್ರೀಸ್ ತಿಳಿಸಿದೆ. https://kannadanewsnow.com/kannada/ppf-vs-sip-which-one-will-give-the-highest-return-if-you-invest-rs-1-lakh-per-month-for-10-years-here-is-the-information/ https://kannadanewsnow.com/kannada/breaking-2026-ipl-opening-ceremony-cancelled-in-honour-of-bengaluru-stampede-victims/
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ನ (IPL) 19ನೇ ಆವೃತ್ತಿಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. 2026ರ ಮಾರ್ಚ್ 28ರಿಂದ ಆರಂಭವಾಗಲಿರುವ ಈ ಟೂರ್ನಿಯು ಮೇ 31ರವರೆಗೆ ನಡೆಯಲಿದ್ದು, ಒಟ್ಟು 70 ಲೀಗ್ ಹಂತದ ಪಂದ್ಯಗಳಿಗೆ ಸಾಕ್ಷಿಯಾಗಲಿದೆ. ವಿಶೇಷವೆಂದರೆ, ಟೂರ್ನಿಯ ಉದ್ಘಾಟನಾ ಪಂದ್ಯ ಮತ್ತು ಮಹತ್ವದ ಫೈನಲ್ ಪಂದ್ಯ ಎರಡೂ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಟೂರ್ನಿ ಆರಂಭ: ಮಾರ್ಚ್ 28, 2026. ಅಂತಿಮ ಪಂದ್ಯ: ಮೇ 31, 2026 (ಬೆಂಗಳೂರು). ಉದ್ಘಾಟನಾ ಪಂದ್ಯ: ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) vs ಸನ್ರೈಸರ್ಸ್ ಹೈದರಾಬಾದ್. ಸಮಯ: ಸಂಜೆ ಪಂದ್ಯಗಳು 7:30ಕ್ಕೆ ಮತ್ತು ಮಧ್ಯಾಹ್ನದ ಪಂದ್ಯಗಳು 3:30ಕ್ಕೆ ಆರಂಭವಾಗಲಿವೆ. ತಂಡಗಳು ಮತ್ತು ನಾಯಕರು: ಈ ಬಾರಿಯ ಟೂರ್ನಿಯಲ್ಲಿ ಹಲವು ತಂಡಗಳ ನಾಯಕತ್ವದಲ್ಲಿ ಬದಲಾವಣೆ ಕಂಡುಬಂದಿದೆ: ಆರ್ಸಿಬಿ: ರಜತ್ ಪಾಟಿದಾರ್. ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ. ಸಿಎಸ್ಕೆ: ಋತುರಾಜ್ ಗಾಯಕ್ವಾಡ್. ಕೆಕೆಆರ್: ಅಜಿಂಕ್ಯ ರಹಾನೆ. ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್. ರಾಜಸ್ಥಾನ್ ರಾಯಲ್ಸ್:…
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಶೀಘ್ರದಲ್ಲೇ ಎರಡನೇ ಹಂತದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಸಂಪೂರ್ಣ ಪಾರದರ್ಶಕವಾಗಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಪಾರದರ್ಶಕತೆಗೆ ಆದ್ಯತೆ: ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಆರಂಭಿಕ ದಿನಗಳಲ್ಲೇ ಸುಮಾರು 5,700 ಸಿಬ್ಬಂದಿಗಳನ್ನು ಕೌನ್ಸಿಲಿಂಗ್ ಮೂಲಕ ನೇರ ವರ್ಗಾವಣೆ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗ ಎರಡನೇ ಹಂತದ ಪ್ರಕ್ರಿಯೆ ನಡೆಯಲಿದೆ. ವೈದ್ಯರು, ಶುಶ್ರೂಷಕರು (ನರ್ಸ್), ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ ವಿವಿಧ ದರ್ಜೆಯ ಸಿಬ್ಬಂದಿಗಳನ್ನು ಖಾಲಿ ಇರುವ ಹಾಗೂ ಅಗತ್ಯವಿರುವ ಸೂಕ್ತ ಸ್ಥಳಗಳಿಗೆ ನಿಯೋಜಿಸಲಾಗುವುದು ಎಂದು ಸಚಿವರು ವಿವರಿಸಿದರು. ವಿಶೇಷ ಪ್ರಕರಣಗಳಿಗೆ ಆದ್ಯತೆ: ಈ ವರ್ಗಾವಣೆ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದೆ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಆದರೆ, ಕೆಲವು ಅತ್ಯಂತ ಅನಿವಾರ್ಯ ಮತ್ತು ಆಯ್ದ ಪ್ರಕರಣಗಳಿಗೆ ಮಾತ್ರ ಮಾನವೀಯ ದೃಷ್ಟಿಯಿಂದ ವಿಶೇಷ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಸೇವಾ ಸೌಲಭ್ಯ ವಿಸ್ತರಣೆಯೇ ಗುರಿ: ಇಲಾಖೆಯ ಕಾರ್ಯಚಟುವಟಿಕೆಗಳು ಯಾವುದೇ…
ಆಂಧ್ರಪ್ರದೇಶ: ಇಲ್ಲಿನ ಮಾರ್ಕಾಪುರಂ ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 13 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಘಟನೆಯ ವಿವರ: ಖಾಸಗಿ ಬಸ್ವೊಂದು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ. ಸಜೀವ ದಹನ: ಬಸ್ನಲ್ಲಿ ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗದೆ 13 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಮೃತರ ದೇಹಗಳು ಗುರುತಿಸಲಾಗದಷ್ಟು ಸುಟ್ಟು ಹೋಗಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಅಪಘಾತದ ಸಮಯದಲ್ಲಿ ಬಸ್ನಲ್ಲಿ ಸುಮಾರು 27ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ: ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಗಂಭೀರವಾಗಿ…
ಬೆಂಗಳೂರು: ಸಿಲಿಕಾನ್ ಸಿಟಿಯ ಹೊರವಲಯದ ನೆಲಮಂಗಲದ ವೈದ್ಯಕೀಯ ಕಾಲೇಜೊಂದರಲ್ಲಿ ಸಿನಿಮಾ ಮಾದರಿಯ ನಾಟಕೀಯ ಘಟನೆಯೊಂದು ನಡೆದಿದ್ದು, ವಿದ್ಯಾರ್ಥಿನಿಗೆ ಬಹಿರಂಗವಾಗಿ ಪ್ರೇಮ ನಿವೇದನೆ ಮಾಡಿದ ಪ್ರೊಫೆಸರ್ ಒಬ್ಬರಿಗೆ ವಿದ್ಯಾರ್ಥಿಗಳು ಚಪ್ಪಲಿಯಿಂದ ಹಿಗ್ಗಾಮುಗ್ಗಾ ತಳಿಸಿದ ಘಟನೆ ನಡೆದಿದೆ. ಕಾಲೇಜಿನ ಉಪನ್ಯಾಸದ ವೇಳೆ ಲ್ಯಾಪೆಲ್ ಮೈಕ್ರೊಫೋನ್ ಧರಿಸಿದ್ದ ಪ್ರೊಫೆಸರ್, ಹಠಾತ್ತನೆ ಪಾಠ ನಿಲ್ಲಿಸಿ “ನಮ್ಮ ಬ್ಯಾಚ್ನ ಅತ್ಯಂತ ಪ್ರಮುಖ ಹುಡುಗಿಯೊಬ್ಬಳಿಗೆ ನಾನು ಪ್ರಪೋಸ್ ಮಾಡಲು ಬಯಸುತ್ತೇನೆ” ಎಂದು ಹೇಳಿ ತನ್ನ ಪ್ರೇಮವನ್ನು ವ್ಯಕ್ತಪಡಿಸಿದ್ದಾರೆ. ಪ್ರೊಫೆಸರ್ ಅವರ ಈ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿ ತಕ್ಷಣವೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಡೀ ತರಗತಿಯ ಮುಂದೆಯೇ ವಾಗ್ವಾದ ನಡೆದಿದೆ. https://twitter.com/Vtxt21/status/2037087514230685832 ಜಗಳದ ವೇಳೆ ಪ್ರೊಫೆಸರ್ “ನೀನೇ ನನಗೆ ಐ ಲವ್ ಯು ಎಂದು ಹೇಳಿದ್ದೆ” ಎಂದು ಆರೋಪಿಸಿದ್ದು, ಇದನ್ನು ಸಾರಾಸಗಟಾಗಿ ನಿರಾಕರಿಸಿದ ವಿದ್ಯಾರ್ಥಿನಿ “ನಾನು ಎಂದೂ ಹಾಗೆ ಹೇಳಿಲ್ಲ, ಧೈರ್ಯವಿದ್ದರೆ ಪ್ರಾಂಶುಪಾಲರ ಬಳಿ ಹೋಗೋಣ ನಡೆ” ಎಂದು ಸವಾಲು ಹಾಕಿದ್ದಾರೆ. ತಾನು ಹೇಳುತ್ತಿರುವುದು ಸತ್ಯ ಮತ್ತು ಇದಕ್ಕೆ ಸಿಸಿಟಿವಿ ದೃಶ್ಯಾವಳಿಗಳ…
ಬೆಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್ಲೈನ್ನಲ್ಲಿ ಹಾಗೂ ಪೇಟಿಎಂ/ನೆಟ್ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಶಿವಮೊಗ್ಗ ಒನ್ ವ್ಯವಸ್ಥೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ. ವಿಶೇಷವಾಗಿ 2026-27 ರ ಖಾತೆದಾರರಿಗೆ ಇಡಿಸಿ (ಪಿಓಎಸ್) ಯಂತ್ರಗಳ ಮೂಲಕ ಸ್ವತಿನ ಆಸ್ತಿ ತೆರಿಗೆಯನ್ನು ಪಾವತಿಸಿದ ರಸೀದಿಯನ್ನು ನೀಡಲಾಗುತ್ತದೆ. ಏ.30 ರವರೆಗೆ ಆರ್ಥಿಕ ವರ್ಷ 2026-27 ನೇ ಸಾಲಿಗೆ ಅನ್ವಯಿಸುವ ಆಸ್ತಿ ತೆರಿಗೆ ಮೇಲಿನ ಶೇ. 5% ರ ತೆರಿಗೆ ರಿಯಾಯಿತಿಯ ಸೌಲಭ್ಯದ ಕಾಲಾವಧಿ ಇರುತ್ತದೆ. ಜೂನ್ 30ರವೆಗೆ ದಂಡರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿರುತ್ತದೆ. ಜು. 01 ರ ನಂತರ ಪಾವತಿಸಿದಲ್ಲಿ ಮಾಸಿಕ ಶೇ. 2% ರಷ್ಟು ದಂಡದೊಂದಿಗೆ ಪಾವತಿಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರು ಏಪ್ರಿಲ್ 2026ರ ಅವಧಿಯಲ್ಲಿ…
ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣವು ಈಗ ಕುತೂಹಲಕಾರಿ ಘಟ್ಟಕ್ಕೆ ತಲುಪಿದ್ದು, ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಪೂರ್ಣಗೊಂಡಿದೆ. ಏಪ್ರಿಲ್ 9ರಂದು ಈ ಪ್ರಮುಖ ಉಪಚುನಾವಣೆ ನಡೆಯಲಿದ್ದು, ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ ಸೇರಿದಂತೆ ಒಟ್ಟು ಐವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಇದು ರಾಜಕೀಯ ಲೆಕ್ಕಾಚಾರಗಳಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಗೋವಿಂದರಾಜ ಬಳ್ಳಾರಿ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿಗೆ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ಇವರ ಜೊತೆಗೆ ಅಯೂಬ್ ಖಾನ್ ಬಾಗೇವಾಡಿ, ಅಬ್ದುಲ್ ರಜಾಕ್ ಬಾಳೆಕಾಯಿ, ಯಂಕಪ್ಪ ಕಮತಗಿ ಹಾಗೂ ಪ್ರಶಾಂತ್ ಅವರು ಕೂಡ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಈ ಐವರು ಅಭ್ಯರ್ಥಿಗಳ ನಿರ್ಗಮನದ ನಂತರ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಅಂತಿಮ ಕಣವು ಈಗ ಸಿದ್ಧವಾಗಿದೆ. ಪ್ರಸ್ತುತ ಕಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ನ ಪ್ರಮುಖ ಅಭ್ಯರ್ಥಿಗಳು ಸೇರಿದಂತೆ ಒಟ್ಟು 9 ಮಂದಿ ಅಭ್ಯರ್ಥಿಗಳು ಚುನಾವಣಾ ಅದೃಷ್ಟ ಪರೀಕ್ಷೆಗೆ…
ಬೆಂಗಳೂರು: ಪವರ್ಪ್ಲೇ ಇಂದು ಭಾರತದ ಮೊದಲ AI ಕಾರ್ಯಪಡೆ ವೇದಿಕೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ, ಅಂದಾಜು, ಸಂಗ್ರಹಣೆ, ಹಣಕಾಸು ಮತ್ತು ಯೋಜನಾ ನಿರ್ವಹಣೆಯಾದ್ಯಂತ ಪ್ರಮುಖ ಕಾರ್ಯಪ್ರವಾಹಗಳನ್ನು ಸ್ವಯಂಚಾಲಿತಗೊಳಿಸಲು ವಿನ್ಯಾಸಗೊಳಿಸಲಾದ ಐದು ಡೊಮೇನ್-ತರಬೇತಿ ಪಡೆದ AI ಏಜೆಂಟ್ಗಳನ್ನು ಪರಿಚಯಿಸುತ್ತದೆ. ಪವರ್ಪ್ಲೇ ತನ್ನ ಗ್ರಾಹಕರ ನೆಲೆಯಲ್ಲಿ AI-ಚಾಲಿತ ಸೇವೆಗಳ ಹೆಚ್ಚಿದ ಅಳವಡಿಕೆಯಿಂದ FY2027 ರಲ್ಲಿ ಆದಾಯವು 500% ರಷ್ಟು ಬೆಳೆಯಲಿದೆ ಎಂದು ಯೋಜಿಸಿದೆ. ವೇದಿಕೆಯ ಆರಂಭಿಕ ನಿಯೋಜನೆಗಳು ಅಳೆಯಬಹುದಾದ ಕಾರ್ಯಾಚರಣೆಯ ಪರಿಣಾಮವನ್ನು ಪ್ರದರ್ಶಿಸಿವೆ, ಇದರಲ್ಲಿ ಅಂದಾಜು ಸಮಯಾವಧಿಯನ್ನು ವಾರಗಳಿಂದ ನಿಮಿಷಗಳಿಗೆ ಕಡಿಮೆ ಮಾಡುವುದು ಮತ್ತು ಪ್ರಮುಖ ಯೋಜನಾ ಕಾರ್ಯಪ್ರವಾಹಗಳಲ್ಲಿ 50-60% ಉತ್ಪಾದಕತೆಯ ಲಾಭವನ್ನು ನೀಡುವುದು ಸೇರಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಪವರ್ಪ್ಲೇನ ಸಾಫ್ಟ್ವೇರ್ ಬಳಸಿ ಕಾರ್ಯಗತಗೊಳಿಸಲಾದ 85,000 ಕ್ಕೂ ಹೆಚ್ಚು ನಿರ್ಮಾಣ ಯೋಜನೆಗಳಿಂದ ಉತ್ಪತ್ತಿಯಾಗುವ ಕಾರ್ಯಾಚರಣೆಯ ಡೇಟಾದ ಮೇಲೆ ವೇದಿಕೆಯನ್ನು ನಿರ್ಮಿಸಲಾಗಿದೆ. ಆ ಡೇಟಾಸೆಟ್: ಪ್ರಮಾಣಗಳ ಬಿಲ್ಗಳು, ಸಂಗ್ರಹಣೆ ಚಕ್ರಗಳು, ಬಿಲ್ಲಿಂಗ್ ಕಾರ್ಯಪ್ರವಾಹಗಳು ಮತ್ತು ಅನುಸರಣೆ ದಾಖಲೆಗಳನ್ನು ವ್ಯಾಪಿಸುವುದು – ಕಂಪನಿಯು ಈಗ ತನ್ನ AI…
ಮಕ್ಕಳಿಗೆ ಬ್ರಹ್ಮೋಪದೇಶದಲ್ಲಿ ತಂದೆ ಗುರಸ್ಥಾನದಲ್ಲಿ ಗಾಯತ್ರೀ ಮಂತ್ರೋಪದೇಶವನ್ನು ಮಾಡುತ್ತಾರೆ. ಗಾಯತ್ರೀ ಮಂತ್ರೋಪದೇಶ ಪಡೆಯದಿದ್ದರೆ ಯಾವದೇ ಪೂಜೆ ಪುನಸ್ಕಾರ , ಕರ್ಮ ಏನೂ ಮಾಡಲು ಅಧಿಕಾರವಿಲ್ಲ ಅದಕ್ಕಾಗಿಯೇ ಮೊದಲು ಏಂಟು ವರ್ಷಕ್ಕೆ ಮಕ್ಕಳಿಗೆ ಬ್ರಹ್ಮೋಪದೇಶ ಮಾಡುತ್ತಿದ್ದರು. ಆದರೆ ಈಗ ಬರೀ ಆಡಂಬರಕ್ಕೆ ಮಹತ್ವ , ಕೆಲವರಂತೂ ಮದುವೆ ಮುಂದೆ ಮಾಡಿದರಾಯಿತು ಅನ್ನುವವರು ಇದ್ದಾರೆ. ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಏನು ಸಂಸ್ಕಾರ ಕೊಡಬೇಕೊ ಅದನ್ನು ಕೊಡಬೇಕು…. ಮಕ್ಕಳಿಗೆ ಸರಿ ವಯಸ್ಸಿಗೆ ಉಪನಯನ ಮಾಡುವದರಿಂದ ಮತ್ತು ಪ್ರತಿ ದಿನ ಗಾಯತ್ರೀ ಮಂತ್ರ ಪಠಣೆ ದಿಂದ ದೈಹಿಕ ,ಮಾನಸಿಕ ವಿದ್ಯೆ ಬುದ್ಧಿ ಏಲ್ಲದರಲ್ಲೂ ತೆಜಸ್ಸನ್ನು ಪಡಿತಾರೆ…. ಈ ಪೋಸ್ಟ ಇಷ್ಟವಾದರೆ ಶೇರ ಮಡಿ ವಿಶ್ವಾಮಿತ್ರ ಮಹರ್ಷಿ ಗಳೇ ಹೇಳುವಂತೆ ನಾಲ್ಕು ವೇದಗಳು ಹುಡುಕಿದರೂ ಈ ಮಂತ್ರಕ್ಕೆ ಸರಿ ಹೊಂದುವ ಬೇರೆ ಮಂತ್ರವಿಲ್ಲ , ಸಮಸ್ತ ವೇದಗಳು , ಯಜ್ಞಗಳೂ , ದಾನಗಳೂ, ವಿವಿಧ ತಪಸ್ಸುಗಳು ದಾನಗಳು ಸೇರಿಸಿದರೂ ಈ ಗಾಯತ್ರೀ ಮಂತ್ರದ ಮಹಾತ್ಮೆಗೆ ಸಮವಾಗಲಾರದು.. ಪ್ರಧಾನ ಗುರುಗಳು…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ ಪ್ರಕಾರ ಮಾರ್ಚ್ 30ರಂದು ತೃತೀಯ ಭಾಷೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರವು ಮಹಾವೀರ ಜಯಂತಿ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ರ ಸೋಮವಾರಕ್ಕೆ ಬದಲಾಯಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ಹೊಸ ಆದೇಶದ ಹಿನ್ನೆಲೆಯಲ್ಲಿ, ಮಾರ್ಚ್ 30ರಂದು ನಿಗದಿಯಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಈಗ ಮಾರ್ಚ್ 31ರ ಮಂಗಳವಾರದಂದು ನಡೆಸಲು ಮಂಡಲಿ ತೀರ್ಮಾನಿಸಿದೆ. ಈ ಪರೀಕ್ಷೆಯು ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲೇ ನಡೆಯಲಿದ್ದು, ವೇಳಾಪಟ್ಟಿಯಲ್ಲಿರುವ ಉಳಿದ ವಿಷಯಗಳ ಪರೀಕ್ಷೆಗಳು ಯಾವುದೇ ಬದಲಾವಣೆಯಿಲ್ಲದೆ ಯಥಾವತ್ತಾಗಿ ಮುಂದುವರಿಯಲಿವೆ ಎಂದು ಮಂಡಲಿಯ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ದಿನಾಂಕ 26.03.2026ರಂದು ಈ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಬದಲಾವಣೆಯನ್ನು ಗಮನಿಸಬೇಕೆಂದು ಕೋರಲಾಗಿದೆ. https://kannadanewsnow.com/kannada/karnataka-appropriation-bill-passed-in-legislative-council/ https://kannadanewsnow.com/kannada/breaking-attention-students-the-sslc-hindi-exam-scheduled-for-mar-30-has-been-postponed-to-mar-31/














