Author: kannadanewsnow09

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕøತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಸಿರಗುಪ್ಪ ಶಾಸಕ ನಾಗರಾಜ್ ಬಿ.ಎಂ. ಅವರ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಸಿರಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಐಟಿಐ ಅನ್ನು 2014-15 ರಲ್ಲಿ ಮಂಜೂರು ಮಾಡಿದ್ದು, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾಗಿರುವ ಉಪಕರಣಗಳು ಲಭ್ಯವಿಲ್ಲದೆ ತೊಂದರೆಯಾಗಿದೆ ಎಂಬುದಾಗಿ ಸರ್ಕಾರದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ರಾಜ್ಯದ 90 ಸರ್ಕಾರಿ ಐಟಿಐ ಗಳಲ್ಲಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಬಗ್ಗೆ ಐಪಿಹೆಚ್‍ಎಸ್ ಮಾರ್ಗಸೂಚಿ ಹಾಗೂ ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ…

Read More

ಬೆಳಗಾವಿ ಸುವರ್ಣ ವಿಧಾನಸೌಧ :- ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ…

Read More

ಬೆಳಗಾವಿ ಸುವರ್ಣಸೌಧ : ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕೆಲವು ನಿರ್ದಿಷ್ಟ ವೃಂದದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್-ಟೇಬಲ್ ಮತ್ತು ಹೆಡ್ ಕಾನ್ಸ್-ಟೇಬಲ್ ವೃಂದದ ಸಿಬ್ಬಂದಿಗಳಿಗೆ ಅವರು ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ 30 ದಿನಗಳ ಹೆಚ್ಚುವರಿ ವೇತನವನ್ನು ಪಾವತಿಸಲು ಅವಕಾಶವಿರುತ್ತದೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಲಭ್ಯವಿರುವ ಪತ್ರಾಂಕಿತ ರಜಾ ವೇತನದ ಸೌಲಭ್ಯವೂ ಸೇರಿದಂತೆ ಸರ್ಕಾರಿ ನೌಕರರ ವಿಶೇಷ ಭತ್ಯೆಯ ಪರಿಷ್ಕರಣೆಯು ಸರ್ಕಾರದ ನೀತಿ ನಿರ್ಣಯಕ್ಕೆ ಸಂಬಂಧಿಸಿರುತ್ತದೆ ಎಂದು ಗೃಹ ಸಚಿವರು ವಿವರಿಸಿದರು. https://kannadanewsnow.com/kannada/indigo-announces-vouchers-worth-rs-10000-for-affected-customers/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ನವದೆಹಲಿ: ಇಂಡಿಗೋ ಟಿಕೆಟ್ ರದ್ದತಿ ಮುಂದುವರೆದಂತೆ, ವಿಮಾನಯಾನ ಸಂಸ್ಥೆಯು ತನ್ನ ಗ್ರಾಹಕರಿಗೆ ಮರುಪಾವತಿಯ ಕುರಿತು ಅಧಿಕೃತವಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿತು. ತೊಂದರೆಗೊಳಗಾದ ಗ್ರಾಹಕರಿಗೆ 10,000 ಮೌಲ್ಯದ ವೋಚರ್ ಗಳನ್ನು ನೀಡುವುದಾಗಿ ಘೋಷಿಸಿದೆ.  ಈ ಪರಿಹಾರವು ಅಸ್ತಿತ್ವದಲ್ಲಿರುವ ಸರ್ಕಾರಿ ಮಾರ್ಗಸೂಚಿಗಳ ಅಡಿಯಲ್ಲಿ ಇಂಡಿಗೋ ವಿಮಾನದ ನಿರ್ಬಂಧದ ಸಮಯವನ್ನು ಅವಲಂಬಿಸಿ 5,000 ರಿಂದ 10,000 ರೂ.ಗಳವರೆಗೆ ಪರಿಹಾರವನ್ನು ನೀಡುವ ಬದ್ಧತೆಗೆ ಹೆಚ್ಚುವರಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನಮ್ಮ ಗ್ರಾಹಕರ ಕಾಳಜಿಯು ನಮ್ಮ ಪ್ರಮುಖ ಆದ್ಯತೆಯಾಗಿದೆ. ಇದರ ಭಾಗವಾಗಿ, ಕಾರ್ಯಾಚರಣೆಯ ಅಡಚಣೆಯ ನಂತರ, ರದ್ದಾದ ವಿಮಾನಗಳಿಗೆ ಅಗತ್ಯವಿರುವ ಎಲ್ಲಾ ಮರುಪಾವತಿಗಳನ್ನು ಪ್ರಾರಂಭಿಸಲಾಗಿದೆ ಎಂದು ನಾವು ಖಚಿತಪಡಿಸಿದ್ದೇವೆ, ಅವುಗಳಲ್ಲಿ ಹೆಚ್ಚಿನವು ಈಗಾಗಲೇ ನಿಮ್ಮ ಖಾತೆಗಳಲ್ಲಿ ಪ್ರತಿಫಲಿಸಿವೆ. ಉಳಿದವು ಶೀಘ್ರದಲ್ಲೇ ಬರಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಯಾಣ ಪಾಲುದಾರ ವೇದಿಕೆಯ ಮೂಲಕ ಬುಕಿಂಗ್ ಮಾಡಿದ್ದರೆ, ನಿಮ್ಮ ಮರುಪಾವತಿಗೆ ಅಗತ್ಯ ಕ್ರಮಗಳನ್ನು ಸಹ ಪ್ರಾರಂಭಿಸಲಾಗಿದೆ. ನಮ್ಮ ವ್ಯವಸ್ಥೆಯಲ್ಲಿ ನಿಮ್ಮ ಸಂಪೂರ್ಣ ವಿವರಗಳು ನಮ್ಮಲ್ಲಿ ಇಲ್ಲದಿರಬಹುದು. ಆದ್ದರಿಂದ ನಾವು ನಿಮಗೆ ತಕ್ಷಣ…

Read More

ಅರುಣಾಚಲ ಪ್ರದೇಶ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಿಂದ ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 22 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ, ರಕ್ಷಣಾ ತಂಡಗಳು 13 ಶವಗಳನ್ನು ಪತ್ತೆಹಚ್ಚಿವೆ. ವಿವರಗಳ ಪ್ರಕಾರ, ಗುಡ್ಡಗಾಡು ಪ್ರದೇಶದ ಮೂಲಕ ಸಾಗುತ್ತಿದ್ದ ವಾಹನವು ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಸ್ಥಳೀಯ ಅಧಿಕಾರಿಗಳು ಮತ್ತು ವಿಪತ್ತು ಪ್ರತಿಕ್ರಿಯೆ ತಂಡಗಳು ಸ್ಥಳದಲ್ಲಿ ಬದುಕುಳಿದವರನ್ನು ಹುಡುಕಲು ಮತ್ತು ಉಳಿದ ಬಲಿಪಶುಗಳನ್ನು ಹೊರತರಲು ಸ್ಥಳದಲ್ಲೇ ಇದ್ದವು. ಡಿಸೆಂಬರ್ 7 ರಂದು, ನಾಸಿಕ್‌ನ ಕಲ್ವಾನ್ ತಾಲ್ಲೂಕಿನ ಸಪ್ತಶ್ರಿಂಗ್ ಗರ್ ಘಾಟ್‌ನಲ್ಲಿ 600 ಅಡಿ ಆಳದ ಕಂದಕಕ್ಕೆ ಕಾರು ಬಿದ್ದ ನಂತರ ಆರು ಜನರು ಸಾವನ್ನಪ್ಪಿದರು. ಘಟನೆ ಸಂಜೆ 4 ಗಂಟೆಗೆ ನಡೆದಿದ್ದು, ಮೃತರನ್ನು ನಿಫಾದ್ ತಾಲ್ಲೂಕಿನ ಪಿಂಪಾಲ್‌ಗಾಂವ್ ಬಸ್ವಂತ್‌ನ ಸ್ಥಳೀಯರು ಎಂದು ಗುರುತಿಸಲಾಗಿದೆ. “ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಏಳು ಪ್ರಯಾಣಿಕರಿದ್ದ…

Read More

ಮಂಡ್ಯ: ಜಿಲ್ಲೆಯಲ್ಲಿ ಶೇಖರಿಸಿಟ್ಟಿದ್ದಂತ ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಕೊಬ್ಬರಿ ಸುಟ್ಟು ಕರಕಲಾಗಿದೆ. ಮಂಡ್ಯ ತಾಲ್ಲೂಕಿನ ಗುನ್ನಾಯಕನಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟುಕರಕಲಾಗಿದೆ. ಗ್ರಾಮಸ್ಥರಾದಂತ ಪ್ರಸನ್ನ ಎಂಬುವರಿಗೆ ಸೇರಿದ ಕೊಬ್ಬರಿ ಶೆಡ್ ಇದಾಗಿದೆ. ಸುತ್ತಮುತ್ತಲಿನ ಗ್ರಾಮದ ರೈತರಿಂದ ಕೊಬ್ಬರಿ ಖರೀದಿಸಿ ಶೇಖರಿಸಿದ್ದರು. ಗೋದಾಮಿನಲ್ಲಿ ಕೊಬ್ಬರಿ ಸಂಗ್ರಹಿಸಿಟ್ಟಿದ್ದರು. ಗೋದಾಮಿಗೆ ಕಿಡಿಗೇಡಿಗಳು ಬೆಂಕಿಹಚ್ಚಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. 16 ಟನ್ ಕೊಬ್ಬರಿ, 6 ಟನ್ ಗ್ರೌಟ್ ಸುಟ್ಟು ಕರಕಲು ಆಗಿದೆ. ಈ ಘಟನೆಯಿಂದ 55 ಲಕ್ಷ ಮೌಲ್ಯದ ಕೊಬ್ಬರಿ ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸೋ ಕೆಲಸದಲ್ಲಿ ತೊಡಗಿದ್ದಾರೆ. https://kannadanewsnow.com/kannada/who-has-the-guts-to-change-siddaramaiah-minister-zameer-ahmed/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ಬೆಳಗಾವಿ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರೋದು ಪಕ್ಷದ ಹೈಕಮಾಂಡ್ ಗೆ ಮಾತ್ರವೇ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರವರೆಗೂ ಸಿದ್ಧರಾಮಯ್ಯ ಅವರು ಸಿಎಂ ಆಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/cm-siddaramaiah-spends-crores-of-rupees-on-helicopter-and-plane-travel/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿರೋದಾಗಿ ಹೇಳಲಾಗುತ್ತಿದೆ. 2023ರಿಂದ ಸಿಎಂ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನ ಬಳಕೆ ಮಾಡಿದ್ದಾರೆ. ಇದಕ್ಕಾಗಿ 47,38,24,347 ಕೋಟಿ ರೂಪಾಯಿ ಖರ್ಚು ಮಾಡಿರೋದಾಗಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ. 2023ರಿಂದ 2025ರ ನವೆಂಬರ್ ವರೆಗಿನ ವಿಮಾನ ಪ್ರಯಾಣದ ವೆಚ್ಚ ಈ ಮೇಲಿನದ್ದು ಆಗಿದೆ. ಈ ಹಿಂದೆ ಕಾವೇರಿ ನಿವಾಸ ನವೀಕರಣದಿಂದ ಸುದ್ದಿಯಾಗಿದ್ದಂತ ಸಿಎಂ ಸಿದ್ಧರಾಮಯ್ಯ, ಕೋಟಿ ಕೋಟಿ ಅನುದಾನ ವೆಚ್ಚ ಮಾಡಿದ್ದು ವರದಿಯಾಗಿತ್ತು. ಇದೀಗ ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್.ರವಿಕುಮಾರ್ ಕೇಳಿದಂತ ಚುಕ್ಕೆ ರಹಿತ ಪ್ರಶ್ನೆಗೆ ಸಿಎಂ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಹಾಗೂ ವಿಮಾನ ವೆಚ್ಚದ ಬಗ್ಗೆ ಸರ್ಕಾರ ಉತ್ತರ ನೀಡಲಾಗಿದೆ. ವಿಮಾನಯಾನಕ್ಕೆ ಸಿದ್ಧರಾಮಯ್ಯ 47 ಕೋಟಿಗೂ ಹೆಚ್ಚು ವೆಚ್ಚ ಮಾಡಿದ್ದಾರೆ. ಇದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹೋಗಲು ಹೆಲಿಕಾಪ್ಟರ್, ವಿಮಾನ ಬಳಕೆ ಮಾಡಿರುವುದು ಸೇರಿದೆ. https://kannadanewsnow.com/kannada/lok-sabha-extends-term-of-committee-examining-one-nation-one-election-bills/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ನವದೆಹಲಿ: ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಪರಿಚಯಿಸುವ ಮಸೂದೆಗಳನ್ನು ಪರಿಶೀಲಿಸುವ ಸಂಸದೀಯ ಸಮಿತಿಯ ಅವಧಿಯನ್ನು ಲೋಕಸಭೆ ಗುರುವಾರ ವಿಸ್ತರಿಸಿದೆ. ಸಂವಿಧಾನದ ಜಂಟಿ ಸಮಿತಿ (129 ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ರ ಅವಧಿಯನ್ನು 2026 ರ ಬಜೆಟ್ ಅಧಿವೇಶನದ ಕೊನೆಯ ವಾರದ ಮೊದಲ ದಿನದವರೆಗೆ ವಿಸ್ತರಿಸುವಂತೆ ಕೋರಿ ಸಮಿತಿಯ ಅಧ್ಯಕ್ಷ ಪಿ ಪಿ ಚೌಧರಿ ಪ್ರಸ್ತಾವನೆಯನ್ನು ಮಂಡಿಸಿದರು. ಲೋಕಸಭೆಯು ಧ್ವನಿ ಮತದ ಮೂಲಕ ಈ ಪ್ರಸ್ತಾವನೆಯನ್ನು ಅಂಗೀಕರಿಸಿತು. ಕಳೆದ ಡಿಸೆಂಬರ್‌ನಲ್ಲಿ ಸಮಿತಿಯನ್ನು ರಚಿಸಿದಾಗಿನಿಂದ, ಸಾಂವಿಧಾನಿಕ ತಜ್ಞರು, ಅರ್ಥಶಾಸ್ತ್ರಜ್ಞರು, ಕಾನೂನು ಆಯೋಗದ ಅಧ್ಯಕ್ಷ ದಿನೇಶ್ ಮಹೇಶ್ವರಿ ಸೇರಿದಂತೆ ಇತರರನ್ನು ಸಮಿತಿ ಭೇಟಿ ಮಾಡಿದೆ. https://kannadanewsnow.com/kannada/bjp-to-fight-against-hate-speech-law-mp-basavaraj-bommai/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More