Author: kannadanewsnow09

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿ ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 1983 ರಿಂದಲೂ ಹೆಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು…

Read More

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು; ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂಥ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ…

Read More

ಸುವರ್ಣವಿಧಾನಸೌಧ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರದ ವಿರುದ್ಧ ಹಲವಾರು ಅಸ್ತ್ರಗಳನ್ನು ಪ್ರಯೋಗಿಸಲಾಗುವುದು ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಆದರೆ, ಅವರ ಪಕ್ಷದ ಬತ್ತಳಿಕೆಯಲ್ಲಿ ಬಾಣವೇ ಇಲ್ಲ ಎಂದು ವ್ಯಂಗ್ಯವಾಡಿದರು. ಪ್ರತಿಪಕ್ಷ ಬಿಜೆಪಿಯಲ್ಲೇ ಅಶೋಕ ಬಣ, ವಿಜಯೇಂದ್ರ ಬಣ, ಕುಮಾರ್ ಬಂಗಾರಪ್ಪ ಬಣ ಮತ್ತು ರಮೇಶ್ ಜಾರಕಿಹೊಳಿ ಬಣಗಳಿವೆ. ಮೊದಲು ಆ ಬಣಗಳ ಕಿತ್ತಾಟವನ್ನು ಅಶೋಕ್ ಅವರು ಪರಿಹರಿಸಲಿ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ನಮ್ಮದೇನಿದ್ದರೂ ಕಾಂಗ್ರೆಸ್ ಬಣ ಎಂದು ಅವರು ಸ್ಪಷ್ಟಪಡಿಸಿದರು. ಬಿಜೆಪಿಯವರು ಜನರಲ್ಲಿ ಕೇವಲ ಮತೀಯ ಭಾವನೆಗಳನ್ನು ಕೆರಳಿಸಿ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆಯೇ ಹೊರತು, ಯಾವತ್ತಾದರೂ ಅಭಿವೃದ್ಧಿ ಬಗ್ಗೆ ರಾಜಕೀಯ ಮಾಡಿಲ್ಲ. ಜನರ ಪರವಾಗಿ ಎಂದಿಗೂ ಕೆಲಸವನ್ನೂ ಮಾಡಿಲ್ಲ ಎಂದು…

Read More

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ತಿಳಿಸಿದರು. ಪರಿಷತನಲ್ಲಿ ಡಿ.08ರಂದು ಪ್ರಶ್ನೋತ್ತರ ವೇಳೆಯಲ್ಲಿ, ಪರಿಷತ್ ಸದಸ್ಯರಾದ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಸಂಖ್ಯೆ 105ಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೇಳಿದ್ದಿಷ್ಟು; 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲುಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಧಿಕಾರಕ್ಕೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ…

Read More

ಬೆಳಗಾವಿ ಸುವರ್ಣಸೌಧ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ಕೃಷ್ಣ ಮೃಗಗಳು ‘ಹೆಮರಾಜಿಕ್ ಸೆಫ್ಟಿಸೆಮಿಯಾ’ ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿರುವುದು ಪ್ರಯೋಗಾಲಯದ ದೃಢಪಟ್ಟಿರುವುದರಿಂದ, ಮೇಲ್ನೋಟಕ್ಕೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿರುವುದಿಲ್ಲ ಎಂದರು. ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳು ಮೃತಪಟ್ಟ ಪ್ರಕರಣದಲ್ಲಿ, ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯ ಜೈವಿಕ ಸಂಸ್ಥೆ, ತಂಡವು ಹೆಬ್ಬಾಳ, ಬೆಂಗಳೂರು ಇಲ್ಲಿಂದ ನುರಿತ ಪಶುವೈದ್ಯಾಧಿಕಾರಿ ಹಾಗೂ ತಜ್ಞರ ಮೃಗಾಲಯಕ್ಕೆ ಭೇಟಿ ನೀಡಿ ಮೃತ ಪ್ರಾಣಿಗಳನ್ನು ಪರಿಶೀಲಿಸಿದ್ದು, ಸಾವಿನ ಕಾರಣ ಪತ್ತೆ ಹಚ್ಚಲು ಮೃತಪಟ್ಟ ಪ್ರಾಣಿಗಳ ಮಾದರಿಯನ್ನು (Blood samples and organs) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೃಗಾಲಯದಲ್ಲಿರುವ ಬೇರೆ ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ…

Read More

ಬೆಳಗಾವಿ ಸುವರ್ಣಸೌಧ: : ವಿಧಾನ ಪರಿಷತ್ತಿನಲ್ಲಿ ಡಿ.8ರಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಪ್ರಕರಣವೊಂದು ಚರ್ಚೆಗೆ ಬಂದಿತು. ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 13(139)ರ ಮೇಲಿನ ಚರ್ಚೆಯ ವೇಳೆ ಸದಸ್ಯರಾದ ಎಂ ನಾಗರಾಜು ಅವರು ವಿಷಯ ಪ್ರಸ್ತಾಪಿಸಿ, ತಪ್ಪಿತಸ್ಥ ವೈದ್ಯರು‌ ಮತ್ತು ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪಟ್ಟುಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಿಮ್ಸ್ ಸಂಸ್ಥೆಯಲ್ಲಿ ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರ ನಿರ್ಲಕ್ಷ್ಯದಿಂದ ಒಬ್ಬ ರೋಗಿಯ ಹೊಟ್ಟೆಯ ಗಡ್ಡೆ ಬದಲಿಗೆ ಕರುಳನ್ನು ತೆಗೆದು ಹಾಕಲಾಗಿದೆ ಎಂದು ಸುದ್ದಿಯಾಗಿರುವದು ಸರ್ಕಾರದ ಗಮನಕ್ಕೆ ಬಂದಿದೆ. ಈ ಪ್ರಕರಣದ ಬಗ್ಗೆ ಪರಿಶೀಲಿಸಲಾಗಿ, ರೋಗಿಯು ದೀರ್ಘಕಾಲದ ಮದ್ಯವ್ಯಸನಿ ಹಾಗೂ ತಂಬಾಕು ಅಗಿಯುವ ಇತಿಹಾಸವನ್ನು ಹೊಂದಿದ್ದು, ರೋಗಿಗೆ ಅಪೇಂಡಿಕ್ಸ್ ಕರುಳಿನ ರಂದ್ರ ಇರುವುದು ತಾಲ್ಲೂಕ…

Read More

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ. ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಇಂಥ ಮನಃಸ್ಥಿತಿಯೇ ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು. ಈ ಬಗ್ಗೆ ತಮ್ಮನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಸಿ. ಮಹಾದೇವಪ್ಪ ಅವರಿಗೆ ತಿರುಗೇಟು ಕೊಟ್ಟ ಸಚಿವರು; ಒಳ್ಳೆಯದು, ಸದ್ವಿಚಾರಗಳನ್ನು ಚರ್ಚೆ ಮಾಡುವುದು, ಮಕ್ಕಳಿಗೆ ಒಳ್ಳೆಯ…

Read More

ಬೆಳಗಾವಿ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ. ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ ಎಂದರು. ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ…

Read More

ಬೆಳಗಾವಿ : ಬ್ಯಾಕ್ಟಿರೀಯಾ ಸೋಂಕು ಗಳಲೆ ರೋಗ (ಹೆಮರೇಜಿಕ್ ಸೆಪ್ಟಿ ಸೀಮಿಯಾ)ದಿಂದ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ತಮಗೂ ನೋವು ತಂದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಚಿಗುರು ತಿನ್ನುವ ಪ್ರಾಣಿಗಳಲ್ಲಿ ಸಾಮಾನ್ಯವಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಹೊರ ನೋಟಕ್ಕೆ ಸೋಂಕಿನ ಲಕ್ಷಣವೂ ಕಾಣುವುದಿಲ್ಲ. ಈ ಸೋಂಕು ಬಂದ 6 ರಿಂದ 24 ಗಂಟೆಗಳಲ್ಲಿ ಅಥವಾ 8ರಿಂದ 24 ಗಂಟೆಗಳಲ್ಲಿ ಸಾವು ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಸೋಂಕು ತಗುಲಿದ ಕೆಲವೇ ಗಂಟೆಗಳಲ್ಲಿ ಸಾವು ಸಂಭವಿಸುವ ಕಾರಣ ಹೆಚ್ಚಿನ ಸಂಖ್ಯೆ ಕೃಷ್ಣಮೃಗ ಮೃತಪಟ್ಟಿದೆ ಎಂಬುದು ತಜ್ಞ ವೈದ್ಯರ ಅಭಿಪ್ರಾಯವಾಗಿದೆ ಎಂದು ತಿಳಿಸಿದರು. ಕಿರು ಮೃಗಾಲಯದಲ್ಲಿ ನವೆಂಬರ್ 13ರಿಂದ 17ರವರೆಗೆ ಒಟ್ಟು 31 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃಗಾಲಯದ ವೈದ್ಯರು, ಪಶು ಸಂಗೋಪನಾ ಇಲಾಖೆಯ ಸ್ಥಳೀಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ, ಪಶುವೈದ್ಯಕೀಯ ಜೈವಿಕ…

Read More

ಬೆಳಗಾವಿ: ಇಂದಿನಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕಿದೆ. ಪ್ರಮುಖವಾಗಿ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಆ ಕುರಿತು ಚರ್ಚೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಕಬ್ಬು ಬೆಳೆಗಾರರು, ಮೆಕ್ಕೆ ಜೋಳ ಬೆಳೆಗಾರರು, ಭತ್ತ ಬೆಳೆಯುವ ರೈತರು, ತೊಗರಿ ಬೆಳೆಗಾರರು ಸಂಕಷ್ಟ ಅನುಭವಿಸಬೇಕಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ. ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿತ್ತು. ಅದು ಈಡೇರಿಲ್ಲ ಎಂದು ಟೀಕಿಸಿದರು. ನೇಕಾರರ ಸಮಸ್ಯೆ, ರಾಜ್ಯದ ಅಭಿವೃದ್ಧಿ ವಿಚಾರ- ಇವೆಲ್ಲವು ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡುವವರಿದ್ದೇವೆ ಎಂದು ತಿಳಿಸಿದರು. ಪ್ರಶ್ನೆಗೆ ಉತ್ತರ ನೀಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬಹಳ ನಿಸ್ಸೀಮರಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಪ್ರತಿ…

Read More