Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದಲ್ಲಿ ವೃದ್ಧ ದಂಪತಿಯನ್ನು ಕೊಲೆ ಮಾಡಲಾಗಿತ್ತು. ಈ ರೀತಿಯಾಗಿ ಕೊಲೆ ಮಾಡಿದ್ದಂತ ಆರೋಪಿಯನ್ನು ಬಂಧಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ. ಹಣಕ್ಕಾಗಿ ವೃದ್ಧ ದಂಪತಿಗಳಿಗೆ ಹೈಡೋಸೇಜ್ ಇಂಜೆಕ್ಷನ್ ನೀಡಿ ದೊಡ್ಡಪ್ಪ, ದೊಡ್ಡಮ್ಮನನ್ನು ಕೊಂದಿರುವುದಾಗಿ ವೃದ್ಧ ದಂಪತಿಗಳ ಕೊಲೆಯ ರಹಸ್ಯವನ್ನು ರಿವೀಲ್ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಭದ್ರಾವತಿ ನಗರದಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಡಾ.ಮಲ್ಲೇಶ್ ನನ್ನು ಬಂಧಿಸಲಾಗಿದೆ. ಚಿಕ್ಕಪ್ಪನ ಮಗ ಡಾ.ಮಲ್ಲೇಶ್ ನಿಂದ ದಂಪತಿಗಳನ್ನು ಕೊಲೆ ಮಾಡಲಾಗಿದೆ ಎಂದಿದ್ದಾರೆ. ದೊಡ್ಡಪ್ಪ, ದೊಡ್ಡಮ್ಮನಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಕೊಲೆ ಮಾಡಲಾಗಿದೆ. ದಂಪತಿಗೆ ಇಂಜೆಕ್ಷನ್ ನೀಡಿ ಕೃತ್ಯ ಎಸಗಿರೋದು ಪತ್ತೆಯಾಗಿದೆ. ಹೈಡೋಸೇಜ್ ಇರುವಂತ ಔಷಧ ನೀಡಿ ಕೊಲೆ ಮಾಡಲಾಗಿದೆ. ತಮ್ಮನ ಮಗ ಎಂದು ನಂಬಿ ಇಂಜೆಕ್ಷನ್ ಅನ್ನು ದೊಡ್ಡಪ್ಪ, ದೊಡ್ಡಮ್ಮ ಪಡೆದಿದ್ದಾರೆ ಎಂದು ಹೇಳಿದ್ದಾರೆ. ಆರೋಪಿ ವೈದ್ಯ ಡಾ.ಮಲ್ಲೇಶ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ದೊಡ್ಡಪ್ಪನ ಬಳಿ…
ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ತಿಳಿದು ಬಂದಿದೆ. ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತದ ಸಾಲಿನ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ಹೇಳಲಾಗುತ್ತಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿರುವಂತ ಅತ್ತಿಗುಂಡಿ ಇದಾಗಿದೆ. ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮುಳ್ಳಯ್ಯನಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರಾ ಪ್ರವಾಸಿ ತಾಣಗಳಿರುವ ಚಂದ್ರದ್ರೋಣ ಪರ್ವತದ ಸಾಲು ಇದಾಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಹುಲಿ ಸಂಚಾರದ ದೃಶ್ಯಗಳು ಸೆರೆಯಾಗಿದ್ದಾವೆ. ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ. https://kannadanewsnow.com/kannada/biofuel-policy-for-alternative-fuel-in-rural-parts-of-the-state-to-be-implemented-soon-minister-priyank-kharge/
ಬೆಂಗಳೂರು: ಶೀಘ್ರದಲ್ಲೇ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಪರ್ಯಾಯ ಇಂಧನಕ್ಕಾಗಿ ಜೈವಿಕ ಇಂದನ ನೀತಿ ಜಾರಿಗೆ ತರಲು ಕ್ರಮ ವಹಿಸಲಾಗುತ್ತದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಜೈವಿಕ ಇಂಧನಗಳು, ತ್ಯಾಜ್ಯದಿಂದ ಶಕ್ತಿ ಉತ್ಪಾದನೆ, ಹಸಿರು ರಾಸಾಯನಿಕಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ನೇತೃತ್ವದ ಪರಿಹಾರಗಳನ್ನು ಬೆಂಬಲಿಸಲು ಜೈವಿಕ ಇಂಧನ ಇನ್ನೋವೇಶನ್ ಲ್ಯಾಬ್ಗಳನ್ನು ಸ್ಥಾಪಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಸದಸ್ಯರು ಮತ್ತು ಇತರ ಪ್ರಮುಖ ಪಾಲುದಾರರೊಂದಿಗೆ ಸಭೆ ನಡೆಸಿದರು. ಕರ್ನಾಟಕದ ಮುಂಬರುವ ಜೈವಿಕ ಇಂಧನ ನೀತಿಯನ್ನು ಪರಿಶೀಲಿಸಿದ ಸಚಿವರು ಸರ್ಕಾರ ಜೈವಿಕ ಇಂಧನ ನೀತಿಯನ್ನು ತರಲು ಬದ್ಧವಾಗಿದೆ ಎಂದು ಪ್ರಕಟಿಸಿದರು. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದೂ ಸಚಿವರು ಹೇಳಿದರು. “ರಾಜ್ಯಾದ್ಯಂತ ಪ್ರಾದೇಶಿಕ ಜೈವಿಕ ಇಂಧನ ವಲಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕೆಳದಿ ವ್ಯಾಪ್ತಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಉಂಟುಮಾಡಿದೆ. ಮುಂಜಾಗ್ರತೆಯ ಕ್ರಮವಾಗಿ ಅರಣ್ಯ ಇಲಾಖೆಯಿಂದ ಸೆರೆಗೆ ಬೋನು ಇರಿಸಲಾಗಿದೆ. ಕಳೆದ ಒಂದು ವಾರಗಳಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕೆಳದಿ ವ್ಯಾಪ್ತಿಯ ಹಳ್ಳಿಗಳಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ರಾತ್ರಿ ಬೈಕ್ ನಲ್ಲಿ ಓಡಾಡುವಾಗ ವ್ಯಕ್ತಿಯೊಬ್ಬರು ಪ್ರತ್ಯಕ್ಷವಾಗಿ ಚಿರತೆ ನೋಡಿರುವುದಾಗಿ ಸುದ್ದಿ ಹರಿದಾಡುತ್ತಿದೆ. ಕೆಳದಿ ಅರಣ್ಯ ವ್ಯಾಪ್ತಿಯ ಮೆಳವರಿಗೆ, ಬಳಿಕಲ್ಲು, ಕಾಗೋಡು, ಕೆಳದಿ, ಮಾಸೂರು, ಯಲಕುದ್ಲಿ ಅನಾನಸ್ ಪ್ಲಾಂಟ್, ಹಾರಗೊಪ್ಪ ವ್ಯಾಪ್ತಿಯಲ್ಲಿ ಚಿರತೆ ಓಡಾಟದ ಗುರುತುಗಳು ಪತ್ತೆಯಾಗಿವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇಳವರಿಯಲ್ಲಿ ಅರಣ್ಯ ಇಲಾಖೆಯಿಂದ ಚಿರತೆ ಸೆರೆಗೆ ಬೋನ್ ಇರಿಸಲಾಗಿದೆ. ಶೀಘ್ರವೇ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ ಕೆಳದಿ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ಜನರು ಸಂಚಾರಕ್ಕೆ ಭಯ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಿಂದ ಹೊರ ಬರೋದಕ್ಕೂ ಹೆದರುವಂತೆ ಆಗಿದೆ. ಹೀಗಾಗಿ ಶೀಘ್ರವೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.…
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲೆಗುಡ್ಡದಲ್ಲಿ ಸಿಕ್ಕಂತ 7 ಅಸ್ಥಿಪಂಜರಗಳ್ನು ಎಸ್ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದಲ್ಲಿನ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ಐಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮಾನವನ 7 ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಸೆಪ್ಟೆಂಬರ್.17, 2025ರಂದು 5, ಸೆ.18ರಂದು 2 ಸೇರಿದಂತೆ ಏಳು ಅಸ್ಥಿಪಂಜರಗಳು ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ಐಟಿಗೆ ಪತ್ತೆಯಾಗಿದ್ದವು. ಬಂಗ್ಲೆಗುಡ್ಡದ ಅರಣ್ಯದಲ್ಲಿ ಆತ್ಮಹತ್ಯೆ ರೀತಿಯಲ್ಲಿ ಪತ್ತೆಯಾದಂತ ಅಸ್ಥಿ ಪಂಚರಗಳನ್ನು ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಬೆಂಗಳೂರಿನ ಮಡಿವಾಳದಲ್ಲಿರುವಂತ ಎಫ್ ಎಸ್ ಎಲ್ ಕಚೇರಿಗೆ ರವಾನಿಸಲಾಗಿದೆ. ಈ ಅಸ್ಥಿ ಪಂಚರಗಳನ್ನು ಪರೀಕ್ಷೆ ನಡೆಸಿದ ನಂತ್ರ ಬರುವಂತ ವರದಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. https://kannadanewsnow.com/kannada/draft-voters-list-for-369-wards-under-gba-published/
ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಿಂಗಳುಗಟ್ಟಲೆ ಸಿಲುಕಿದ್ದ ಇಬ್ಬರು ಗಗನಯಾತ್ರಿಗಳಲ್ಲಿ ಒಬ್ಬರಾದ ನಾಸಾದ ಸುನೀತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ. ಅವರ ನಿವೃತ್ತಿ ಡಿಸೆಂಬರ್ ಅಂತ್ಯದಿಂದ ಜಾರಿಗೆ ಬರಲಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮಂಗಳವಾರ ಸುದ್ದಿ ಪ್ರಕಟಿಸಿದೆ. ಬೋಯಿಂಗ್ನ ದುರದೃಷ್ಟಕರ ಕ್ಯಾಪ್ಸುಲ್ ಪರೀಕ್ಷಾ ಹಾರಾಟದಲ್ಲಿ ವಿಲಿಯಮ್ಸ್ ಅವರ ಸಿಬ್ಬಂದಿಯ ಸಹೋದ್ಯೋಗಿ ಬುಚ್ ವಿಲ್ಮೋರ್ ಕಳೆದ ಬೇಸಿಗೆಯಲ್ಲಿ ನಾಸಾವನ್ನು ತೊರೆದರು. ಈ ಜೋಡಿಯನ್ನು 2024 ರಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಉಡಾಯಿಸಲಾಯಿತು, ಬೋಯಿಂಗ್ನ ಹೊಸ ಸ್ಟಾರ್ಲೈನರ್ ಸಿಬ್ಬಂದಿ ಕ್ಯಾಪ್ಸುಲ್ ಅನ್ನು ಹಾರಿಸಿದ ಮೊದಲ ಜನರು. ಅವರ ಕಾರ್ಯಾಚರಣೆ ಕೇವಲ ಒಂದು ವಾರ ಮಾತ್ರ ಇರಬೇಕಿತ್ತು, ಆದರೆ ಸ್ಟಾರ್ಲೈನರ್ ತೊಂದರೆಯಿಂದಾಗಿ ಒಂಬತ್ತು ತಿಂಗಳುಗಳಿಗಿಂತ ಹೆಚ್ಚು ಕಾಲ ವಿಸ್ತರಿಸಿತು. ಕೊನೆಯಲ್ಲಿ, ಅವರು ಕಳೆದ ಮಾರ್ಚ್ನಲ್ಲಿ ಸ್ಪೇಸ್ಎಕ್ಸ್ನೊಂದಿಗೆ ಮನೆಗೆ ಸವಾರಿ ಮಾಡಿದರು. ನೌಕಾಪಡೆಯ ಮಾಜಿ ಕ್ಯಾಪ್ಟನ್ ವಿಲಿಯಮ್ಸ್, 60, ನಾಸಾದಲ್ಲಿ 27 ವರ್ಷಗಳಿಗೂ ಹೆಚ್ಚು ಕಾಲ ಕಳೆದರು, ಮೂರು ನಿಲ್ದಾಣ ಕಾರ್ಯಾಚರಣೆಗಳಲ್ಲಿ 608 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದರು. ಅವರು ಮಹಿಳೆಯೊಬ್ಬರು ಹೆಚ್ಚು…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ” ವ್ಯಾಪ್ತಿಯಲ್ಲಿ ದಿನಾಂಕ 21.01.2026 (ಬುಧವಾರ)ದ ಇಂದು ಬೆಳ್ಳಿಗೆ 10:00 ರಿಂದ ಸಂಜೆ 06:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್, ಕೊಕನಟ್ ಗ್ರೋವ್ ಲೇಔಟ್, ಆಶೀರ್ವಾದ್…
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ಬಳಕೆದಾರರ ಶುಲ್ಕ ಪಾವತಿಯ ಅನುಸರಣೆಯನ್ನು ಬಲಪಡಿಸಲು, ಭಾರತ ಸರ್ಕಾರವು ‘ಕೇಂದ್ರ ಮೋಟಾರ್ ವಾಹನ (ಎರಡನೇ ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಸೂಚನೆ ಹೊರಡಿಸಿದ್ದು, ‘ಕೇಂದ್ರ ಮೋಟಾರ್ ವಾಹನ ನಿಯಮಗಳು, 1989’ ಗೆ ಪ್ರಮುಖ ಬದಲಾವಣೆಗಳನ್ನು ಪರಿಚಯಿಸಿದೆ. ಇದರ ಭಾಗವಾಗಿ ಟೋಲ್ ಬಾಕಿ ಹೊಂದಿರುವ ವಾಹನಗಳಿಗೆ NOC, ಫಿಟ್ನೆಸ್ ಪ್ರಮಾಣಪತ್ರ ಅಥವಾ ಪರವಾನಗಿಗಳಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸುವ ಮೂಲಕ, ವಾಹನ ಮಾಲೀಕರಿಗೆ ಬಿಗ್ ಶಾಕ್ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ಬಳಕೆದಾರರ ಶುಲ್ಕ ಪಾವತಿಗೆ ಅನುಸರಣೆಯನ್ನು ಬಲಪಡಿಸುವ ಸಲುವಾಗಿ, ಭಾರತ ಸರ್ಕಾರವು ‘ಕೇಂದ್ರ ಮೋಟಾರ್ ವಾಹನಗಳು (ಎರಡನೇ ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಸೂಚನೆ ಹೊರಡಿಸಿದ್ದು, ‘ಕೇಂದ್ರ ಮೋಟಾರ್ ವಾಹನ ನಿಯಮಗಳು, 1989’ ಗೆ ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿದೆ. ಈ ತಿದ್ದುಪಡಿಗಳು ಬಳಕೆದಾರರ ಶುಲ್ಕ ಅನುಸರಣೆಯನ್ನು ಸುಧಾರಿಸುವುದು, ಎಲೆಕ್ಟ್ರಾನಿಕ್ ಟೋಲ್ ಸಂಗ್ರಹದ ದಕ್ಷತೆಯನ್ನು ಹೆಚ್ಚಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಂಚನೆಯನ್ನು…
ರಾಜಸ್ಥಾನ: ಇಲ್ಲಿನ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, 14 ವರ್ಷದ ಶಾಲಾ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ತನ್ನ ಪ್ರೀತಿಗೆ ನಿರಾಕರಿಸಿದ್ದಕ್ಕಾಗಿ ಆಸಿಡ್ ಎರಚಿದ ಘಟನೆ ವರದಿಯಾಗಿದೆ. ಪೋಟೋಗ್ರಾಫರ್ ಜೊತೆಗೆ ಮಾತನಾಡಲು ನಿರಾಕರಿಸಿದ್ದಕ್ಕೆ 14ರ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿಯನ್ನು ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಸುಭಾಷ್ ಪಾರ್ಕ್ ಬಳಿ ಈ ದಾಳಿ ನಡೆದಿದ್ದು, ಸ್ಥಳೀಯ ಸಮುದಾಯದಲ್ಲಿ ಭಯ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಆರೋಪಿಯನ್ನು 19 ವರ್ಷದ ಓಂಪ್ರಕಾಶ್ ಅಲಿಯಾಸ್ ಜಾನಿ ಎಂದು ಗುರುತಿಸಲಾಗಿದ್ದು, ಅವರು ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದರು. ದಾಳಿಯ ನಂತರ ಮೂರು ದಿನಗಳ ಹುಡುಕಾಟದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ತನಿಖೆಯ ಸಮಯದಲ್ಲಿ, ಓಂಪ್ರಕಾಶ್ ಅವರು ಮೊದಲು ಹುಡುಗಿಯನ್ನು ಮದುವೆಯಲ್ಲಿ ನೋಡಿದ್ದರು. ಅಲ್ಲಿಗೆ ಅವರು ಪೋಟೋ ತೆಗೆಯೋದಕ್ಕೆ ಹೋಗಿದ್ದರು ಎಂಬುದಾಗಿ ಬಹಿರಂಗಪಡಿಸಿದ್ದಾರೆ. ಆಸಿಡ್ ದಾಳಿಗೆ ಕಾರಣವೇನು? ಪೊಲೀಸ್ ತನಿಖೆಯ ಪ್ರಕಾರ, ಓಂಪ್ರಕಾಶ್ ಮದುವೆಯ ನಂತರ ಹುಡುಗಿಯನ್ನು…
ನವದೆಹಲಿ: ಬಳಕೆದಾರರ ಶುಲ್ಕ ಪಾವತಿಗಳನ್ನು ಬಲಪಡಿಸಲು ಭಾರತ ಸರ್ಕಾರ ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಇದರ ಭಾಗವಾಗಿ ವಾಹನ ವರ್ಗಾವಣೆ, ಫಿಟ್ನೆಸ್ ನವೀಕರಣ ಸೇರಿದಂತೆ ಹಲವು ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತರಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ಬಳಕೆದಾರರ ಶುಲ್ಕ ಪಾವತಿಗೆ ಅನುಸರಣೆಯನ್ನು ಬಲಪಡಿಸುವ ಸಲುವಾಗಿ, ಭಾರತ ಸರ್ಕಾರವು ‘ಕೇಂದ್ರ ಮೋಟಾರ್ ವಾಹನಗಳು (ಎರಡನೇ ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಸೂಚನೆ ಹೊರಡಿಸಿದ್ದು, ‘ಕೇಂದ್ರ ಮೋಟಾರ್ ವಾಹನ ನಿಯಮಗಳು, 1989’ ಗೆ ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿದೆ. ಈ ತಿದ್ದುಪಡಿಗಳು ಬಳಕೆದಾರರ ಶುಲ್ಕ ಅನುಸರಣೆಯನ್ನು ಸುಧಾರಿಸುವುದು, ಎಲೆಕ್ಟ್ರಾನಿಕ್ ಟೋಲ್ ಸಂಗ್ರಹದ ದಕ್ಷತೆಯನ್ನು ಹೆಚ್ಚಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಂಚನೆಯನ್ನು ನಿರುತ್ಸಾಹಗೊಳಿಸುವ ಗುರಿಯನ್ನು ಹೊಂದಿವೆ. ತಿದ್ದುಪಡಿ ಮಾಡಿದ ನಿಯಮಗಳ ಅಡಿಯಲ್ಲಿ, ‘ಪಾವತಿಸದ ಬಳಕೆದಾರ ಶುಲ್ಕ’ದ ಹೊಸ ವ್ಯಾಖ್ಯಾನವನ್ನು ಪರಿಚಯಿಸಲಾಗಿದೆ ಮತ್ತು ಇದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಬಳಕೆಗೆ ಪಾವತಿಸಬೇಕಾದ ಬಳಕೆದಾರ ಶುಲ್ಕವನ್ನು ಸೂಚಿಸುತ್ತದೆ, ಅಲ್ಲಿ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ (ETC) ವ್ಯವಸ್ಥೆಯು…














