Author: kannadanewsnow09

ಬೆಂಗಳೂರು: 2025-26ನೇ ಸಾಲಿನಲ್ಲಿ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕ ಪಾವತಿಸುವಂತೆ ಕಾಲೇಜುಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಸೂಚಿಸಿದೆ. ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಅನುಮೋದಿತ ಪಟ್ಟಿ ಹಾಗೂ ವಿಶ್ವವಿದ್ಯಾಲಯದ ಶುಲ್ಕವನ್ನು ಪಾವತಿಸಿದ ರಶೀದಿಯನ್ನು ವಿಟಿಯುಗೆ ಸಲ್ಲಿಸಲು ಸೂಚಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕವನ್ನು ಕೆಇಎ ಆಯಾ ಕಾಲೇಜುಗಳಿಗೆ ಪಾವತಿಸಿರುತ್ತದೆ. ಈ ಮೊತ್ತವನ್ನು ಕಾಲೇಜುಗಳು ವಿಟಿಯು ಖಾತೆಗೆ ಪಾವತಿಸಬೇಕೆಂದು ಕೋರಿದೆ. ಕೆಇಎ ಮತ್ತು ಮ್ಯಾನೇಜ್‌ಮೆಂಟ್ ಮೂಲಕ ಪ್ರವೇಶ ಪಡೆದ ವಿದ್ಯಾರ್ಥಿಗಳ ಮೊತ್ತವನ್ನು ಪಾವತಿಸಲು ಸೂಚಿಸಿದೆ. ವಿಟಿಯು ವಿತ್ತಾಧಿಕಾರಿ ಖಾತೆಗೆ ಆಡಳಿತ ವಿಭಾಗಕ್ಕೆ ಸಂಬಂಧಿತ ಶುಲ್ಕವನ್ನು ಮಾತ್ರ ಪಾವತಿಸಲು ಸೂಚಿಸಿದ್ದು, ಪರೀಕ್ಷಾ ವಿಭಾಗದ ಶುಲ್ಕವನ್ನು ಪಾವತಿಸಲು ಪರೀಕ್ಷಾ ವಿಭಾಗವನ್ನು ಸಂಪರ್ಕಿಸಬೇಕೆಂದು ಕೋರಿದೆ. ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸದೇ ಇದ್ದ ಪಕ್ಷದಲ್ಲಿ ಅಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ಸ್ವೀಕರಿಸಲಾಗುವುದಿಲ್ಲವೆಂದು ವಿಟಿಯು ಸ್ಪಷ್ಟಪಡಿಸಿದೆ. ಹೆಚ್ಚಿನ ಮಾಹಿತಿಗೆ ವಿಟಿಯು ವೆಬ್‌ಸೈಟ್ https://vtu.ac.in/ ನೋಡಬಹುದು. ವಾಸ್ತುಶಿಲ್ಪ ತರಗತಿಗಳು ಜ.1ರಿಂದ…

Read More

ಚೆನ್ನೈ: ತಮ್ಮ ವಿರುದ್ಧ ಬೆಂಗಳೂರಿನ ಫ್ಯಾಶನ್ ಡಿಸೈನರ್ ಪಾರ್ವತಿ ಮಾಡುತ್ತಿರುವಂತ ಲೈಂಗಿಕ ಆರೋಪ ಸುಳ್ಳು. ತಾನು ಅವರ ವಿರುದ್ಧ ನೀಡಿದಂತ ವಂಚನೆ ಕೇಸ್ ಮುಚ್ಚಿ ಹಾಕೋದಕ್ಕೆ ಈ ರೀತಿಯಗಾ ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದಾಗಿ ಬಿಗ್ ಬಾಸ್ ತಮಿಳು ಖ್ಯಾತಿಯ ಇವಿಪಿ ಫಿಲ್ಮ್ ಮಾಲೀಕ ಸಂತೋಷ್ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ತಮ್ಮ ಮೇಲೆ ಬೆಂಗಳೂರಿನ ಇನ್ಸ್ಟಾಗ್ರಾಮ್ ಖ್ಯಾತಿಯ ಫ್ಯಾಶನ್ ಡಿಸೈನರ್​ ಮಹಿಳೆ ಪಾರ್ವತಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವು, ತಾವು ಈ ಹಿಂದೆ ದಾಖಲಿಸಿದ್ದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಿಂದ ಪಾರಾಗಲು ರೂಪಿಸಿದ ಸಂಚು ಎಂದು ಆರೋಪಿಸಿದ್ದಾರೆ. ಪಾರ್ವತಿ ಅವರು ಬೆಂಗಳೂರಿನಲ್ಲಿ ದೂರು ನೀಡುವುದಕ್ಕೂ 8 ದಿನಗಳ ಮೊದಲೇ, ಅಂದರೆ ಸೆಪ್ಟೆಂಬರ್ 17, 2025ರಂದೇ ತಾವು ಚೆನ್ನೈನಲ್ಲಿ ವಂಚನೆ ದೂರು ದಾಖಲಿಸಿದ್ದಾಗಿ ಸಂತೋಷ್ ರೆಡ್ಡಿ ಅಧಿಕೃತ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಪಾರ್ವತಿ ವಿರುದ್ಧ ಮೊದಲೇ ದೂರು ದಾಖಲಿಸಿದ್ದ ಸಂತೋಷ್ ರೆಡ್ಡಿ ನಾನು ಪಾರ್ವತಿ ಮತ್ತು…

Read More

ಚಿತ್ರದುರ್ಗ: ಭಾನುವಾರದಂದು ನಡೆದಂತ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಗೆ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ( ಅಪ್ಪು) ಭರ್ಜರಿ ಗೆಲುವು ಸಾಧಿಸಿ, ಆಯ್ಕೆಯಾಗಿದ್ದಾರೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಣುಖ ಮಾಹಿತಿ ನೀಡಿದ್ದು, ದಿನಾಂಕ 09-11-2025ರಂದು ನಡೆದ 2025-2028ರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆಯಾಗಿದ್ದಾರೆ ಎಂಬುದಾಗಿ ಘೋಷಿಸಿದ್ದಾರೆ. ವೀರೇಶ್ ವಿ ಚಳ್ಳಕೆರೆ ಬಗ್ಗೆ ಮಾಹಿತಿ ಅಂದಹಾಗೇ ವೀರೇಶ್ ವಿ ಚಳ್ಳಕೆರೆ( ಅಪ್ಪು) ಅವರು ಮಾಧ್ಯಮ ವೃತ್ತಿ ಬದುಕಿನ 15 ವರ್ಷದ ಹಾದಿಯಲ್ಲಿ 3 ವರ್ಷಗಳ ಕಾಲ‌ ಬೆಂಗಳೂರಿನಲ್ಲಿ ಜನಶ್ರೀ ಮತ್ತು ಸುವರ್ಣ ನ್ಯೂಸ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಕಳೆದ 12 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಮಯ ನ್ಯೂಸ್, ಟಿವಿ5 ಕನ್ನಡ, ದಿಗ್ವಿಜಯ, ಈಗ R. ಕನ್ನಡ ಸುದ್ದಿ ವಾಹಿನಿ ಜಿಲ್ಲಾ ವರದಿಗಾರರಾಗಿ ಕೆಲಸ…

Read More

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ನಿನ್ನೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯ್ಯಣ್ಣ ಬೆಳಗೆರೆ ಹಾಗೂ ರಘು ಹೆಚ್ಚು ಮತಗಳನ್ನು ಗಳಿಸುವ ಮೂಲಕ ವಿಜೇತರಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ ಕಾಂತರಾಜ್ ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ಚುನಾವಣೆ ನಡೆಯಿತು. ಮತಏಣಿಕೆಯ ನಂತ್ರ ಆಯ್ಕೆಯಾದ ಪದಾಧಿಕಾರಿಗಳು, ರಾಜ್ಯ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ವಿವರ ಈ ಕೆಳಗಿನಂತಿದೆ ಎಂಬುದಾಗಿ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಘಟಕದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುವರ್ಣ ನ್ಯೂಸ್ ಯೋಗೇಶ್ ಅವರು ಚುನಾಯಿತರಾಗಿದ್ದರೇ, ಉಪಾಧ್ಯಕ್ಷರಾಗಿ ಜಯ್ಯಣ್ಣ ಸಿ ಜಯನುಡಿ, ದಶರಥ ಚುನಾಯಿತರಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಏಕೇಶ್ ಪತ್ರಿಕೆಯ ಟಿಇ ರಘುರಾಮ್ ಆಯ್ಕೆಯಾಗಿದ್ದಾರೆ. ಇನ್ನು ಕಾರ್ಯದರ್ಶಿಯಾಗಿ ರಂಗಧಾಮಯ್ಯ ಕೊರಟಗೆರೆ, ಯಶಸ್ ಕೆ ಪದ್ಮನಾಭ, ನಂದೀಶ್ ಬಿಎಲ್ ತುರುವೇಕೆರೆ ಚುನಾಯಿತರಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ…

Read More

: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದಗಳನ್ನು ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು KUWJ ಚುನಾವಣೆಯಲ್ಲಿ ನೂತನ ಸಾಲಿನ ಆಡಳಿತ ಮಂಡಳಿಗೆ ಆಯ್ಕೆಯಾದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯ. ಸ್ಪರ್ಧಿಸಿದವರೆಲ್ಲರೂ ಗೆಲ್ಲಲು ಆಗುವುದಿಲ್ಲ. ಹಾಗೆಯೇ ಎಲ್ಲರೂ ಸೋಲಲು ಆಗುವುದಿಲ್ಲ. ಸ್ಪರ್ಧೆಯಲ್ಲಿ ಸೋಲು-ಗೆಲುವು ಅನಿವಾರ್ಯ. ಗೆದ್ದವರು ಹಿಗ್ಗಬೇಕಿಲ್ಲ. ಸೋತವರು ಕುಗ್ಗಬೇಕಿಲ್ಲ. ಇಂದಿನ ಸೋಲು ಮುಂದೆ ಗೆಲುವಾಗಬಹುದು. ಸಮಾನ ಮನಸ್ಥಿತಿಯಲ್ಲಿ ಎಲ್ಲವನ್ನೂ ಸ್ವೀಕರಿಸುವುದು ಆರೋಗ್ಯಕರ ಲಕ್ಷಣ ಎಂದಿದ್ದಾರೆ. ಎಷ್ಟೇ ಆದರೂ ನಾವೆಲ್ಲರೂ ವೃತ್ತಿಬಾಂಧವರು. ನಾವೆ ಒಪ್ಪಿಕೊಂಡ ಆದರ್ಶಗಳನ್ನು ಪರಿಪಾಲನೆ ಮಾಡುವ ಮೂಲಕ ವೃತ್ತಿ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾಯಕ ಮಾಡೋಣ ಅಂತ ತಿಳಿಸಿದ್ದಾರೆ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಸೊಬಗು. ಮುಂದೆಯೂ ಚುನಾವಣೆ ಬರುತ್ತದೆ. ಸಮಾಧಾನ, ಸಂಯಮ ನಮ್ಮನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುತ್ತದೆ. ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ಗೆಲ್ಲಬಹುದೇ ಹೊರತು ದ್ವೇಷದಿಂದ ಅಲ್ಲ. ಎಲ್ಲರಿಗೂ…

Read More

ನವದೆಹಲಿ: ಇತ್ತೀಚಿನ ದಿನಗಳಲ್ಲಿ, ಅಧ್ಯಯನವು ಹೆಚ್ಚಿನ ಅಂಕಗಳನ್ನು ಗಳಿಸುವುದು ಮತ್ತು ಅತ್ಯುತ್ತಮ ಕಾಲೇಜಿಗೆ ಪ್ರವೇಶ ಪಡೆಯುವ ಬಗ್ಗೆ ಹೆಚ್ಚು ಗಮನ ಹರಿಸುತ್ತಿದೆ, ಆದರೆ ವಾಸ್ತವವಾಗಿ ಕಲಿಯುವುದು ಅಥವಾ ಪ್ರಕ್ರಿಯೆಯನ್ನು ಆನಂದಿಸುವ ಬದಲು ನಿರಂತರ ಒತ್ತಡವು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಅನೇಕರು ಹೊರೆಯಾಗಿ ಭಾವಿಸುತ್ತಾರೆ ಮತ್ತು ನಿರೀಕ್ಷೆಗಳನ್ನು ಪೂರೈಸಲು ಸಾಧ್ಯವಾಗದಿದ್ದಾಗ ತೀವ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿಯೇ ಅಧ್ಯಯನದ ಪ್ರಕಾರ ವಿಶ್ವದಲ್ಲಿ ಆತ್ಮಹತ್ಯೆಗೆ ಶರಣಾಗುವ 9 ವಿದ್ಯಾರ್ಥಿಗಳಲ್ಲಿ ಭಾರತದಲ್ಲಿ ಒಬ್ಬರು ಸೇರಿದ್ದಾರೆ ಎಂಬುದಾಗಿ ಬಹಿರಂಗ ಪಡಿಸಿದೆ. ಹೊಸ ವರದಿಯೊಂದು ಆತಂಕಕಾರಿ ಸತ್ಯವನ್ನು ಬಹಿರಂಗಪಡಿಸಿದೆ, ವಿಶ್ವದ ಪ್ರತಿ ಒಂಬತ್ತು ವಿದ್ಯಾರ್ಥಿ ಆತ್ಮಹತ್ಯೆಗಳಲ್ಲಿ ಒಂದು ಭಾರತದ್ದಾಗಿದೆ. 2024 ರ IC3 ವಿದ್ಯಾರ್ಥಿ ಆತ್ಮಹತ್ಯೆ ವರದಿಯು ದೇಶಾದ್ಯಂತ ವಿದ್ಯಾರ್ಥಿಗಳ ಆತ್ಮಹತ್ಯೆಗಳು ತೀವ್ರವಾಗಿ ಹೆಚ್ಚುತ್ತಿವೆ, ವಿಶೇಷವಾಗಿ ಶೈಕ್ಷಣಿಕ ಒತ್ತಡ ತೀವ್ರವಾಗಿರುವ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಎಂದಿದೆ. 2013 ಮತ್ತು 2022 ರ ನಡುವೆ, ಭಾರತವು ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ದಾಖಲಿಸಿದೆ, ಇದು ಹಿಂದಿನ ದಶಕಕ್ಕೆ ಹೋಲಿಸಿದರೆ ಶೇಕಡಾ…

Read More

ಬೆಂಗಳೂರು: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿ ಎಂಬುದಾಗಿ ಕರೆಯುವುದು ಕಾನೂನು ಬಾಹಿರವಾಗಿದೆ. ಹಾಗೆ ಬಾಲಾಪರಾಧಿ ಎನ್ನುವಂತಿಲ್ಲ. ಇನ್ಮುಂದೆ ಅದರ ಬದಲಾಗಿ ಬೇರೆ ಪದಗಳನ್ನು ಬಳಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಆದೇಶ ಹೊರಡಿಸಿದೆ. ಈ ಕುರಿತಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದು, ಬಾಲ ನ್ಯಾಯ( ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಅನ್ನು ಅನುಷ್ಠಾನಗೊಳಿಸುತ್ತಿದ್ದು, ಸದರಿ ಕಾಯ್ದೆಯ ಅನುಸಾರ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿಗಳು ಎಂದು ಮಕ್ಕಳ ಪಾಲನಾ ಸಂಸ್ಥೆಗಳನ್ನು ಸುಧಾರಣಾ ಸಂಸ್ಥೆಗಳು (ಕರೆಕ್ಷನಲ್ ಹೋಮ್ಸ್) ಎಂದು ಕರೆಯುವುದು ಕಾನೂನು ಬಾಹಿರವಾಗಿರುತ್ತದೆ ಎಂದಿದ್ದಾರೆ. ಆದುದ್ದರಿಂದ ಬಾಲಾಪರಾಧಿಗಳು ಎಂದು ಸಂಬೋಧಿಸುವ ಬದಲು ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳು ಎಂದು ಬಳಸಿ. ರಿಮಾಂಡ್ ಹೋಂ ಎನ್ನುವ ಬದಲು ವೀಕ್ಷಣಾಲಯ ಎಂದು ಬಳಸಬೇಕು. ಸುಧಾರಣಾ ಸಂಸ್ಥೆಗಳು, ಕರೆಕ್ಷನಲ್ ಹೋಮ್ಸ್ ಎಂದು ಸಂಬೋಧಿಸುವ ಬದಲು ಮಕ್ಕಳ ಪಾಲನಾ ಸಂಸ್ಥೆಗಳು ಎಂದು ಸಂಬೋಧಿಸುವಂತೆ ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/cm-siddaramaiah-launches-rs-870-crore-project-to-fill-74-lakes-with-water/…

Read More

ದಾವಣಗೆರೆ: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್.ಎಸ್.ಎಸ್. ನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಎಂದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ಸೂಚಿಸಲಾಗುವುದೋ ಆಗ ಚುನಾವಣೆ ನಡೆಸಲಾಗುವುದು ಎಂದರು.

Read More

ಮಡಿಕೇರಿ: ರಾಜ್ಯದಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ. 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಹೀಗಾಗಿಯೇ 18,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದರು. ರಾಜ್ಯದಲ್ಲಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಕ್ರಮವಹಿಸಿದೆ. ರಾಜ್ಯದಲ್ಲಿ ಎಲ್ ಕೆಜಿಯಿಂದ ಪಿಯುಸಿಯವರೆಗೆ 1.16 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ಒದಗಿಸಿರುವುದಾಗಿ ತಿಳಿಸಿದರು.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿ, ಚುನಾಯಿತರಾಗಿದ್ದಾರೆ. ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆಗಾಗಿ ಮತದಾನ ನಡೆಯಿತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಿಲ್ಲಾ ಘಟಕಕ್ಕೂ ಮತದಾನ ನಡೆಯಿತು. ಇಂದು ನಡೆದಂತ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪುಷ್ಪರಾಜ್ ಬಿಎನ್ ಹಾಗೂ ಶ್ರವಣ್ ಕುಮಾರ್.ಕೆ ಸ್ಪರ್ಧಿಸಿದ್ದರು. ಇವರಲ್ಲಿ ಪುಷ್ಪರಾಜ್ ಬಿಎನ್ ಅವರು 187 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದರೇ, ಶ್ರವಣ್ ಕುಮಾರ್ ಕೆ. 144 ಮತಗಳನ್ನು ಪಡೆಯುವ ಮೂಲಕ ಸೋಲು ಕಂಡಿದ್ದಾರೆ. ಹೀಗಿದೆ ದಕ್ಷಿಣ ಕನ್ನಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಆಯ್ಕೆಗೊಂಡವರ ವಿವರ ಅಧ್ಯಕ್ಷರಾಗಿ ಪುಷ್ಪರಾಜ್ ಬಿಎನ್ ಆಯ್ಕೆ ಉಪಾಧ್ಯಕ್ಷರಾಗಿ ವಿಲ್ ಫ್ರೆಡ್ ಡಿಸೋಜಾ, ಮುಹಮ್ಮದ್ ಆರೀಫ್, ರಾಜೇಶ್ ಶೆಟ್ಟಿ ಆಯ್ಕೆ ಕಾರ್ಯದರ್ಶಿ ಸ್ಥಾನಕ್ಕೆ ಎ.ಸಿದ್ಧಿಕ್ ನೀರಾಜೆ, ಸುರೇಶ್ ಡಿ…

Read More