Author: kannadanewsnow09

ಬೆಂಗಳೂರು; ನಗರದ ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ಭರವಸೆಯ ಹೆಜ್ಜೆ ಯನ್ನು ಇರಿಸಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳ ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ದಪಡಿಸಲು ಟೆಂಡರ್ ಕರೆಯುವ ಮೂಲಕ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದಿದ್ದಾರೆ. ಈ ಕ್ರಮವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ನಡೆಸಿದ ಪ್ರಾಥಮಿಕ ಪರಿಶೀಲನೆಯ ನಂತರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರಸ್ತಾವಿತ ಗ್ರೀನ್‌ಫೀಲ್ಡ್ (ಹೊಸ) ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/coffee-thief-gang-active-in-chikkamagaluru-khadims-arrested-for-attacking-farmer/ https://kannadanewsnow.com/kannada/dogital-arrest-man-1-crore/

Read More

ಚಿಕ್ಕಮಗಳೂರು; ಜಿಲ್ಲೆಯಲ್ಲಿ ಕಾಫಿ ಕಳ್ಳರ ಗ್ಯಾಂಗ್ ಆಕ್ಟೀವ್ ಆಗಿದೆ. ಕಾಫಿ ಕದಿಯುತ್ತಿದ್ದ ವೇಳೆಯಲ್ಲಿ ಬೆದರಿಸೋದಕ್ಕೆ ತೆರಳಿದಂತ ಬೆಳೆಗಾರನ ಮೇಲೆಯೇ ಅಟ್ಯಾಕ್ ಮಾಡಿ ಕಾಫಿ ಕಳ್ಳತನ ಮಾಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರೇಹಳ್ಳಿ ಗ್ರಾಮದಲ್ಲಿ ಕಾಫಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಾಫಿ ಬೆಳೆಗಾರ ಜಗನ್ನಾಥ ಶೆಟ್ಟಿ ಮೇಲೆ ದಾಳಿಯನ್ನು ಖದೀಮರು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಅರೇಹಳ್ಳಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಆಧರಿಸಿ ಅರೇಹಳ್ಳಿ ಠಾಣೆಯ ಪೊಲೀಸರು ಶಾಹಿದ್ ಮುಬಾರಕ್, ಜಹೀರ್, ಸಾಗರ್, ಪ್ರಜ್ವಲ್ ಹಾಗೂ ಹಜೀಜ್ ಎಂಬಾತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. https://kannadanewsnow.com/kannada/a-man-who-was-harassing-a-woman-in-hubballi-was-tied-to-a-tree-and-beaten-up/ https://kannadanewsnow.com/kannada/dogital-arrest-man-1-crore/

Read More

ಹುಬ್ಬಳ್ಳಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಂತ ಕಾಮುಕನೊಬ್ಬನನ್ನು ಸ್ಥಳೀಯರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದಂತ ಘಟನೆ ನಡೆದಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳವನ್ನು ಕಾಮುಕ ನೀಡುತ್ತಿದ್ದನು ಎನ್ನಲಾಗಿದೆ. ಕಾಮುಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಲೈಂಗಿಕ ಕಿರುಕುಳವನ್ನು ನೀಡುತ್ತಿದ್ದನಂತೆ. ಇಂದು ಕೂಡ ಅದೇ ಕೆಲಸ ಮಾಡಿದ ವೇಳೆಯಲ್ಲಿ ಮಹಿಳೆಯೊಂದಿಗೆ ಸ್ಥಳೀಯರು ಸೇರಿ ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. https://kannadanewsnow.com/kannada/dk-shivakumar-why-did-you-become-an-mla-minister-dcm-you-are-just-a-human-being-jds-sarcasm/ https://kannadanewsnow.com/kannada/dogital-arrest-man-1-crore/

Read More

ಬೆಂಗಳೂರು: ಡಿಕೆ ಶಿವಕುಮಾರ್ ಅವರೇ, ನೀವು ಶಾಸಕರಾದರೇನು ? ‌ಮಂತ್ರಿಯಾದರೇನು ? ಡಿಸಿಎಂ ಆದರೇನು ? ನೀನೊಬ್ಬ ಮನುಷ್ಯ ಅಷ್ಟೇ ಎಂಬುದಾಗಿ ಜೆಡಿಎಸ್ ಕುಟುಕಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಜನರಿಂದ ಆಯ್ಕೆಯಾದ ನೀವು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನಿಮ್ಮ ಆದ್ಯ ಕರ್ತವ್ಯ. ಅದನ್ನು ಬಿಟ್ಟು ಪ್ರಶ್ನೆ ಮಾಡಿದವರಿಗೆ ಧಮ್ಕಿ, ಬೆದರಿಕೆ ಹಾಕುವುದು ಸಂವಿಧಾನದ ಪ್ರಕಾರ ಅಪರಾಧ ಎಂದಿದೆ. ನಾವು 80ರ ದಶಕದಲ್ಲಿ ಜೀವಿಸುತ್ತಿಲ್ಲ ಡಿಕೆಶಿ ಅವರೇ, ನಿಮ್ಮ ಬಳಿ ದುಡ್ಡಿದ್ದರೆ, ಅದು ” ನಾಯಿ ಮೊಲೆ ಹಾಲಿದ್ದಂಗೆ ”. ಯಾರಿಗೂ ಪ್ರಯೋಜನವಿಲ್ಲ. ಅಧಿಕಾರದ ಮದ, ದಬ್ಬಾಳಿಕೆ ನೆತ್ತಿಗೇರಿದೆ ಕೊತ್ವಾಲ್ ಶಿಷ್ಯನ ರೌಡಿಸಂ, ಗೂಂಡಾ ಪ್ರವೃತ್ತಿಗೆ ಕಡಿವಾಣ ಹಾಕದಿರುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಇಂತಹವರು ಜನಪ್ರತಿನಿಧಿಯಾಗಿ ಮುಂದುವರಿಯಲು ನಾಲಾಯಕ್ಕು ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದೆ. ಸಂವಿಧಾನದ ರಕ್ಷಣೆ ಮಾಡುತ್ತೇವೆ ಎನ್ನುವ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿ, ಮೊದಲು ಡಿಕೆಶಿಯಂತಹ ರೌಡಿ…

Read More

ಆಸ್ಟ್ರೇಲಿಯಾ: ಭಾನುವಾರ ಬೆಳಿಗ್ಗೆ ನಡೆದ ಸಾಮೂಹಿಕ ಗುಂಡಿನ ದಾಳಿಯ ವರದಿಗಳ ನಂತರ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಪ್ರಮುಖ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವಂತ NSW ಪೊಲೀಸರು, ಪರಿಸ್ಥಿತಿ ನಿಯಂತ್ರಿಸುತ್ತಿರುವುದಾಗಿ ದೃಢಪಡಿಸಿದ್ದಾರೆ ಮತ್ತು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭದ್ರತೆ ಒದಗಿಸುವಾಗ ಆ ಪ್ರದೇಶವನ್ನು ತಪ್ಪಿಸಲು ಮತ್ತು ಮನೆಯೊಳಗೆ ಇರಲು ನಿವಾಸಿಗಳನ್ನು ಒತ್ತಾಯಿಸಿದ್ದಾರೆ. X ನಲ್ಲಿ ಪೋಸ್ಟ್ ಮಾಡಲಾದ ಎಚ್ಚರಿಕೆಯಲ್ಲಿ, NSW ಪೊಲೀಸರು ಹೀಗೆ ಹೇಳಿದರು: ಬೋಂಡಿ ಬೀಚ್ ನಲ್ಲಿ ನಡೆದ ಗಂಭೀರ ಘಟನೆಗೆ ಪೊಲೀಸರು ಪ್ರಸ್ತುತ ಪ್ರತಿಕ್ರಿಯಿಸುತ್ತಿದ್ದಾರೆ. ದಯವಿಟ್ಟು ಪ್ರದೇಶವನ್ನು ತಪ್ಪಿಸಿ ಮತ್ತು ತುರ್ತು ಸೇವೆಗಳ ನಿರ್ದೇಶನಗಳನ್ನು ಅನುಸರಿಸಿ. ಅದು ಲಭ್ಯವಾದಂತೆ ಹೆಚ್ಚಿನ ಮಾಹಿತಿಯನ್ನು ಒದಗಿಸಲಾಗುವುದು ಎಂದಿದೆ. ಘಟನೆಯ ಸಮಯದಲ್ಲಿ ಸುಮಾರು 50 ಗುಂಡು ಹಾರಿಸುವ ಶಬ್ದಗಳು ಕೇಳಿಬಂದವು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದು ಪ್ರದೇಶದಲ್ಲಿ ವ್ಯಾಪಕ ಭೀತಿಯನ್ನುಂಟುಮಾಡಿತು. ದಿ ಜೆರುಸಲೆಮ್ ಪೋಸ್ಟ್ ಪ್ರಕಾರ, ಬೀಚ್ ಬಳಿ ನಡೆಯುತ್ತಿದ್ದ ಹನುಕ್ಕಾ ಪಾರ್ಟಿಯಲ್ಲಿ…

Read More

ಬೆಂಗಳೂರು: ವಿಮಾನದ ಪ್ರಯಾಣದ ವೇಳೆಯಲ್ಲಿ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ಅದೇ ವಿಮಾನದಲ್ಲಿದ್ದಂತ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಸಿಪಿಆರ್ ನೀಡಿ, ಬದುಕಿಸುವಲ್ಲಿ ಯಶಸ್ವಿಯಾಗಿದ್ದರು. ಅವರ ಸೇವಾ ಮನೋಭಾವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ ಎಂದಿದ್ದಾರೆ. ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು…

Read More

ಶಿವಮೊಗ್ಗ: ಸಾಗರ ಉಪ ವಿಭಾಗದ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ್ ಅಂಡ್ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಂತ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಧಾರವಾಡ ಜಿಲ್ಲೆಯ ನವಲಗುಂದದಿಂದ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿನ ಯಡೆಹಳ್ಳಿ ವೃತ್ತಕ್ಕೆ ವ್ಯಕ್ತಿಯೊಬ್ಬ ಜಿಂಕೆ ಚರ್ಮವನ್ನು ಮಾರಾಟ ಮಾಡೋದಕ್ಕೆ ಆಗಮಿಸುತ್ತಿದ್ದನು. ಈ ಮಾಹಿತಿಯು ಸಾಗರ ಉಪ ವಿಭಾಗದ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ್ ಗೆ ಸಿಕ್ಕಿತ್ತು. ಕೂಡಲೇ ಅಲರ್ಟ್ ಆದಂತ ಅವರು, ತಮ್ಮ ಸಿಬ್ಬಂದಿಗಳೊಂದಿಗೆ ಮಫ್ತಿಯಲ್ಲಿ ಆನಂದಪುರದ ಯಡೆಹಳ್ಳಿ ವೃತ್ತಕ್ಕೆ ಹೋಗಿ ಕಾರ್ಯಾಚರಣೆಗೆ ಇಳಿದಿದ್ದರು. ನವಲಗುಂದದಿಂದ ಆನಂದಪುರದ ಯಡೆಹಳ್ಳಿ ಸರ್ಕಲ್ ಗೆ ಬಸ್ಸಿನಲ್ಲಿ ಬಂದು ಇಳಿದು ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸಿದ್ದಾನೆ. ಆ ವೇಳೆ ಕೂಡಲೇ ವಶಕ್ಕೆ ಪಡೆದು, ಆತ ತಂದಿದ್ದಂತ ಚೀಲವನ್ನು ಪರಿಶೀಲಿಸಿದಾಗ ಅದರಲ್ಲಿ ಚಿಂಕೆ ಚರ್ಮ ಪರ್ತೆಯಾಗಿದೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ನವಲಗುಂದದ ಅರ್ಜುನ್ ಬಿನ್ ರಾಮಪ್ಪ ಎಂಬುದಾಗಿ ಗುರುತಿಸಲಾಗಿದೆ. ಜಿಂಕೆ ಚರ್ಮದ…

Read More

ಬೆಂಗಳೂರು: ​ನಮ್ಮ ಬೆಂಗಳೂರು ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನಕ್ಕೆ ಹೆಸರಾಗಿದೆ. ಈಗ ನಮ್ಮ ಯುವ ಪ್ರತಿಭೆಗಳು ನೇರವಾಗಿ ಮಂಗಳ ಗ್ರಹದ ಮಿಷನ್‌ಗಳಿಗೆ ಕೈಜೋಡಿಸುವ ಅವಕಾಶ ಬಂದಿದೆ. ನಗರದ ಹೃದಯ ಭಾಗವಾದ ಜಯನಗರದಲ್ಲಿರುವ ಪಾರ್ಸೆಕ್‌ (ParSEC) ಸೆಂಟರ್‌ ಹಾಗೂ ಮೇಕರ್ಸ್‌ ಅಡ್ಡದಲ್ಲಿ 2025ರ ಡಿಸೆಂಬರ್ 19 ರಿಂದ 21ರವರೆಗೆ ‘ಹಾರ್ಡ್‌ವೇರ್ ಹ್ಯಾಕಥಾನ್ 2.0 – ಜರ್ನಿ ಟು ಮಾರ್ಸ್’ ಹಮ್ಮಿಕೊಳ್ಳಲಾಗಿದೆ. ​ಇದು 72 ಗಂಟೆಗಳ ಕಾಲ ನಡೆಯುವ ಒಂದು ಸ್ಪೆಷಲ್ ಹಾರ್ಡ್‌ವೇರ್ ಹ್ಯಾಕಥಾನ್ ಆಗಿದೆ. ಮಂಗಳ ಗ್ರಹದಲ್ಲಿ ಮನುಷ್ಯರು ಬದುಕಲು ಮತ್ತು ಪ್ರಯಾಣಿಸಲು ನೆರವಾಗುವ ಅತ್ಯಾಧುನಿಕ ಟೆಕ್ ಪರಿಹಾರಗಳನ್ನು ಇಲ್ಲಿ ವಿನ್ಯಾಸಗೊಳಿಸಬೇಕು ಮತ್ತು ಪ್ರೋಟೋಟೈಪ್ ಮಾಡಬೇಕು. ​ ಇದರಲ್ಲಿ ಏನು ವಿಶೇಷ? ಮೇಕರ್‌ಗಳು ಮತ್ತು ಎಂಜಿನಿಯರ್‌ಗಳ ಕೆಲಸ ಸುಲಭವಾಗಿಸಲು, ನಿಮ್ಮದೇ ವಿನ್ಯಾಸದ ಪಿಸಿಬಿ (ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್) ಕೇವಲ 24 ಗಂಟೆಗಳ ಒಳಗೆ ಸ್ಥಳದಲ್ಲಿಯೇ ತಯಾರಿಸಿ ಕೊಡಲಾಗುತ್ತದೆ. ಜತೆಗೆ, ಸರ್ಕ್ಯೂಟ್ ವಿನ್ಯಾಸ, ಬಿಸಿನೆಸ್ ಪ್ಲ್ಯಾನಿಂಗ್ ಮತ್ತು ಹಣ ಹೂಡಿಕೆದಾರರ ಮುಂದೆ ಪ್ರದರ್ಶಿಸುವ ತರಬೇತಿ ಕಾರ್ಯಾಗಾರಗಳು…

Read More

ಬೆಂಗಳೂರು: ಆಕ್ಸಿಸ್ ಮ್ಯಾಕ್ಸ್ ಲೈಫ್ ಸಂಸ್ಥೆ ಸಹಯೋಗದಲ್ಲಿ ಶಿಲ್ಪಾ ಫೌಂಡೇಶನ್, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿದಡಿ (ಸಿಎಸ್‌‌ಆರ್) ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಕ್ ವಿತರಿಸಲಾಯಿತು. ಹತ್ತಾರು ಶಾಲೆಗಳ ನೂರಾರು ವಿದ್ಯಾರ್ಥಿಗಳಿಗೆ ಬ್ಯಾಕ್ ವಿತರಿಸುವ‌ ಕಾರ್ಯ ನಿರಂತರವಾಗಿ ನಡೆಸಿಕೊಂಡು ಬರಲಾಗುವುದು. ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಸಿಕ್ಕಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿಲ್ಪಾ ಫೌಂಡೇಶನ್‌‌ನ ಇಎಸ್‌‌ಜಿ ಮತ್ತು ಸಾಮಾಜಿಕ ಕಾರ್ಯಕ್ರಮದ ಕಾರ್ಯನಿರ್ವಾಹಕ ಮುಖ್ಯಸ್ಥ ಡಾ.ಸತೀಶ್ ಬೆಟ್ಟಪ್ಪ ಹೇಳಿದರು. ಆಕ್ಸಿಸ್ ಮ್ಯಾಕ್ಸ್ ಲೈಫ್‌‌ನ ವಲಯ ಉಪಾಧ್ಯಕ್ಷ ಕೆ.ಸುಧಾಕರ ಶೆಟ್ಟಿ, ಪ್ರಾದೇಶಿಕ ವ್ಯವಸ್ಥಾಪಕ ಎಂ.ಸಂತೋಷ್, ಜೆ.ಪಿ.ನಗರದ ಶಾಖಾ ವ್ಯವಸ್ಥಾಪಕ ರಾಮ್ ಪ್ರಸಾದ್ ಮತ್ತಿತರರಿದ್ದರು.

Read More

ಬೆಂಗಳೂರು:  ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನ ಯೋಜನೆಯ ಅಡಿಯಲ್ಲಿ 2.50 ಲಕ್ಷ, 3 ಲಕ್ಷ ಪ್ರೋತ್ಸಾಹಧನಕ್ಕೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಸಮಾಜ ಕಲ್ಯಾಣ ಇಲಾಖೆಯಿಂದ ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಯಾರಿಗೆಲ್ಲ ಪ್ರೋತ್ಸಾಹಧನ? ಎಷ್ಟು ನೀಡಲಾಗುತ್ತೆ ಗೊತ್ತಾ? ಪರಿಶಿಷ್ಟ ಜಾತಿ ಯುವಕರು ಇತರೆ ಜಾತಿಯ ಯುವತಿಯರನ್ನು ವಿವಾಹವಾದಲ್ಲಿ, ಅಂತಹ ದಂಪತಿಗಳಿಗೆ ರೂ.2.50 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಯುವತಿಯರು ಇತರೆ ಜಾತಿಯ ಯುವಕರನ್ನು ವಿವಾಹವಾದಲ್ಲಿ, ಅಂತಹ ದಂತಿಗಳಿಗೆ ರೂ.3 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆ ಹೇಗೆ? ಅಂತರ್ಜಾತಿ ವಿವಾಹಿತ ದಂಪತಿಗಳು ವಿವಾಹವನ್ನು ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಬೇಕು. ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅಂತರ್ಜಾತಿ ವಿವಾಹಿತರು ಪ್ರೋತ್ಸಾಹಧನಕ್ಕಾಗಿ https://swdservices.karnataka.gov.in/swIncentive/ICM/ICMHome.aspx ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ. ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಯುವತಿಯ ವಯಸ್ಸು 18 ರಿಂದ 42 ವರ್ಷ, ಯುವಕನ…

Read More