Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಯೋಜನೆ ಪರಿಸರಕ್ಕೆ ಮಾರಕ, ನಿರ್ಮಿಸದಂತೆ ವಿರೋಧವನ್ನು ರೈತ ಸಂಘಟನೆಗಳು ವ್ಯಕ್ತ ಪಡಿಸಿದ್ದವು. ಈ ಬೆನ್ನಲ್ಲೇ ಕೆಪಿಸಿಎಲ್ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೆಪಿಸಿಎಲ್ ಅಧಿಕಾರಿಗಳು, ಕರ್ನಾಟಕ ರಾಜ್ಯವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಶರಾವತಿ ಕಣಿವೆಯಲ್ಲಿ 2000 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ ಸ್ಟೋರೇಜ್ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಪರಿಸರಕ್ಕೆ ಹೆಚ್ಚಿನ ಹಾನಿಯಾಗದ ಈ ಯೋಜನೆಯನ್ನು ಜಾರಿಗೊಳಿಸಲು ಕೆಪಿಸಿಎಲ್ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಹೆಜ್ಜೆ ಇಡುತ್ತಿದೆ. ಪ್ರಸ್ತುತ ಪರಿಸರ ಸಂರಕ್ಷಣೆ ಜೊತೆಗೆ ಬೇಡಿಕೆಗೆ ಅನುಗುಣವಾಗಿ ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಈ ಯೋಜನೆ ಅನಿವಾರ್ಯ ಎಂದರು. ಈ ಯೋಜನೆ ಜಾರಿ ವೇಳೆ ಈಗಾಗಲೇ ನಿರ್ಮಾಣವಾಗಿರುವ ಗೇರುಸೊಪ್ಪ ಮತ್ತು ತಲಕಳಲೆ…
ಬೆಂಗಳೂರು : “ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯಿಸಿದರು. “ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ” ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು. ದೆಹಲಿಗೆ ಖಾಸಗಿ ಭೇಟಿ ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ…
ಬೆಂಗಳೂರು: ಸುರಂಗ ಮಾರ್ಗ ರಚನೆ ಮೂಲಕ ಬೆಂಗಳೂರಿಗೆ ಆಪತ್ತು ಎದುರಾಗಲಿದೆ ಎಂಬ ವರದಿಗಳಿವೆ. ಇಷ್ಟಿದ್ದರೂ ಡಿ.ಕೆ.ಶಿವಕುಮಾರ್ ಅವರು ಇದನ್ನು ಮಾಡಲು ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಈ ಸುರಂಗ ಯೋಜನೆ ವಿರುದ್ಧ ಈಗಾಗಲೇ ಹಲವು ಸಂಸ್ಥೆಗಳು- ಪರಿಸರವಾದಿಗಳು ಧ್ವನಿ ಎತ್ತಿದ್ದಾರೆ. ಅದೇನು ಜನೋಪಯೋಗಿ ಎಂದು ನನಗೆ ಅನಿಸುತ್ತಿಲ್ಲ; ಟನೆಲ್ ರಸ್ತೆಗೆ 300- 400 ರೂ. ಟೋಲ್ ಕೊಡಬೇಕಾಗುತ್ತದೆ. ಹಣ ಕಟ್ಟಿಸಿಕೊಳ್ಳದೇ ಮಾಡುವ ಕೆಲಸ ಇದ್ದರೆ ಮಾಡಿ ಎಂದು ಆಗ್ರಹಿಸಿದರು. ಭೂಮಿ ಮೇಲೆ ರಸ್ತೆ ಮಾಡುವುದು ಸೂಕ್ತವಿದ್ದು, ಈ ಕುರಿತು ಗಮನಿಸಲಿ ಎಂದು ಒತ್ತಾಯಿಸಿದರು. ಬೆಂಗಳೂರು ಬೆಳೆಸುವುದನ್ನು ನಿಲ್ಲಿಸಿ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಬೆಳೆಸಿ ಎಂದು ತಿಳಿಸಿದರು. ಅಲ್ಲಿ ಜನರು ನಿಲ್ಲುವಂತೆ ಮಾಡಿ. ಗುಲ್ಬರ್ಗದ ಸ್ಥಿತಿ ಏನಾಗಿದೆ? ತಲಾದಾಯದ ವಿಷಯದಲ್ಲಿ ಅದು ಅತ್ಯಂತ ಹಿಂದುಳಿದಿದೆ ಎಂದು ನುಡಿದರು. ಬಿಜಾಪುರದಲ್ಲಿ ಕೈಗಾರಿಕೆ ಸ್ಥಾಪಿಸಿ ಎಂದು ಎಂ.ಬಿ.ಪಾಟೀಲರಿಗೆ ಮನವಿ ಮಾಡಿದರು.…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಲಿಂಗ್ ಗ್ಲಾಸ್ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ರಸ್ತೆಗಳಲ್ಲಿ ಎಷ್ಟು ಗುಂಡಿ ಇದೆ ಎಂದು ಸರ್ಕಾರ ತಿಳಿಸಿದರೆ, ಗಿನ್ನೆಸ್ ದಾಖಲೆಗೆ ಕಳುಹಿಸಬಹುದು ಎಂದು ವ್ಯಂಗ್ಯವಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿ, ಒಂದು ಲೇಯರ್ ಡಾಂಬರೀಕರಣ ಮಾಡಿ ಎಂದು ಸೂಚನೆ ನೀಡಿದ್ದಾರೆ. ಇದಕ್ಕೆ 4-5 ಸಾವಿರ ಕೋಟಿ ರೂ. ಬೇಕಾಗುತ್ತದೆ. ಗ್ರಂಥಪಾಲಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳವೇ ಇಲ್ಲ. ಇನ್ನು ಇಷ್ಟೊಂದು ಹಣ ಎಲ್ಲಿದೆ? ಬಿಬಿಎಂಪಿ ಅಸ್ತಿತ್ವದಲ್ಲಿಲ್ಲದೆ ರಸ್ತೆ ಡಾಂಬರೀಕರಣಕ್ಕೆ ಟೆಂಡರ್…
ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಎಎಸ್ಐ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 36 ವರ್ಷದ ಮಹಿಳೆಯೊಬ್ಬರು ಲಿಖಿತ ದೂರು ನೀಡಿದ್ದರು. ಮಹಿಳೆಯ ದೂರು ಆಧರಿಸಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸುನೀಲ್, ಎಎಸ್ಐ ಪ್ರಕಾಶ್ ವಿರುದ್ಧ ಕೇಸ್ ದಾಖಲಾಗಿತ್ತು. ಹೀಗಾಗಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ. ಅಂದಹಾಗೇ ಡಿಜೆ ಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ 36 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಅಲ್ಲದೇ ಪೋಟೋ, ವೀಡಿಯೋ ಇಟ್ಟುಕೊಂಡು ಈ ವಿಷಯ ಬಹಿರಂಗಪಡಿಸಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂಬುದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು. ಇದಷ್ಟೇ ಅಲ್ಲದೇ…
ಬೆಳಗಾವಿ: ಜಿಲ್ಲೆಯಲ್ಲಿ ಪ್ರೇಯಸಿಯೊಂದಿಗೆ ಲಾಡ್ಜ್ ನಲ್ಲಿ ಪತಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ಈ ರೀತಿಯಾಗಿ ಸಿಕ್ಕಿಬಿದ್ದ ಪತಿಯನ್ನು ಕಂಡಂತ ಪತ್ನಿಯು ಹಿಗ್ಗಾಮುಗ್ಗಾ ಧರ್ಮದೇಟು ನೀಡಿರುವಂತ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಪ್ರೇಯಸಿಯೊಂದಿಗೆ ಪತಿಯೊಬ್ಬ ಪತ್ನಿಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾನೆ. ಹೀಗೆ ಸಿಕ್ಕಿಬಿದ್ದಂತ ಪತಿಗೆ ಸಾರ್ವಜನಿಕವಾಗಿ ಪತ್ನಿ ಧರ್ಮದೇಟು ನೀಡಿದ್ದಾರೆ. ಪತಿ ಅವಿನಾಶ್ ಭೋಸಲೆಗೆ ಪತ್ನಿ, ಮಾವ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕೋಡಿ ಬಸ್ ನಿಲ್ದಾಣದ ಬಳಿಯಲ್ಲಿದ್ದಂತ ಲಾಡ್ಜ್ ಎದುರು ಈ ಘಟನೆ ನಡೆದಿದೆ. ಪತಿಯನ್ನು ಉಳ್ಳಾಡಿಸಿ ಚಪ್ಪಲಿಯಿಂದ ಪತ್ನಿ ಹೊಡೆದಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/minister-zameer-ahmed-good-news-for-bengaluru-lawyers-housing-scheme-implemented-for-lawyers-too/ https://kannadanewsnow.com/kannada/it-is-not-a-crime-if-a-relationship-that-started-with-consent-ends-in-disappointment-high-court/
ಬೆಂಗಳೂರು: ಆರಂಭದಲ್ಲಿ ಪರಸ್ಪರ ಇಬ್ಬರ ನಡುವೆ ಸಮ್ಮತಿಯ ಮೇರೆಗೆ ಸಂಬಂಧ ಚೆನ್ನಾಗಿದ್ದ ಬಳಿಕ, ಕೊನೆಯಲ್ಲಿ ಯಾವುದೋ ಕಾರಣಕ್ಕೆ ನಿರಾಸೆಯಲ್ಲಿ ಅಂತ್ಯಗೊಂಡರೇ ಅದು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಡೇಟಿಂಗ್ ಆಪ್ ನಲ್ಲಿ ಮಹಿಳೆಯೊಬ್ಬರು ಸಾಂಪ್ರಾಸ್ ಆಂಥೋಣಿ ಎಂಬುವರೆಗೆ ಒಂದು ವರ್ಷಗಳ ಕಾಲ ಆತ್ಮೀಯವಾಗಿದ್ದರು. ಆ ಬಳಿಕ ಮಹಿಳೆ ಹಾಗೂ ಸಂಪ್ರಾಸ್ ಆಂಥೋಣಿ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ವೇಳೆ ಇಬ್ಬರು ವಾಟ್ಸ್ ಆಪ್ ನಲ್ಲಿ ಪರಸ್ಪರ ಚಾಟಿಂಗ್ ಮಾಡಿದ್ದಾರೆ. ಪೋಟೋ, ವೀಡಿಯೋಗಳನ್ನೂ ವಿನಿಮಯ ಮಾಡಿಕೊಂಡಿದ್ದಾರೆ ಎಂಬುದನ್ನು ಗಂಭೀರವಾಗಿ ಪರಿಗಣಿಸಿದಂತ ನ್ಯಾಯಪೀಠವು ಆ ಬಳಿಕ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿರುವುದು ಅಪರಾಧವಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿತು. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೇ ಅಪರಾಧವಲ್ಲ ಎಂಬುದಾಗಿಯೂ ಇದೇ ಸಂದರ್ಭದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿತು. ಅಲ್ಲದೇ ಮಹಿಳೆ…
ವಿಜಯನಗರ: ಲಾಡ್ಜ್ ಕೊಠಡಿಯೊಂದರಲ್ಲೇ ನೇಣುಬಿಗಿದುಕೊಂಡು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ದಾಕ್ಷಾಯಿಣಿ ಲಾಡ್ಜ್ ನಲ್ಲಿ ಗುತ್ತಿಗೆದಾರನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬದಿದೆ. ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಆನಂದ್ ಉಮೇಶ್ ಹೆಗಡೆ(40) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆಯಿಂದ ದಾಕ್ಷಾಯಿಣಿ ಲಾಡ್ಜ್ ನ 17ನೇ ರೂಮಿನಲ್ಲಿ ಗುತ್ತಿಗೆದಾರರು ವಾಸವಿದ್ದರು. ಈ ಸಂಬಂಧ ಹೂವಿನಹಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/minister-zameer-ahmed-good-news-for-bengaluru-lawyers-housing-scheme-implemented-for-lawyers-too/ https://kannadanewsnow.com/kannada/public-attention-significant-change-in-aadhaar-card-update-rules-from-november-1/
ಬೆಂಗಳೂರು : ವಸತಿ ಇಲಾಖೆಯ ಗೃಹಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಹಾಗೂ ಹೆಚ್ಚುವರಿ ಅಡ್ವೋಕೇಟ್ ಜನರಲ್ ಇಸ್ಮಾಯಿಲ್ ಜಬೀವುಲ್ಲಾ ಅವರು, ಸಚಿವರನ್ನು ಭೇಟಿ ಮಾಡಿ ವಸತಿ ರಹಿತ ವಕೀಲರಿಗೆ ನಿವೇಶನ ಅಥವಾ ವಸತಿ ಸಂಕೀರ್ಣ ನಿರ್ಮಾಣ ಮಾಡಿಕೊಡುವ ಬಗ್ಗೆ ಮನವಿ ಸಲ್ಲಿಸಿದಾಗ, ವಸತಿ ಸಂಕೀರ್ಣ ನಿರ್ಮಾಣಕ್ಕೆ ಸೂಕ್ತ ಜಮೀನು ಹುಡುಕುವಂತೆ ಗೃಹ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ನಗರದ ಹಲವೆಡೆ 2 ಬಿ ಎಚ್ ಕೆ ವಸತಿ ಸಂಕೀರ್ಣ ನಿರ್ಮಿಸಿದ್ದು, ವಕೀಲರು ಒಪ್ಪಿದರೆ ಅಲ್ಲಿಯೂ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಗೃಹಮಂಡಳಿ ಆಯುಕ್ತ ದಯಾನಂದ್,ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಶಿನ್ನಾಳ್ಕರ್, ಪ್ರಧಾನ ವ್ಯವಸ್ಥಾಪಕ ಪರಶುರಾಮ್…
ಮಂಡ್ಯ : ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ರಂಗೇರಿದ್ದು, 8 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರೆ, ಉಳಿದ 8 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಸೋಮವಾದಂದು ಹಲವು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದರಿಂದ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಶಿವಮೂರ್ತಿ ಘೋಷಣೆ ಮಾಡಿದ್ದಾರೆ. ಹೌದು, ಇಡೀ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಹಾಲಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ, ಹಾಲಿ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಹಾಲಿ ನಿರ್ದೇಶಕ ಪಿ.ಸಂದರ್ಶ್, ಸಿ.ಸಚ್ಚಿನ್, ಬಿ.ಗಿರೀಶ್, ಕೆ.ವಿ.ದಿನೇಶ್, ಹೆಚ್.ಅಶೋಕ್, ಎ.ವಿಜೇಂದ್ರ ಮೂರ್ತಿ ಇವರ ಪ್ರತಿಸ್ಪರ್ಧಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯಾಗಿದ್ದು, ಚುನಾವಣಾಧಿಕಾರಿ ಕಛೇರಿಗೆ ಆಗಮಿಸಿ ತಮ್ಮ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಇದೇ ವೇಳೆ ತಮ್ಮ ಅಪಾರ ಅಭಿಮಾನಿಗಳು ಡಿಸಿಸಿ ಬ್ಯಾಂಕ್ ಮುಂದೆ ವಿಜಯೋತ್ಸವ ಆಚರಿಸಿದರು. ಇದರೊಂದಿಗೆ ಮಂಡ್ಯ ತಾಲ್ಲೂಕು, ಪಾಂಡವಪುರ ತಾಲೂಕು, ಕೆ.ಆರ್.ಪೇಟೆ ತಾಲೂಕು ಹಾಗೂ…














