Author: kannadanewsnow09

ಚಿಕ್ಕಬಳ್ಳಾಪುರ: ಕೆರೆಗೆ ಈಜಾಡಲು ತೆರಳಿದಂದ ಮೂವರು ಬಾಲಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 14 ವರ್ಷದ ವಿಷ್ಣು, 12 ವರ್ಷದ ನಿಹಾಲ್ ರಾಜ್ ಹಾಗೂ 16 ವರ್ಷದ ಹರ್ಷವರ್ಧನ್ ಎಂದು ಗುರುತಿಸಲಾಗಿದೆ. ಕರೆಯಲ್ಲಿ ಮುಳುಗಿದ ಒಬ್ಬರನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ.

Read More

ಬೆಂಗಳೂರು: ಪ್ರಹ್ಲಾದ್ ಜೋಷಿಯವರೇ ಕೇಂದ್ರ ನಡೆಸಲಿರುವ ಸಮೀಕ್ಷೆಯಲ್ಲಿ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಮತಾಂತರ ಹಾಗೂ ಜಾತಿಗಳನ್ನು ಒಡೆಯುವ ದೃಷ್ಠಿಯಿಂದ ರಾಜ್ಯ ಸರ್ಕಾರ ಸಮೀಕ್ಷೆ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆ ಅವರ ಅಜ್ಞಾನಕ್ಕೆ ಹಿಡಿದ ಕನ್ನಡಿಯಾಗಿದೆ. ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರ ಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ ಎಂದು ಹೇಳಿದ್ದಾರೆ. ಕ…

Read More

ಬೆಂಗಳೂರು: ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿ ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11ರೊಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೂಚಿಸಿದೆ. ಬಿ.ಎಸ್ಸಿ. ನರ್ಸಿಂಗ್ ಕೋರ್ಸಿಗೆ ಸರ್ಕಾರ ಹೆಚ್ಚಿಸಿರುವ ಸೀಟುಗಳು, ಹಿಂದಿನ ಸೀಟುಗಳ ಹಂಚಿಕೆಯ ನಂತರ ಭರ್ತಿಯಾಗದೆ ಉಳಿದಿರುವ/ರದ್ದುಗೊಂಡಿರುವ/ಹೊಸದಾಗಿ ಸೇರಿಸಲಾದ ಬಿ.ಫಾರ್ಮ ಮತ್ತು ಫಾರ್ಮ-ಡಿ ಸೀಟುಗಳನ್ನು ಈ ಹಂಚಿಕೆಗೆ ಪರಿಗಣಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿರುವ ಸೀಟುಗಳು ಹಾಗೂ ಖಾಸಗಿ ಕಾಲೇಜುಗಳ ‘ಜಿ’ ಸೀಟುಗಳು ಈ ಹಂಚಿಕೆ ವ್ಯಾಪ್ತಿಗೆ ಒಳಪಡುತ್ತವೆ. ಅಭ್ಯರ್ಥಿಗಳು ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಈ ಹಂತದ ಹಂಚಿಕೆಗೆ ಪರಿಗಣಿಸುವುದಿಲ್ಲ. ಕಾಲೇಜುವಾರು, ವರ್ಗವಾರು ಮತ್ತು ಕೋರ್ಸುವಾರು ವಿವರವಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರೂ 10,000 ಕಾಷನ್ ಡಿಪಾಸಿಟ್…

Read More

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ನೇರ ನಗದು ವರ್ಗಾವಣೆ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಿ, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ. ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಯೋಜನೆ, ಸಾಧನ ಸಲಕರಣೆ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್‍ಚೇರ್ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಮೇಲ್ಕಂಡ ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೋರ್ಟಲ್‍ನಡಿ (https://sevasindhu.karnataka.gov.in/sevasindhu/kannada) ಆನ್‍ಲೈನ್ ಮೂಲಕ ವಿಕಲಚೇತನರು ಅರ್ಜಿ…

Read More

ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು. ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ…

Read More

ಉತ್ತರ ಪ್ರದೇಶ: ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿಸಲ್ಪಟ್ಟ ಸ್ವಯಂ ಘೋಷಿತ ‘ದೇವಮಾನವ’ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಳೆದ ವಾರ ಅವರನ್ನು ಉತ್ತರ ಪ್ರದೇಶದ ಆಗ್ರಾದಿಂದ ವಶಕ್ಕೆ ಪಡೆಯಲಾಯಿತು. ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ 17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಸ್ವಾಮಿ ಚೈತನ್ಯಾನಂದ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಂದು, ಪೊಲೀಸರು ಹೆಚ್ಚಿನ ಕಸ್ಟಡಿ ವಿಚಾರಣೆಯನ್ನು ಕೋರಲಿಲ್ಲ ಮತ್ತು ಅಪರಾಧಗಳ ಗಂಭೀರತೆ ಮತ್ತು ಸಾಕ್ಷ್ಯಗಳನ್ನು ಹಾಳುಮಾಡುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದನ್ನು ತಡೆಯುವ ಅಗತ್ಯವನ್ನು ಉಲ್ಲೇಖಿಸಿ ನ್ಯಾಯಾಂಗ ಕಸ್ಟಡಿಗೆ ಅರ್ಜಿ ಸಲ್ಲಿಸಿದರು. ಆದಾಗ್ಯೂ, ಚೈತನ್ಯಾನಂದ ಅವರ ವಕೀಲರು ನ್ಯಾಯಾಂಗ ಕಸ್ಟಡಿಗೆ ಕೋರಲು ಕಾರಣಗಳನ್ನು ಪ್ರಶ್ನಿಸಿದರು. ವಿಚಾರಣೆಯ ಸಮಯದಲ್ಲಿ, ಹಿಂದಿನ ದಾಖಲಾತಿಗಳಲ್ಲಿ ಐಪಿಸಿಯ ಸೆಕ್ಷನ್ 232 ಇಲ್ಲದಿರುವುದನ್ನು ಗಮನಿಸಿ, ಆರೋಪಗಳಿಗೆ ಸೇರಿಸಲಾಗಿದೆಯೇ ಎಂದು…

Read More

ಹಾಸನ: ಅಡುಗೆ ಮಾಡುವಂತ ವಿಚಾರಕ್ಕೆ ತಾಯಿ ಮತ್ತು ಮಗನ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕ್ಕೇರಿದಂತ ಸಂದರ್ಭದಲ್ಲಿ ಕಂಠಪೂರ್ತಿ ಕುಡಿದಿದ್ದಂತ ಪುತ್ರ ತಾಯಿಯನ್ನೇ ಕೊಲೆ ಮಾಡಿದಂತ ಘಟನೆ ಹಾಸನದ ಆಲೂರಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಆಲೂರಿನ ಕದಾಳುಚನ್ನಾಪುರದಲ್ಲಿ ಅಡುಗೆ ಮಾಡುವಂತ ವಿಚಾರಕ್ಕೆ ತಾಯಿ-ಮಗನ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕ್ಕೇರಿದಂತ ಸಂದರ್ಭದಲ್ಲಿ ಕಂಠಪೂರ್ತಿ ಕೂಡಿದಿದ್ದಂತ ಪುತ್ರ ಸಂತೋಷ್(19), ತಾಯಿ ಪ್ರೇಮ(45)ಗೆ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದಂತ ತಾಯಿ ಪ್ರೇಮರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/alert-smokers-beware-cigarettes-can-cause-these-serious-diseases/ https://kannadanewsnow.com/kannada/breaking-i-am-getting-married-soon-dimple-queen-rachita-ram-gave-good-news-to-fans/

Read More

ಬೆಂಗಳೂರು: ಈಗ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಬಸವಣ್ಣನ ಅನುಯಾಯಿಗಳೆಲ್ಲರೂ ಸಮೀಕ್ಷೆಯ ‘ಇತರೆ’ ಕಾಲಿನಲ್ಲಿ ‘ಲಿಂಗಾಯತ ಧರ್ಮ’ ಎಂದು ಬರೆಸಿ, ಜಾತಿ ಕಾಲಂನಲ್ಲಿ ತಮ್ಮತಮ್ಮ ಉಪಜಾತಿ/ಪಂಗಡಗಳ ಹೆಸರು ಬರೆಸಲು ಹೇಳಿದ್ದು, ಅದೇ ರೀತಿ ರಾಜ್ಯದ ಎಲ್ಲೆಡೆ ಮಾಡುತ್ತಿದ್ದಾರೆ ಎಂದು ಲಿಂಗಾಯತ ಮಠಾಧೀಶರ ಒಕ್ಕೂಟದ ಮುಖ್ಯಸ್ಥರಾಗಿರುವ ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ. ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಜಾತಿ ಗಣತಿಯಲ್ಲಿ ನಮ್ಮ ಸಮಾಜದವರೆಲ್ಲ ಲಿಂಗಾಯತ ಧರ್ಮ ಎಂದೇ ನಮೂದಿಸುವಂತೆ ಸಮುದಾಯದ ಸದಸ್ಯರಿಗೆ ಹೇಳಿದ್ದೇವೆ. ನಮ್ಮ ಒಕ್ಕೂಟದಲ್ಲಿ 400 ಸ್ವಾಮೀಜಿಗಳಿದ್ದಾರೆ. ಈ ವಿಚಾರದಲ್ಲಿ ಒಕ್ಕೂಟ ಒಮ್ಮತವನ್ನು ತಾಳಿದೆ. ಇದರಲ್ಲಿ ಬೇರೆಯವರು ಅನಗತ್ಯವಾಗಿ ಗೊಂದಲ ಹುಟ್ಟಿಸುತ್ತಿದ್ದಾರೆ’ ಎಂದು ಅವರು ನುಡಿದಿದ್ದಾರೆ. ‘ಅ.5ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿ 500ಕ್ಕೂ ಹೆಚ್ಚು ಬಸವಪರ ಶ್ರೀಗಳು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ,…

Read More

ಬೆಂಗಳೂರು: ವಿಶ್ವ ಕಾಫಿ ದಿನದ ಪ್ರಯುಕ್ತ ಕಾಫಿ ಹೃದಯಭಾಗವಾದ ಕೊಡಗಿನಲ್ಲಿ ಜಾವಾ ಯೆಡ್ಜಿ ಮೋಟಾರ್‌ ಸೈಕಲ್‌ ವತಿಯಿಂದ “ಹೋಮ್‌ಕಮಿಂಗ್ ರೈಡ್‌ನೊಂದಿಗೆ “ಪ್ರೀಮಿಯಂ ಲಿಮಿಟೆಡ್-ಎಡಿಷನ್ ಸಿಂಗಲ್-ಒರಿಜಿನ್ ಯೆಜ್ಡಿ ಕಾಫಿ”ಬಿಡುಗಡೆ ಮಾಡಿದೆ. ಕಂಪನಿಯು ತನ್ನ ಐಕಾನಿಕ್ ಜಾವಾ ಯೆಜ್ಡಿ ನೊಮ್ಯಾಡ್ಸ್ ರೈಡಿಂಗ್ ಕಾರ್ಯಕ್ರಮವನ್ನು ಪುನರುಜ್ಜೀವನಗೊಳಿಸಿದ್ದು, ಲೆವಿಸ್ಟಾ ಕಾಫಿಯೊಂದಿಗೆ ತಮ್ಮ SLN ಕಾಫಿ ಎಸ್ಟೇಟ್‌ನಲ್ಲಿ ಸಹಭಾಗಿತ್ವದಲ್ಲಿ ಏಕ-ಮೂಲದ, ಗೌರ್ಮೆಟ್ ‘ಯೆಜ್ಡಿ ಕಾಫಿ’ಯನ್ನು ಪ್ರಾರಂಭಿಸಿದೆ. 2018 ರಲ್ಲಿ, ಕಂಪನಿಯು ಕಾರ್ಯಕ್ಷಮತೆಯ ಕ್ಲಾಸಿಕ್ ಮೋಟಾರ್‌ಸೈಕಲ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಮಧ್ಯಮ ಗಾತ್ರದ ವಿಭಾಗದಲ್ಲಿ ಐಕಾನಿಕ್ ಬ್ರ್ಯಾಂಡ್‌ಗಳಾದ ಜಾವಾ ಮತ್ತು ಯೆಜ್ಡಿಗಳ ಮರಳುವಿಕೆಯನ್ನು ಗುರುತಿಸಿತು. ಸಾಂಪ್ರದಾಯಿಕ ಮಾರ್ಗದಿಂದ ಸವಾರಿ ಮಾಡುವ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ಹಂಚಿಕೆಯ ಮೌಲ್ಯಗಳ ಸುತ್ತ ಸಮುದಾಯಗಳು ಮತ್ತು ಉಪಸಂಸ್ಕೃತಿಗಳನ್ನು ನಿರ್ಮಿಸುವತ್ತ ಗಮನಹರಿಸಿತು. ವಿಶೇಷ ಆವೃತ್ತಿಯ ಯೆಜ್ಡಿ x ಲೆವಿಸ್ಟಾ ಕಾಫಿ ಪ್ಯಾಕ್ ಕೂರ್ಗ್‌ನ ಶ್ರೀಮಂತ ಕಾಫಿ ಪರಿಣತಿಯನ್ನು ಸೆರೆಹಿಡಿಯಲು ಅಸಾಧಾರಣವಾಗಿ ರಚಿಸಲಾದ ಎರಡು ಪ್ರಭೇದಗಳನ್ನು ನೀಡುತ್ತದೆ. ಒಂದು ಮೈಸೂರು ನುಗ್ಗೆಟ್ಸ್ ಎಕ್ಸ್‌ಟ್ರಾ ಬೋಲ್ಡ್, ಎಎಎ-ದರ್ಜೆಯ ಬೀನ್ಸ್‌ನಿಂದ…

Read More

ಬೆಂಗಳೂರು: ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ ಬಗ್ಗೆ 48 ಗಂಟೆಗಳಲ್ಲಿ ಜನತೆಗೆ ಸಮಗ್ರ ಮಾಹಿತಿ ನೀಡಿಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ. ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿ ಮಾತನಾಡಿದ ಮಾಜಿ ಪ್ರಧಾನಿಗಳು; ನೆರೆ ಪರಿಹಾರ ಕಾರ್ಯಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಪ್ರವಾಹದಿಂದ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ 3-4 ದಿನಗಳಲ್ಲಿ ನಾನೂ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಈ ಸರಕಾರ ಏನೆಲ್ಲಾ ಪರಿಹಾರವನ್ನು ಒದಗಿಸಿದೆ ಎಂಬುದನ್ನು ಖುದ್ದು ನೋಡುತ್ತೇನೆ ಎಂದರು. ಸಾಧ್ಯವಿರುವ ಕಡೆಗಳಿಗೆ ನಾನು ರಸ್ತೆಯ ಮೂಲಕವೇ ತೆರಳಿ ನೆರೆ ಸಂತ್ರಸ್ತರನ್ನು ಭೇಟಿ ಮಾಡುತ್ತೇನೆ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡು ಅವರಿಂದ ಮಾಹಿತಿ ಪಡೆಯುತ್ತೇನೆ. ಆಗಿರುವ ನಷ್ಟದ ಬಗ್ಗೆ ವಿವರ ಪಡೆದು ಅದಕ್ಕೆ ತಕ್ಕಂತೆ ರಾಜ್ಯ ಸರಕಾರ ನೆರವಿಗೆ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುತ್ತೇನೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ…

Read More