Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು : ಬೆಂಗಳೂರಿನ ಕೃಷಿ ಮತ್ತು ಸಂಬಂಧಿತ ಕಾನೂನುಗಳ ಅಧ್ಯಯನ ಕೇಂದ್ರ (ಸಿಎಎಎಲ್) ಇಂದು ತನ್ನ ಅಧಿಕೃತ ವೆಬ್ಸೈಟ್ ಬಿಡುಗಡೆಗೊಳಿಸಿತು. ಹೆಬ್ಬಾಳದ ಹಯಾತ್ ಸೆಂಟ್ರಿಕ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರು ವೆಬ್ಸೈಟ್ (https://www.caal.in.net) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶ. ಬಹುಸಂಖ್ಯಾತ ಜನರು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅವಲಂಬಿಸಿದ್ದು, ಅದನ್ನೇ ತಮ್ಮ ಜೀವನೋಪಾಯ ಮಾಡಿಕೊಂಡಿದ್ದಾರೆ. ಹೀಗಾಗಿ ರೈತರು, ಕೃಷಿ, ಪರಿಸರ ವಿಜ್ಞಾನ ಮತ್ತು ಕೃಷಿ ವ್ಯವಹಾರಗಳು ಸುಸ್ಥಿರ ಆಗುವ ಬಗ್ಗೆ ದೃಷ್ಟಿಕೋನದಿಂದ ಕಾನೂನು ಸಹ ತನ್ನ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು. ಕೃಷಿ ಮತ್ತು ಅದಕ್ಕೆ ಪೂರಕವಾದ ಕಾನೂನುಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಆರಂಭಿಸಿರುವುದೇ ದೊಡ್ಡ ಪ್ರಯತ್ನ. ಇದರಿಂದ ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಕಾನೂನಾತ್ಮಕ ಬೆಂಬಲ ನೀಡಿದಂತಾಗುತ್ತದೆ. ಈ ಸಿಎಎಎಲ್ ಕೇಂದ್ರವನ್ನು ಯಶಸ್ವಿಯಾಗಿ ನಡೆಸುತ್ತಾ, ಈಗ ಅದನ್ನು ಮತ್ತಷ್ಟು ಜನರಿಗೆ ತಲುಪಿಸಲು ವೆಬ್ಸೈಟ್ ರೂಪಿಸಿ…
ನವದೆಹಲಿ: ರಿಲಯನ್ಸ್ ಅನಿಲ್ ಅಂಬಾನಿ ಸಮೂಹದ (RAAG) ವಿರುದ್ಧದ ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಮಂಗಳವಾರದಂದು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ಗೆ (RCOM) ಸೇರಿದ ₹3,034.90 ಕೋಟಿ ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಅನಿಲ್ ಅಂಬಾನಿ ಸಮೂಹದ ಪ್ರಕರಣಗಳಲ್ಲಿ ಇ.ಡಿ ಇಲ್ಲಿಯವರೆಗೆ ಜಪ್ತಿ ಮಾಡಿದ ಒಟ್ಟು ಆಸ್ತಿಯ ಮೌಲ್ಯ ₹19,344 ಕೋಟಿ ದಾಟಿದೆ. ಪ್ರಕರಣದ ಪ್ರಮುಖ ಮುಖ್ಯಾಂಶಗಳು: ಜಪ್ತಿಯಾದ ಆಸ್ತಿಗಳು: ಮುಂಬೈನ ಉಷಾ ಕಿರಣ್ ಕಟ್ಟಡದಲ್ಲಿರುವ ಐಷಾರಾಮಿ ಫ್ಲ್ಯಾಟ್, ಪುಣೆಯ ಖಂಡಾಲಾದಲ್ಲಿರುವ ಫಾರ್ಮ್ಹೌಸ್ ಮತ್ತು ಅಹಮದಾಬಾದ್ನ ಸಾನಂದ್ನಲ್ಲಿರುವ ಭೂಮಿಯನ್ನು ಇ.ಡಿ ವಶಪಡಿಸಿಕೊಂಡಿದೆ. ಜೊತೆಗೆ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ನ 7.71 ಕೋಟಿ ಷೇರುಗಳನ್ನು ಸಹ ಜಪ್ತಿ ಮಾಡಲಾಗಿದೆ. ತನಿಖೆಯ ಹಿನ್ನೆಲೆ: ಎಸ್ಬಿಐ (SBI), ಪಿಎನ್ಬಿ (PNB), ಬ್ಯಾಂಕ್ ಆಫ್ ಬರೋಡಾ ಮತ್ತು ಎಲ್ಐಸಿ (LIC) ನೀಡಿದ ದೂರುಗಳ ಆಧಾರದ ಮೇಲೆ ಸಿಬಿಐ ದಾಖಲಿಸಿದ್ದ ಎಫ್ಐಆರ್ಗಳನ್ನು ಆಧರಿಸಿ ಈ…
ಬೆಂಗಳೂರು: ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2026ರ ಏಪ್ರಿಲ್ 27ರಂದು ಹೊರಡಿಸಿರುವ ನೂತನ ಆದೇಶದ ಅನ್ವಯ, ಪರಿಶಿಷ್ಟ ಜಾತಿಗಳ ಮೀಸಲಾತಿ ಮತ್ತು ಒಳಮೀಸಲಾತಿ ಜಾರಿಯಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ನೀಡಲಾಗುತ್ತಿದ್ದ ಮೀಸಲಾತಿ ಪ್ರಮಾಣವನ್ನು ತಾತ್ಕಾಲಿಕವಾಗಿ ಪರಿಷ್ಕರಿಸಿದ್ದು, ಹೈಕೋರ್ಟ್ನ ಅಂತಿಮ ತೀರ್ಪಿಗೆ ಒಳಪಟ್ಟು ಹೊಸ ಒಳಮೀಸಲಾತಿ ನೀತಿಯನ್ನು ಜಾರಿಗೆ ತಂದಿದೆ. 1. ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆ ಈ ಹಿಂದೆ ಶೇಕಡಾ 17ರಷ್ಟಿದ್ದ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಸದ್ಯಕ್ಕೆ ಶೇಕಡಾ 15ಕ್ಕೆ ಸೀಮಿತಗೊಳಿಸಲಾಗಿದೆ. ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ. 50ಕ್ಕೆ ಸೀಮಿತಗೊಳಿಸಬೇಕೆಂಬ ನ್ಯಾಯಾಲಯದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. 2. ಒಳಮೀಸಲಾತಿ ಹಂಚಿಕೆ ವಿವರ ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಶೇ. 15ರಷ್ಟು ಮೀಸಲಾತಿಯನ್ನು ಮೂರು ಪ್ರವರ್ಗಗಳಾಗಿ ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ: ಪ್ರವರ್ಗ-ಎ: 5.25% ಪ್ರವರ್ಗ-ಬಿ: 5.25%…
ನವದೆಹಲಿ: ಭಾರತೀಯ ರೈಲ್ವೆಯ ಆಧುನೀಕರಣದ ಪಯಣದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಎರಡು ಹೊಸ ‘ಅಮೃತ್ ಭಾರತ್ ಎಕ್ಸ್ಪ್ರೆಸ್’ ರೈಲುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸಿದ್ದಾರೆ. ಪುಣ್ಯಕ್ಷೇತ್ರಗಳ ದರ್ಶನಕ್ಕೆ ತೆರಳುವ ಭಕ್ತರು, ವಲಸೆ ಕಾರ್ಮಿಕರು ಮತ್ತು ಸಾಮಾನ್ಯ ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಆಧುನಿಕ ಸೌಲಭ್ಯಗಳನ್ನು ಒದಗಿಸುವುದು ಈ ರೈಲುಗಳ ಮುಖ್ಯ ಉದ್ದೇಶವಾಗಿದೆ. https://twitter.com/RailMinIndia/status/2049084463842521322 ಹೊಸ ರೈಲುಗಳ ಸಂಚಾರದ ಪಥ: 1. ಬನಾರಸ್ – ಹಡಪ್ಸರ್ (ಪುಣೆ) ಅಮೃತ್ ಭಾರತ್ ಎಕ್ಸ್ಪ್ರೆಸ್: ಕಾಶಿ ವಿಶ್ವನಾಥನ ನಗರಿ ಬನಾರಸ್ನಿಂದ ಪುಣೆಯ ಉದ್ಯೋಗ ಕೇಂದ್ರವಾದ ಹಡಪ್ಸರ್ಗೆ ಈ ರೈಲು ಸಂಚರಿಸಲಿದೆ. ಉದ್ಘಾಟನಾ ಪ್ರಯಾಣವು ಸುಮಾರು 30 ಗಂಟೆಗಳಲ್ಲಿ ಗುರಿಯನ್ನು ತಲುಪಲಿದೆ. ಪ್ರಮುಖ ನಿಲ್ದಾಣಗಳು: ಪ್ರಯಾಗ್ರಾಜ್, ಝಾನ್ಸಿ, ಬಿನಾ, ರಾಣಿ ಕಮಲಾಪತಿ (ಭೋಪಾಲ್), ಇಟಾರ್ಸಿ, ಭುಸಾವಲ್ ಮತ್ತು ದೌಂಡ್ ಸೇರಿದಂತೆ ಒಟ್ಟು 18 ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ. 2. ಅಯೋಧ್ಯೆ…
ಮಂಡ್ಯ : ಮದ್ದೂರು ನಗರದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಮದ್ದೂರು ಉತ್ಸವಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮದ್ದೂರು ಉತ್ಸವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು. ಮದ್ದೂರು ಉತ್ಸವದ ಪ್ರಾರಂಭೋತ್ಸವದ ಅಂಗವಾಗಿ ಶನಿವಾರ ನಡೆದ ಮ್ಯಾರಾಥಾನ್ ಗೆ ನಿರೀಕ್ಷೆಗೂ ಮೀರಿದ ಜನರ ಬಂದಿದ್ದು, ಹಾಗೂ ಮದ್ದೂರಮ್ಮನ ಜಾತ್ರೆಗೆ ಹೆಚ್ಚಿನ ಪ್ರಮಾಣದಲ್ಲಿ ದೇಶಿ ತಳಿ ಹಳ್ಳಿಕಾರ್ ದನಗಳು, ಬಂಡೂರು ಟಗರುಗಳು, ಕುದುರೆಗಳನ್ನು ರೈತರು ತಂದು ಕಟ್ಟಿರುವುದರಿಂದ ಜಾತ್ರೆಗೆ ಮತ್ತಷ್ಟು ಹೆಚ್ಚಿನ ಮೆರಗು ಬಂದಿದೆ ಎಂದರು. ಮಂಗಳವಾರ ಮದ್ದೂರು ಉತ್ಸವದ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಲಂಕಾರದ ವ್ಯವಸ್ಥೆಗೆ ಚಾಲನೆ ನೀಡಲಿದ್ದು, ಮೇ.8 ರ ವರೆಗೂ ದೀಪಾಲಂಕಾರವಿದ್ದು, ಇದರಿಂದ ಮದ್ದೂರಮ್ಮನ ಹಬ್ಬಕೆ ವಿಶೇಷ ಮೆರಗು ಬರಲಿದೆ ಎಂದರು. ಮಂಗಳವಾರ ಮತ್ತು ಬುಧವಾರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದ್ದು, ನಗರದ ತಾಲೂಕು ಕ್ರೀಡಾಂಗಣ ಹಾಗೂ…
ಮಂಡ್ಯ : ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಹೆಚ್ಚಿನ ವಿದ್ಯಾಭ್ಯಾಸ ಕಲ್ಪಿಸಬೇಕೆಂಬ ಉದ್ದೇಶದಿಂದ ಮದ್ದೂರು ನಗರದಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ ಮತ್ತು ಸಂಶೋಧನಾ ಕೇಂದ್ರ ಹಾಗೂ ಪಿಎಂ – ಉಷಾ ಯೋಜನೆಯಡಿ ಕಂಪ್ಯೂಟರ್ ಪ್ರಯೋಗಾಲಯಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸ್ನಾತಕೋತ್ತರ ಪದವಿ ಪಡೆದ ಬಳಿಕ ಸ್ನಾತಕೋತ್ತರ ಸಂಶೋಧನಾ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಈ ಹಿಂದೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ವಿದ್ಯಾರ್ಥಿಗಳು ಸ್ಥಳೀಯವಾಗಿಯೇ ಉನ್ನತ ವ್ಯಾಸಂಗ ಮಾಡಬೇಕೆಂಬ ಉದ್ದೇಶದಿಂದ ಸ್ನಾತಕೋತ್ತರ ಪದವಿ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದ್ದು, ಹೀಗಾಗಿ ಕಾಲೇಜಿನಲ್ಲಿ ಈ ಬಾರಿ ಶೇ.100 ರಷ್ಟು ಫಲಿತಾಂಶ ಬಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಇತ್ತಿಚಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ…
ಕಲಬುರಗಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಚಾಲನೆ ನೀಡಿದ್ದು, ಮುಂದಿನ ಒಂದು ವಾರದಲ್ಲಿ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಹಾಗೂ ಇಲಾಖೆಯ ಆಧುನೀಕರಣದ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು. ನೇಮಕಾತಿ ಪ್ರಕ್ರಿಯೆಯ ಪ್ರಮುಖಾಂಶಗಳು: ಒಳಮೀಸಲಾತಿ ವಿವಾದಕ್ಕೆ ತೆರೆ: ಬಹುದಿನಗಳಿಂದ ಬಾಕಿ ಉಳಿದಿದ್ದ ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ, ನೇಮಕಾತಿ ಪ್ರಕ್ರಿಯೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ. ಪಿಎಸ್ಐ ನೇಮಕ: ಈಗಾಗಲೇ 545 ಪಿಎಸ್ಐಗಳು ಇಲಾಖೆಗೆ ಸೇರ್ಪಡೆಯಾಗಿದ್ದು, ಹೊಸದಾಗಿ 600 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯೂ ಶೀಘ್ರವೇ ಆರಂಭವಾಗಲಿದೆ. ಬೃಹತ್ ನೇಮಕಾತಿ ಗುರಿ: ರಾಜ್ಯದಲ್ಲಿ ಒಟ್ಟು 56,834 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿಗಳು ಈಗಾಗಲೇ ಘೋಷಿಸಿದ್ದಾರೆ. ಇದರ ಭಾಗವಾಗಿ ಮೊದಲ ಹಂತದಲ್ಲಿ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿ ನಡೆಯಲಿದೆ. ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಕೇಂದ್ರ…
ಶಿವಮೊಗ್ಗ: ಮಲೆನಾಡಿನ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಸಾಗರ ನಗರದ ಶ್ರೀ ಗಣಪತಿ ಅರ್ಬನ್ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷೆಯಾಗಿ ಅನುಭವೀ ಸಹಕಾರಿ ಧುರೀಣೆ ಸರಸ್ವತಿ ನಾಗರಾಜ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯಲ್ಲಿ ನಡೆದ ಈ ಆಯ್ಕೆ ಪ್ರಕ್ರಿಯೆಯು ಸೌಹಾರ್ದಯುತವಾಗಿ ನಡೆದಿದ್ದು, ಬ್ಯಾಂಕಿನ ಸರ್ವತೋಮುಖ ಏಳಿಗೆಗೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ. ಅಭಿನಂದನೆಗಳ ಮಹಾಪೂರ ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿ. ಶಂಕರ್( ಮಾಸ್ಟರ್ ಶಂಕರ್), ನಿಕಟಪೂರ್ವ ಅಧ್ಯಕ್ಷ ಆರ್. ಶ್ರೀನಿವಾಸ್ ಮೇಸ್ತ್ರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಲಿತಾಂಬಿಕೆ, ಮ್ಯಾನೇಜರ್ ಸುಧಾ ಹಾಗೂ ಲಯನ್ಸ್ ಕ್ಲಬ್ನ ಪ್ರಮುಖರಾದ ಮೇಜರ್ ನಾಗರಾಜ್, ಎನ್.ಆರ್. ವಿನಯ್ ಸೇರಿದಂತೆ ಅನೇಕ ಗಣ್ಯರು ಸರಸ್ವತಿ ನಾಗರಾಜ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಸರಸ್ವತಿ ನಾಗರಾಜ್: ಶೈಕ್ಷಣಿಕ ಮತ್ತು ವೃತ್ತಿ ಬದುಕು ಸೊರಬ ತಾಲ್ಲೂಕಿನ ದೊಡ್ಡೇರಿಯ ಗುಂಡಾ ಭಟ್ ಮತ್ತು ಸಾವಿತ್ರಮ್ಮ ದಂಪತಿಯ ಪುತ್ರಿಯಾದ ಸರಸ್ವತಿಯವರು ಸಾಗರದ ಎಲ್.ಬಿ. ಮತ್ತು ಎಸ್.ಬಿ.ಎಸ್. ಕಾಲೇಜಿನಲ್ಲಿ ಬಿ.ಕಾಂ…
ಶಿವಮೊಗ್ಗ: ಸಾಗರ ತಾಲ್ಲೂಕು ಖಾಸಗಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಆರ್. ಶ್ರೀನಿವಾಸ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ. ಸಾಗರದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಹೀಗಿದೆ ನೂತನ ಪದಾಧಿಕಾರಿಗಳ ವಿವರ: ಸಂಘದ ಬಲವರ್ಧನೆಗಾಗಿ ವಿವಿಧ ಜವಾಬ್ದಾರಿಗಳಿಗೆ ಕೆಳಗಿನವರನ್ನು ನೇಮಿಸಲಾಗಿದೆ: ಗೌರವಾಧ್ಯಕ್ಷರು: ರಾಬರ್ಟ್ ಗೋಮ್ಸ್ ಉಪಾಧ್ಯಕ್ಷರು: ಮುರುಗನ್, ಚಂದ್ರು ಮೇಸ್ತ್ರಿ, ಎಲ್.ಆರ್.ಎಸ್. ರಾಜಣ್ಣ, ವೆಂಕಟೇಶ್ ವಿ., ಖಲಬ್ ಸಾಬ್, ವಾಸು ಮೇಸ್ತ್ರಿ, ಮನೋಜ್. ಪ್ರಧಾನ ಕಾರ್ಯದರ್ಶಿಗಳು: ಶ್ರೀನಾಥ್, ಸಬಾಸ್ಟಿನ್. ಖಜಾಂಚಿ: ಯೋಗೇಂದ್ರ. ಸಂಘಟನಾ ಕಾರ್ಯದರ್ಶಿ: ಅಂತೋನಿ ಗೋಮ್ಸ್. ಸಹ ಕಾರ್ಯದರ್ಶಿಗಳು: ಅರುಣ್, ಶಂಕರ್ ಪೂಜಾರಿ, ಗುರುರಾಜ, ನಾಗರಾಜ್, ಮರಿದೇವ, ಶಿವರಾಮ ಜಂಬಗಾರು. ಸಂಚಾಲಕರು: ಸಂತೋಷ್, ಸುಂದರ, ಬೀರಪ್ಪ, ಮಣಿ. ಕಾರ್ಮಿಕರ ಹಿತರಕ್ಷಣೆಗೆ ಸಂಘ ಬದ್ಧ: ಆರ್. ಶ್ರೀನಿವಾಸ್ ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಆರ್. ಶ್ರೀನಿವಾಸ್ ಮೇಸ್ತ್ರಿ, ತಾಲ್ಲೂಕಿನ ಕಾರ್ಮಿಕರ ಶಕ್ತಿಯ ಬಗ್ಗೆ ಮಾಹಿತಿ ನೀಡಿದರು: “ಸಾಗರ ತಾಲ್ಲೂಕಿನಲ್ಲಿ ಸುಮಾರು 14,500 ಕಟ್ಟಡ…
ಶಿವಮೊಗ್ಗ: ದೇಶದ ರಾಜಕೀಯ ಇತಿಹಾಸದಲ್ಲಿ ಮಹಿಳೆಯರಿಗೆ ಶಕ್ತಿ ತುಂಬುವ ‘ನಾರಿಶಕ್ತಿ ವಂದನಾ ವಿಧೇಯಕ’ದ ಸುತ್ತಲ ರಾಜಕೀಯ ಇದೀಗ ಬೀದಿಗಿಳಿದಿದೆ. ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸದನದಲ್ಲಿ ಅಡ್ಡಿಪಡಿಸಿದ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ನಿಲುವನ್ನು ವಿರೋಧಿಸಿ ಸಾಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವಿನೂತನ ಹಾಗೂ ಆಕ್ರಮಣಕಾರಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿದೆ. ವಿನೂತನ ಪ್ರತಿಭಟನೆ: ಅಂಬೇಡ್ಕರ್ ಪುತ್ಥಳಿ ಮುಂದೆ ಮೊಳಗಿದ ನಾದ ನಗರಸಭೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತೆಯರು, ಕೈಯಲ್ಲಿ ತಟ್ಟೆ ಮತ್ತು ಲೋಟಗಳನ್ನು ಬಡಿಯುವ ಮೂಲಕ ಕಾಂಗ್ರೆಸ್ ಸರ್ಕಾರದ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ನಾರಿಶಕ್ತಿಯ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂಬ ಆಕ್ರೋಶ ಪ್ರತಿಭಟನೆಯಲ್ಲಿ ಎದ್ದು ಕಾಣುತ್ತಿತ್ತು. ಕಾಂಗ್ರೆಸ್ನದ್ದು ಮಹಿಳಾ ವಿರೋಧಿ ಧೋರಣೆ: ಹರತಾಳು ಹಾಲಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. “ಕಳೆದ 30 ವರ್ಷಗಳಿಂದ…














