Author: kannadanewsnow09

ಶಿವಮೊಗ್ಗ: ಮಲ್ಲಿಕಾರ್ಜುನ ಹಕ್ರೆ ಅವರೇ ನೀವು ಬೇಸೂರು ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕಾಲನಿಗೆ ಹೊಂದಿಕೊಂಡ ಭೂಮಿಯಲ್ಲಿ ಅರಣ್ಯ ಅಧಿಕಾರಿಗಳು ಟ್ರಂಚ್ ಹೊಡೆಯುತ್ತಿದ್ದದ್ದು ನಿಲ್ಲಿಸಿದ್ದು ಒಳ್ಳೆಯ ನಡೆ. ಜನರ ಬಳಿ ಸಾಗುವುದೇ ನಿಜದ ರಾಜಕೀಯ ಸೇವೆ. ಆದರೇ ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ ಮಾಡಬೇಕಿರೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ. ನಿಮ್ಮ ಬಿಜೆಪಿ ಪಕ್ಷ ಎಂಬುದಾಗಿ ಮಲ್ಲಿಕಾರ್ಜುನ ಹಕ್ರೆಗೆ, ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ತುಮುರಿ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದು ಪೋಸ್ಟ್ ಮಾಡಿರುವಂತ ಅವರು, ತಾವು ನಿನ್ನೆ ಸಾಗರ ತಾಲ್ಲೂಕಿನ ಬೇಸೂರು ಗ್ರಾಮಕೆ ಭೇಟಿ ದಲಿತ ಕಾಲನಿಯ ಹೊಂದಿಕೊಂಡ ಭೂಮಿಯನ್ನು ಟ್ರೆಂಚ್ ಹೊಡೆಯುತ್ತಾ ಇದ್ದ ಅರಣ್ಯ ಅಧಿಕಾರಿಗಳನ್ನು ಮುಖಾಮುಖಿ ಆಗಿ ಪ್ರತಿರೋಧ ತೋರಿರುವ ಸುದ್ದಿ ನೋಡಿದೆ. ಹಾಗೆಯೇ ನೀವು ಸಾಗರ ಶಾಸಕರಿಗೆ ದಿಕ್ಕಾರ ಕೂಗಿ ಕಾಲನಿ ಜನರಿಂದಲೂ ಕೂಗಿಸಿದ್ದು ಕೇಳಿದೆ ಎಂದಿದ್ದಾರೆ. ನನ್ನ ಪಾಯಿಂಟ್ ಇಷ್ಟೇ. ನೀವು ಹೋಗಿ ಪ್ರತಿರೋಧ ತೋರಿದ್ದು ಒಳ್ಳೆಯ…

Read More

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ ಮತ್ತು ಸಬಲೀಕರಣದ ಸಂಕೇತಗಳಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ ಹಾಗೂ ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿಯ ಶಂಕುಸ್ಥಾಪನೆ ಮತ್ತು ಹೊಸದಾಗಿ ನೇಮಕಾತಿ ಹೊಂದಿದ ಸಿಬ್ಬಂದಿಗೆ ಆದೇಶ ಪತ್ರ ವಿತರಣೆ, ಅಪಘಾತ/ಅಪರಾಧ ರಹಿತ ಸೇವೆ ಸಲ್ಲಿಸಿದ ಸಂಸ್ಥೆಯ ಚಾಲನಾ ಸಿಬ್ಬಂದಿಗೆ ಬೆಳ್ಳಿ ಪದಕ ವಿತರಣೆ ಹಾಗೂ ನೂತನ ತಂತ್ರಾಂಶಗಳ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೊಡುಗೆ ಬಹಳ ದೊಡ್ಡದಿದೆ. ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಕೂಡ ಬಸ್ ಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಸಾರಿಗೆ ವ್ಯವಸ್ಥೆ ಎಂದರೆ ಕೇವಲ ಒಂದು ಇಲಾಖೆಯ ಕಾರ್ಯವಲ್ಲ, ಅದು ಜನಜೀವನದ…

Read More

ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ವಿನಂತಿಸಿದರು. ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಇಲಾಖೆಯ ಸಾರಥ್ಯ ವಹಿಸಿಕೊಂಡ ನಂತರ ಇಲಾಖೆಯಲ್ಲಿ ಸಾಕಷ್ಟು ಹೊಸತನವನ್ನು ತಂದಿದ್ದಾರೆ. ರಾಜ್ಯಾದ್ಯಂತ 7,800 ಹೊಸ ಬಸ್ ಗಳನ್ನು ಒದಗಿಸಿದ್ದಾರೆ. ಜನರ ಪ್ರಯಾಣ ಸುಖಕರವಾಗಿರುವಂತೆ ನೋಡಿಕೊಳ್ಳಲು ಏನು ಬೇಕೋ ಅದನ್ನೆಲ್ಲ ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಲು ರಾಮಲಿಂಗಾ ರಡ್ಡಿ ಅವರ ಶ್ರಮ ಕಾರಣ ಎಂದ ಸಚಿವರು, ನಮ್ಮ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಹೆಚ್ಚು ಬಡವರಿರುವ ಕ್ಷೇತ್ರ, ಕಾರಿನಲ್ಲಿ ಓಡಾಡುವವರ ಸಂಖ್ಯೆ ತೀರಾ ಕಡಿಮೆ ಇದೆ. ಸುವರ್ಣ ವಿಧಾನಸೌಧ ನಿರ್ಮಾಣ ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಜೀವನಾಧಾರವಾಗಿದ್ದ ಜಮೀನನ್ನೇ ಬಿಟ್ಟುಕೊಟ್ಟ ತ್ಯಾಗಿಗಳು. ಆದರೆ ಬಹಳಷ್ಟು ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ, ಆದಷ್ಟು ಗ್ರಾಮೀಣ ಪ್ರದೇಶಕ್ಕೆ ಬೇಡಿಕೆ…

Read More

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಆರಂಭಗೊಂಡಿತ್ತು. ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನೆರವೇರಿದ್ದು, 4.93 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಹಂಚಿಕೊಂಡಿದ್ದು, ಇಂದು ರಾಜ್ಯಾಧ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ-1ರ ಕನ್ನಡ ಮತ್ತು ಅರೇಬಿಕ್ ಪರೀಕ್ಷೆಗಳು ನಡೆದವು. ಇದಕ್ಕೆ 5,09,085 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 4,93,132 ಮಂದಿ ಹಾಜರಾಗಿದ್ದಾರೆ. 15,953 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂಬುದಾಗಿ ತಿಳಿಸಿದೆ. ಬೆಂಗಳೂರು ನಾರ್ಥ್ ವಿಭಾಗದಲ್ಲಿ 33.498, ಬೆಂಗಳೂರು ಸೌಥ್ ನಲ್ಲಿ 41,703, ಬೆಂಗಳೂರು ಗ್ರಾಮಾಂತರದಲ್ಲಿ 9,458, ರಾಮನಗರದಲ್ಲಿ 6,518, ಚಿತ್ರದುರ್ಗದಲ್ಲಿ 11,703, ಶಿವಮೊಗ್ಗದಲ್ಲಿ 14,708 ಸೇರಿದಂತೆ 4,93,132 ವಿದ್ಯಾರ್ಥಿಗಳು ಮೊದಲ ದಿನದ ಕನ್ನಡ ಮತ್ತು ಅರಾಬಿಕ್ ಭಾಷೆಯ ಪರೀಕ್ಷೆಗೆ ಹಾಜರಾಗಿದ್ದಾರೆ. ಇಂದಿನ ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣ ಶೇ.96.87 ಆಗಿದೆ. https://kannadanewsnow.com/kannada/minister-k-j-george-good-news-for-the-states-farmers-7-hour-electricity-supply-even-during-the-day/

Read More

ಬೆಂಗಳೂರು : ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಕುಸುಮ-ಸಿ ಯೋಜನೆಯಡಿ ಕೃಷಿ ಫೀಡರ್ ಗಳ ಸೌರೀಕರಣ ಕಾರ್ಯವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಕುಸುಮ್-ಸಿ ಯೋಜನೆ ಮೂಲಕ ಕೃಷಿಗೆ ವಿದ್ಯುತ್ ಒದಗಿಸುವ ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಿ 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸುವ ಗುರಿಯೊಂದಿಗೆ ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ನೀಡಲು ಕ್ರಮ ವಹಿಸಲಾಗುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಅದರೆ ಶೇ. 80 ರಷ್ಟು ಸಬ್ಸಿಡಿಯೊಂದಿಗೆ ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ,” ಎಂದು ತಿಳಿಸಿದರು. “ನಾಡಿನ ಜನರಿಗೆ ಹಾಗೂ ರೈತರರಿಗೆ ವಿದ್ಯುತ್ ನೀಡುವ ಮೂಲಕ ಇಂಧನ ಇಲಾಖೆ…

Read More

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ (LTT) ಮಾರ್ಚ್ 1 ರಂದು ಒನ್‌ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ರೈಲು ಸಂಖ್ಯೆ 06541 ಎಸ್‌ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ. ಇದು ಮರುದಿನ (ಸೋಮವಾರ) ರಾತ್ರಿ 11.30 ಗಂಟೆಗೆ ಮುಂಬೈನ ಎಲ್‌ಟಿಟಿ ನಿಲ್ದಾಣವನ್ನು ತಲುಪಲಿದೆ. ಈ ರೈಲು ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ಲೋನಾವಾಲಾ ಹಾಗೂ ಕಲ್ಯಾಣ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ರೈಲಿನಲ್ಲಿ ಒಟ್ಟು 19 ಬೋಗಿಗಳಿರಲಿವೆ. ಇವುಗಳಲ್ಲಿ 15 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಎಸ್‌ಎಲ್‌ಆರ್…

Read More

ಇಸ್ರೇಲ್: ಇರಾನ್ ಇಸ್ರೇಲ್ ಕಡೆಗೆ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಸುರಿಮಳೆಗೈದಿದ್ದು, ಸಂಘರ್ಷ ನಡೆಯುತ್ತಿರುವ ನಡುವೆಯೇ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇರಾನ್‌ನಲ್ಲಿನ ತಾಣಗಳನ್ನು ಗುರಿಯಾಗಿಸಿಕೊಂಡು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡೆಸಿದ ಸರಣಿ ದಾಳಿಗಳ ನಂತರ ಪ್ರತೀಕಾರಕ್ಕಾಗಿ ಈ ದಾಳಿಗಳು ನಡೆದವು. ಉಡಾವಣೆಯಾದ ಸ್ವಲ್ಪ ಸಮಯದ ನಂತರ ಇಸ್ರೇಲಿ ರಕ್ಷಣಾ ವ್ಯವಸ್ಥೆಗಳು ಒಳಬರುವ ಕ್ಷಿಪಣಿಗಳನ್ನು ಪತ್ತೆಹಚ್ಚಿದವು. ಸಾರ್ವಜನಿಕರಿಗೆ ಎಚ್ಚರಿಕೆಗಳನ್ನು ನೀಡಲಾಗುತ್ತಿದ್ದಂತೆ, ಉತ್ತರ ಇಸ್ರೇಲ್ ಮತ್ತು ಕರಾವಳಿ ನಗರವಾದ ಹೈಫಾ ಸೇರಿದಂತೆ ದೇಶದ ಹಲವಾರು ಪ್ರದೇಶಗಳಲ್ಲಿ ಸೈರನ್‌ಗಳು ಸದ್ದು ಮಾಡಿದವು. ಇಸ್ರೇಲ್ ರಕ್ಷಣಾ ಪಡೆಗಳು (IDF) ದಾಳಿಯನ್ನು ದೃಢೀಕರಿಸುವ ಅಧಿಕೃತ ಹೇಳಿಕೆಯನ್ನು ನೀಡಿತು: “ಸ್ವಲ್ಪ ಸಮಯದ ಹಿಂದೆ, ಇರಾನ್‌ನಿಂದ ಇಸ್ರೇಲ್ ರಾಜ್ಯದ ಕಡೆಗೆ ಉಡಾಯಿಸಲಾದ ಕ್ಷಿಪಣಿಗಳನ್ನು ಗುರುತಿಸಿದ ನಂತರ ದೇಶಾದ್ಯಂತ ಹಲವಾರು ಪ್ರದೇಶಗಳಲ್ಲಿ ಸೈರನ್‌ಗಳನ್ನು ಸದ್ದು ಮಾಡಲಾಯಿತು. ಹೋಮ್ ಫ್ರಂಟ್ ಕಮಾಂಡ್‌ನ ಸೂಚನೆಗಳನ್ನು ಅನುಸರಿಸಲು ಸಾರ್ವಜನಿಕರನ್ನು ವಿನಂತಿಸಲಾಗಿದೆ. ಈ ಸಮಯದಲ್ಲಿ, ಬೆದರಿಕೆಯನ್ನು ತೆಗೆದುಹಾಕಲು ಅಗತ್ಯವಿರುವಲ್ಲಿ ಇಸ್ರೇಲಿ ವಾಯುಪಡೆಯು ಬೆದರಿಕೆಗಳನ್ನು ಪ್ರತಿಬಂಧಿಸಲು ಮತ್ತು ಹೊಡೆಯಲು ಕಾರ್ಯನಿರ್ವಹಿಸುತ್ತಿದೆ.…

Read More

ಗದಗ: ಗೃಹ ಲಕ್ಷ್ಮಿ ಯೋಜನೆಯಿಂದ ಫ್ರಿಡ್ಜ್, ಟಿವಿ, ಊರಿಗೆ ಹೋಳಿಗೆ ಊಟ, ಮಗನಿಗೆ ಬೈಕ್ ಕೊಡಿಸಿದ ಸುದ್ದಿ ಕೇಳಿದ್ವಿ. ಇಲ್ಲೊಬ್ಬ ಮಹಿಳೆ ಗೃಹ ಲಕ್ಷ್ಮಿ ಹಣವನ್ನು ಕೂಡಿಟ್ಟು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಆರ್ಥಿಕ ಸ್ವಾವಲಂಬನೆಯೊಂದಿಗೆ ಸಮಾಜ ಸೇವೆ: ತಿಮ್ಮಾಪುರ ಮಹಿಳೆಯರ ಮಾದರಿ ನಡೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ 850 ಕ್ಕೂ ಹೆಚ್ಚು ಮಹಿಳೆಯರು ತಮ್ಮ ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣವನ್ನು ಕೂಡಿಟ್ಟು, ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ನಿಜಕ್ಕೂ ಮಾದರಿಯಾದ ಕೆಲಸ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘಿಸಿದ್ದಾರೆ. ಆರ್ಥಿಕ ಸ್ವಾವಲಂಬನೆಯ ಜೊತೆಗೆ, ಇಂತಹ ಸತ್ಕಾರ್ಯಗಳಲ್ಲಿ ನಮ್ಮ ಮಹಿಳೆಯರು ತೋರುತ್ತಿರುವ ಉತ್ಸಾಹ ನನಗೆ ಹೆಮ್ಮೆ ತಂದಿದೆ. ಮಹಿಳೆಯರ ಕೈಬಲಪಡಿಸುವುದು ಎಂದರೆ ಇಡೀ ಸಮಾಜವನ್ನು ಬಲಪಡಿಸುವುದು ಎಂದರ್ಥ, ಅವರ ಈ ನಿಸ್ವಾರ್ಥ ಸೇವೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

Read More

ಬೆಂಗಳೂರು : ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, “ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು” ಎಂದು ಕೇಳಿದರು. ತಾಳ್ಮೆಯ ಅಸ್ತ್ರ ಇದೆ ಎಂದಿದ್ದೀರಿ ಎಂದಾಗ, “ಈಗಲೂ ತಾಳ್ಮೆ ಇರಲಿ ಎಂದು ಹೇಳುತ್ತಿದ್ದೇನೆ” ಎಂದರು. ಶಸ್ತ್ರ, ತಂತ್ರ, ಯುದ್ಧ ಇಲ್ಲದೇ ಬಗೆಹರಿಯುವುದೇ ಎಂದಾಗ, “ಇದು ರಾಜಕಾರಣ. ಇಲ್ಲಿ ಶಸ್ತ್ರ ಹಾಗೂ ಅಸ್ತ್ರ ಬೇಕಾಗಿಲ್ಲ” ಎಂದರು. ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ ಶಾಸಕರು ದೆಹಲಿಗೆ ತೆರಳಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಕೇಳುವ ಬಗ್ಗೆ ಪ್ರಶ್ನಿಸಿದಾಗ, “ಶಾಸಕರು ದೆಹಲಿಗೆ…

Read More

ಬೆಂಗಳೂರು : ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಕುಸುಮ-ಸಿ ಯೋಜನೆಯಡಿ ಕೃಷಿ ಫೀಡರ್ ಗಳ ಸೌರೀಕರಣ ಕಾರ್ಯವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಕುಸುಮ್-ಸಿ ಯೋಜನೆ ಮೂಲಕ ಕೃಷಿಗೆ ವಿದ್ಯುತ್ ಒದಗಿಸುವ ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಿ 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸುವ ಗುರಿಯೊಂದಿಗೆ ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ನೀಡಲು ಕ್ರಮ ವಹಿಸಲಾಗುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಅದರೆ ಶೇ. 80 ರಷ್ಟು ಸಬ್ಸಿಡಿಯೊಂದಿಗೆ ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ,” ಎಂದು ತಿಳಿಸಿದರು. “ನಾಡಿನ ಜನರಿಗೆ ಹಾಗೂ ರೈತರರಿಗೆ ವಿದ್ಯುತ್ ನೀಡುವ ಮೂಲಕ ಇಂಧನ ಇಲಾಖೆ…

Read More