Author: kannadanewsnow09

ಮೈಸೂರು: ಅರಸೀಕೆರೆ ರೈಲು ನಿಲ್ದಾಣದ ಯಾರ್ಡ್‌ನಲ್ಲಿ ನಡೆಯಲಿರುವ ಪ್ಲಾಟ್‌ಫಾರ್ಮ್ ಶೆಲ್ಟರ್ ಕಾಮಗಾರಿಯ ಸಲುವಾಗಿ, ಕೆಲವು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ. ನವೆಂಬರ್ 9 ರಿಂದ ಡಿಸೆಂಬರ್ 13 ರವರೆಗೆ ರೈಲು ಸಂಖ್ಯೆ 16214 ಎಸ್.ಎಸ್.ಎಸ್. ಹುಬ್ಬಳ್ಳಿ – ಅರಸೀಕೆರೆ ಎಕ್ಸ್‌ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿವೆ. ಅದೇ ರೀತಿ, ನವೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಸಂಚರಿಸುವ ರೈಲು ಸಂಖ್ಯೆ 16213 ಅರಸೀಕೆರೆ – ಎಸ್.ಎಸ್.ಎಸ್. ಹುಬ್ಬಳ್ಳಿ ಎಕ್ಸ್‌ಪ್ರೆಸ್ ಸೇವೆಯು ಅರಸೀಕೆರೆ ಮತ್ತು ಬೀರೂರು ನಡುವೆ ರದ್ದಾಗಲಿದೆ; ಈ ರೈಲು ಅರಸೀಕೆರೆಗೆ ಬದಲು ಬೀರೂರು ನಿಲ್ದಾಣದಿಂದಲೇ ತನ್ನ ನಿಗದಿತ ಸಮಯದಲ್ಲಿ ಹೊರಡಲಿವೆ. ಇದರ ಜೊತೆಗೆ, ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಕೂಡ ನವೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಅರಸೀಕೆರೆ ಮತ್ತು ಹಾಸನ ನಡುವೆ ರದ್ದಾಗಲಿದೆ, ಮತ್ತು ಈ ಪ್ಯಾಸೆಂಜರ್ ರೈಲು…

Read More

ಬೆಂಗಳೂರು: ಬಳ್ಳೂರು ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಅತ್ತಿಬೆಲೆ ಸಮೀಪದ ಬಳ್ಳೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕರನ್ನು ಅನಿಕೇತ್ ಕುಮಾರ್(12) ಹಾಗೂ ರೆಹಮಾತ್(11) ಎಂಬುದಾಗಿ ಗುರುತಿಸಲಾಗಿದೆ. ಕೂಲಿ ಕೆಲಸವನ್ನು ಮೃತ ಬಾಲಕರ ಪೋಷಕರು ಮಾಡಿಕೊಂಡಿದ್ದರು. ನಿನ್ನೆ ಸಂಜೆ ಮನೆ ಬಳಿ ಆಟವಾಡುತ್ತಾ ಕೆರೆ ಬಳಿ ತೆರಳಿದ್ದಾಗ ಕೆರೆಗೆ ಇಳಿದಿದ್ದಾಗ ಮಕ್ಕಳು ನೀರಿನಲ್ಲಿ ಮುಳುಗಿ ಈ ದುರಂತ ಸಂಭವಿಸಿದೆ. https://kannadanewsnow.com/kannada/6-7-magnitude-earthquake-hits-japan-tsunami-warning-issued/ https://kannadanewsnow.com/kannada/centers-ban-on-sharavati-pumped-storage-project-victory-for-environmentalists-fight/

Read More

ಜಪಾನ್: ಭಾನುವಾರ ಸಂಜೆ ಕರಾವಳಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಇವಾಟೆ ಪ್ರಾಂತ್ಯಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್ ಟೈಮ್ಸ್ ವರದಿ ಮಾಡಿದೆ. ಇವಾಟೆ ಕರಾವಳಿಯ ಕೆಲವು ಭಾಗಗಳಲ್ಲಿ 1 ಮೀಟರ್‌ವರೆಗಿನ ಅಲೆಗಳು ಎದ್ದಿರಬಹುದು ಎಂದು ದೇಶದ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಸಂಜೆ 5.03 ಕ್ಕೆ ದಾಖಲಾದ ಭೂಕಂಪವು ಮೊರಿಯೊಕಾ ನಗರ ಮತ್ತು ಯಹಾಬಾ ಪಟ್ಟಣದಲ್ಲಿ ಶಿಂಡೋ 4 (ಜಪಾನಿನ ಭೂಕಂಪನ ಮಾಪಕ) ಕ್ಕೆ ಸಮಾನವಾದ ಕಂಪನವನ್ನು ಉಂಟುಮಾಡಿತು. ರಾಯಿಟರ್ಸ್ ವರದಿಯ ಪ್ರಕಾರ, ಜಪಾನ್‌ನ ಸಾರ್ವಜನಿಕ ಪ್ರಸಾರಕ NHK ನಿವಾಸಿಗಳು ಕರಾವಳಿ ಪ್ರದೇಶಗಳಿಂದ ದೂರವಿರಲು ಕೇಳಿಕೊಂಡಿದೆ. ಇವಾಟೆ ಪ್ರಾಂತ್ಯದ ಕರಾವಳಿಯಿಂದ 70 ಕಿಮೀ (45 ಮೈಲುಗಳು) ದೂರದಲ್ಲಿ ಸಂಜೆ 5.12 ಕ್ಕೆ (ಭಾರತೀಯ ಸಮಯ ಮಧ್ಯಾಹ್ನ 1.42) ಸುನಾಮಿ ಕಾಣಿಸಿಕೊಂಡಿದ್ದು, ಶೀಘ್ರದಲ್ಲೇ ಪೆಸಿಫಿಕ್ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು NHK ತಿಳಿಸಿದೆ. https://kannadanewsnow.com/kannada/earthquake-of-magnitude-6-07-strikes-andaman-islands/ https://kannadanewsnow.com/kannada/centers-ban-on-sharavati-pumped-storage-project-victory-for-environmentalists-fight/

Read More

ನವದೆಹಲಿ: ಭಾರತದ ಅಂಡಮಾನ್ ದ್ವೀಪಗಳಲ್ಲಿ ಭಾನುವಾರ ಪ್ರಬಲ ಭೂಕಂಪ ಸಂಭವಿಸಿದೆ. ಅಂಡಮಾನ್ ದ್ವೀಪಗಳಲ್ಲಿ 6.07 ತೀವ್ರತೆಯ ಭೂಕಂಪ ಸಂಭವಿಸಿದೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) X ತೀವ್ರತೆಯನ್ನು ಪಡೆದುಕೊಂಡು 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಮತ್ತು 90 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಹೇಳಿದೆ. ಆರಂಭದಲ್ಲಿ, ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ, GFZ, ಭಾನುವಾರ ಅಂಡಮಾನ್ ದ್ವೀಪಗಳಲ್ಲಿ 6.07 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಿದೆ, ಇದು 10 ಕಿ.ಮೀ (6 ಮೈಲುಗಳು) ಆಳದಲ್ಲಿದೆ. https://twitter.com/NCS_Earthquake/status/1987412758338674874 ಏತನ್ಮಧ್ಯೆ, ಸೋಮವಾರ, ವಿದೇಶಾಂಗ ಸಚಿವಾಲಯ (MEA) ಭಾರತವು ಅಫ್ಘಾನಿಸ್ತಾನದಲ್ಲಿ ಭೂಕಂಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಒದಗಿಸಿದೆ ಎಂದು ಹೇಳಿದೆ. ಭಾರತ ಕಳುಹಿಸಿದ ಸಹಾಯದ ಚಿತ್ರಗಳನ್ನು MEA ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಹಂಚಿಕೊಂಡಿದ್ದಾರೆ. “ಆಫ್ಘಾನ್ ಜನರಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸುತ್ತಾ, ಭೂಕಂಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಭಾರತ ಆಹಾರ ಸಾಮಗ್ರಿಗಳನ್ನು ತಲುಪಿಸುತ್ತದೆ. ಭಾರತ ಮೊದಲು ಪ್ರತಿಕ್ರಿಯಿಸುತ್ತದೆ” ಎಂದು ಜೈಸ್ವಾಲ್ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. https://twitter.com/DrSJaishankar/status/1985310475325001759…

Read More

ಬೆಂಗಳೂರು: ಉತ್ತರ ಕನ್ನಡದಲ್ಲಿ ಶರಾವತಿ ನದಿಗೆ ನಿರ್ಮಿಸಲು ಉದ್ದೇಶಿಸಿದ್ದ 2,000 ಮೆಗಾವ್ಯಾಟ್ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಪರಿಸರ ವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಡೆಹಿಡಿದಿದೆ. ಹೀಗಾಗಿ ಪರಿಸರವಾದಿಗಳ ಹೋರಾಟಕ್ಕೆ ಭರ್ಜರಿ ಗೆಲುವು ಸಿಕ್ಕಂತೆ ಆಗಿದೆ. ಹೌದು. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸುವ ಪ್ರಸ್ತಾವನೆಗೆ ಅರಣ್ಯ ಸಲಹಾ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಸಮಿತಿಯ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಈ ನಿರ್ಧಾರವು ಪರಿಸರವಾದಿಗಳು ಮತ್ತು ಸ್ಥಳೀಯರ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ವಿರೋಧದ ನಡುವೆಯೂ ಯೋಜನೆ ಜಾರಿಗೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಏನಿದು ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ? ವಿರೋಧ ಏಕೆ? ಪಂಪ್ಡ್ ಸ್ಟೋರೇಜ್ ಯೋಜನೆಯು ವಿಶ್ವದ ಅತಿದೊಡ್ಡ ಬ್ಯಾಟರಿ ತಂತ್ರಜ್ಞಾನ ಎಂದೇ ಪರಿಗಣಿಸಲಾಗಿದ್ದು, ಎರಡು ಜಲಾಶಯಗಳ ನಡುವೆ ಇದನ್ನು ಕಾರ‍್ಯಗತಗೊಳಿಸಲಾಗುತ್ತದೆ. ಹೆಚ್ಚುವರಿ ವಿದ್ಯುತ್‌…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union of Working Journalists – KUWJ) ದ 20 ಜಿಲ್ಲೆಗಳ ಕಾರ್ಯಕಾರಿ ಸಮಿತಿಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮದ್ಯಾಹ್ನ 12 ಗಂಟೆ ವೇಳೆಗೆ ಶೇಕಡ 60 ಮತದಾನ ಆಗಿದೆ. ಬೆಳಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು ಪತ್ರಕರ್ತ ಸದಸ್ಯರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದರು. ಗದಗ, ಚಿತ್ರದುರ್ಗ,ತುಮಕೂರು, ಕೋಲಾರ ಜಿಲ್ಲಾ ಘಟಕಗಳ ತೀವ್ರ ಪೈಪೋಟಿಯ ಸ್ಪರ್ಧೆ ನಡೆದಿವೆ. KUWJ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಾದ ಎನ್.ರವಿಕುಮಾರ್ ಅವರು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ , ಕೋಲಾರ ಮಾತಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತದಾನ ಮದ್ಯಾಹ್ನ 3 ಗಂಟೆಗೆ ಕೊನೆಗೊಳ್ಳಲಿದ್ದು, ನಂತರ ಮತ ಎಣಿಕೆ ನಡೆಯಲಿದೆ. ಮತಗಟ್ಟೆಗೆ ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್ ಭೇಟಿ, ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದಲ್ಲಿ ನಡೆಯುತ್ತಿದ್ದ ಮತಗಟ್ಟೆಗೆ ಮುಖ್ಯ ಚುನಾವಣಾ ಅಧಿಕಾರಿ ರವಿಕುಮಾರ್ ಟೆಲೆಕ್ಸ್ ಹಾಗೂ ರಾಜ್ಯ ಅಧ್ಯಕ್ಷರಾದಂತ ಶಿವಾನಂದ ತಗಡೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. -ವಸಂತ ಬಿ…

Read More

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ನಮ್ಮ ನಾಡು ಪತ್ರಿಕೆಯ ವರದಿಗಾರ ಹೆಚ್. ಯು. ವೈದ್ಯನಾಥ್ (ವೈದ್ಯ), ಪ್ರಧಾನ ಕಾರ್ಯದರ್ಶಿಯಾಗಿ ದೂರದರ್ಶನ ಚಂದನ ವಾಹಿನಿ ವರದಿಗಾರ ಆರ್. ಎಸ್. ಹಾಲಸ್ವಾಮಿ ಹಾಗೂ ರಾಜ್ಯ ಸಮಿತಿಯ ನಿರ್ದೇಶಕರಾಗಿ ನಮ್ಮ ನಾಡು ಪತ್ರಿಕೆಯ ಸಂಪಾದಕ ಕೆ. ವಿ. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಶಿಕಾರಿಪುರದ ನಮ್ಮ ಕನ್ನಡ ನಾಡು ಪತ್ರಿಕೆಯ ರಾಜರಾವ್ ಎಂ. ಜಾದವ್‌ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಽಕಾರಿ ಶ್ರೀನಿವಾಸ್‌ ಅವರು ಘೋಷಿಸಿದ್ದಾರೆ. ವಸಂತ ಬಿ ಈಶ್ವರಗೆರೆ, ಸಂಪಾದಕರು

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ( KUWJ ) ತುಮಕೂರು, ಚಿತ್ರದುರ್ಗ ಜಿಲ್ಲಾ ಘಟಕಗಳ ಕಾರ್ಯಕಾರಿ ಸಮಿತಿ ಚುನಾವಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 20 ಜಿಲ್ಲಾ ಘಟಕಗಳಿಗೆ ಮತದಾನ ನಡೆಯಲಿದೆ. ಅದೇ ರೀತಿ ಮಂಡ್ಯ ಜಿಲ್ಲಾ ಘಟದ ಚುನಾವಣೆಗೂ ತಡೆಯಾಜ್ಞೆ ನೀಡಬೇಕೆಂಬ ಮನವಿಯನ್ನು ಸ್ಥಳೀಯ ಸಿವಿಲ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಜ್ಯದ 20 ಜಿಲ್ಲೆಗಳಿಗೆ ನವಂಬರ್ 9ರಂದು ಭಾನುವಾರ ನಿಗದಿಯಂತೆ ಚುನಾವಣೆ ನಡೆಯಲಿದೆ. ಬೆಂಗಳೂರು ನಗರ ಘಟಕದಲ್ಲಿ ಚುನಾವಣೆ ಇಲ್ಲ ತುಮಕೂರು,ಚಿತ್ರದುರ್ಗ ಜಿಲ್ಲಾ ಘಟಕಗಳ ಚುನಾವಣೆಯಲ್ಲಿ ಅರ್ಜಿದಾರರು ಸದಸ್ಯತ್ವ, ಮತದಾನದ ಹಕ್ಕು ಮತ್ತು ನಾಮಪತ್ರ ತಿರಸ್ಕೃತ ಸಂಬಂಧ ಹೈಕೋರ್ಟ್ ನಲ್ಲಿ ರಿಟ್ ಪಿಟಿಶನ್ ಸಲ್ಲಿಸಿದ್ದು, ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಮತದಾನಕ್ಕೆ ಇನ್ನೆರೆಡು ದಿನಗಳು ಉಳಿದಿದ್ದು,ಎಲ್ಲಾ ಪ್ರಕ್ರಿಯೆ ಮುಗಿಯುವ ಹಂತದಲ್ಲಿರುವುದನ್ನು ಪರಿಗಣಿಸಿ ತಡೆಯಾಜ್ಞೆ ನೀಡಲು ನಿರಾಕರಿಸಿ, ವಿಚಾರಣೆಯನ್ನು ಮುಂದೂಡಿದ್ದಾರೆ. ಇದರಿಂದ…

Read More

ಬೆಂಗಳೂರು: ದೇಶದ ಇತಿಹಾಸದಲ್ಲೇ ಇದೇ ಮೊದಲು ಎನ್ನುವಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಕ್ಯಾಲೆಂಡರ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಮೂಲಕವಾಗಿ ಪ್ರತಿಯೊಬ್ಬ ನೌಕರನಿಗೂ, ಶಿಕ್ಷಕರಿಗೂ 2026ರ ಕ್ಯಾಲೆಂಡರ್ ನೀಡುತ್ತಿರುವುದು ದೇಶದ ಇತಿಹಾಸದಲ್ಲೇ ಇದೇ ಮೊದಲು ಎಂದಿದ್ದಾರೆ. ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈ ವಿನೂತನ ಪ್ರಯತ್ನ ಮಾಡಲಾಗುತ್ತಿದೆ. ಪ್ರತಿಯೊಬ್ಬ ನೌಕರರ, ಶಿಕ್ಷಕರ ಕರ್ತವ್ಯ ನಿರತ ಸ್ಥಳಕ್ಕೆ ಆಯಾ ಜಿಲ್ಲಾ ಮತ್ತು ತಾಲ್ಲೂಕು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕ್ಯಾಲೆಂಡರ್ ತಲುಪಿಸುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.

Read More

ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಬೇಧ ಭಾವ ಮಾಡದೇ, ಎಲ್ಲಾ ಮಕ್ಕಳನ್ನು ಸಮಾನವಾಗಿ ಕಾಣಬೇಕು. ಅದೇ ಕಾರಣಕ್ಕೆ ಬಡವ-ಬಲ್ಲಿದ, ಮೇಲು-ಕೀಳು ಎಂಬ ಬೇಧ ಭಾವ ಬಾರದಂತೆ ಇರಿಸಲು ಸಮವಸ್ತ್ರವನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಇದರ ನಡುವೆಯೂ ಸಾಗರ ತಾಲ್ಲೂಕಿನ ಬೇಳೂರು ಶಾಲೆಯಲ್ಲಿ ಜಾತಿ ತಾರತಮ್ಯವನ್ನು ಊಟದ ವಿಚಾರದಲ್ಲಿ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ವಿಷಯವನ್ನು ಪ್ರಶ್ನಿಸಿದಂತ ದಲಿತ ಮುಖಂಡನಿಗೆ ಬೆದರಿಕೆ ಕೂಡ ಹಾಕಲಾಗಿದೆ ಎನ್ನಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೆಳೆಯೂರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯಲ್ಲೇ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಹೀಗಿದ್ದರೂ ಬಂದಗದ್ದೆಯ ಕೆಲ ಮೇಲ್ವರ್ಗದ ಕುಟುಂಬದ ವಿದ್ಯಾರ್ಥಿಗಳು ಮಾತ್ರ ಮನೆಯಿಂದ ಊಟ ತೆಗೆದುಕೊಂಡು ವೇದಿಕೆಯ ಮುಂಭಾಗದಲ್ಲೇ ಕೆಳ ವರ್ಗದ ವಿದ್ಯಾರ್ಥಿಗಳೊಂದಿಗೆ ಸೇರದೆ ಪಂಕ್ತಿ ಬೇಧ ತೋರಿದ್ದನ್ನು ದಲಿತ ಮುಖಂಡ ಅಣ್ಣಪ್ಪ ಕೆಳದಿಪುರ ಗಮನಿಸಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಯಾವುದೇ ಜಾತಿ ಬೇದ ಮಾಡುವಂತಿಲ್ಲ. ಪಂಕ್ತಿ ಬೇಧವೂ ಇಲ್ಲ. ಹೀಗಿದ್ದರೂ ಯಾಕೆ ಇಲ್ಲಿ…

Read More