Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ ಸುವರ್ಣ ವಿಧಾನಸೌಧ: ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು. 2025-26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ,ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ…
ಬೆಳಗಾವಿ : ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣ ಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನ ಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಧ್ವಜವನ್ನು ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.
ಬೆಳಗಾವಿ : “ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸುತ್ತಿರುವುದು ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ರಾಷ್ಟ್ರಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಹೊಸ ದಾಖಲೆ ಬರೆಯುತ್ತಿರುವ ಸ್ಪೀಕರ್ ಖಾದರ್ ಅವರಿಗೆ ಅಭಿನಂದನೆಗಳು. ಕಳೆದ ವರ್ಷ ಮಹಾತ್ಮ ಗಾಂಧಿ ಅವರ ಸ್ವಾತಂತ್ರ್ಯ ಹೋರಾಟದ ನೇತೃತ್ವದ ಶತಮಾನೋತ್ಸವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಸುವರ್ಣಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಸ್ಥಾಪನೆ ಮಾಡಿದ್ದರು. ಈ ಸಂದರ್ಭದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ನಮ್ಮ ಧಾರವಾಡದ ಖಾದಿ ಕೇಂದ್ರದಿಂದ ಬೃಹತ್ ತ್ರಿವರ್ಣ ಧ್ವಜ ತಯಾರಿಸಿ ಸುವರ್ಣಸೌಧದಲ್ಲಿ ಪ್ರದರ್ಶನ ಮಾಡಿದ್ದಾರೆ” ಎಂದರು. “ರಾಜ್ಯದ ಜನರ ಪರವಾಗಿ ಸ್ಪೀಕರ್ ಹಾಗೂ ಅವರ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ.…
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್ನಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ನಗರ ಉಪವಿಭಾಗ 2 ರ ಘಟಕ 5 ವ್ಯಾಪ್ತಿಗೆ ಬರುವ ಆರ್.ಎಂ.ಎಲ್. ನಗರ 1ನೇ ಮತ್ತು 2ನೇ ಹಂತ, ಎಲ್.ಎಲ್.ಆರ್. ರಸ್ತೆ, ಜೆ.ಸಿ.ನಗರ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಡಿ.11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ ಶಿವಮೊಗ್ಗ: ನಗರದ ಮಂಡ್ಲಿ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಇನಾಮ್ ರದ್ದು ಕಾಯಿದೆ ಅಡಿ ಹಾಸನದ ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಬೆಂಗಳೂರು ಕೆಂಗೇರಿ ಬಳಿಯ ಬಿಎಂ ಕಾವಲ್ ನಲ್ಲಿ ತಮಗೆ ಮಂಜೂರು ಮಾಡಲಾಗಿದೆ ಎನ್ನಲಾದ 482 ಎಕರೆ ಕಾಯ್ದಿಟ್ಟ ಅರಣ್ಯಭೂಮಿ ಸೇರಿದಂತೆ ಒಟ್ಟು 532 ಎಕರೆ ಜಮೀನಿನ ದಾಖಲೆಗಳನ್ನು 3 ತಿಂಗಳೊಳಗೆ ತಮ್ಮ ಹೆಸರಿಗೆ ಮಾಡಿಕೊಡುವಂತೆ ಆದೇಶ ಪಡೆದಿದ್ದಾರೆ. 90 ದಿನ ಪೂರ್ಣಗೊಳ್ಳಲು 1 ದಿನ ಬಾಕಿ ಇರುವವರೆಗೂ ಸರ್ಕಾರದ ಹೆಚ್ಚುವರಿ ಸರ್ಕಾರಿ ವಕೀಲ ಯೋಗಣ್ಣ ಈ ಮಾಹಿತಿಯನ್ನು ಸರ್ಕಾರಕ್ಕಾಗಲೀ, ಅರಣ್ಯ ಇಲಾಖೆಗಾಗಲೀ ನೀಡಿರುವುದಿಲ್ಲ ಬದಲಾಗಿ…
ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು. ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿ ಯವರು ಏನು ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ. ಅವರಿಗೆ ನಾಚಿಕೆ ಆಗಬೇಕು. ರೈತರ ಮೇಲೆ ಗೋಲಿಬಾರ್ ಮಾಡಿಸಿದವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು ಎಂದು ಹೇಳಿದರು. ಕಾಂಗ್ರೆಸ್ ಪಕ್ಷವಾಗಲಿ, ನಾನಾಗಲಿ, ಎಲ್ಲರೂ ರೈತರ ಪರ ಇದ್ದೇವೆ ಎಂದರು. ನಮ್ಮದು ಜಾತ್ಯತೀತ ಸರ್ಕಾರ ನಮ್ಮದು ಜಾತ್ಯತೀತ ಸರ್ಕಾರ, ಬಸವಣ್ಣ, ಕಿತ್ತೂರು ರಾಣಿ…
ಬೆಳಗಾವಿ: ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಟೀಕಿಸಿದರು. ಮಂಗಳವಾರ ಸುವರ್ಣಸೌಧದ ವಿಧಾನಸಭೆ ಕಲಾಪದಲ್ಲಿ ಮೊದಲು ನಿಗದಿಯಂತೆ ಪ್ರಶ್ನೋತ್ತರ ಅವಧಿ ಆರಂಭವಾಗಬೇಕಿತ್ತು. ಆದರೆ, ವಿಪಕ್ಷ ನಾಯಕರಾದ ಆರ್. ಅಶೋಕ್ ಹಾಗೂ ಶಾಸಕರಾದ ಅಶ್ವತ್ಥ ನಾರಾಯಣ ಅವರು ಪ್ರಶ್ನೋತ್ತರ ಅವಧಿಗೆ ಮುನ್ನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ನಿಲುವಳಿ ಮಂಡಿಸಿದರು. ಈ ವೇಳೆ ವಿರೋಧ ಪಕ್ಷದ ನಾಯಕರ ವರ್ತನೆಯನ್ನು ಬಹಿರಂಗವಾಗಿ ಖಂಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯಾಗಿದೆ. ಅದೇ ಕಾರಣಕ್ಕೆ ಪ್ರಶ್ನೋತ್ತರ ಅವಧಿಗೆ ಮುನ್ನವೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ ಎನ್ನುತ್ತಿದ್ದಾರೆ. ಆದರೆ, ನಿಯಮದ ಪ್ರಕಾರ ಪ್ರಶ್ನೋತ್ತರ ಅವಧಿಗೆ ಮುನ್ನ ಯಾವುದೇ ಚರ್ಚೆ ಮಾಡಲು ಅವಕಾಶ ಇಲ್ಲ. ಪ್ರಶ್ನೋತ್ತರ ಅವಧಿಯ ನಂತರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರವೇ…
ಟೋಕಿಯೋ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಖ್ಯಾತ ವಿಜ್ಞಾನಿ ಮತ್ತು ಉದ್ಯಮಿಯಾಗಿರುವ ಡಾ. ಶ್ರೀಹರಿ ಚಂದ್ರಘಾಟಗಿ ಅವರು ಜಪಾನಿನ ಉದ್ಯಮ ತಂತ್ರಜ್ಞಾನದ ಅತ್ಯುನ್ನತ ಪ್ರಶಸ್ತಿಯಾದ ಸೂಪರ್ ಮ್ಯಾನುಫ್ಯಾಕ್ಚರ್ಸ್ ಪ್ರಶಸ್ತಿಗೆ (ಚೋ ಮೊನೊಡುಜುಕುರಿ) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಪಾನ್ ಸರ್ಕಾರದ ಆರ್ಥಿಕ, ವ್ಯಾಪಾರ, ಕೈಗಾರಿಕಾ ಸಚಿವಾಲಯ, ಟೋಕಿಯೋ ವಾಣಿಜ್ಯ ಮತ್ತು ಕೈಗಾರಿಕಾ ಮಂಡಲಿ, ಜಪಾನ್ ಬಿಜಿನೆಸ್ ಒಕ್ಕೂಟ ಮತ್ತು ನಿಕ್ಕನ್ ಕೋಗ್ಯ ಮಾಧ್ಯಮ ಸಂಸ್ಥೆಯ ಸಹಯೋಗದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪರಿಸರ ಸoರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಮಾಡಿದ ಉನ್ನತ ಸಾಧನೆಗಾಗಿ ಶ್ರೀಹರಿಯವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ, ಅಷ್ಟೇ ಅಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಕೈಗಾರಿಕೆಗಳ ಗುಣಮಟ್ಟ ಮತ್ತು ಸುಧಾರಣೆಗೆ ಕೊಡುಗೆ ನೀಡಿದ ಅಪ್ರತಿಮ ಸಾಧಕರನ್ನು ಗುರುತಿಸಿ ಪುರಸ್ಕರಿಸುವ ನಿಟ್ಟಿನಲ್ಲಿಯೂ ಕನ್ನಡಿಗರಾಗಿರುವ ಶ್ರೀಹರಿಯವರು ಆಯ್ಕೆಯಾಗಿರುವುದು ಇಡೀ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಡಾ. ಶ್ರೀಹರಿ ಚಂದ್ರಘಾಟಗಿಯವರು ಕಳೆದ ಎರಡುವರೆ ದಶಕಗಳಿಂದ ಜಪಾನಿನ ರಾಜಧಾನಿ ಟೋಕಿಯೋದಲ್ಲಿಯೇ ನೆಲೆಸಿ, ಎಕೋಸೈಕಲ್ ಕಾರ್ಪೊರೇಷನ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಇದರ…
ಬೆಳಗಾವಿ ಸುವರ್ಣಸೌಧ : ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳ ಸಡಿಲಿಕೆ ಕುರಿತು ಸದಸ್ಯರ ಮನವಿಗೆ ಸ್ಪಂದಿಸಿದ ಸರಕಾರ ಸದನ ಸಮಿತಿ ರಚಿಸಲು ನಿರ್ಧರಿಸಿದೆ. ನವೀಕರಣ ನಿಯಮಗಳ ಸಡಿಲಿಕೆ ಕುರಿತಂತೆ ಸದರಿ ಸದನ ಸಮಿತಿ ನೀಡುವ ವರದಿ ಆಧರಿಸಿ ಶೀಘ್ರ ತಿರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿರುವ ಶಾಲೆಗಳ ಮಾನ್ಯತೆ ನವೀಕರಣದ ನಿಯಮಗಳನ್ನು ಸಡಿಲಗೊಳಿಸುವ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಸದನ ಸಮಿತಿ ರಚಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಪುಟ್ಟಣ್ಣ, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಎಸ್.ಎಲ್. ಭೋಜೇಗೌಡ ಅವರು ನಿಯಮ 330ರ ಮೇರೆಗೆ ಪ್ರಸ್ತಾಪಿಸಿದ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ…
ವಿಧಾನಪರಿಷತ್ತು : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿ ಸೋಮವಾರ ಬಿಜೆಪಿಯ ಡಿ.ಎಸ್.ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳನ್ನು 30 ವರ್ಷಗಳ ನಂತರ ಗುತ್ತಿಗೆ ಅವಧಿಯನ್ನು ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು. ಆದರೆ, ಎಸ್ಆರ್ ದರವನ್ನು ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಸಿಎ ನಿವೇಶನ ಪಡೆದು ಮೂರು ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನು ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನು ಸಡಿಲಿಸಿ ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು. ಆದರೆ,…














