Author: kannadanewsnow09

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕೆಂದರೇ ಅನುಮತಿ ಪಡಯಲೇಬೇಕಿದೆ. ರಾಜ್ಯದ ಎಲ್ಲಾ ‘ಎ’ ಮತ್ತು ‘ಬಿ’ ಗ್ರೇಡ್‌ ದೇವಾಲಯಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ, ಸುದ್ದಿ ವಾಹಿನಿಗಳು ಹೀಗೆ ಯಾವುದೇ ತರಹದ ಚಿತ್ರೀಕರಣ ಮಾಡಬೇಕಾಗಿದ್ದಲ್ಲಿ, ಮುಜರಾಯಿ ಇಲಾಖೆಯ ಅನುಮತಿ ಪಡೆದು ಶುಲ್ಕ ಪಾವತಿಸುವುದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶದಲ್ಲಿ ತಿಳಿಸಿದೆ. https://twitter.com/KarnatakaVarthe/status/2024833011049693681 https://kannadanewsnow.com/kannada/attention-state-government-employees-here-is-the-new-syllabus-for-computer-based-test-clt/ https://kannadanewsnow.com/kannada/drug-peddler-arrested-in-bengaluru-35-grams-of-narcotics-worth-rs-3-8-lakh-seized/

Read More

ಬೆಂಗಳೂರು: ಭಾರತ ದೇಶವು ಗಾಂಧೀಜಿಯವರ ಆದಿಯಾಗಿ ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯವನ್ನು ಪಡೆದರೂ ಸಹ ಇಂದಿಗೂ ಭ್ರಷ್ಟ ರಾಜಕಾರಣಿಗಳಿಂದ ಅತಂತ್ರರಾಗಿಯೇ ಉಳಿದಿದ್ದೇವೆ ಎಂಬುದಾಗಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ ಪಟ್ಟಿದ್ದಾರೆ. ಇಂಂದು ಅವರು ಪಕ್ಷವು ಏರ್ಪಡಿಸಿದ್ದ ” ಜಿಬಿಎ ಚುನಾವಣೆಯಲ್ಲಿ ವಕೀಲರುಗಳ ಪಾತ್ರ ” ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಾಮಾಣಿಕ ರಾಜಕಾರಣದಲ್ಲಿ ವಕೀಲರುಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಭ್ರಷ್ಟಮುಕ್ತ , ಪಾರದರ್ಶಕ , ವಂಶ ಪಾರಂಪರ್ಯ ರಾಜಕಾರಣವನ್ನು ಹೊಡೆದೋಡಿಸಲು ಸಾಧ್ಯ ಎಂದರು. ದೇಶದಲ್ಲಿ ಪರ್ಯಾಯ ರಾಜಕಾರಣ ವ್ಯವಸ್ಥೆಯನ್ನು ತರಲೇಬೇಕೆಂಬ ಮಹಾದಾಶೆಯಿಂದ ಅರವಿಂದ್ ಕೇಜ್ರಿವಾಲ್ ರವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷವು ಸ್ಥಾಪನೆಯಾಗಿದೆ. ಬೆಂಗಳೂರಿನಲ್ಲಿ ಮುಂಬರುವ ಎಲ್ಲಾ ನಗರ ಪಾಲಿಕೆಗಳ ಚುನಾವಣೆಗಳಲ್ಲಿ ವಕೀಲರುಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಿ, ಬೆಂಬಲಿಗರಾಗಿ, ಪೋಷಕರಾಗಿ ಕೈಜೋಡಿಸಬೇಕು . ಕಳೆದ ಹಲವು ದಶಕಗಳಿಂದ ಸಂಪೂರ್ಣ ಭ್ರಷ್ಟಾಚಾರದಿಂದ ಮುಳುಗಿ ಹೋಗಿರುವ ಬೆಂಗಳೂರಿನ ಮಹಾನಗರ ಪಾಲಿಕೆಯು ನಾಗರಿಕರಿಗೆ ಬದುಕಲು ಸಾಧ್ಯವೇ ಆಗದಂತಹ ಪರಿಸ್ಥಿತಿಗೆ ತಳ್ಳಿದ್ದಾರೆ.…

Read More

ಧಾರವಾಡ: ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್. ಲಾಡ್ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಹೆಸ್ಕಾಂ ಸಂಸ್ಥೆಯ ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಬೇಸಿಗೆ ಅವಧಿಯ ವಿದ್ಯುತ್ ಪೂರೈಕೆ ಸಿದ್ದತೆ ಕುರಿತ ಹೆಸ್ಕಾಂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 67 ಕೃಷಿ ವಿದ್ಯುತ್ ಫೀಡರ್‌ಗಳಿವೆ. ಇದರಲ್ಲಿ 41 ಫೀಡರ್‌ಗಳಿಂದ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯೊಳಗೆ, 12 ಫೀಡರ್‌ಗಳಿಗೆ ಸಂಜೆ 6 ರಿಂದ ರಾತ್ರಿ 9 ಗಂಟೆ ಹಾಗೂ ರಾತ್ರಿ 10 ರಿಂದ ಮಧ್ಯರಾತ್ರಿ 1 ಗಂಟೆಯೊಳಗೆ ಮತ್ತು 8 ಫೀಡರ್‌ಗಳಿಂದ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮತ್ತು…

Read More

ಸಾಕಷ್ಟು ಲಾಭ ಗಳಿಸಿ. ಕೆಲವರು ದೊಡ್ಡ ಉದ್ಯಮಿಯಾಗಬೇಕೆಂಬ ಆಸೆಯಿಂದ ಸ್ವಂತ ಉದ್ಯಮ ಆರಂಭಿಸುತ್ತಾರೆ. ಕೈತುಂಬಾ ಸಂಬಳದಲ್ಲಿ ಒಳ್ಳೆಯ ಕಾಲದಲ್ಲಿರುವವರೂ ಆ ಕೆಲಸ ಬಿಟ್ಟು ಸ್ವಂತ ವ್ಯಾಪಾರದಲ್ಲಿ ಕೋಟಿಗಟ್ಟಲೆ ಗಳಿಸುವ ಕನಸು ಹೊತ್ತು ಬರುತ್ತಾರೆ. ಆದರೆ, ಅವರ ಕೆಟ್ಟ ಸಮಯ ಅಥವಾ ಯಾವುದಾದರೂ ಕಾರಣ, ಅವರು ತಮ್ಮದೇ ಆದ ವ್ಯವಹಾರವನ್ನು ಪ್ರಾರಂಭಿಸುತ್ತಾರೆ ಮತ್ತು ತುಂಬಾ ಕಷ್ಟಪಡುತ್ತಾರೆ. ಅವರು ಪ್ರಾರಂಭಿಸಿದ ವ್ಯಾಪಾರದಿಂದ ಸಂಪೂರ್ಣವಾಗಿ ಹೊರಬರಲು ಸಾಧ್ಯವಾಗುತ್ತಿಲ್ಲ ಮತ್ತು ವ್ಯಾಪಾರವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ನಾವು ಅದರಲ್ಲಿ ಸಾಕಷ್ಟು ಹಣವನ್ನು ಬಂಡವಾಳವಾಗಿ ಹೂಡಿಕೆ ಮಾಡಿದ್ದೇವೆ. ಚಿನ್ನಾಭರಣಗಳನ್ನು ಅಡಮಾನವಿಟ್ಟು ವ್ಯಾಪಾರ ಆರಂಭಿಸಿದ್ದೇವೆ. ಆ ವ್ಯಾಪಾರದಲ್ಲಿ ಲಾಭ ಪಡೆದು ಸಾಲದ ಸಮಸ್ಯೆ ಬಗೆಹರಿಸಿದರೆ ಮಾತ್ರ ಸಮಾಧಾನದ ಪರಿಸ್ಥಿತಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ…

Read More

ನವದೆಹಲಿ : ಈ ವರ್ಷದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಚಾಟ್‌ಬಾಟ್‌ಗಳು ಅಥವಾ ಕೋಡಿಂಗ್‌ಗೆ ಸೀಮಿತವಾಗಿರಲಿಲ್ಲ. ಜಿಯೋದ ಪೆವಿಲಿಯನ್‌ನಲ್ಲಿ ಎಐ ಫ್ಯಾಷನ್ ಮತ್ತು ಸೌಂದರ್ಯದ ಜಗತ್ತಿಗೆ ಬಲವಾದ ಪ್ರವೇಶ ಮಾಡಿತು. ಭವಿಷ್ಯದಲ್ಲಿ “ನೀವು ಏನು ಧರಿಸುತ್ತೀರಿ,” “ನಿಮ್ಮ ಚರ್ಮ ಹೇಗೆ ಕಾಣುತ್ತದೆ,” ಅಥವಾ “ನೀವು ಯಾವ ರೀತಿಯ ಸೌಂದರ್ಯ ಉತ್ಪನ್ನಗಳನ್ನು ಬಳಸುತ್ತೀರಿ” ಎಂಬುದಕ್ಕೆ ಎಐ ಜವಾಬ್ದಾರ ಆಗಿರುತ್ತದೆ ಎಂದು ಪ್ರದರ್ಶಿಸಿತು. ನಿಮ್ಮ ವಾರ್ಡ್ ರೋಬ್ ಈಗ ಡೇಟಾ-ಚಾಲಿತ: ‘ನಿಮ್ಮ ಇಂಟೆಲಿಜೆಂಟ್ ವಾರ್ಡ್ ರೋಬ್’ ಎಂಬ ಶೀರ್ಷಿಕೆಯ ಡೆಮೊದಲ್ಲಿ ಪ್ರಸ್ತುತಪಡಿಸಲಾದ ಡಿಜಿಟಲ್ ಕ್ಲೋಸೆಟ್, ಬಳಕೆದಾರರಿಗೆ ತಮ್ಮ ಸಂಪೂರ್ಣ ವಾರ್ಡ್ ರೋಬ್ ಡಿಜಿಟಲ್ ಕ್ಯಾಟಲಾಗ್ ಅನ್ನು ರೂಪಿಸಲು ಅನುಮತಿಸುತ್ತದೆ. ನೀವು ಬಟ್ಟೆಗಳ ಫೋಟೋವನ್ನು ಅಪ್‌ಲೋಡ್ ಮಾಡಿದ ತಕ್ಷಣ ನಿಮ್ಮ ವರ್ಚುವಲ್ ಕ್ಲೋಸೆಟ್ ಸಿದ್ಧವಾಗುತ್ತದೆ. ಈ ವ್ಯವಸ್ಥೆಯ “ವಾರ್ಡ್‌ರೋಬ್ ಒಳನೋಟಗಳು” ವೈಶಿಷ್ಟ್ಯವು ಯಾವ ಬಟ್ಟೆಗಳನ್ನು ಹೆಚ್ಚು ಧರಿಸಲಾಗುತ್ತದೆ ಮತ್ತು ಯಾವ ಬಟ್ಟೆಗಳನ್ನು ತಿಂಗಳುಗಳಿಂದ “ಕಾಯುತ್ತಿ”ವೆ ಎಂಬುದನ್ನು ಬಹಿರಂಗಪಡಿಸುತ್ತದೆ. ಇದರರ್ಥ ಎಐ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಪುನರ್ ರಚಿಸಿ ಆದೇಶಿಸಿದೆ. ಈ ಆದೇಶದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಮಿತ್ತ ಅಧ್ಯಕ್ಷರನ್ನಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ನೇಮಕ ಮಾಡಲಾಗಿದೆ. ಇಂದು ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರವನ್ನು ಹೊರಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ಅಧಿನಿಯಮ, 2025ರ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ (2025 ರ ಕರ್ನಾಟಕ ಕಾಯ್ದೆ ಸಂಖ್ಯೆ: 36) ಪ್ರಕರಣ 09 ರ ಉಪ ಪ್ರಕರಣ (1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 181 ಬಿಬಿಎಸ್ 2025, ದಿನಾಂಕ:26-08-2025ರಂದು ರಚಿಸಲಾಗಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಪರಿಷ್ಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಗಿನಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಪುನರ್ ರಚಿಸಿ ಆದೇಶಿಸಿದೆ ಎಂದು ತಿಳಿಸಿದೆ. ಇನ್ನೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ…

Read More

ಬೆಂಗಳೂರು: ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System) ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ದೃಢ ಹೆಜ್ಜೆಯನ್ನು ಇಟ್ಟಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಎಲ್ಲಾ ಸಂಬಂಧಿಸಿದ (ಕಂದಾಯ, ನಗರಾಭಿವೃದ್ಧಿ, ನೋಂದಣಿ, ಲೋಕೋಪಯೋಗಿ, ನೀರಾವರಿ, ವಸತಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಇತ್ಯಾದಿ ಇಲಾಖೆಗಳ) ಹಿರಿಯ ಅಧಿಕಾರಿಗಳ ಸಭೆಯನ್ನು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ULMS ಗಣಕೀಕೃತ ಏಕ ವ್ಯವಸ್ಥೆಯಡಿ ಸರ್ವೆ, ಭೂ ಪರಿವರ್ತನೆ, ಬಡಾವಣೆ ಪ್ಲಾನ್‌ ಮಂಜೂರಿ, ಮನೆ ಪ್ಲಾನ್‌ ಮಂಜೂರಿ, ನಿವೇಶನ ಮಾರಾಟ, ಇ-ಖಾತಾ ಸೃಜನೆ (ಸ್ಥಳೀಯ ಸಂಸ್ಥೆಯಲ್ಲಿ), ಆಸ್ತಿ ತೆರಿಗೆ ಸಂಗ್ರಹ, ಭೂಸ್ವಾಧೀನ ಹಾಗೂ ಇನ್ನೂ ಅನೇಕ ಭೂ ಸಂಬಂಧಿತ ಚಟುವಟಿಕೆಗಳನ್ನು ಸರಾಗ, ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾದ ಒಂದೇ ಆನ್‌ಲೈನ್‌ ವ್ಯವಸ್ಥೆಗೆ ತರುವ ಯೋಜನೆಯಾಗಿದೆ. ಇದರಿಂದ ಜನರಿಗೆ ಬೇರೆ ಬೇರೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಭೂಮಿಗೆ ಸಂಬಂಧಿಸಿದ ಸೇವೆಗಳನ್ನು…

Read More

ಶಿವಮೊಗ್ಗ: ಗಂಡ ಸತ್ತ ಒಂದೇ ವಾರಕ್ಕೆ ಆತನ ಪತಿಯ ಹಿಂದೆ ಕಾನ್ಸ್ ಟೇಬಲ್ ಬಿದ್ದಿದ್ದಾನೆ. ಫೇಸ್ ಬುಕ್ ಮೂಲಕ ಅದು ಇದು ಅಂತ ಪುಲ್ ಮೆಸೇಜ್ ಮಾಡಿದ್ದಾನೆ. ಇಂತಹ ಪೊಲೀಸ್ ಪೇದೆಯ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಭದ್ರಾವತಿ ನಗರದ ಸಿದ್ದಾಪುರದಲ್ಲಿ ನಡೆದಿದೆ. ಫೆಬ್ರವರಿ.14ರಂದು ಕೆ ಎಸ್ ಐ ಎಸ್ ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕಾರ್ಯನಿರ್ವಹಿಸುತ್ತಿದ್ದಂತ ಜಗದೀಶ್, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆ ಬಳಿಕ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದಂತ ತೀರ್ಥಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮೋಹನ್ ಎಂಬುವರು ಸ್ವಾತಿಗೆ ಮೆಸೇಜ್ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೊಂಡ ಸ್ವಾತಿ, ಆತನ ಫೇಸ್ ಬುಕ್ ಪ್ರೊಫೈಲ್ ಬ್ಲಾಕ್ ಮಾಡಿದ್ದರು. ಇದಾದ ಬಳಿಕ ಸ್ವಾತಿಗೆ ಮತ್ತೊಂದು ಖಾತೆಯಿಂದ ಪೇದೆ ಮೋಹನ್ ಮೆಸೇಜ್ ಮಾಡುತ್ತಿದರಂತೆ. ಹೀಗಾಗಿಯೇ ಇಂದು ಭದ್ರಾವತಿಯ ಹೊಸ ಸಿದ್ದಾಪುರದ ತಮ್ಮ ಮನೆಯಲ್ಲಿ ಸ್ವಾತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೂ ಮುನ್ನಾ ಸ್ವಾತಿ ತನ್ನ ತಾಯಿಗೆ ವಾಟ್ಸ್…

Read More

ಬೆಂಗಳೂರು: ನಗರದಲ್ಲಿ ಬೆಂಗಳೂರು ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಡ್ರಗ್ ಪೆಡ್ಲರ್ ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಆರೋಪಿಯಿಂದ 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರಿಂದ ವಿದ್ಯಾರಣ್ಯಪುರದ ಸ್ಮಾಶನದ ಹತ್ತಿರ ಮಾದಕ ವಸ್ತು ಮಾರಾಟ ಮಾಡುತ್ತಿದ್ದಂತ ಆರೋಪಿ ಬಂಡೆ ಸಲ್ಮಾನ್ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 3.80 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಇದಲ್ಲದೇ ಆರೋಪಿ ಬಂಡೆ ಸಲ್ಮಾನ್ ಬಳಿಯಲ್ಲಿದ್ದಂತ 1 ಕಾರು, 1 ಮೊಬೈಲ್ ಕೂಡ ಜಪ್ತಿ ಮಾಡಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/announce-special-allowance-and-status-for-girls-who-marry-farming-boys-mlas-letter-to-cm/ https://kannadanewsnow.com/kannada/delegation-of-ias-officers-in-training-visits-kea-bengaluru-system-praised/

Read More

ಬೆಂಗಳೂರು: ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (ಎಲ್ ಬಿ ಎಸ್ ಎನ್ ಎ ಎ) ವತಿಯಿಂದ ತರಬೇತಿ ನಿರತ 10 ಐಎಎಸ್ ಅಧಿಕಾರಿಗಳ ತಂಡವು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಭೇಟಿ ನೀಡಿ, ಕಾರ್ಯಾಚರಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯಿತು. ಅಧಿಕಾರಿಗಳನ್ನು ಸ್ವಾಗತಿಸಿದ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ ಬಗ್ಗೆ ಅವರಿಗೆ ಪೂರ್ಣ ಮಾಹಿತಿ ನೀಡಿದರು. ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳಿಗೆ ಅನುಸರಿಸುವ ಕ್ರಮಗಳ ಕುರಿತು ತಂಡದ ಸದಸ್ಯರಿಗೆ ಗದ್ಯಾಳ ಅವರು ಮಾಹಿತಿ ನೀಡಿದರು. ಇದೇ ವೇಳೆ, ಸಿಇಟಿ ಅಳವಡಿಸಿಕೊಂಡಿರುವ ಆಧುನಿಕ ಭದ್ರತಾ ಕ್ರಮಗಳಾದ ಮುಖಚಹರೆ ಪತ್ತೆ ತಂತ್ರಜ್ಞಾನ (ಫೇಷಿಯಲ್ ರೆಕಗ್ನಿಷನ್), ಪರೀಕ್ಷೆ ಮುಗಿದ ತಕ್ಷಣವೇ ಓಎಂಆರ್ ಶೀಟ್ ಗಳನ್ನು ಸ್ಕ್ಯಾನ್ ಮಾಡಿ ವೆಬ್ ಸೈಟ್…

Read More