Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಚಿಸಿರುವಂತ ಕೃತಿಯಾದ ನೀರಿನ ಹೆಜ್ಜೆಯನ್ನು ನವೆಂಬರ್.5ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರಗಳ ಚಿತ್ರಣವಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ 5ರಂದು ಬಿಡುಗಡೆಗೊಳಿಸಲಿದ್ದಾರೆ. https://twitter.com/KarnatakaVarthe/status/1985323776129519741 https://kannadanewsnow.com/kannada/ai-technology-to-be-used-to-prevent-human-wildlife-conflict-in-the-state-minister-ishwar-khandre/ https://kannadanewsnow.com/kannada/a-heartbreaking-incident-in-the-state-a-dog-died-in-grief-over-the-death-of-its-owner/
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದರು. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದೆ ಎಂದು ವಿವರಿಸಿದರು. https://twitter.com/KarnatakaVarthe/status/1985336502922965420 https://kannadanewsnow.com/kannada/cinema-awards-will-be-given-every-year-from-now-on-cm-siddaramaiah-announces/ https://kannadanewsnow.com/kannada/ds-veeraiah-inaugurates-free-training-workshop-for-competitive-exams-for-sc-st-candidates/
ಬೆಂಗಳೂರು: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ಹಾಗೂ ಸಿದ್ಧಾರ್ಥ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಘ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಅದೇ 75 ದಿನಗಳ ಕಾಲ ಎಸ್ಸಿ, ಎಸ್ಟಿ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ತರಬೇತಿಯನ್ನು ನೀಡುವ ಕಾರ್ಯಾಗಾರವನ್ನು ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ನ ಮುಖ್ಯಸ್ಥರು, ಲೇಖಲ ಡಿಎಸ್ ವೀರಯ್ಯ ಅವರು ಉದ್ಘಾಟಿಸಿದರು. ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವಂತ ಪಂಚಶೀಲ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ನ ಸೆಮಿನಾರ್ ಹಾಲ್ ನಲ್ಲಿ ಉಚಿತ ಸ್ಪರ್ಧಾತ್ಮಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಈ ಸ್ಪರ್ಧಾತ್ಮಕ ಯುಗದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳನ್ನು ತಯಾರಿ ಮಾಡುವುದೇ ನಮ್ಮ ಉದ್ದೇಶವಾಗಿದೆ. ಅಭ್ಯರ್ಥಿಗಳಲ್ಲಿ ನಾನು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ಸರ್ಕಾರಿ ನೌಕರಿ ಪಡೆಯುತ್ತೇನೆ ಎನ್ನುವಂತ ವಿಶ್ವಾಸವನ್ನು ಹುಟ್ಟಿಸುವ ಕೆಲಸವನ್ನು ಈ ತರಬೇತಿಯ ಮೂಲಕ ಮಾಡಲಾಗುತ್ತದೆ ಎಂದರು. ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ಮತ್ತು ಸಿದ್ಧಾರ್ಥ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಘದ…
ಮೈಸೂರು : ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಅವರು ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು. ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ…
ಶಿವಮೊಗ್ಗ: ಜಿಲ್ಲೆಯ ಸೊರಬದ ಕಾನಹಳ್ಳಿಯಲ್ಲಿ ಅದ್ಧೂರಿಯಾಗಿ 70ನೇ ಕನ್ನಡ ರಾಜ್ಯೋತ್ಸವವನ್ನು ಕುವೆಂಪು ಕನ್ನಡ ಯುವಕರ ಸಂಘದಿಂದ ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಾನಹಳ್ಳಿ(ಗಡೆಗದ್ದೆ)ಯಲ್ಲಿ ಗ್ರಾಮದ ಕುವೆಂಪು ರಂಗಮಂದಿರದಲ್ಲಿ ಕುವೆಂಪು ಕನ್ನಡ ಯುವಕ ಸಂಘದ ಅಧ್ಯಕ್ಷರಾದ ಮಂಜಪ್ಪ ಕೆ.ಪಿ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದರು. ಉಳವಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸರಸ್ವತಿ ಗಣಪತಿಯವರು ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸತತ 32 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ವಯೋನಿವೃತ್ತಿಯಾದಂತ ಗೋಪಾಲಮ್ಮ ಅವರ ಸೇವೆಯನ್ನು ಸ್ಮರಿಸಿದಂತ ಕುವೆಂಪು ಕನ್ನಡ ಯುವಕರ ಸಂಘವು, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು. ಇದಲ್ಲದೇ ಕಾನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿದ್ದಂತ ಶಿಕ್ಷರಾದ ಸಚಿನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾನಹಳ್ಳಿಯ ಕುವೆಂಪು ಕನ್ನಡ ಯುವಕರ ಸಂಘದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ನವದುರ್ಗೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ಕೆ.ಇ ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ…
ಜ್ಯೋತಿಷ ಶಾಸ್ತ್ರದಲ್ಲಿ ಲಕ್ಷ್ಮೀ ಪ್ರಾಪ್ತಿಯ ವಿಶೇಷ ಉಪಾಯಗಳನ್ನು ವಿವರಿಸಲಾಗಿದೆ. ಇವುಗಳನ್ನು ಅನುಸರಿಸಿದರೆ, ಜಾತಕನಿಗೆ ತನ್ನ ಪರಿಶ್ರಮ ಮತ್ತು ಪ್ರಯತ್ನಗಳ ಉತ್ತಮ ಫಲಗಳು ಸಿಕ್ಕಲು ಪ್ರಾರಂಭವಾಗುತ್ತವೆ. ಅವನಿಗೆ ತಾಯಿ ಲಕ್ಷ್ಮಿಯ ಆಶೀರ್ವಾದ ಲಭಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ತಾಯಿ ಭಗವತಿ ಲಕ್ಷ್ಮಿಯವರಿಗೆ 18 ಪುತ್ರರಿದ್ದಾರೆಂದು ಪರಿಗಣಿಸಲಾಗಿದೆ. ನಿಮಗೆ ಹಠಾತ್ ಹಣದ ಅಗತ್ಯ ಎದುರಾದರೆ, ಲಕ್ಷ್ಮೀ ಮಾತೆಯನ್ನು ನೇರವಾಗಿ ಅಲ್ಲ, ಬದಲಿಗೆ ಅವರ ಪುತ್ರರನ್ನು ಪ್ರಾರ್ಥಿಸಬೇಕು. ನಂಬಿಕೆ: ಲಕ್ಷ್ಮಿಯ ಪುತ್ರರ ಹೆಸರನ್ನು ಉಚ್ಚರಿಸಿದಾಗ, ಮಾತಾಜಿ ಓಡಿಬಂದು ನಿಮ್ಮ ಮನೆಗೆ ಪ್ರವೇಶಿಸುತ್ತಾಳೆ. ಯಾವ ಮನೆಯಲ್ಲಿ ನಿತ್ಯ ತಾಯಿ ಲಕ್ಷ್ಮಿಯ 18 ಪುತ್ರರ ಹೆಸರು ಉಚ್ಚರಿಸಲ್ಪಡುತ್ತದೋ, ಮಾತೆ ಆ ಮನೆಯಲ್ಲಿ ಶಾಶ್ವತವಾಗಿ ನೆಲೆಸುತ್ತಾಳೆ. ಆ ಜಾತಕ ಅಥವಾ ಮನೆಯ ಸದಸ್ಯರಿಗೆ…
ಚಿಕ್ಕಬಳ್ಳಾಪುರ: ಮದ್ಯ ಸೇವಿಸಲು ಹಣ ಕೊಡಲಿಲ್ಲವೆಂದು ತಂದೆಯನ್ನೇ ಪುತ್ರನೊಬ್ಬ ಹೊಡೆದು ಕೊಂದಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ನೆಹರು ನಗರದಲ್ಲಿ ಈ ದುಷ್ಕೃತ್ಯವನ್ನು ಎಸಗಲಾಗಿದೆ. ತಂದೆ 55 ವರ್ಷದ ಗಂಗಣ್ಣನನ್ನು ರಿಪೀಸ್ ಪಟ್ಟಿಯಿಂದ ಹೊಡೆದು ಪುತ್ರ ಸಂಜಯ್ ಕುಮಾರ್ ಕೊಂದಿದ್ದಾನೆ. ಕುಡಿಯೋದಕ್ಕೆ ದುಡ್ಡು ಕೊಡಲಿಲ್ಲ ಎನ್ನುವ ಕಾರಣಕ್ಕೆ ತಂದೆ ಗಂಗಣ್ಣ ಹಾಗೂ ಪುತ್ರ ಸಂಜಯ್ ಕುಮಾರ್ ನಡುವೆ ಗಲಾಟೆಯಾಗಿದೆ. ಈ ವೇಳೆಯಲ್ಲಿ ರಿಪೀಸ್ ನಿಂದ ಹೊಡೆದು ತಂದೆಯನ್ನು ಕೊಂದಿದ್ದಾನೆ. ಆ ಬಳಿಕ ತಂದೆಯ ಶವಸಂಸ್ಕಾರಕ್ಕೆ ಸಂಜಯ್ ಕುಮಾರ್ ಮುಂದಾಗಿದ್ದಾನೆ. ವಿಚಾರ ತಿಳಿದಂತ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಸ್ಥಳಕ್ಕೆ ಗೌರಿಬಿದನೂರು ಠಾಣೆಯ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆಯಲ್ಲಿ ತಾನೇ ಅಪ್ಪನನ್ನು ಕೊಂದಿರೋದಾಗಿ ಪುತ್ರ ತಪ್ಪೊಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ಸಂಜಯ್ ಕುಮಾರ್(25) ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಗೌರಿಬಿದನೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/public-beware-child-trafficking-is-a-crime-if-caught-a-5-year-prison-sentence-is-fixed/ https://kannadanewsnow.com/kannada/renukaswamy-murder-case-actor-darshan-and-gang-deny-charges-against-them/
ಮೈಸೂರು: ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು. ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು… *ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. *ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ. *ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. *ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧನಿಕ ತಂತ್ರಜ್ಞಾನ ಬಳಕೆ ಬಗ್ಗೆ…
BREAKING: ನಟ ದರ್ಶನ್, ಪವಿತ್ರಾಗೌಡ ಮತ್ತು ಇತರರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ; ನ.10ರಂದು ವಿಚಾರಣೆ ದಿನಾಂಕ ನಿಗದಿ
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ತೂಗುದೀಪ, ಅವರ ಸ್ನೇಹಿತ ಪವಿತ್ರಾ ಗೌಡ ಮತ್ತು ಇತರ 15 ಆರೋಪಿಗಳು ತಪ್ಪೊಪ್ಪಿಕೊಂಡ ನಂತರ ಬೆಂಗಳೂರಿನ ನ್ಯಾಯಾಲಯವು ಸೋಮವಾರ ಅವರ ವಿರುದ್ಧ ಆರೋಪಗಳನ್ನು ಹೊರಿಸಿದೆ. ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೋಮವಾರ ಮಧ್ಯಾಹ್ನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರ (CCH-57) ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳು ತಾವು ತಪ್ಪೊಪ್ಪಿಕೊಂಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು ಮತ್ತು ನ್ಯಾಯಾಧೀಶರು ತಮ್ಮ ಮನವಿಯನ್ನು ದಾಖಲಿಸಿಕೊಂಡು ತಮ್ಮ ವಿರುದ್ಧದ ಆರೋಪಗಳನ್ನು ಓದಿದರು. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ನವೆಂಬರ್ 10 ರಂದು ನಿಗದಿಪಡಿಸಿತು. ವಿಚಾರಣೆಯ ನಂತರ, ದರ್ಶನ್ ಮತ್ತು ಇತರ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿಡಲಾಗುವುದು. ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಸ್ವಾಮಿ, ಜೂನ್ 9, 2024 ರಂದು ಪಶ್ಚಿಮ ಬೆಂಗಳೂರಿನ ಸುಮನಹಳ್ಳಿಯಲ್ಲಿರುವ ಮಳೆನೀರಿನ ಚರಂಡಿ ಬಳಿ ಕೊಲೆಯಾಗಿ ಪತ್ತೆಯಾಗಿದ್ದರು. ಅವರ ದೇಹವು ತೀವ್ರವಾಗಿ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧಿಸಲ್ಪಟ್ಟು ಜೈಲುಪಾಲಾಗಿರುವಂತ ಎ.1 ಆರೋಪಿ ಪವಿತ್ರಾಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ 17 ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ನ್ಯಾಯಾಲಯದ ಮುಂದೆ ನಿರಾಕರಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಎ1 ಆರೋಪಿ ಪವಿತ್ರಾಗೌಡ ಪರ ವಕೀಲ ನಾರಾಯಣಸ್ವಾಮಿ ಮಾಹಿತಿ ನೀಡಿದ್ದು, ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ದೋಷಾರೋಪ ಮಾಡಿದ್ದರು. ಆದರೇ ಯಾರೊಬ್ಬರೂ ದೋಷಾರೋಪಗಳನ್ನು ಒಪ್ಪಿಕೊಂಡಿಲ್ಲ. ಪೊಲೀಸರು ಗ್ರಂಥಗಳಂತೆ ಚಾರ್ಜ್ ಶೀಟ್ ಹಾಕಿದ್ದಾರೆ. ಹೇಗೆ ಒಪ್ಪಿಕೊಳ್ಳುವುದಕ್ಕೆ ಆಗುತ್ತೆ ಎಂಬುದಾಗಿ ಪ್ರಶ್ನಿಸಿದರು. ನವೆಂಬರ್.10ರಂದು ಖುದ್ದು ಹಾಜರಾಗುವುದಕ್ಕೆ ಹೇಳ್ತಾರೋ ಅಥವಾ ವೀಡಿಯೋ ಕಾನ್ಫೆರೆನ್ಸ್ ಗೆ ಹೇಳುತ್ತಾರೋ ಕಾದು ನೋಡಬೇಕು ಎಂಬುದಾಗಿ ಕೊಲೆ ಆರೋಪಿ ಪರ ವಕೀಲ ನಾರಾಯಣಸ್ವಾಮಿ ತಿಳಿಸಿದರು. https://kannadanewsnow.com/kannada/good-news-for-self-employed-people-ujires-rudset-organization-invites-applications-for-various-free-training/ https://kannadanewsnow.com/kannada/breaking-kannada-rajyotsava-award-winning-veena-maker-penna-obalaya-passes-away-cm-condoles/














