Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಅನ್ನ ಹಾಕಿದ ಮನೆಗೆ ಖತರ್ನಾಕ್ ದಂಪತಿಗಳು ಕನ್ನ ಹಾಕಿರುವಂತ ಘಟನೆ ನಡೆದಿದೆ. ಚಿನ್ನ, ವಜ್ರ, ಬೆಳ್ಳಿ, ನಗರದನ್ನು ದರೋಡೆ ಮಾಡಲಾಗಿದೆ. ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಈ ಕೃತ್ಯವನ್ನು ಎಸಗಲಾಗಿದೆ. ಮನೆ ಕೆಲಸ ಮಾಡುತ್ತಿದ್ದಂತ ದಿನೇಶ್, ಕಮಲಾ ದಂಪತಿಗಳು ತಮಗೆ ಅನ್ನ ಹಾಕಿದ ಮನೆಗೆ ಕನ್ನ ಹಾಕಿದ್ದಾರೆ. ಬಿಲ್ಡರ್ ಶಿವಕುಮಾರ್ ಎಂಬುವರ ಮನೆಯಲ್ಲಿ ದಂಪತಿಗಳು ಕಳ್ಳತನದ ಕೈಚಳಕ ಮೆರೆದಿದ್ದಾರೆ. 20 ದಿನಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದಂತ ನೇಪಾಳಿ ದಂಪತಿಗಳು ಕೋಟಿ ಕೋಟಿ ಚಿನ್ನಾಭರಣ, ನಗದು ದೋಚಿದ್ದಾರೆ. 11.5 ಕೆಜಿ ಚಿನ್ನ, ವಜ್ರ, 5 ಕೆಜಿ ಬೆಳ್ಳಿ, 11.5 ಲಕ್ಷ ನಗದು ಕಳ್ಳತನ ಮಾಡಿದ್ದಾರೆ. 30 ವರ್ಷದಿಂದ ಗಳಿಸಿದ್ದಂತ ಹಣ, ಚಿನ್ನವನ್ನು 30 ನಿಮಿಷಗಳಲ್ಲಿ ದೋಚಿ ನೇಪಾಳಿ ದಂಪತಿ ಪರಾರಿಯಾಗಿದ್ದಾರೆ. ಮನೆಯಲ್ಲಿ ಲಾಕರ್ ಇಲ್ಲ ಎಂದು ತಾಯಿ ಬಳಿ ಇಟ್ಟಿದ್ದ ಮಕ್ಕಳು. ಸೊಸೆಯ ಚಿನ್ನಾಭರಣವನ್ನೂ ಮನೆಯಲ್ಲೇ ಲಾಕರ್ ನಲ್ಲಿ ಇಟ್ಟಿದ್ದರು. ಈ ಎಲ್ಲವನ್ನು ದೋಚಿ ಪರಾರಿಯಾಗಿದ್ದಾರೆ. https://kannadanewsnow.com/kannada/teachers-in-the-state-are-entitled-to-salaries-from-the-day-they-are-funded-high-courts-landmark-verdict/
ನವದೆಹಲಿ: ಮಹಾರಾಷ್ಟ್ರ ಉಪ ಸಚಿವ ಅಜಿತ್ ಪವಾರ್ ಮತ್ತು ಇತರ ನಾಲ್ವರು ಬಾರಾಮತಿಯಲ್ಲಿ ಸಾವನ್ನಪ್ಪಿದ ವಿಮಾನ ಅಪಘಾತಕ್ಕೆ ಮುಂಚಿನ ಘಟನೆಗಳ ಅನುಕ್ರಮವನ್ನು ಬಹಿರಂಗಪಡಿಸುವ ಹೇಳಿಕೆಯನ್ನು ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ. ಪೈಲಟ್ ಮಾಡಿದ ಮೊದಲ ವಿಫಲ ಲ್ಯಾಂಡಿಂಗ್ ಪ್ರಯತ್ನದ ನಂತರ ಬುಧವಾರ ಬೆಳಿಗ್ಗೆ 8:43 ಕ್ಕೆ ವಿಮಾನವನ್ನು ರನ್ವೇ 11 ರಲ್ಲಿ ಇಳಿಸಲು ಅನುಮತಿ ನೀಡಲಾಯಿತು ಎಂದು ಸರ್ಕಾರ ತಿಳಿಸಿದೆ. ಆದಾಗ್ಯೂ, ಕ್ಲಿಯರೆನ್ಸ್ ನಂತರ ಯಾವುದೇ ಮರುಪರಿಶೀಲನೆ ನಡೆಯಲಿಲ್ಲ ಮತ್ತು ಮುಂದಿನ ನಿಮಿಷ ಬೆಳಿಗ್ಗೆ 8:44 ಕ್ಕೆ, ATC ಬೆಂಕಿಯನ್ನು ಕಂಡಿತು. ಇಡೀ ಘಟನೆಯಲ್ಲಿ ಕಾಣುವ ಅಂಶವೆಂದರೆ ಅಪಘಾತಕ್ಕೆ ಮೊದಲು ATC ಗೆ ಯಾವುದೇ MAYDAY ಕರೆ ಅಥವಾ ಯಾವುದೇ ರೀತಿಯ ವಿಪತ್ತು ಕರೆ ಬಂದಿಲ್ಲ. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ತನಿಖೆಯನ್ನು ವಹಿಸಿಕೊಂಡಿದೆ ಎಂದು ಸರ್ಕಾರ ತಿಳಿಸಿದೆ. ವಿಮಾನ ಅಪಘಾತಕ್ಕೀಡಾದಾಗ ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯ ಪರಿಸ್ಥಿತಿಗಳು ಇದ್ದವು ಎಂದು ಆರಂಭಿಕ ಮಾಹಿತಿಗಳು ಸೂಚಿಸುತ್ತವೆ. ಬೆಳಿಗ್ಗೆ…
ಬೆಂಗಳೂರು: ಕಾರು ಅಪಘಾತದಲ್ಲಿ ಮೃತಪಟ್ಟಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರವು ಅನುಕಂಪದ ಆಧಾರದ ಅಡಿಯಲ್ಲಿ ಉದ್ಯೋಗ ನೀಡಿದೆ. ಬರೋಬ್ಬರಿ 92,500 ವೇತನದ ನೌಕರಿಯನ್ನು ಸರ್ಕಾರ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಅನುಕಂಪದ ಆಧಾರದಡಿ ನೇಮಕಾತಿ ಪತ್ರವನ್ನು ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ವಿತರಣೆ ಮಾಡಿದರು. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಕಳೆದ ದಿನಾಂಕ 25-11-2025ರಂದು ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಆಸರೆಯಾಗಿ ನಿಂತಿದೆ. ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದಂತ ಅವರ ಪುತ್ರಿ ಕುಮಾರಿ ಚೈತನ್ಯಾ.ಎಂ ಬೀಳಗಿಗೆ ಅನುಕಂಪದ ಆಧಾರದ ನೌಕರಿಯನ್ನು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿವಂಗತ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಹುದ್ದೆಯ ನೇಮಕಾತಿಯ ಆದೇಶ ಪತ್ರವನ್ನು ವಿತರಿಸಿದರು. ಅಂದಹಾಗೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ…
ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿಯೇ ಅಕ್ಕಪಡೆ ರಚಿಸಲಾಗಿದ್ದು, ದಿನದಲ್ಲಿ 12 ಗಂಟೆ ಗಸ್ತು ತಿರುಗಲಿದೆ. ದೌರ್ಜನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಶೇಷ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ದಿನದ 24 ಗಂಟೆಯೂ ಸಹಾಯವಾಣಿಗಳನ್ನು ತೆರೆಯಲಾಗಿದೆ ಎಂದರು. ಕಳೆದ ವರ್ಷ ನವೆಂಬರ್ 28 ರಂದು ಅಕ್ಕ ಪಡೆಗೆ ಚಾಲನೆ ನೀಡಲಾಗಿದ್ದು, ಈ ಅಕ್ಕಪಡೆ ಎಲ್ಲೆಡೆ ಗಸ್ತು ತಿರುಗುತ್ತದೆ. ನಮ್ಮ ಇಲಾಖೆಯಿಂದ ಸಹಾಯವಾಣಿ ತೆರೆಯಲಾಗಿದ್ದು, 1098 ಸಂಖ್ಯೆಗೆ ಕರೆ ಮಾಡಬಹುದು. ಅಕ್ಕ ಪಡೆಗೆ ಮಹಿಳಾ ಸಹಾಯವಾಣಿ 181, ಜೊತೆಗೆ ಪೊಲೀಸ್ ಇಲಾಖೆಯ 112 ಸಂಖ್ಯೆಗೆ ಕರೆ ಮಾಡಬಹುದು. ದೌರ್ಜನ್ಯ ತಡೆಗಟ್ಟಲು ಗ್ರಾಮ ಪಂಚಾಯಿತಿಯಿಂದ ಹಿಡಿದು ಮೇಲ್ಮಟ್ಟದವರೆಗೂ ಸಮಿತಿ ರಚಿಸಲಾಗಿದೆ…
ಶಿವಮೊಗ್ಗ: ಇಪ್ಪತ್ತಕ್ಕೂ ಹೆಚ್ಚು ಮನೆಗಳಿವೆ. ಆದರೆ ಓಡಾಟಕ್ಕೆ ರಸ್ತೆ ಇಲ್ಲ. ಹೀಗಾಗಿ ಸಾಗರ ತಾಲ್ಲೂಕಿನ ಕೆ.ಜಿ ಕೊಪ್ಪ ಗ್ರಾಮಸ್ಥರು ತಹಶೀಲ್ದಾರರ ಕಚೇರಿ ಬಳಿಯಲ್ಲಿ ಪ್ರತಿಭಟನೆ ನಡೆಸಿ, ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸೈದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ.ಜಿ ಕೊಪ್ಪ ಗ್ರಾಮದ ಸುಮಾರು 20 ಮನೆಗಳಿಗೆ ಓಡಾಡಲು ರಸ್ತೆ ಇದೆ. ಆದರೆ ಆ ರಸ್ತೆಯನ್ನು ಮಹಾದೇವಪ್ಪ, ರಾಮ ಎಂಬುವರು ಒತ್ತುವರಿ ಮಾಡಿಕೊಂಡು ರಸ್ತೆ ಬಂದ್ ಮಾಡಿದ್ದಾರೆ. ಹೀಗಾಗಿ ಈಗ ಕೆ.ಜಿ ಕೊಪ್ಪ ಗ್ರಾಮಸ್ಥರ ಓಡಾಟಕ್ಕೆ ರಸ್ತೆಯೇ ಇಲ್ಲದಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಸಾಗರದ ತಹಶೀಲ್ದಾರರ ಕಚೇರಿಯ ಮುಂದೆ ಕೆ.ಜಿ ಕೊಪ್ಪ ಗ್ರಾಮಸ್ಥರು, ಕೆಂಚಗೊಂಡನಕೊಪ್ಪ ಗ್ರಾಮ ಸುಧಾರಣಾ ಸಮಿತಿಯವರು ಕರ್ನಾಟಕ ರಕ್ಷಣಾ ವೇದಿಕೆಯ ಮನೋಜ್ ಕುಗ್ವೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ತಹಶೀಲ್ದಾರರಿಗೆ ರಸ್ತೆ ಸಮಸ್ಯೆ ಬಗೆಹರಿಸಲು ಮನವಿ ಮಾಡಲಾಯಿತು. ಈ ವೇಳೆ ಮಾತನಾಡಿದ ಕರವೇ ಸಾಗರ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ ಅವರು, ಕೆ.ಜಿ ಕೊಪ್ಪ ಗ್ರಾಮದ…
ನವದೆಹಲಿ: ಇಂದು, ಆಧಾರ್ ಕಾರ್ಡ್ ಭಾರತದಲ್ಲಿ ಗುರುತಿನ ಪರಿಶೀಲನೆಯ ಬೆನ್ನೆಲುಬಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪ್ರವೇಶಿಸುವವರೆಗೆ, ಇದನ್ನು ಬಹುತೇಕ ಎಲ್ಲೆಡೆ ಬಳಸಲಾಗುತ್ತದೆ. ಅದಕ್ಕಾಗಿಯೇ ನಿಮ್ಮ ಆಧಾರ್ ಅನ್ನು ಹೇಗೆ ಮತ್ತು ಎಲ್ಲಿ ಬಳಸಲಾಗುತ್ತಿದೆ ಎಂಬುದರ ಮೇಲೆ ನಿಗಾ ಇಡುವುದು ಎಂದಿಗಿಂತಲೂ ಹೆಚ್ಚು ಮುಖ್ಯವಾಗಿದೆ. ನೀವು ದುರುಪಯೋಗದ ಬಗ್ಗೆ ಚಿಂತಿತರಾಗಿದ್ದರೆ ಅಥವಾ ಎಚ್ಚರವಾಗಿರಲು ಬಯಸಿದರೆ, ಆಧಾರ್ ದೃಢೀಕರಣ ಇತಿಹಾಸವು ನಿಮಗೆ ಅದನ್ನು ಸುಲಭವಾಗಿ ಮತ್ತು ಆನ್ಲೈನ್ನಲ್ಲಿ ಮಾಡಲು ಅನುಮತಿಸುತ್ತದೆ. ಆಧಾರ್ ದೃಢೀಕರಣ ಇತಿಹಾಸ ಎಂದರೇನು? ಬ್ಯಾಂಕ್, ಕಂಪನಿ ಅಥವಾ ಸರ್ಕಾರಿ ಕಚೇರಿಯಿಂದ ನಿಮ್ಮ ಆಧಾರ್ ಅನ್ನು ಪರಿಶೀಲನೆಗಾಗಿ ಬಳಸಿದಾಗಲೆಲ್ಲಾ, ವಿವರಗಳನ್ನು UIDAI ವ್ಯವಸ್ಥೆಯಲ್ಲಿ ಲಾಗ್ ಮಾಡಲಾಗುತ್ತದೆ. ಈ ಡಿಜಿಟಲ್ ದಾಖಲೆಯನ್ನು ನಿಮ್ಮ ಆಧಾರ್ ದೃಢೀಕರಣ ಇತಿಹಾಸ ಎಂದು ಕರೆಯಲಾಗುತ್ತದೆ. ನಿಮ್ಮ ಆಧಾರ್ ಅನ್ನು ಯಾವಾಗ, ಎಲ್ಲಿ ಮತ್ತು ಹೇಗೆ ಬಳಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಇದು ನಿಮಗೆ ಸಹಾಯ ಮಾಡುತ್ತದೆ.ನೀವು ಅದನ್ನು ನಿಯಮಿತವಾಗಿ ಏಕೆ ಪರಿಶೀಲಿಸಬೇಕು ನಿಮ್ಮ ಆಧಾರ್…
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧಿಸಲಾಗಿತ್ತು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನಿನ್ನೆ ಕೇರಳದ ಗಡಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದಂತ ರಾಜೀವ್ ಗೌಡ ಹಾಗೂ ಅವರಿಗೆ ಆಶ್ರಯ ನೀಡಿದ್ದಂತ ಉದ್ಯಮಿ ಮೈಕಲ್ ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಶಿಡ್ಲಘಟ್ಟ ಜೆಎಂಎಫ್ ಸಿ ನ್ಯಾಯಾಲಯವು, ಆರೋಪಿ ರಾಜೀವ್ ಗೌಡಗೆ ಫೆಬ್ರವರಿ.9ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆರೋಪಿ ರಾಜೀವ್ ಗೌಡಗೆ ಆಶ್ರಯ ನೀಡಿದ್ದಂತ ಮೈಕಲ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಮಧ್ಯಂತರ ಜಾಮೀನಿಗೂ ಅರ್ಜಿ ಸಲ್ಲಿಸಿದ್ದರು. ಆದರೇ ಕೋರ್ಟ್ ಅವರು ಸಲ್ಲಿಸಿದ್ದಂತ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧಿಸಲಾಗಿತ್ತು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನಿನ್ನೆ ಕೇರಳದ ಗಡಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದಂತ ರಾಜೀವ್ ಗೌಡ ಹಾಗೂ ಅವರಿಗೆ ಆಶ್ರಯ ನೀಡಿದ್ದಂತ ಉದ್ಯಮಿ ಮೈಕಲ್ ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಶಿಡ್ಲಘಟ್ಟ ಜೆಎಂಎಫ್ ಸಿ ನ್ಯಾಯಾಲಯವು, ಆರೋಪಿ ರಾಜೀವ್ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆರೋಪಿ ರಾಜೀವ್ ಗೌಡಗೆ ಆಶ್ರಯ ನೀಡಿದ್ದಂತ ಮೈಕಲ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ…
ತುಮಕೂರು: ಮನೆಯೊಂದರ ಒಳಗೆ ಕಳ್ಳತನಕ್ಕೆ ನುಗ್ಗಿ, ಚಿನ್ನಾಭರಣ ಕದಿಯುತ್ತಿದ್ದಂತ ಸಂದರ್ಭದಲ್ಲಿಯೇ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿರುವಂತ ಘಟನೆ ತುರುವೇಕೆರೆಯಲ್ಲಿ ನಡೆದಿದೆ. ಹೀಗೆ ಹಿಡಿದಂತ ಕಳ್ಳರನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯೊಂದಕ್ಕೆ ಆಂಧ್ರಪ್ರದೇಶದ ಚಿತ್ತೂರು ಮೂಲದ ಇಬ್ಬರು ಕಳ್ಳರು ನುಗ್ಗಿದ್ದಾರೆ. ಮನೆಯ ಒಳಗೆ ಶಬ್ದವಾಗುತ್ತಿದ್ದದ್ದು ಗಮನಿಸಿದಂತ ಗ್ರಾಮಸ್ಥರು, ಇಡೀ ಮನೆಯನ್ನೇ ಹಿಡಿಯೋದಕ್ಕೆ ಸುತ್ತುವರೆದಿದ್ದಾರೆ. ಮನೆಯ ಒಳಗೆ ಹಣ, ಒಡವೆ ಕದ್ದು ಪರಾರಿಯಾಗೋದಕ್ಕೆ ಪ್ರಯತ್ನಿಸಿದಂತ ಇಬ್ಬರು ಕಳ್ಳರನ್ನು ಗ್ರಾಮಸ್ಥರು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮಸ್ಥರ ಸಮಯ ಪ್ರಜ್ಞೆ, ಸಾಹಸಕ್ಕೆ ಸಾರ್ವಜನಿಕರು, ಪೊಲೀಸರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಕಳ್ಳರ ಬಳಿಯಲ್ಲಿ ಹಣ, ಒಡವೆ, ಚಾಕು ಇರೋದು ಪೊಲೀಸರು ಪರಿಶೀಲನೆ ವೇಳೆಯಲ್ಲಿ ಪತ್ತೆಯಾಗಿದೆ. https://kannadanewsnow.com/kannada/talaguppa-gram-panchayat-shops-in-shivamogga-were-auctioned-in-a-hurry-there-are-many-doubts-behind-it/ https://kannadanewsnow.com/kannada/gram-panchayat-offices-in-the-state-will-be-named-after-mahatma-gandhi-dcm-d-k-shivakumar-announces/














