Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ದಶಕಗಳಿಂದ ಮಲೆನಾಡಿನ ರೈತರನ್ನು ಕಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಬಗರ್ ಹುಕುಂ ಸಾಗುವಳಿದಾರರ ಭೂ ಹಕ್ಕಿನ ವಿಚಾರದಲ್ಲಿ ಸರ್ಕಾರ ತೋರುತ್ತಿರುವ ವಿಳಂಬ ಧೋರಣೆಯನ್ನು ಖಂಡಿಸಿ, ‘ಮಲೆನಾಡು ರೈತ ಹೋರಾಟ ಸಮಿತಿ’ಯು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಶೀಘ್ರ ಕ್ರಮಕ್ಕೆ ಆಗ್ರಹಿಸಿದೆ. ಈ ಕುರಿತು ಸಮಿತಿಯ ಸಂಚಾಲಕರಾದ ಟಿ.ಎನ್. ಶ್ರೀನಿವಾಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಕೂಡಲೇ ಸಮಸ್ಯೆ ಪರಿಹಾರಕ್ಕೆ ಚರ್ಚಿಸಲು ಸಭೆ ಕರೆಯುವಂತೆ ಪತ್ರ ಬರೆದು ಆಗ್ರಹಿಸಿದ್ದಾರೆ. ಭರವಸೆ ನೀಡಿ ಈಡೇರಿಸುವುದನ್ನೇ ಮರೆತ ಕಾಂಗ್ರೆಸ್ ಸರ್ಕಾರ ಕಳೆದ 2022ರ ನವೆಂಬರ್ 22ರಂದು ಶಿವಮೊಗ್ಗದಲ್ಲಿ ನಡೆದ ‘ಮಲೆನಾಡಿನ ಜನಾಕ್ರೋಶ’ ಬೃಹತ್ ಸಮಾವೇಶದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಅಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಲೆನಾಡಿನ ರೈತರ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಸರ್ಕಾರ ಅಸ್ತಿತ್ವಕ್ಕೆ ಬಂದು 1000 ದಿನಗಳಾಗಿದ್ದರೂ, ಸಮಸ್ಯೆಗಳು ಬಗೆಹರಿಯುವ ಬದಲಿಗೆ ಮತ್ತಷ್ಟು ಬಿಗಡಾಯಿಸಿವೆ ಎಂದು ಸಮಿತಿ ದೂರಿದೆ. ಇಲಾಖೆಗಳ…
ಸಾಗರ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಹೋರಾಟಗಳು ತೀವ್ರಗೊಳ್ಳುತ್ತಿದ್ದು, ಅದರ ಭಾಗವಾಗಿ ಸಾಗರ ತಾಲ್ಲೂಕಿನ ಆರೋಗ್ಯ ಇಲಾಖೆಯ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಹೆಚ್ಚಿನ ಬಲ ತುಂಬಲು ನಿರ್ಧರಿಸಲಾಗಿದೆ. ಈ ಸಂಬಂಧ, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಂತೋಷ್ ಗೌತಮಪುರ ಅವರಿಗೆ ಆರೋಗ್ಯ ಇಲಾಖೆಯ ನೌಕರರ ನಿಯೋಗವು ಅಧಿಕೃತವಾಗಿ ಮನವಿ ಸಲ್ಲಿಸಿ, ಸಹಕಾರ ಕೋರಿತು. ಹೋರಾಟದ ಹಿನ್ನೆಲೆ ಮತ್ತು ಮನವಿ ಸಲ್ಲಿಕೆ ಆರೋಗ್ಯ ಇಲಾಖೆಯ ನೌಕರರು ತಮ್ಮ ವೃತ್ತಿಜೀವನದಲ್ಲಿ ಎದುರಿಸುತ್ತಿರುವ ವೇತನ ತಾರತಮ್ಯ, ಕೆಲಸದ ಒತ್ತಡ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಮಾರ್ಚ್.11ರಿಂದ ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಹೋರಾಟವು ಕೇವಲ ಒಂದು ಇಲಾಖೆಗೆ ಸೀಮಿತವಾಗದೆ, ಒಟ್ಟಾರೆ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ, ತಾಲ್ಲೂಕು ಮಟ್ಟದ ಮಾತೃ ಸಂಘಟನೆಯಾದ ಸರ್ಕಾರಿ ನೌಕರರ ಸಂಘದ ನಾಯಕತ್ವ ಮತ್ತು ಮಾರ್ಗದರ್ಶನ ಅತೀ ಅಗತ್ಯ ಎಂದು ನೌಕರರು ಅಭಿಪ್ರಾಯವಾಗಿದೆ. ಸಾಗರ ತಾಲ್ಲೂಕು…
ಬೆಂಗಳೂರು : ಭಾರತೀಯ ಸೇನೆಯು 2027ರ ನೇಮಕಾತಿ ವರ್ಷಕ್ಕಾಗಿ ಅಗ್ನಿಪಥ್ ಯೋಜನೆಯಡಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಅಇಇ) ಆನ್ಲೈನ್ ನೋಂದಣಿಯನ್ನು ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ನೋಂದಣಿ ಅವಧಿಯು 13 ಫೆಬ್ರವರಿ 2026 ರಿಂದ 01 ಏಪ್ರಿಲ್ 2026 ರವರೆಗೆ ನಡೆಯಲಿದೆ. ಲಭ್ಯವಿರುವ ವಿಭಾಗಗಳು: ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮನ್ (10ನೇ ಮತ್ತು 8ನೇ ತೇರ್ಗಡೆ), ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್), ನರ್ಸಿಂಗ್ ಅಸಿಸ್ಟೆಂಟ್ ಮತ್ತು ನರ್ಸಿಂಗ್ ಅಸಿಸ್ಟೆಂಟ್ ವೆಟರಿನರಿ, ಸಿಪಾಯಿ ಫಾರ್ಮಾ. ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ www.joinindianarmy.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು. ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳ ಬಗ್ಗೆ ವಿವರವಾದ ಮಾಹಿತಿಯು ವೆಬ್ಸೈಟ್ನಲ್ಲಿ ಲಭ್ಯವಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಗಳಿದ್ದಲ್ಲಿ, ಅಭ್ಯರ್ಥಿಗಳು ನೇಮಕಾತಿ ಕಚೇರಿ ಬೆಂಗಳೂರು:…
ಮಂಡ್ಯ : ಜೀವನದಲ್ಲಿ ಛಲ, ಶಿಸ್ತು ಮತ್ತು ಸಂಯಮ ಮೈಗೂಡಿಸಿಕೊಂಡ ವ್ಯಕ್ತಿ ಮಾತ್ರ ಮೇರು ಸಾಧನೆ ಮಾಡಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಡಾ.ಕೆ.ಎಸ್.ರಾಜಣ್ಣ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ಶ್ರೀ ವಿವೇಕಾನಂದ ಶಾಲೆಯಲ್ಲಿ ಸೋಮವಾರ ನಡೆದ 2026 ನೇ ಸಾಲಿನ ವಿವೇಕ ಸಂಭ್ರಮ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ವಹಿಸಿ ಅವರು ಮಾತನಾಡಿದರು. ವಿದ್ಯೆ ಯಾರು ಕದಿಯಲಾಗದ ಆಸ್ತಿ ಹಾಗೂ ವಿದ್ಯೆಗೆ ಯಾವುದು ಸರಿಸಾಟಿಯಿಲ್ಲ ಎಂಬುವುದನ್ನು ತಿಳಿದು ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉನ್ನತ ಸ್ಥಾನಗಳಿಸಿ ರಾಷ್ಟ್ರ ಮತ್ತು ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಬೇಕೆಂದು ತಿಳಿಸಿದರು. ಗ್ರಾಮಾಂತರ ಪ್ರದೇಶದಲ್ಲಿ ಶೋಭಾ ನಾಗೇಗೌಡ ದಂಪತಿ ಶಿಕ್ಷಣ ಸಂಸ್ಥೆ ಆರಂಭಿಸಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿರುವುದು ಪ್ರಶಂಸನೀಯ ಸಂಗತಿ ಎಂದರು. ನನಗೆ ಪೋಲಿಯೊದಿಂದಾಗಿ ಬಾಲ್ಯದಲ್ಲೇ ಕೈ-ಕಾಲುಗಳನ್ನು ಕಳೆದುಕೊಂಡರೂ, ಅಚಲ ಆತ್ಮವಿಶ್ವಾಸ ಹಾಗೂ ನಿಮ್ಮೆಲ್ಲರ ಸಹಕಾರದಿಂದ 2024ರ ಸಾಲಿನಲ್ಲಿ ದೇಶದ ಪ್ರತಿಷ್ಠಿತ…
ತೆಹ್ರಾನ್/ಮಾಸ್ಕೋ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇಸ್ರೇಲ್ ನಡೆಸಿದ ಭೀಕರ ವಾಯುದಾಳಿಯಲ್ಲಿ ಇರಾನ್ನ ಪ್ರಯಾಣಿಕ ವಿಮಾನವೊಂದು ನೆಲದ ಮೇಲೆಯೇ ಸುಟ್ಟು ಭಸ್ಮವಾಗಿದೆ. ಈ ದಾಳಿಯು ಇರಾನ್ನ ನಾಗರಿಕ ವಿಮಾನಯಾನ ಮತ್ತು ಪರಮಾಣು ಇಂಧನ ಯೋಜನೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ದಕ್ಷಿಣ ಇರಾನ್ನ ಬಂದರು ನಗರಿ ಬುಶೆಹರ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಏರ್ ಸಂಸ್ಥೆಗೆ ಸೇರಿದ ಪ್ರಯಾಣಿಕ ವಿಮಾನವೊಂದು ಸಂಪೂರ್ಣವಾಗಿ ನಾಶವಾಗಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. https://twitter.com/Cyrus_In_The_X/status/2028852299259379812 ಘಟನೆಯ ವಿವರ: ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವೇಳೆಯೇ ಕ್ಷಿಪಣಿ ತಗುಲಿ ವಿಮಾನ ಸ್ಫೋಟಗೊಂಡಿದೆ. ಜೀವಹಾನಿ: ದಾಳಿಯ ಸಮಯದಲ್ಲಿ ವಿಮಾನದಲ್ಲಿ ಪ್ರಯಾಣಿಕರು ಇದ್ದರೇ ಅಥವಾ ಎಷ್ಟು ಜನರಿಗೆ ಗಾಯಗಳಾಗಿವೆ ಎಂಬ ಬಗ್ಗೆ ಇನ್ನು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಪರಮಾಣು ಘಟಕದ ಕಾಮಗಾರಿ ಸ್ಥಗಿತ ಬುಶೆಹರ್ ನಗರವು ಇರಾನ್ನ ಏಕೈಕ ಸಕ್ರಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ನೆಲೆಯಾಗಿದೆ. ಈ ಭಾಗದಲ್ಲಿ ದಾಳಿಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ರಷ್ಯಾದ ಸರ್ಕಾರಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡುಗಳಿಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗುರುತಿಸಲು ಒಂದು ವಾರದ ಗಡುವು ನಿಗದಿ ಮಾಡಿರುವ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡರು; ಅಂತಿಮ ಪಟ್ಟಿಯನ್ನು ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅಂತಿಮ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಜಿಬಿಎ ಐದು ವಿಭಾಗಗಳ ಅಧ್ಯಕ್ಷರು ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು; ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ಎಲ್ಲಾ ವಾರ್ಡುಗಳಲ್ಲಿ ಅಭ್ಯರ್ಥಿಗಳನ್ನು ಅದಷ್ಟು ಬೇಗ ಗುರುತಿಸಬೇಕು. ಸಂಘಟನಾ ಶಕ್ತಿ ಹಾಗೂ ಗೆಲುವಿನ ಮಾನದಂಡ ಮುಖ್ಯ ಆಗಿರುತ್ತದೆ. ಈ ಬಗ್ಗೆ ವರಿಷ್ಠರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಹೇಳಿದರು. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕು. ಅದುವೇ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಸಂಕಲ್ಪ ಆಗಿದೆ. ಮೈತ್ರಿಯನ್ನು ಗಮನದಲ್ಲಿಟ್ಟುಕೊಂಡು, ಅದಕ್ಕೆ ಯಾವುದೇ ಚ್ಯುತಿ ಬರದಂತೆ ಎಲ್ಲರೂ ಅವರವರ ವಾರ್ಡುಗಳಲ್ಲಿ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.…
ಶಿವಮೊಗ್ಗ: ನಿರಂತರವಾಗಿ ಅಪಘಾತವಾಗುವಂತ ಸ್ಥಳಗಳನ್ನು ಪೊಲೀಸ್ ಇಲಾಖೆಯಿಂದ ಬ್ಲಾಕ್ ಸ್ಪಾಟ್ ಎಂಬುದಾಗಿ ಗುರುತಿಸಲಾಗುತ್ತದೆ. ಆ ಸ್ಥಳಗಳಲ್ಲಿ ವಾಹನ ಸವಾರರ ಸುರಕ್ಷತೆಯ ದೃಷ್ಠಿಯಿಂದ ಹಂಪ್ಸ್ ಹಾಕಿ, ಹೆಚ್ಚಿನ ಅಪಘಾತವನ್ನು ತಡೆಗಟ್ಟಲಾಗುತ್ತದೆ. ಆದರೇ ಸೊರಬದ ಉಳವಿಯ ಕೆರೆ ಏರಿಯ ಮೇಲೆ ಹಾಕಿರುವಂತ ಹಂಪ್ಸ್ ಈಗ ವಾಹನ ಸವಾರರನ್ನು ಅಪಘಾತದಿಂದ ರಕ್ಷಿಸೋ ಬದಲಾಗಿ, ದಿನಕ್ಕೊಂದಿಬ್ಬರು ಬಿದ್ದು ಗಾಯಗೊಳ್ಳುವಂತೆ ಆಗಿದೆ. ಇದಕ್ಕೆ ಕಾರಣವೇ ಅವೈಜ್ಞಾನಿಕ ಹಂಪ್ಸ್ ಹಾಕಿರೋದು ಎಂಬುದು ಸಾರ್ವಜನಿಕರ ಆಕ್ರೋಶವಾಗಿದೆ. ಹೌದು.. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿಯ ಕೆರೆ ಹತ್ತಿರ ಕರ್ವ್ ನಲ್ಲಿ ಎರಡು ಹಂಪ್ಸ್ ಗಳನ್ನು ಕಳೆದ ಕೆಲ ದಿನಗಳ ಹಿಂದೆ ಹಾಕಲಾಗಿದೆ. ರಾತ್ರೋ ರಾತ್ರಿ ದಿಢೀರ್ ಹಂಪ್ಸ್ ಹಾಕಿ ಹೋಗಿದ್ದರಿಂದ ಅಂದೇ ನಾಲ್ಕೈದು ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದರು. ಈ ಘಟನೆಯ ಬಳಿಕ ಮರು ದಿನ ಹಂಪ್ಸ್ ಗಳಿಗೆ ಬಣ್ಣ ಹೊಡೆಯುವಂತ ಕೆಲಸವನ್ನು ಲೋಕೋಪಯೋಗಿ ಇಲಾಖೆಯಿಂದ ಮಾಡಲಾಗಿತ್ತು. ಹಲವು ವರ್ಷಗಳ ಬಳಿಕ ಪೊಲೀಸ್ ಸೂಚನೆಯಂತೆ ಹಂಪ್ಸ್ ಉಳವಿ ಸಮೀಪದ ಕೆರೆ…
ಬೆಂಗಳೂರು : “ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್ ಅನಿಸಿಕೆ ವ್ಯಕ್ತಪಡಿಸಿದರು. ಇಂಧನ ಸಚಿವರು ಹಾಗೂ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೆ.ಜೆ.ಜಾರ್ಜ್ ಮಂಗಳವಾರ ಜೀವನಹಳ್ಳಿ ವ್ಯಾಫ್ತಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದರು. ಕೈಗೊಂಡಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ವೇಗವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು, ವಿದ್ಯುತ್, ರಸ್ತೆ, ವಸತಿ ಯೋಜನೆಗಳು ಮತ್ತು ಸಂಚಾರ ದಟ್ಟಣೆ ನಿರ್ವಹಣೆ ಸಂಬಂಧ ಚರ್ಚೆ ನಡೆಸುತ್ತ ಸ್ಥಳೀಯ ಜನರನ್ನು ಮಾತನಾಡಿಸುತ್ತಾ ಸಚಿವ ಜಾರ್ಜ್ ಅಧಿಕಾರಿಗಳಿಗೆ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳನ್ನು ಪಾದಯಾತ್ರೆ ಮೂಲಕ ಮನವರಿಕೆ ಮಾಡಿಕೊಟ್ಟರು. ವಸತಿ ಯೋಜನೆಗಳ ಪರಿಶೀಲನೆ ಜೀವನಹಳ್ಳಿ ವ್ಯಾಪ್ತಿಯಲ್ಲಿ ಅಗಸ ವೃತ್ತಯಲ್ಲಿ ತೊಡಗಿರುವ ಜನರಿಗೆ ಸುಸಜ್ಜಿತವಾದ ವಸತಿ ಸಂಕೀರ್ಣ ನಿರ್ಮಿಸಿದ್ದು, ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಸಿದ್ದಪಡಿಸುವಂತೆ ಸೂಚಿಸಿದರು. ಇದೇ ವೇಳೆ ಮುದ್ದಪ್ಪ ಗಾರ್ಡನ್ , ಚೆಟ್ಟಪ್ಪ ಗಾರ್ಡನ್ ಮತ್ತು ಗ್ಯಾಂಗ್ಮನ್ ಕ್ವಾಟ್ರರ್ಸ್ನಲ್ಲಿ ನಿರ್ಮಿಸಿರುವ ಮನೆಗಳನ್ನು…
ಬೆಂಗಳೂರು: ಯುದ್ಧಪೀಡಿದ ಪ್ರದೇಶದಿಂದ ಮತ್ತೊಂದು ಬ್ಯಾಚ್ ನಲ್ಲಿ 490 ಕನ್ನಡಿಗರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇಂದು ಮುಂಜಾನೆ 490 ಮಂದಿ ಆಗಮಿಸಿದ್ದರು, ಇದೀಗ 2ನೇ ವಿಮಾನದಲ್ಲಿ ದುಬೈನಿಂದ ಬೆಂಗಳೂರಿಗೆ 350 ಕನ್ನಡಿಗರು ವಾಪಾಸ್ ಆಗಿದ್ದಾರೆ. ಯುದ್ಧ ಪೀಡಿತ ಪ್ರದೇಶಗಳಿಂದ ಸುರಕ್ಷಿತವಾಗಿ ಕನ್ನಡಿಗರು ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ದುಬೈ ಏರ್ ಪೋರ್ಟ್ ನಿಂದ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಸುರಕ್ಷಿತವಾಗಿ 350 ಕನ್ನಡಿಗರು ಬಂದಿಳಿದಿದ್ದಾರೆ. ಇಕೆ-566 ಎಮಿರೇಟ್ಸ್ ವಿಮಾನದ ಮೂಲಕ 350 ಕನ್ನಡಿಗರು ಬೆಂಗಳೂರಿಗೆ ಮರಳಿದ್ದಾರೆ. ಇಂದು ಮುಂಜಾನೆ ದುಬೈನಿಂದ ಮೊದಲ ವಿಮಾನದಲ್ಲಿ 490 ಜನರು ಬೆಂಗಳೂರಿಗೆ ಯುದ್ಧ ಪೀಡಿತ ಪ್ರದೇಶಗಳಿಂದ ವಾಪಾಸ್ ಆಗಿದ್ದರು. ಆ ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ದುಬೈನಿಂದ ಹೊರಟಿದ್ದಂತ 2ನೇ ವಿಮಾನವು ಇದೀಗ ಬೆಂಗಳೂರನ್ನು ತಲುಪಿದ್ದು, 350 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. ಕಳೆದ ನಿನ್ನೆ ರಾತ್ರಿ ಅಬುಧಾಬಿಯಿಂದ 213 ಪ್ರಯಾಣಿಕರು ಆಗಮಿಸಿದ್ದರು. ಇದುವರೆಗೆ 1,053 ಪ್ರಯಾಣಿಕರು ಸುರಕ್ಷಿತವಾಗಿ ವಾಪಾಸ್ ಆದಂತೆ ಆಗಿದೆ. https://kannadanewsnow.com/kannada/shock-to-parents-in-the-state-private-school-fees-to-increase-this-year-too-15-hike-contemplated/…
ಬೀದರ್: ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಬೀದರ್ ನ ಬ್ರಿಮ್ಸ್ ವಸತಿ ಗೃಹದಲ್ಲಿ ವೈದ್ಯ ಸುನೀಲ್ ತಾಪ್ಸೆ(58) ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಬೇಸತ್ತು ಹಿರಿಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಆತ್ಮಹತ್ಯೆಗೂ ಮುನ್ನ ಹಿರಿಯ ವೈದ್ಯ ಸುನೀಲ್ ತಾಪ್ಸೆ ಅವರು ನನ್ನ ಸಾವಿಗೆ ಅನಾರೋಗ್ಯವೇ ಕಾರಣ ಎಂಬುದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಬೆಡ್ ರೂಮಿನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸುನೀಲ್ ತಾಪ್ಸೆ ಅವರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸುನೀಲ್ ಆತ್ಮಹತ್ಯೆ ವಿಷಯ ತಿಳಿದು ಬ್ರಿಮ್ಸ್ ವಸತಿಗೃಹಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/phone-tapping-is-a-continuation-of-the-chair-fight-union-minister-hdk/ https://kannadanewsnow.com/kannada/any-sexual-assault-on-a-childs-body-is-rape-kerala-high-courts-landmark-verdict/














