Author: kannadanewsnow09

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿದೆ. ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರಾಂಡ್‌ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಉಂಟುಮಾಡಲಾಗಿದೆ ಎಂದು ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಳಿಯು (KMF) ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲವೆಂದು ಕರ್ನಾಟಕ ಹಾಲು ಮಹಾಮಂಡಳಿಯು ಭರವಸೆಯನ್ನು ನೀಡುತ್ತದೆ…

Read More

ಶಿವಮೊಗ್ಗ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ, ಬ್ರಿಟಿಷರ ವಿರುದ್ಧ ಮೊದಲ ಬಾರಿಗೆ ಸ್ವತಂತ್ರ ಹಳ್ಳಿ ಎಂದು ಘೋಷಿಸಿಕೊಂಡು ಇತಿಹಾಸ ಸೃಷ್ಟಿಸಿದ ಶಿವಮೊಗ್ಗ ಜಿಲ್ಲೆಯ ಈಸೂರು ದಂಗೆಯ ಕೊನೆಯ ಕೊಂಡಿ ಕಳಚಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಕೆ. ದೇವೇಂದ್ರಪ್ಪ (99) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿಯಾಗಿದ್ದ ದೇವೇಂದ್ರಪ್ಪ ಅವರು, 1942ರ ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ನಡೆದ ಐತಿಹಾಸಿಕ ಈಸೂರು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಈಸೂರು ದಂಗೆಯು ಕೇವಲ ಒಂದು ಸ್ಥಳೀಯ ಘಟನೆಯಾಗಿರಲಿಲ್ಲ, ಬದಲಿಗೆ ಬ್ರಿಟಿಷ್ ಆಡಳಿತದ ವಿರುದ್ಧ ಭಾರತೀಯರ ಅಚಲ ಸಂಕಲ್ಪ ಮತ್ತು ಪ್ರತಿರೋಧದ ಸಂಕೇತವಾಗಿತ್ತು. ಏಸೂರು ಕೊಟ್ಟರೂ ಈಸೂರು ಬಿಡೆವು ಎಂಬ ವೀರ ಘೋಷಣೆಯು ಅಂದಿನ ಹೋರಾಟಗಾರರ ಧೈರ್ಯ ಮತ್ತು ದೇಶಪ್ರೇಮಕ್ಕೆ ಸಾಕ್ಷಿಯಾಗಿದೆ. ಈ ಘೋಷಣೆಯು ಬ್ರಿಟಿಷ್ ಅಧಿಕಾರಿಗಳನ್ನು ಊರ ಹೊರಗೆ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿತು. ದೇವೇಂದ್ರಪ್ಪ ಅವರು ಈ ಚಳುವಳಿಯಲ್ಲಿ ಹುಚ್ಚರಾಯಪ್ಪ ಅವರಿಗೆ ಸಾಥ್ ನೀಡಿದ್ದರು. ಅವರ ಹೋರಾಟದ ಹಾದಿಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರ ಹಂಚಿಕೆ ಮಾಡುವಂತ ಸರ್ಕಾರಿ ನಿವೇಶನ, ಮನೆಗಳ ವೇಳೆಯಲ್ಲಿ ಶೇ.5ರಷ್ಟು ಪತ್ರಕರ್ತರಿಗೆ ಮೀಸಲಿಡುವಂತೆ ಸರ್ಕಾರಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಮೂಲಕ ಮನವಿ ಮಾಡಿದೆ. ಇಂದು ಪತ್ರಕರ್ತರಿಗೆ ಹೌಸಿಂಗ್ ಹೋರ್ಡ್/ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಹಂಚಿಕೆ ಮಾಡುವ ನಿವೇಶನ/ಮನೆಗಳಲ್ಲಿ ಶೇ.5ರಷ್ಟು ಮೀಸಲಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ ಮನವಿ ಪತ್ರವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಸತಿ ಸಚಿವ ವಿಶೇಷಾಧಿಕಾರಿ ಎಸ್.ಲಕ್ಷ್ಮಿನಾರಾಯಣ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಮನಗರದ ಚೆಲುವರಾಜು ಇದ್ದರು. https://kannadanewsnow.com/kannada/congress-mlc-ramesh-babu-launches-a-scathing-attack-on-bjp-state-president-by-vijayendra/ https://kannadanewsnow.com/kannada/congress-mlc-ramesh-babu-launches-a-scathing-attack-on-bjp-state-president-by-vijayendra/

Read More

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಒಂದು ವಸ್ತುವನ್ನು ತೆಗೆದುಕೊಂಡು ಹೋದರೆ, ನೀವು ಹಿಂದಿರುಗುವಾಗ ಕುಲದೇವರು ನಿಮ್ಮೊಂದಿಗೆ ಮನೆಗೆ ಬರುತ್ತಾರೆ. ನಮಗೆಲ್ಲರಿಗೂ ಖಂಡಿತವಾಗಿಯೂ ಕುಲದೇವತೆ ಇರುತ್ತದೆ. ಬಹುಶಃ ಕೆಲವರಿಗೆ ಗೊತ್ತಿಲ್ಲ ಆದರೆ ಕುಲದೇವತೆ ಇಲ್ಲ. ಆ ಕುಲದೈವವನ್ನು ಪೂಜಿಸಿದರೆ ಆ ದೇವತೆ ನಮ್ಮೊಂದಿಗಿರಲು ಕೆಲವು ಮಾರ್ಗಗಳಿವೆ. ಈಗ ನಾವು ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ಏನೆಂದು ತಿಳಿಯಲಿದ್ದೇವೆ ಇಂದಿನ ಪರಿಸ್ಥಿತಿಯಲ್ಲಿ ಎಲ್ಲರೂ ಕುಲದೇವತೆ ಇದೆ ಎನ್ನುವುದನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ, ಯಾರು ಯಾವುದೇ ದೇವರನ್ನು ಪೂಜಿಸಬೇಕೆಂದು ಕೇಳಿಕೊಂಡರೂ ಅದೆಲ್ಲವನ್ನೂ ಪ್ರಾಮುಖ್ಯತೆಯಿಂದ ಪೂಜಿಸತೊಡಗಿದರು. ಹೀಗೆ ಮಾಡುವುದು ತಪ್ಪೇ ಎಂದು ಕೇಳಿದರೆ ಅದು ತಪ್ಪಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ…

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನದ ಸಾಕ್ಷಿಯಾಗಿರುತ್ತದೆ. ಕರ್ನಾಟಕದ ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯವಾಗಿರುತ್ತದೆ ಎಂದು ಗುಡುಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರರವರು ಪ್ರಿಯಾಂಕ ಖರ್ಗೆರವರನ್ನು ಟೀಕಿಸಲು ಮಾಡಿರುವ ಆಲಾಪ ನಗೆ ಪಾಟಲಿನ ಪರಮಾವಧಿ ಆಗಿರುತ್ತದೆ. ತಮ್ಮ ರಾಜಕೀಯ ಅಧಿಕಾರ ಸ್ಥಾನವನ್ನು, ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರರವರಿಗೆ, ಆರ್.ಎಸ್.ಎಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ. ಮೊದಲು ಆರ್‌.ಎಸ್‌.ಎಸ್…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) JEE (ಮುಖ್ಯ) 2026 ಸೆಷನ್ 1 ರ ಪೇಪರ್ 1 (B.E./B.Tech.) ಫಲಿತಾಂಶಗಳನ್ನು ಘೋಷಿಸಿದ್ದು, ದೇಶಾದ್ಯಂತ ಲಕ್ಷಾಂತರ ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ನೆಮ್ಮದಿ ತಂದಿದೆ. ಫಲಿತಾಂಶಗಳನ್ನು ಫೆಬ್ರವರಿ 16 ರಂದು ಪ್ರಕಟಿಸಲಾಗಿದ್ದು, ಈಗ ಆನ್‌ಲೈನ್‌ನಲ್ಲಿ ಲಭ್ಯವಿದೆ. ಜನವರಿ ಸೆಷನ್‌ಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಅಧಿಕೃತ ಪೋರ್ಟಲ್ ಮೂಲಕ ತಮ್ಮ NTA ಅಂಕಗಳನ್ನು ಪ್ರವೇಶಿಸಬಹುದು. ಟಾಪರ್‌ಗಳು ಮತ್ತು ಪರೀಕ್ಷಾ ಪ್ರಕ್ರಿಯೆಯ ಮುಂದಿನ ಹಂತದ ಕುರಿತು ಪ್ರಮುಖ ನವೀಕರಣಗಳು ಸೇರಿದಂತೆ ಪ್ರಮುಖ ಮುಖ್ಯಾಂಶಗಳನ್ನು ಏಜೆನ್ಸಿ ಹಂಚಿಕೊಂಡಿದೆ. ನಿಮ್ಮ ಫಲಿತಾಂಶವನ್ನು ಎಲ್ಲಿ ಪರಿಶೀಲಿಸಬೇಕು? ಅಭ್ಯರ್ಥಿಗಳು ತಮ್ಮ JEE (ಮುಖ್ಯ) 2026 ಸೆಷನ್ 1 ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: https://jeemain.nta.nic.in ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡಿ: ಅಧಿಕೃತ ಪೋರ್ಟಲ್‌ https://jeemain.nta.nic.in ಭೇಟಿ ನೀಡಿ ಜೆಇಇ (ಮುಖ್ಯ) 2026 ಸೆಷನ್ 1 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್…

Read More

ಬೆಂಗಳೂರು: ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಅವರ 2012-13ನೇ ಸಾಲಿನ ಕಾರ್ಯಪಾಲನ ವರದಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಾಹಿತಿ ಆಯೋಗದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆ ಜಂಟಿ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚನೆ ಮಾಡಿದೆ. ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಕೆ.ಎಂ. ಬಾಲಸುಬ್ರಮಣ್ಯ ಪ್ರಸಾದ್ ಅವರು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವಧಿಯ ತನ್ನ ಕಾರ್ಯಪಾಲನ ವರದಿ ನೀಡುವಂತೆ ಪ್ರವಾಸೋದ್ಯಮ ಸಚಿವಾಲಯಕ್ಕೆ ಮಾಹಿತಿ ಹಕ್ಕು ಅಧಿನಿಯಮ-2005 ರಡಿಯಲ್ಲಿ ಅರ್ಜಿ ಹಾಕಿದ್ದರು. ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ನಿಂದ ಅಧಿಕಾರಿ ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಿರುವ ಪತ್ರ ಬಾಲಸುಬ್ರಮಣ್ಯ ಪ್ರಸಾದ್ ಅವರ ಬಳಿಯಲ್ಲಿ ಇದೆ. ಮಾಹಿತಿ ಹಕ್ಕು ಅಧಿನಿಯಮದಡಿ ಸಲ್ಲಿಸಿದ ಅರ್ಜಿಗೆ ಪ್ರವಾಸೋದ್ಯಮ ಸಚಿವಾಲಯದ ಸಾರ್ವಜನಿಕ  ಮಾಹಿತಿ ಅಧಿಕಾರಿ ಕಾರ್ಯಪಾಲನ ವರದಿ ಲಭ್ಯವಿಲ್ಲವೆಂಬ ಉತ್ತರ ನೀಡಿದ್ದರು. ಬಾಲಸುಬ್ರಮಣ್ಯ ಪ್ರಸಾದ್ ಕರ್ನಾಟಕ ಮಾಹಿತಿ ಆಯೋಗದಲ್ಲಿ ದ್ವಿತೀಯ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೀಠ ಸಂಖ್ಯೆ -4…

Read More

ಬಳ್ಳಾರಿ : ನಟಿ ಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ, ಜನರನ್ನು ವಾಪಸ್ಸ ಕಳುಹಿಸುತ್ತಿದ್ದ ಈ ವೇಳೆಯಲ್ಲಿ ಅಲ್ಲೇ ಇದ್ದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾನೆ ಎನ್ನಲಾಗಿದೆ. ಈ ವೇಳೇ ಅಧಿಕಾರಿ ರವಿಕುಮಾರ್ ಕಣ್ಣಿಗೆ ಗಾಯವಾಗಿದೆ ಎನ್ನಲಾಗಿದೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಭದ್ರತೆಯ ನೆಪದಲ್ಲಿ ಸಾರ್ವಜನಿಕರ ಮೇಲೂ ಅಸಭ್ಯ ಹಾಗೂ ಆಕ್ರಮಣಕಾರಿ ವರ್ತನೆ ತೋರಲಾಗಿದೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ. https://kannadanewsnow.com/kannada/sandalwoods-famous-television-actress-rashmi-leela-is-no-more/

Read More

ಬಳ್ಳಾರಿ : ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಬೇಕು. ಇದರಿಂದ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೇಸಿಗೆ ಪ್ರಾರಂಭದ ಹಿನ್ನಲೆಯಲ್ಲಿ ಜಾತ್ರೆ ಹಾಗೂ ಉತ್ಸವಗಳಲ್ಲಿ ಕಲುಷಿತ ನೀರಿನಿಂದ, ಕಲುಷಿತ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಬೇಧಿ ಸೇರಿದಂತೆ ಟೈಫಾಯಿಡ್, ಕಾಲಾರ, ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುತ್ತವೆ. ಅದರಲ್ಲೂ ವಾಂತಿ ಬೇಧಿ ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಬೇಕು. ಓಆರ್‌ಎಸ್ ಜೀವಜಲವನ್ನು ತಯಾರಿಸುವಾಗ 1 ಲೀ. ನೀರಿಗೆ ಆರೋಗ್ಯ ಇಲಾಖೆಯಿಂದ ಕೊಡುವ ಪೊಟ್ಟಣದಲ್ಲಿರುವ ಪುಡಿಯನ್ನು ಸಂಪೂರ್ಣವಾಗಿ ಹಾಕಿ ಮಿಶ್ರಣ ಮಾಡಿದ ದ್ರಾವಣವನ್ನು ವಾಂತಿ ಬೇಧಿ ಭಾದಿತರಿಗೆ ಕುಡಿಯಲು ಕೊಡಬೇಕು ಹಾಗೂ ಇದನ್ನು 24 ಗಂಟೆಯೊಳಗೆ ಸಂಪೂರ್ಣವಾಗಿ ಬಳಸಲು ಆದ್ಯತೆ ನೀಡಬೇಕು ಎಂದಿದ್ದಾರೆ. ಕಲುಷಿತ ನೀರಿನ ಸೇವನೆಯಿಂದ ಸಾಮಾನ್ಯವಾಗಿ ವಾಂತಿ-ಬೇಧಿ, ಕಾಲರಾ, ಟೈಪಾಯಿಡ್, ಹೆಪಟೈಟಸ್-ಎ,…

Read More

ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸ್ಯಾಂಡಲ್ ವುಡ್ ಕಿರುತೆರೆ ನಟಿ ರಶ್ಮಿ ಲೀಲಾ ಅವರು ಚಿಕಿತ್ಸೆ ಫಲಿಸದೇ ಇಂದು ನಿಧರಾಗಿದ್ದಾರೆ. ಆ ಮೂಲಕ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲವಾಗಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳುತ್ತಿದ್ದಂತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳ ಹಿಂದಷ್ಟೇ ಸೂಕ್ತ ದಾನಿಗಳು ಬಂದ ಹಿನ್ನಲೆಯಲ್ಲಿ ಶ್ವಾಸಕೋಶದ ಟ್ರಾನ್ಸೆಫರಂಟ್ ಕೂಡ ಮಾಡಲಾಗಿತ್ತು ಎನ್ನಲಾಗಿದೆ. ಆ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿರುತೆರೆ ನಟಿ ರಶ್ಮಿ ಲೀಲಾಗೆ ಚಿಕಿತ್ಸೆ ಮುಂದುವರೆದಿತ್ತು. ಆದರೇ ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್ ವುಟ್ ಗಣ್ಯರು ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/be-careful-of-those-who-make-reels-in-public-places-young-man-arrested-read-this-news-to-find-out-why/

Read More