Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೂಳಗೆರೆ ಏತ ನೀರಾವರಿ ಯೋಜನೆಯನ್ನು ಪುನಃ ಚಾಲನೆ ನೀಡಿದ್ದು, ಇನ್ನು ಮುಂದೆ ರೈತರು ಯಾವುದೇ ಆತಂಕ ಪಡುವುದು ಬೇಡ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮದಲ್ಲಿ 5 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಕೆರೆಗೆ ರೈತರು, ಸಾರ್ವಜನಿಕರು ಹಾಗೂ ಅಧಿಕಾರಿಗಳ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿ ಅವರು ಮಾತನಾಡಿದರು. ತುಂಬಿದ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ತುಂಬಿ ಹರಿಯುವ ನದಿಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಮನುಷ್ಯನ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗಿದೆ ಎಂದರು. ಸೋಮನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ 18 ಕೆರೆಗಳಿಗೆ ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುವ ಮೂಲಕ ಈ ಭಾಗದಲ್ಲಿ ತಲೆದೊರುತ್ತಿರುವ ಜಲಕ್ಷಾಮಕ್ಕೆ…
ಬೆಂಗಳೂರು: ನಾನು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ನೋಟಿಸ್ ಕೊಟ್ಟಿದ್ದೇನೆ. ಅವರು ಸಮರ್ಪಕ ಉತ್ತರ ಕೊಡದೇ ಇದ್ದಲ್ಲಿ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇಪದೇ ಅವರು ಸಿಗಂದೂರು ದೇವಸ್ಥಾನದ ವಿಷಯ ಪ್ರಸ್ತಾಪ ಮಾಡುತ್ತಾರೆ. ಹಾಲಪ್ಪ ಅವರು ಶಾಸಕರಾಗಿದ್ದಾಗ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವ ಪ್ರಯತ್ನ ಮಾಡಿದ್ದರೆಂದು ಸುಳ್ಳು ಹೇಳುತ್ತಿದ್ದಾರೆ. ನಾನು ಯಾವತ್ತೂ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವುದಾಗಲೀ, ಸರಕಾರದ ವಶಕ್ಕೆ ಪಡೆಯುವ ಕುರಿತು ಕನಸು ಮನಸಲ್ಲೂ ಎಣಿಸಿಲ್ಲ. ಆ ರೀತಿ ಯಾವ ಪ್ರಯತ್ನವನ್ನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನ ತಂದೆ, ತಾಯಿ, ಅಜ್ಜ ಅಜ್ಜಿ ಕಾಲದಿಂದಲೂ ಸಿಗಂದೂರು ದೇವಸ್ಥಾನದ ಭಕ್ತರು. ನಾನೂ ಅದರ ಭಕ್ತ. ಸಮಯ ಬಂದಾಗಲೆಲ್ಲ ದೇವಸ್ಥಾನದ ಪರವಾಗಿ ನಿಂತಿದ್ದೇವೆ. ಅದು ದೇವಸ್ಥಾನದ ಆಡಳಿತ ಮಂಡಳಿ ಪರವಾಗಿಯೂ ಅಲ್ಲ; ಭಟ್ಟರ ಪರವಾಗಿಯೂ ಅಲ್ಲ. ಎಲ್ಲರ ಪರವಾಗಿ…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಹುಬ್ಬಳ್ಳಿ : ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು. ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 1458000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದರು. ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ…
ಹುಬ್ಬಳ್ಳಿ: ಜಿಲ್ಲೆಯಲ್ಲಿ ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಬಡವರಿಗೆ ವಸತಿ ಹಂಚಿಕೆಗೆ ಚಾಲನೆ ನೀಡುವಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಹಾಕಲಾಗಿದ್ದಂತ ಕಟೌಟ್ ಬಿದ್ದು ವ್ಯಕ್ತಿಯೊಬ್ಬ ಗಾಯಗೊಂಡಿದ್ದಾರೆ. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಂತ ವ್ಯಕ್ತಿಯೊಬ್ಬರು ಕಟೌಟ್ ಮುರಿದು ಬಿದ್ದು ಗಾಯಗೊಂಡಿದ್ದರು. ಈ ವಿಷಯ ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯವನ್ನು ವಿಚಾರಿಸಿದರು. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 1458000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ…
ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆಗೆ ನಿಂದನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಿಂತಾಮಣಿ ಚಿಂತಾಮಣಿಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪೌರಾಯುಕ್ತೆಗೆ ನಿಂದನೆ, ಧಮ್ಕಿ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಂತಾಮಣಿಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕಾಂತರಾಜ.ಎಸ್.ವಿ ಅವರನ್ನು ಮೊದಲು ಆದೇಶ ಕಾಯ್ದಿರಿಸಿದ್ದರು. ಆ ಬಳಿಕ ಇದೀಗ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಆರೋಪಿ ರಾಜೀವ್ ಗೌಡ ಪರವಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ವಾದಿಸಿದ್ದರು. ದೂರುದಾರೆ ಪರ ಪಿಪಿ ಸುಮಶಾಂತಾ ಮೇರಿ ವಾದವನ್ನು ಮಂಡಿಸಿದ್ದರು. ಈ ವಾದ-ಪ್ರತಿವಾದವನ್ನು ಆಲಿಸಿರುವಂತ ಚಿಂತಾಮಣಿಯ 2ನೇ ಹೆಚ್ಚುವರಿ ನ್ಯಾಯಾಲಯ ನ್ಯಾಯಮೂರ್ತಿ ಎಸ್.ವಿ ಕಾಂತರಾಜ ಅವರು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು…
ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆಗೆ ನಿಂದನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪೌರಾಯುಕ್ತೆಗೆ ನಿಂದನೆ, ಧಮ್ಕಿ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕಾಂತರಾಜ.ಎಸ್.ವಿ ಅವರನ್ನು ಮೊದಲು ಆದೇಶ ಕಾಯ್ದಿರಿಸಿದ್ದರು. ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಆರೋಪಿ ರಾಜೀವ್ ಗೌಡ ಪರವಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ವಾದಿಸಿದ್ದರು. ದೂರುದಾರೆ ಪರ ಪಿಪಿ ಸುಮಶಾಂತಾ ಮೇರಿ ವಾದವನ್ನು ಮಂಡಿಸಿದ್ದರು. ಈ ವಾದ-ಪ್ರತಿವಾದವನ್ನು ಆಲಿಸಿರುವಂತ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ಶಾಕ್ ನೀಡಿದ್ದಾರೆ. https://kannadanewsnow.com/kannada/youth-killed-in-hit-and-run-in-bengaluru-swiggy-delivery-boy-dies-on-the-spot/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/
ಶಿವಮೊಗ್ಗ : ಮುಖ್ಯಮಂತ್ರಿಗಳು ಸಾಗರದ ಮಾರಿಕಾಂಬಾ ಜಾತ್ರೆಗೆ 2 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ. ಶಾಸಕರು ಅನುದಾನಕ್ಕಾಗಿ ಮನವಿ ಮಾಡಿದ್ದು ಹೌದು. ಆದರೆ ಹಣಕಾಸು ಇಲಾಖೆಗೆ ನಗರಸಭೆಯಿಂದ ಅರ್ಜಿ ಹೋದಾಗ ಶಾಸಕರಿಗೆ ಮಂಜೂರು ಮಾಡಲು ಉದ್ದೇಶಿಸಿರುವ 50 ಕೋಟಿಯಲ್ಲಿಯೇ ಹಣ ಹೊಂದಿಸಿಕೊಳ್ಳಿ. ಹೆಚ್ಚುವರಿಯಾಗಿ 2 ಕೋಟಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಶಾಸಕರ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಹೆಸರು ಪ್ರಸ್ತಾಪಿಸದೇ ಅವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾರಿಜಾತ್ರೆಗೆ ಒಂದು ರೂಪಾಯಿ ಸಹ ವಿಶೇಷ ಅನುದಾನ ಬಂದಿಲ್ಲ. ನಮ್ಮ ಶಾಸಕರಾದ ಹರತಾಳು ಹಾಲಪ್ಪ ಅವರ ಅವಧಿಯಲ್ಲಿ ಮಂಜೂರಾದ ಎಲ್ಲಾ ಅನುದಾನಗಳನ್ನು ನಾವು ದಾಖಲೆ ಸಮೇತ ಪ್ರದರ್ಶನ ಮಾಡಿ ಮಾತನಾಡುತ್ತೇವೆ. ಕಾಂಗ್ರೇಸ್ನವರು ದಾಖಲೆ ಇರಿಸಿಕೊಂಡು ಏಕೆ ಮಾತನಾಡುವುದಿಲ್ಲ ಎಂದು…
ಬೆಂಗಳೂರು: ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಟಾಟಾ ಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲದ ಗುಂಡೇನಹಳ್ಳಿ ಗೇಟ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಮನೆಗೆ ದಿನಸಿ ಖರೀದಿಸಿ ಬೈಕ್ ನಲ್ಲಿ ತಾಯಿ-ಮಗ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 45 ವರ್ಷದ ಶೈಲಜಾ, 26 ವರ್ಷದ ಪ್ರಜ್ವಲ್ ಸಾವನ್ನಪ್ಪಿದ್ದಾರೆ. ದಿನಸಿಯನ್ನು ಖರೀದಿಸಿ ಮನೆಗೆ ಡಿಯೋ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/ https://kannadanewsnow.com/kannada/fire-suspected-to-have-started-at-reddy-model-house-in-bellary-due-to-cigarette-spark-sp-information/
ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಬಳಿಕ ಮತ್ತೊಂದು ಘಟನೆ ಎನ್ನುವಂತೆ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ನಿನ್ನೆ ಬಿದ್ದಿತ್ತು. ಆದರೇ ಇದೊಂದು ಸಿಗರೇಟ್ ನಿಂದ ಬೆಂಕಿ ತಗುಲಿರುವಂತ ಶಂಕೆ ಇರುವುದಾಗಿ ಎಸ್ಪಿ ತಿಳಿಸಿದ್ದಾರೆ. ಅಲ್ಲದೇ ಈ ಸಂಬಂಧ 8 ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನಾ ಡಿ ಪನ್ನೇಕರ್ ಅವರು, ರೆಡ್ಡಿ ಮಾಡೆಲ್ ಹೌಸ್ ಗೆ ರೀಲ್ಸ್, ಪೋಟೋ ಶೂಟ್ ಗೆ ಹುಡುಗರು ಬಂದಿದ್ದರೆಂಬ ಮಾಹಿತಿ ಇದೆ. ಪೋಟೋ ಶೂಟ್ ಗೆ ಮನೆಯ ಮೊದಲ ಮಹಡಿಗೆ ಹೋಗಿದ್ರು. ಈ ವೇಳೆ ಸಿಗರೇಟ್ ಕಿಡಿಯಿಂದ ಮಾಡೆಲ್ ಗೆ ಬೆಂಕಿ ಬಿದ್ದಿರುವಂತ ಸಾಧ್ಯತೆ ಇದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು. ಬಳ್ಳಾರಿಯ ರೆಡ್ಡಿ ಮಾಡೆಲ್ ಹೌಸ್ ನಲ್ಲಿ ಸ್ಥಳ ಪರಿಶೀಲನೆ ವೇಳೆಯಲ್ಲಿ ಸಿಗರೇಟ್ ತುಂಡುಗಳು ಬಿದ್ದಿರುವುದು ಕಂಡು ಬಂದಿದೆ. ರೀಲ್ಸ್ ವೇಳೆ ಸಿಗರೇಟ್ ತಾಗಿ ಬೆಂಕಿ ಹೊತ್ತಿಕೊಂಡಿರಬಹುದು.…














