Subscribe to Updates
Get the latest creative news from FooBar about art, design and business.
Author: kannadanewsnow09
ಮದ್ರಾಸ್: ದಳಪತಿ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಅನುಮತಿ ನೀಡುವಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC)ಗೆ ನಿರ್ದೇಶನ ನೀಡಿದ್ದ ಏಕಸದಸ್ಯ ನ್ಯಾಯಾಧೀಶರ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ನ ವಿಭಾಗೀಯ ಪೀಠ ತಡೆ ನೀಡಿದೆ. ನಿರ್ಮಾಪಕರ ಮನವಿಯನ್ನು ಅಂಗೀಕರಿಸಿದ ಏಕಸದಸ್ಯ ನ್ಯಾಯಾಧೀಶ ಪಿ.ಟಿ. ಆಶಾ ಅವರು ಚಿತ್ರಕ್ಕೆ U/A 16 ಪ್ರಮಾಣಪತ್ರವನ್ನು ನೀಡುವಂತೆ CBFCಗೆ ಆದೇಶಿಸಿದ ಕೆಲವೇ ಗಂಟೆಗಳ ನಂತರ ತಡೆಯಾಜ್ಞೆ ನೀಡಲಾಗಿದೆ. CBFC ಸಲ್ಲಿಸಿದ್ದ ತುರ್ತು ಮೇಲ್ಮನವಿಯ ಮೇರೆಗೆ ಮುಖ್ಯ ನ್ಯಾಯಾಧೀಶ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಅರುಳ್ ಮುರುಗನ್ ಅವರ ಪೀಠವು ಏಕಸದಸ್ಯರ ಆದೇಶವನ್ನು ಅಂಗೀಕರಿಸಿತು. ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸಮಯ ನೀಡದ ಕಾರಣ ತಡೆಯಾಜ್ಞೆ ನೀಡಲಾಗಿದೆ.
ಬೆಂಗಳೂರು: ಪೊಂಗಲ್/ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವ/ರಜಾದಿನಗಳ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ಪ್ರತಿ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06287 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 13 ಮತ್ತು 23 ರಂದು ಬೆಳಿಗ್ಗೆ 11:50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 06:45ಕ್ಕೆ ಮಡಗಾಂವ್ ತಲುಪಲಿದೆ. ಹಾಗೆಯೇ ಮರು ಪ್ರಯಾಣದ ಹಾದಿಯಲ್ಲಿ, ರೈಲು ಸಂಖ್ಯೆ 06288 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 18 ಮತ್ತು 26 ರಂದು ಬೆಳಿಗ್ಗೆ 11:00 ಗಂಟೆಗೆ ಮಡಗಾಂವ್’ನಿಂದ ನಿರ್ಗಮಿಸಿ, ಮರುದಿನ ಬೆಳಿಗ್ಗೆ 04:45ಕ್ಕೆ ಯಶವಂತಪುರವನ್ನು ತಲುಪಲಿದೆ. ಈ ವಿಶೇಷ ರೈಲು ತನ್ನ ಸಂಚಾರದ ಅವಧಿಯಲ್ಲಿ ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ (ಬೈಂದೂರು), ಭಟ್ಕಳ, ಮುರ್ಡೇಶ್ವರ,…
ಮೊಳಕಾಲ್ಮೂರು: ಡಾ. ದಾದಾಪೀರ್ ಕೆ.ಆರ್. ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು. ಸಂಘಟನೆಯಲ್ಲಿ ಅವರ ಸಕ್ರಿಯ ಸೇವೆ, ನಾಯಕತ್ವ ಹಾಗೂ ಕಾರ್ಯಕ್ಷಮತೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ. ಈ ಹಿಂದೆ ಅವರು ಎರಡು ಬಾರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಹಾಗೂ ಒಮ್ಮೆ ಎನ್ಎಸ್ಯುಐ ತಾಲ್ಲೂಕು ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ರಾಯಚೂರು ಜಿಲ್ಲೆಯ ಯುವ ಕಾಂಗ್ರೆಸ್ನ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ. ಡಾ.ದಾದಾಪೀರ್ ಕೆ.ಆರ್ ಅವರ ನೇಮಕದಿಂದ ಯುವ ಕಾಂಗ್ರೆಸ್ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/union-minister-prahlad-joshi-should-come-for-a-public-discussion-on-the-mnrega-scheme-dcm-d-k-shivakumar/ https://kannadanewsnow.com/kannada/bus-falls-into-ditch-in-himachal-pradesh-8-dead-many-injured/
ನವದೆಹಲಿ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕುಪ್ವಿಯಿಂದ ಶಿಮ್ಲಾಕ್ಕೆ ತೆರಳುತ್ತಿದ್ದಾಗ ಹರಿಪುರ್ಧರ್ ಪ್ರದೇಶದ ಬಳಿ ಪರ್ವತದಿಂದ ಬಸ್ ಉರುಳಿಬಿದ್ದಿದ್ದು, ಅಪಘಾತದಲ್ಲಿ ಎಂಟು ಸಾವುಗಳು ಸಂಭವಿಸಿವೆ ಎಂದು ಸಿರ್ಮೌರ್ ಎಸ್ಪಿ ನಿಶ್ಚಿಂತ್ ಸಿಂಗ್ ನೇಗಿ ತಿಳಿಸಿದ್ದಾರೆ. ಪೊಲೀಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ ಮತ್ತು ಎಸ್ಪಿ ಕೂಡ ಮಾರ್ಗಮಧ್ಯದಲ್ಲಿದ್ದಾರೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. https://kannadanewsnow.com/kannada/installation-of-fire-extinguishers-in-hospital-buildings-and-clinics-will-be-mandatory-from-now-on-state-government-orders/ https://kannadanewsnow.com/kannada/karnataka-media-academy-annual-awards-2025-announced-here-is-the-list/
ಬೆಂಗಳೂರು: ರಾಜ್ಯದಲ್ಲಿನ ಆಸ್ಪತ್ರೆ ಕಟ್ಟಡಗಳು, ಕ್ಲಿನಿಕ್ ಗಳಲ್ಲಿ ಕನಿಷ್ಠ ಅಗ್ನಿಶಮನ ಉಪಕರಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಪೊಲೀಸ್ ಸಹಾಯಕ ಸೇವೆಗಳು ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 07-11-2025 ರ ಪತ್ರದಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು, ಇವರು ಆಸ್ಪತ್ರೆ ಕಟ್ಟಡಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು (ಪಿಸಿಎಎಸ್), ಒಳಾಡಳಿತ ಇಲಾಖೆರವರ ಅಧ್ಯಕ್ಷತೆಯಲ್ಲಿ ದಿನಾಂಕ: 20-09-2025 ರಂದು ನಡೆದ ಸಭೆಯ ನಡವಳಿಯ ಕ್ರ.ಸಂ.(1) ರಲ್ಲಿ ಬಹುಮಹಡಿ ಕಟ್ಟಡ ವ್ಯಾಪ್ತಿಗೆ ಸೇರದ (20.99 ಮೀ ಒಳಗಿನ ಕಟ್ಟಡ) ಆಸ್ಪತ್ರೆ ಕಟ್ಟಡಗಳಿಗೆ ಕನಿಷ್ಠ ಅಗ್ನಿಶಮನ ಉಪಕರಣಗಳ ಪಟ್ಟಿ ತಯಾರಿಸುವಂತೆ ಇಲಾಖೆಗೆ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರ ಕೋರಿಕೆಯ ಮೇರೆಗೆ ಕಟ್ಟಡದ ಎತ್ತರ ಹಾಗೂ ಒಟ್ಟು ವಿಸ್ತೀರ್ಣಕ್ಕೆ ಅನುಗುಣವಾಗಿ ರಾಷ್ಟ್ರೀಯ ಕಟ್ಟಡ ಸಂಹಿತೆ…
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಈ ಬಾರಿ 30 ಮಂದಿ ಸಾಧಕರಿಗೆ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳಿಗೆ ಹಾಗೂ ದತ್ತಿ ಪ್ರಶಸ್ತಿಗಳಿಗೆ ಈ ಕೆಳಕಂಡ ಪತ್ರಕರ್ತರನ್ನು ದಿನಾಂಕ 08-01-2026ರ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ 2025ನೇ ಸಾಲಿನ ವಿಶೇಷ ಪ್ರಶಸ್ತಿ ಪುರಸ್ಕೃತರ ಪಟ್ಟಿ ಡಿ.ಕುಮಾರಸ್ವಾಮಿ ಬನಶಂಕರ ಆರಾಧ್ಯ ಹೇಮಾ ವೆಂಕಟ್ ಮಂಜುನಾಥ್ ವೈ.ಎಲ್ ಅನಂತ ನಾಡಿಗ್ ಗುರುರಾಜ್ ವಾಮನರಾವ್ ಜಮಖಂಡಿ ಎಂ.ಎಂ ಪಾಟೀಲ್ ಎಲ್ ವಿವೇಕಾನಂದ ಆರ್.ಪಿ ಭರತ್ ರಾಜ್ ಸಿಂಗ್ ಪ್ರೊ.ಪೂರ್ಣಾನಂದ ಮೊಹಮ್ಮದ್ ಅಸದ್ ತುಂಗರೇಣುಕಾ ಮೊಹಿಯುದ್ದೀನ್ ಪಾಷಾ ರುದ್ರಪ್ಪ ಅಸಂಗಿ ಸತೀಶ್ ಆಚಾರ್ಯ ಸೋಮಶೇಖರ ಪಡುಕೆರೆ ಗುಲ್ನಾರ್ ಮಿರ್ಝಾ ಗಣೇಶ ಹೆಗಡೆ ಇಟಗಿ ಆರತಿ ಹೆಚ್.ಎನ್ ಕೆ.ಲಕ್ಷ್ಮಣ ಉಮಾ…
ಹಾಸನ: ಯಗಚಿ ನಾಲೆಗಾಗಿ ಭೂಮಿ ನೀಡಿದ್ದಂತ ರೈತರಿಗೆ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದ್ದರೂ ಡಿಸಿ ಮಾತ್ರ ಡೋಂಟ್ ಕೇರ್ ಎನ್ನುವಂತಿದ್ದರು. ಇಂತಹ ಜಿಲ್ಲಾಧಿಕಾರಿಗಳಿಗೆ ಕೋರ್ಟ್ ಕಾರು ಜಪ್ತಿ ಮಾಡುವಂತೆ ಆದೇಶಿಸಿ ಶಾಕ್ ನೀಡಿದೆ. ಯಗಚಿ ನಾಲೆಗಾಗಿ ಭೂಮಿಯನ್ನು ನಾಗಮ್ಮ, ಲಕ್ಷ್ಮೇಗೌಡ, ಜಗದೀಶ್ ಎಂಬುವರು ಕಳೆದುಕೊಂಡಿದ್ದರು. ಸರಿಯಾಗಿ ಪರಿಹಾರ ನೀಡಿಲ್ಲ ಎಂಬುದಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಪರಿಹಾರಕ್ಕೂ ಆದೇಶಿಸಲಾಗಿತ್ತು. ಭೂಮಿ ಕಳೆದುಕೊಂಡಿದ್ದಂತವರಿಗೆ ಸೂಕ್ತ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ, ಪರಿಹಾರದ ಹಣವನ್ನು ನೀಡಲಾಗಿರಲಿಲ್ಲ. ಇಂದು ಹಾಸನ ಹಿರಿಯ ಸಿವಿಲ್ ಜಡ್ಜ್ ಈ ಪ್ರಕರಣದ ವಿಚಾರಣೆ ನಡೆಸಿ, ಜಿಲ್ಲಾಧಿಕಾರಿಗಳ ಕಾರನ್ನು ಜಪ್ತಿ ಮಾಡೋದಕ್ಕೆ ಆದೇಶಿಸಿದ್ದಾರೆ. ಅಂದಹಾಗೇ ಗುಂಟೆಗೆ 40,000ದಂತೆ 10.5 ಗುಂಟೆಗೆ ಪರಿಹಾರ ನಿಗದಿ ಪಡಿಸಲಾಗಿತ್ತು. ಈ ಪರಿಹಾರ ಸರಿಯಾಗಿಲ್ಲ. ಸೂಕ್ತ ಪರಿಹಾರ ನಿಗದಿ ಪಡಿಸಿ, 2 ವರ್ಷದ ಹಿಂದೆ ಕೋರ್ಟ್ ಆದೇಶಿಸಿತ್ತು. ಆದರೇ ಪರಿಹಾರ ನೀಡದಿದ್ದಕ್ಕಾಗಿ ಜಿಲ್ಲಾಧಿಕಾರಿಗಳ ಕಾರು ಜಪ್ತಿಗೆ ಕೋರ್ಟ್ ಆದೇಶಿಸಿದೆ. ಹೀಗಾಗಿ ಹಾಸನ…
ಶಿವಮೊಗ್ಗ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್(21) ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ಇಂದು ಹಾಸ್ಟೆಲ್ ನಲ್ಲಿ ಸ್ನಾನಕ್ಕೆಂದು ತೆರಳಿದಂತ ಸಂದರ್ಭದಲ್ಲಿ ದಿಢೀರ್ ಕುಸಿದು ಬಿದ್ದಿದ್ದನು. ಆತನನ್ನು ಕೂಡಲೇ ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರು. ಆದರೇ ದುರಾದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯದಲ್ಲೇ ವಿದ್ಯಾರ್ಥಿ ಗಣೇಶ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. https://kannadanewsnow.com/kannada/union-minister-prahlad-joshi-should-come-for-a-public-discussion-on-the-mnrega-scheme-dcm-d-k-shivakumar/ https://kannadanewsnow.com/kannada/special-train-service-between-mysore-belgaum-on-the-occasion-of-sankranti-festival/
ಬೆಂಗಳೂರು : “ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ…
ಬೆಂಗಳೂರು: ರಾಜ್ಯ ಸರ್ಕಾರದಿಂದ 1,250 ಶಾಲೆಗಳಲ್ಲಿ 1,582 ಶೌಚಾಲಯಗಳನ್ನು ನಿರ್ಮಾಣ ಮಾಡೋದಕ್ಕೆ 6,328 ಲಕ್ಷ ಹಣವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಹಾಗೂ ಪದನಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಶುಭಮಂಗಳ ಆರ್.ವಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. “ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ರೂ.725.00 ಕೋಟಿ ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಿತ ಕಂಡಿಕೆ-95 ರಂತೆ ಲೆಕ್ಕಶೀರ್ಷಿಕೆವಾರು ಕಾರ್ಯಕ್ರಮವಾರು ಅನುದಾನ ನಿಗದಿಪಡಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ. ಪುಸ್ತಾವನೆಯಲ್ಲಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಇವರು ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ…














