Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಇಸ್ರೇಲ್ ಮತ್ತು ಲೆಬನಾನ್ ದೇಶಗಳು ತಮ್ಮ ನಡುವಿನ ಕದನ ವಿರಾಮವನ್ನು ಇನ್ನೂ ಮೂರು ವಾರಗಳ ಕಾಲ ವಿಸ್ತರಿಸಲು ಒಪ್ಪಿಗೆ ನೀಡಿವೆ ಎಂದು ಟ್ರಂಪ್ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಐತಿಹಾಸಿಕ ಸಭೆ ಗುರುವಾರ ಶ್ವೇತಭವನದ ಓವಲ್ ಕಚೇರಿಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ಟ್ರಂಪ್ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಸ್ರೇಲ್ ಮತ್ತು ಲೆಬನಾನ್ ಅಧಿಕಾರಿಗಳೊಂದಿಗೆ ಉತ್ತಮ ಸಭೆ ನಡೆದಿದೆ. ಮುಂದಿನ ಮೂರು ವಾರಗಳ ಕಾಲ ಯಾವುದೇ ಗುಂಡಿನ ಚಕಮಕಿ ನಡೆಸದಿರಲು ಉಭಯ ಕಡೆಯವರು ಒಪ್ಪಿದ್ದಾರೆ,” ಎಂದು ತಿಳಿಸಿದರು. ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಮಾಹಿತಿ ಸಭೆಯ ಕುರಿತು ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಅಮೆರಿಕವು ಲೆಬನಾನ್ ತನ್ನನ್ನು ತಾನು ಹೆಜ್ಬೊಲ್ಲಾದಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡಲಿದೆ. ಶೀಘ್ರದಲ್ಲೇ ಇಸ್ರೇಲ್ ಪ್ರಧಾನಿ…

Read More

ಕ್ಯಾಲಿಫೋರ್ನಿಯಾ: ಸಾಮಾನ್ಯವಾಗಿ ಆರೋಗ್ಯವಾಗಿರಲು ಹಣ್ಣುಗಳು, ಹಸಿರು ತರಕಾರಿಗಳು ಮತ್ತು ಧಾನ್ಯಗಳನ್ನು ಹೆಚ್ಚು ಸೇವಿಸಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಆದರೆ, ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿರುವ ಹೊಸ ಅಧ್ಯಯನವೊಂದು ಇದಕ್ಕೆ ವ್ಯತಿರಿಕ್ತವಾದ ಹಾಗೂ ಆತಂಕಕಾರಿ ಮಾಹಿತಿಯೊಂದನ್ನು ಹೊರಹಾಕಿದೆ. ಅತಿಯಾದ ಹಣ್ಣು ಮತ್ತು ತರಕಾರಿಗಳ ಸೇವನೆಯು ಧೂಮಪಾನ ಮಾಡದ ಯುವಕರಲ್ಲಿ ಶ್ವಾಸಕೋಶದ ಕ್ಯಾನ್ಸರ್ (Lung Cancer) ಅಪಾಯವನ್ನು ಹೆಚ್ಚಿಸಬಹುದು ಎಂದು ಈ ಅಧ್ಯಯನ ಹೇಳಿದೆ. ತಪ್ಪಿತಸ್ಥ ಆಹಾರವಲ್ಲ, ಕೀಟನಾಶಕಗಳು! ಸಂಶೋಧಕರ ಪ್ರಕಾರ, ನಾವೇನು ತಿನ್ನುತ್ತೇವೆಯೋ ಆ ಆಹಾರ ಪದಾರ್ಥಗಳಲ್ಲಿ ದೋಷವಿಲ್ಲ. ಬದಲಾಗಿ, ಇವುಗಳನ್ನು ಬೆಳೆಯಲು ಬಳಸುವ ಕೀಟನಾಶಕಗಳೇ (Pesticides) ಈ ಮಾರಕ ಕಾಯಿಲೆಗೆ ಮುಖ್ಯ ಕಾರಣ. ಸಾವಯವವಲ್ಲದ (Non-organic) ವಿಧಾನದಲ್ಲಿ ಬೆಳೆದ ಬೆಳೆಗಳಲ್ಲಿ ಕೀಟನಾಶಕಗಳ ಅಂಶ ಹೆಚ್ಚಾಗಿರುತ್ತದೆ. ಇದು ಮಾಂಸ, ಡೈರಿ ಉತ್ಪನ್ನಗಳು ಅಥವಾ ಸಂಸ್ಕರಿಸಿದ ಆಹಾರಕ್ಕಿಂತಲೂ ಹೆಚ್ಚು ಅಪಾಯಕಾರಿ ಎಂದು ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಜಾರ್ಜ್ ನೀವಾ ತಿಳಿಸಿದ್ದಾರೆ. ಸಂಶೋಧನೆಯ ಮುಖ್ಯಾಂಶಗಳು: ಅಮೆರಿಕನ್ ಅಸೋಸಿಯೇಷನ್ ಫಾರ್ ಕ್ಯಾನ್ಸರ್…

Read More

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನ ಮತ್ತು ಶಾಖ ತರಂಗದ (Heat Wave) ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಅತಿಯಾದ ಶಾಖದಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ರಾಜ್ಯದ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ವಿಶೇಷ ‘ತಾಪಾಘಾತ ನಿರ್ವಹಣಾ ಕೊಠಡಿ’ (Heat Stroke Management Room) ಗಳನ್ನು ಗುರುತಿಸಿ ಕಾರ್ಯಗತಗೊಳಿಸಲು ಆಯುಕ್ತರು ಸೂಚಿಸಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್‌ಗಳ ಮೀಸಲಾತಿ ಶಾಖಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುವವರಿಗೆ ತುರ್ತು ಚಿಕಿತ್ಸೆ ನೀಡಲು ವಿವಿಧ ಹಂತದ ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಈ ಕೆಳಗಿನಂತೆ ಮೀಸಲಿಡಲು ಆದೇಶಿಸಲಾಗಿದೆ: ಸಮುದಾಯ ಆರೋಗ್ಯ ಕೇಂದ್ರಗಳು: ತಲಾ 2 ಬೆಡ್‌ಗಳು. ತಾಲ್ಲೂಕು ಆಸ್ಪತ್ರೆಗಳು: ತಲಾ 5 ಬೆಡ್‌ಗಳು. ಜಿಲ್ಲಾ ಆಸ್ಪತ್ರೆಗಳು: ತಲಾ 10 ಬೆಡ್‌ಗಳು. ಈ ಕೊಠಡಿಗಳು ಪ್ರತಿ ವರ್ಷದ ಮಾರ್ಚ್ 1 ರಿಂದ ಜುಲೈ 31 ರವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅಗತ್ಯ ಸೌಲಭ್ಯಗಳ ಪೂರೈಕೆ ತಾಪಾಘಾತಕ್ಕೆ ಒಳಗಾದವರಿಗೆ ತಕ್ಷಣದ…

Read More

ಬೆಂಗಳೂರು: ಇಂದು ನಡೆದಂತ ಒಳ ಮೀಸಲಾತಿ ಸಂಬಂಧದ ವಿಶೇಷ ಸಂಪುಟ ಸಭೆಯಲ್ಲಿ ಎಡಗೈ ಸಮುದಾಯಕ್ಕೆ 5.25, ಬಲಗೈ ಸಮುದಾಯಕ್ಕೆ 5.25 ಹಾಗೂ ಇತರೆ ಸಮುದಾಯಕ್ಕೆ 4.5 ಒಳ ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ಅದರಂತೆಯೇ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದರು. ಇಂದು ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಳೆದ ಬಜೆಟ್ ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಇದಕ್ಕೆ ಒಳ ಮೀಸಲಾತಿಯ ಅಂತಿಮ ನಿರ್ಧಾರವು ಅಡ್ಡಿಯಾಗಿತ್ತು. ಇದು ಅದು ಅಂತಿಮಗೊಂಡಿದೆ. ಎಡಗೈ 5.25, ಬಲಗೈ 5.25 ಹಾಗೂ ಇತರೆ ವರ್ಗದವರಿಗೆ 4.5 ಒಳ ಮೀಸಲಾತಿ ಕಲ್ಪಿಸಲು ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ 56,432 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಮತ್ತೊಮ್ಮೆ ಪ್ರಕಟ ಮಾಡುವುದಾಗಿ ತಿಳಿಸಿದರು. ಕೋರ್ಟ್ ಮುಂದಿನ ಆದೇಶದವರೆಗೂ ನೂತನ ಒಳ ಮೀಸಲಾತಿಯ ಅನುಸಾರವೇ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರೆಯಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಒಳ…

Read More

ಮಂಡ್ಯ: ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಸುಮಾರು 123 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಗುರುವಾರ ರಾತ್ರಿ ಆಗಮಿಸಿ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಅಧಿಕಾರಿಗಳು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡದ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿರುವುದರಿಂದ ಇದನ್ನು ಮನಗಂಡು ಎಚ್.ಡಿ.ಕುಮಾರಸ್ವಾಮಿ ಅವರು ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದು, ಗ್ರಾಮದ ಜನತೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಧೈರ್ಯ ತುಂಬಿದರು. ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದ, ಬೋರ್ ವೆಲ್ ಮೂರ್ನಾಲ್ಕು ದಿನಗಳಿಂದ ಕೆಟ್ಟು ಹೋಗಿದ್ದು, ಗ್ರಾಮದ ಜನತೆ ಸಾಕಷ್ಟು…

Read More

ಬೆಂಗಳೂರು: ರಾಜ್ಯದಲ್ಲಿ ದಶಕಗಳಿಂದ ಚರ್ಚೆಯಲ್ಲಿದ್ದ ಮತ್ತು ರಾಜಕೀಯವಾಗಿ ಕಗ್ಗಂಟಾಗಿದ್ದ ಪರಿಶಿಷ್ಟ ಜಾತಿ (SC) ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಇಂದು ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಂಚಿಕೆಯ **’ತ್ರಿ-ಸೂತ್ರ’**ವನ್ನು ಅಂತಿಮಗೊಳಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಾಗಿದೆ. ಎಡಗೈ ಸಮುದಾಯದವರಿಗೆ 5.25, ಬಲಗೈ ಸಮುದಾಯದವರಿಗೆ 5.25 ಹಾಗೂ ಇತರೆ ಸಮುದಾಯದವರಿಗೆ 4.5ರಷ್ಟು ಮೀಸಲಾತಿ ಕಲ್ಪಿಸುವಂತ ನಿರ್ಧಾರವನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ವಿಶೇಷ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ರಾಷ್ಟ್ರದಲ್ಲೇ ಅತೀ ಮಹತ್ವದ್ದಾಗುವಂತ ನಿರ್ಣಯವನ್ನು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ವಿಶೇಷ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ವಿಷಯವು ಸಾಕಷ್ಟು ಚರ್ಚೆಗೆ ಒಳಗಾಗಿತ್ತು. ಎಲ್ಲಾ ಸಮುದಾಯಗಳನ್ನು ಮನವೊಲಿಸಿ, ಒಪ್ಪಿಸಿ, ವಿಧಾನಸಭೆ, ಪರಿಷತ್ತಿನಲ್ಲಿಯೂ ಇದಕ್ಕೆ ಸಂಬಂಧಿಸಿದಂತ ಕಾನೂನು ಮಾಡುವಾಗ ಸದನವನ್ನೇ ವಿಶ್ವಾಸಕ್ಕೆ ತೆಗೆದುಕೊಂಡು ಸರ್ವಾನುಮತದಲ್ಲಿ ಆಗುವಂತೆ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ ಎಂದರು. ಒಳ ಮೀಸಲಾತಿ…

Read More

ಬೆಂಗಳೂರು: ದಲಿತ ಸಮುದಾಯಗಳ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯ ಪ್ರಮಾಣವನ್ನು ಅಂತಿಮಗೊಳಿಸಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮೀಸಲಾತಿ ಹಂಚಿಕೆಯ ವಿವರ: ಸಂಪುಟ ಸಭೆಯ ನಿರ್ಧಾರದಂತೆ ಒಟ್ಟು ಶೇ. 17 ರಷ್ಟು ಎಸ್‌ಸಿ ಮೀಸಲಾತಿಯನ್ನು ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ: ದಲಿತ ಎಡಗೈ ಸಮುದಾಯ: ಶೇ. 5.25 ರಷ್ಟು ಮೀಸಲಾತಿ. ದಲಿತ ಬಲಗೈ ಸಮುದಾಯ: ಶೇ. 5.25 ರಷ್ಟು ಮೀಸಲಾತಿ. ಇತರ ಉಪಜಾತಿಗಳು (ಎಸ್‌ಸಿ ಅಸ್ಪೃಶ್ಯ ಹಾಗೂ ಇತರರು): ಶೇ. 4.5 ರಷ್ಟು ಮೀಸಲಾತಿ. ಸಂಪುಟ ಸಭೆಯ ಮುಖ್ಯಾಂಶಗಳು: ಇಂದು ವಿಧಾನಸೌಧದಲ್ಲಿ ನಡೆದ ಈ ವಿಶೇಷ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಲಾಯಿತು. ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಇದ್ದ ಅಡೆತಡೆಗಳು ನಿವಾರಣೆಯಾದ ಬೆನ್ನಲ್ಲೇ ಸರ್ಕಾರ…

Read More

ಶಿವಮೊಗ್ಗ: ಮಲೆನಾಡು ಭಾಗದ ರೈತರನ್ನು ಅರಣ್ಯ ಭೂಮಿ ಹಾಗೂ ಒತ್ತುವರಿ ತೆರವು ಹೆಸರಿನಲ್ಲಿ ಪದೇಪದೇ ಒಕ್ಕಲೆಬ್ಬಿಸುವ ಸರ್ಕಾರದ ನೀತಿಯ ವಿರುದ್ಧ ಮಲೆನಾಡು ರೈತ ಹೋರಾಟ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೂ ರೈತರನ್ನು ತೆರವು ಮಾಡಬಾರದು ಎಂದು ವೇದಿಕೆಯ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಒತ್ತಾಯಿಸಿದ್ದಾರೆ. ನ್ಯಾಯಾಲಯದ ಆದೇಶಕ್ಕೂ ಬೆಲೆಯಿಲ್ಲವೇ? ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವದನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಜಮೀನು ಸಾಗುವಳಿ ಅಥವಾ ಮನೆಗಳ ಮೇಲೆ ಬಲವಂತದ ಕ್ರಮ ಜರುಗಿಸಬಾರದು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನವಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ದೂರಿದರು. ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ ರೈತರಿಗೆ ದಾಖಲೆಗಳನ್ನು ಹುಡುಕಲು ನೆರವಾಗಬೇಕಾದ ಅಧಿಕಾರಿಗಳು, ಅದರ ಬದಲಿಗೆ ನೋಟಿಸ್ ನೀಡಿ ಭಯ ಹುಟ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗಣ್ಯರ ಜಮೀನಿಗೇ ನೋಟಿಸ್: ಬಡವರ ಪಾಡೇನು? ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೋಣಂದೂರು ಲಿಂಗಪ್ಪ ಮತ್ತು ರುದ್ರಪ್ಪ…

Read More

ಶಿವಮೊಗ್ಗ: ಜಿಲ್ಲೆಯ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ 2026-27 ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲಭ್ಯವಿರುವ ಕೋರ್ಸ್‌ಗಳು ಈ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಈ ಕೆಳಗಿನ ಸಂಯೋಜನೆಗಳಿಗೆ ಅವಕಾಶವಿದೆ: PCMB (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ) PCMCs (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್ ವಿಜ್ಞಾನ) ಅರ್ಜಿ ಸಲ್ಲಿಸಲು ಯಾರು ಅರ್ಹರು? 2025-26 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪ್ರಮುಖ ದಿನಾಂಕ ಮತ್ತು ಜಾಲತಾಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 29, 2026. ವೆಬ್‌ಸೈಟ್ ವಿಳಾಸ: http://kreis.karnataka.gov.in ಅಗತ್ಯವಿರುವ ದಾಖಲೆಗಳು ದಾಖಲಾತಿ ಸಮಯದಲ್ಲಿ…

Read More

ಶಿವಮೊಗ್ಗ: ಕಾಡಿನ ರಾಜ ಹುಲಿಗಳ ಚಲನವಲನ ಹಾಗೂ ಅವುಗಳ ಜೀವನಶೈಲಿಯ ಅಧ್ಯಯನಕ್ಕಾಗಿ ಅರಣ್ಯ ಇಲಾಖೆ ಅಳವಡಿಸಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಕಳ್ಳತನ ಮಾಡಿರುವ ವಿಚಿತ್ರ ಹಾಗೂ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿವರ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಶರಾವತಿ ಅಭಯಾರಣ್ಯದಲ್ಲಿ ಈ ಕಳ್ಳತನ ನಡೆದಿದೆ. ಹುಲಿಗಳ ಗಣತಿ ಮತ್ತು ಅವುಗಳ ಚಲನವಲನವನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯು ಕಾಡಿನ ಆಯಕಟ್ಟಿನ ಜಾಗಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಿತ್ತು. ಆದರೆ, ಹುಲಿಗಳನ್ನು ಸೆರೆಹಿಡಿಯಬೇಕಿದ್ದ ಈ ಕ್ಯಾಮೆರಾಗಳು ಕಳ್ಳರ ಪಾಲಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮೆರಾಗಳು ಕಳ್ಳತನವಾಗಿರುವ ಒಂದೊಂದು ಕ್ಯಾಮೆರಾದ ಮೌಲ್ಯ ಸುಮಾರು 2 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳು ಒಟ್ಟು ಐದು ಕ್ಯಾಮೆರಾಗಳನ್ನು ಕಳ್ಳತನ ಮಾಡಿದ್ದು, ಅರಣ್ಯ ಇಲಾಖೆಗೆ ಭಾರಿ ಆರ್ಥಿಕ ನಷ್ಟ ಉಂಟುಮಾಡಿದ್ದಾರೆ. ಕಳ್ಳ ಸಿಕ್ಕಿಬಿದ್ದಿದ್ದು ಹೇಗೆ? ಅರಣ್ಯ ಇಲಾಖೆಯ ಅಧಿಕಾರಿಗಳು ಕ್ಯಾಮೆರಾಗಳಲ್ಲಿ ದಾಖಲಾದ ದೃಶ್ಯಗಳನ್ನು ಪರಿಶೀಲಿಸಲು ಹೋದಾಗ ಕ್ಯಾಮೆರಾಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ವಿಶೇಷವೆಂದರೆ, ಕಳ್ಳತನ…

Read More