Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಬಜೆಟ್ ನಲ್ಲಿ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಗೌರವಧನ ಹೆಚ್ಚಳ ಮಾಡಲಾಗಿದೆ. ಮತ್ತೆ ಮುಂದಿನ ಬಜೆಟ್ ನಲ್ಲಿ ಗೌರವಧನವನ್ನು 1,000 ಹೆಚ್ಚಳ ಮಾಡುವುದಾಗಿ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದರು. https://kannadanewsnow.com/kannada/new-government-to-be-formed-in-bihar-on-nov-20-nitish-takes-oath-as-cm-for-10th-time/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
BREAKING: ನ.20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ: 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಪ್ರಮಾಣವಚನ ಸ್ವೀಕಾರ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿತ್ತು. ಈ ಬೆನ್ನಲ್ಲೇ ನವೆಂಬರ್.20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಹಾರದಲ್ಲಿ ನವೆಂಬರ್.20ರಂದು ಬೆಳಗ್ಗೆ 11ರಿಂದ 12ರವರೆಗೆ ನೂತನ ಸರ್ಕಾರ ಪದಗ್ರಹಣ ಸಮಾರಂಭ ನಡೆಯಲಿದೆ. ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ 10ನೇ ಬಾರಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನವೆಂಬರ್.20ರಂದು ಬಿಹಾರದಲ್ಲಿ ನೂತನ ಸರ್ಕಾರ ಅಸ್ಥಿತ್ವದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. https://kannadanewsnow.com/kannada/shivamogga-if-the-cooperative-society-is-not-preserved-the-lives-of-farmers-will-be-barren-mla-gopalakrishna-belur/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಶಿವಮೊಗ್ಗ : ಸಹಕಾರಿ ಸಂಸ್ಥೆಗಳಿಗೆ ನಂಬಿಕೆ ಜೀವಾಳ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ರಕ್ಷಣೆ ಮಾಡಬೇಕು. ರೈತರ ಮೊಗದಲ್ಲಿ ಸಂತಸವಿದ್ದಾಗ ಮಾತ್ರ ದೇಶ ಸುಭೀಕ್ಷವಾಗಿರುತ್ತದೆ. ಒಂದು ವೇಳೆ ಸಹಕಾರಿ ಸಂಸ್ಥೆಗಳನ್ನು ಉಳಿಸಿಕೊಳ್ಳದಿದ್ದರೇ ರೈತರ ಬದುಕೇ ಬರಡಾಗಲಿದೆ ಎಂಬುದಾಗಿ ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಂಗಳವಾರ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಮಹಾಮಂಡಲ ಸೇರಿ ವಿವಿಧ ಸಹಕಾರಿ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಪ್ರಪಂಚದಲ್ಲಿ ಭಾರತ ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ಸಶಕ್ತವಾಗಿದೆ. ರಾಜ್ಯದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಂ. 1 ಸ್ಥಾನ ಗಳಿಸಿದೆ ಎಂದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಸಂಸ್ಥೆ ಅತಿಹೆಚ್ಚು ಲಾಭ ಗಳಿಸುತ್ತಿದೆ. ತಾಲ್ಲೂಕಿನಲ್ಲಿ ಅನೇಕ ಸಹಕಾರಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ. ಹೊಸ ಕಟ್ಟಡ ನಿರ್ಮಾಣ, ರಿಪೇರಿಗೆ ಡಿಸಿಸಿ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಎಥೆನಾಲ್ ಗ್ಯಾಸ್ ತುಂಬಿಕೊಂಡು ತೆರಳುತ್ತಿದ್ದಂತ ಟ್ಯಾಂಕರ್ ಉರುಳಿ ಬಿದ್ದಿದೆ. ಈ ಹಿನ್ನೆಯಲ್ಲಿ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರ ವ್ಯಾಪ್ತಿಯಲ್ಲಿ 1 ಕಿ.ಮೀ ದೂರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುಜರಾತ್ ನಿಂದ ಉಡುಪಿ ಕಡೆಗೆ ತೆರಳುತ್ತಿದ್ದಂತ ಗ್ಯಾಸ್ ಟ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ. ಹೀಗಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದಾಗಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಗ್ಯಾಸ್ ಟ್ಯಾಂಕರ್ ತಜ್ಞರು ಬರುವಂತೆ ಡಿಸಿ ಸೂಚಿಸಿದ್ದಾರೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಿಂದಾಗಿ ಲಾರಿ ಚಾಲಕನ ಸ್ಥಿತಿ ಗಂಭೀರಗೊಂಡಿದೆ. ಅಂಕೋಲಾ ತಹಶೀಲ್ದಾರ್ ಚಿಕ್ಕಪ್ಪ ನಾಯಕ್ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. https://kannadanewsnow.com/kannada/hindu-jagarana-vedike-leader-arrested-for-making-provocative-speech-during-protest/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಆಜೆಕಾರಿನ ನಿವಾಸಿಯಾಗಿದ್ದಾರೆ. ದೆಹಲಿ ಸ್ಪೋಟ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ನಡೆಸಿದ್ದರು. ಪ್ರತಿಭಟನೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದಂತ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿತ್ತು. ಮದರಸ, ಮಸೀದಿಯಲ್ಲಿ ಹಿಂದೂಗಳ ಹತ್ಯೆಗೆ ಪ್ರಚೋದನೆ ಎಂಬ ಹೇಳಿಕೆ ನೀಡಿದ್ದರು. ದ್ವೇಷ ಅಸೂಯೆ ಉಂಟುಮಾಡುವ ಹೇಳಿಕೆ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ರತ್ನಾಕರ್ ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/priyank-kharge-is-limitless-in-telling-lies-cheater-narayanaswamy/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರು ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಅವರು ಹೇಳಿರುವ ಮಾತುಗಳೆಲ್ಲವೂ ಅಪ್ಪಟ ಸುಳ್ಳು ಎಂದು ಟೀಕಿಸಿದರು. ತಮ್ಮ ಕ್ಷೇತ್ರ ಚಿತ್ತಾಪುರದಲ್ಲಿ ಪಥ ಸಂಚಲನ ಆಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಇವತ್ತು ಪಥ ಸಂಚಲನ ನಡೆದಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು. ನನ್ನ ಕೈಯಲ್ಲಿ ಅಧಿಕಾರವಿದ್ದರೆ ಇವತ್ತೇ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಹೇಳಿದ್ದರು. ಅದು ಅವರಿಗೆ ಈ ಜನ್ಮದಲ್ಲಿ ಆಗಲಾರದ ವಿಷಯ ಎಂದು ಸವಾಲೆಸೆದರು. ನೀವು ಅನುಮತಿ ಕೊಟ್ಟಿದ್ದಾಗಿ ಹೇಳಿದ್ದೀರಿ; ಅದು ನಿಮ್ಮ ಅನುಮತಿಯಲ್ಲ; ಅದು ನ್ಯಾಯಾಲಯದಿಂದ ಸಿಕ್ಕಿದೆ ಎಂದು ಗಮನಕ್ಕೆ ತಂದರು. ಸರಣಿ ಸುಳ್ಳು ಹೇಳುವ ಸುಳ್ಳುಗಾರ ಇದ್ದರೆ ಅದು ಪ್ರಿಯಾಂಕ್ ಖರ್ಗೆ ಎಂದರು. ಇರಲಾರದೆ ಇರುವೆ ಬಿಟ್ಟುಕೊಂಡು ಈಗ ಕಚ್ಚಿಸಿಕೊಂಡು ಓಡಾಡುತ್ತಿದ್ದಾರೆ; ಅವರಿಗೆ ಇರುವೆ ಬಹಳ…
ಬೆಂಗಳೂರು: ನವೆಂಬರ್ 19 ರಂದು ಬೆಂಗಳೂರು ಟೆಕ್ ಸಮ್ಮಿಟ್ನಲ್ಲಿ “ಕ್ವಾಂಟಮ್ ಟೆಕ್ನಾಲಜಿ ರೌಂಡ್ ಟೇಬಲ್” ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ನವೆಂಬರ್ 19 ರಂದು ಆಯೋಜಿಸಲಾಗಿರುವಂತಹ ಕ್ವಾಂಟಮ್ ರೌಂಡ್ಟೇಬಲ್ ನಲ್ಲಿ, ಕ್ವಾಂಟಮ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವಂತಹ ಪ್ರಮುಖ ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಐಟಿ&ಬಿಟಿ ಸಚಿವರಾದ ಪ್ರಿಯಾಂಕಾ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್, ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್, ಐಐಎಸ್ಸ್ಸಿ, AWS, ಸ್ವಿಸ್ನೆಕ್ಸ್, QpIAI ಸೇರಿದತೆ ಪ್ರಮುಖ ತಜ್ಞರು ಭಾಗವಹಿಸಲಿದ್ದಾರೆ. ಈ ರೌಂಡ್ ಟೇಬಲ್ ನಲ್ಲಿ “ಕ್ವಾಂಟಮ್ ಸಿಟಿ” ಕರ್ನಾಟಕ ರಾಜ್ಯದಲ್ಲಿ ಕ್ವಾಂಟಮ್ ತಂತ್ರಜ್ಞಾನದ ರೋಡ್ಮ್ಯಾಪ್ ಕುರಿತು ಚರ್ಚಿಸಲಿದ್ದಾರೆ. ಸಂಶೋಧನಾ ಕ್ಲಸ್ಟರ್ಗಳು, ಸ್ಟಾರ್ಟ್ಅಪ್ಗಳ ವೇಗವರ್ಧನೆ, ತಯಾರಿಕಾ ಸಾಮರ್ಥ್ಯ ಹಾಗೂ ನೈಪುಣ್ಯ ಅಭಿವೃದ್ದಿ ಪ್ರಮುಖ ವಿಷಯಗಳಾಗಿರಲಿವೆ ಎಂದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಸಂಶೋಧನಾ ವಾತಾವರಣವಿದೆ. ಅಲ್ಲದೇ, ಕೌಶಲ್ಯ ಹೊಂದಿರುವಂತಹ ಮಾನವ ಸಂಪನ್ಮೂಲ ಹಾಗೂ…
ಬೆಂಗಳೂರು : ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆ ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 2034 ರ…
ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಸರ್ಕಾರಿ ಕಚೇರಿ ಜಪ್ತಿ ಮಾಡಲಾಗಿದೆ. ರೈತನಿಗೆ ಭೂ ಪರಿಹಾರ ಕೊಡದೆ ಸತಾಯಿಸಿದ ಅಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶದಂತೆ ಮಂಡ್ಯ ನಗರದಲ್ಲಿರುವ ಕಾರ್ಯಪಾಲಕ ಇಂಜಿನಿಯರ್ ವಿಸಿ ನಾಲಾ ವಿಭಾಗದ ಎಇ ಕಚೇರಿ ಜಪ್ತಿ ಮಾಡಲಾಗಿದೆ. ಮಂಡ್ಯದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಪ್ತಿಗ ಆದೇಶ ಮಾಡಿತ್ತು. ಹೀಗಾಗಿ ಮಂಡ್ಯ ನಗರದಲ್ಲಿರುವ ಕಾರ್ಯಪಾಲಕ ಇಂಜಿನಿಯರ್ ವಿಸಿ ನಾಲಾ ವಿಭಾಗದ ಎಇ ಕಚೇರಿ ಜಪ್ತಿ ಮಾಡಲಾಗಿದೆ. ವಕೀಲರ ಜೊತೆ ಕೋರ್ಟ್ ಜಪ್ತಿ ಆದೇಶದೊಂದಿಗೆ ಬಂದ ರೈತನಿಂದ ಕಚೇರಿ ಪೀಠೋಕರಣ ಸೇರಿ ಕಂಪ್ಯೂಟರ್ ಜಪ್ತಿ ಮಾಡಿದ್ದಾರೆ. ಮದ್ದೂರು ತಾಲೂಕಿನ ಹೆಬ್ಬೆರಳು ಗ್ರಾಮದ ರೈತ ಜವರೇಗೌಡ ಭೂ ಪರಿಹಾರ ಕೊಡದೆ ನಿರ್ಲಕ್ಷ್ಯ ತೋರಿದ್ದರು. ನೀರಾವರಿ ಇಲಾಖೆ ಅಧಿಕಾರಿಯ ನಿರ್ಲಕ್ಷ್ಯ ಧೋರಣೆ ಗೆ ಜಪ್ತಿ ಆದೇಶ ಕೊಟ್ಟು ಕೋರ್ಟ್ ಚಾಟಿ ಬೀಸಿದೆ. ನಾಲೆಗೆ ಭೂಮಿ ಕಳೆದುಕೊಂಡಿದ್ದ ರೈತನಿಗೆ 84 ಲಕ್ಷ ಪರಿಹಾರ ಕೊಡದೆ ವಿಳಂಬ ಮಾಡಿತ್ತು. ಗ್ರಾಮದ ಮುತ್ತುರಾಯನಕೆರೆಯ ಪೋಷಕ ನಾಲೆಗೆ ರೈತರ…
ಬೆಂಗಳೂರು: ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ ಪರವಾನಗಿ ವಿಶೇಷ ಅಭಿಯಾನ ನಡೆಸುವಂತೆ ಆರೋಗ್ಯ ವಿಭಾಗ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ತಿಳಿಸಿದರು. 14 ಪಿಜಿಗಳಿಗೆ ಬೀಗ ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ. ಕಾಯ್ದೆ, 2024ರ ಅನ್ವಯ ವಿಧಿಸಿರುವ ಷರತ್ತು ಹಾಗೂ ನಿಬಂಧನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸುತ್ತಿರುವ 14 ಪೇಯಿಂಗ್ ಗೆಸ್ಟ್ ಗಳನ್ನು ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರ ಮಾರ್ಗದರ್ಶನದಲ್ಲಿ, ಆರೋಗ್ಯಾಧಿಕಾರಿ ಡಾ. ಸವಿತಾ ರವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಪರಿಶೀಲನೆ ನಡೆಸಿ ವಸತಿಗೃಹಗಳ (ಪಿಜಿ) ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ತಿಳಿಸಿದರು. ಬೀಗ ಹಾಕಲಾದ ವಸತಿಗೃಹಗಳ ವಿವರಗಳು ಮಹದೇವಪುರ ವಿಧಾನಸಭಾ ಕ್ಷೇತ್ರ * ಎಸ್.ವಿ.ಕೆ. ಪಿ.ಜಿ ಪಟ್ಟಂದೂರು ಅಗ್ರಹಾರ, ಐಟಿಪಿಲ್ ಬ್ಯಾಕ್ ಗೇಟ್ * ವಂಶಿ ಕೃಷ್ಣ ಪಿಜಿ,…














