Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಸಬ್ ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ಕಚೇರಿಯನ್ನು ಸುಸಜ್ಜಿತವಾಗಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರು ಮಾಡಿಸಲಾಗುವುದು. ಇದರೊಂದಿಗೆ, ಬಾಡಿಗೆ ಕಟ್ಟಡಗಳಲ್ಲಿ ಚದುರಿಹೋಗಿರುವ ವಿವಿಧ ಸರ್ಕಾರಿ ಕಚೇರಿಗಳನ್ನು ತಾಲ್ಲೂಕು ಕಚೇರಿಯ ‘ಒಂದೇ ಸೂರಿನಡಿ’ ತರಲಾಗುವುದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿ ಆವರಣದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಾಣಕ್ಕೆ ಉದ್ದೇಶಿಸಿರುವ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಹೈಟೆಕ್ ಕಚೇರಿ ನಿರ್ಮಾಣ ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಾಣದ ಕುರಿತು ಮಾಹಿತಿ ನೀಡಿದ ಶಾಸಕರು, “ಈ ಹಿಂದೆ ಕಚೇರಿ ನಿರ್ಮಾಣಕ್ಕೆ 4 ಕೋಟಿ ರೂ. ಮೀಸಲಿರಿಸಿದ್ದರೂ ಅದು ಮಂಜೂರಾಗಿರಲಿಲ್ಲ. ಈಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದ್ದು, ಅವರು ಹಣ ಮಂಜೂರಾತಿಗೆ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಹೈಟೆಕ್ ಮಾದರಿಯ ಕಚೇರಿ ನಿರ್ಮಾಣವಾಗಲಿದೆ,” ಎಂದರು. ನೂತನವಾಗಿ ಅಭಿವೃದ್ಧಿಗೊಳ್ಳುತ್ತಿರುವ ತಾಲ್ಲೂಕು…

Read More

ಶಿವಮೊಗ್ಗ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯಕ್ಕೆ ಗ್ರೇಡ್ ನೀಡುವ ಬದಲಾಗಿ ಅಂಕಗಳನ್ನೇ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪಟ್ಟಣದ ‘ಬಂಗಾರಧಾಮ’ದಲ್ಲಿ ಬುಧವಾರ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಹೈಕೋರ್ಟ್ ಆದೇಶಕ್ಕೆ ಗೌರವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ಸರ್ಕಾರ ಈ ಮೊದಲು ನಿರ್ಧರಿಸಿತ್ತು. ಆದರೆ, ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಕಗಳನ್ನೇ ನೀಡುವಂತೆ ಆದೇಶಿಸಿತ್ತು. “ನ್ಯಾಯಾಲಯದ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ. ಅದರಂತೆ ಈ ವರ್ಷ ಅಂಕಗಳನ್ನೇ ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ಮರು ಚಿಂತನೆ ನಡೆಸಿ ನಿರ್ಧರಿಸಲಿದೆ,” ಎಂದು ಸಚಿವರು ಸ್ಪಷ್ಟಪಡಿಸಿದರು. “ಸರ್ಕಾರ ಹಿಂದಿ ವಿರೋಧಿಯಲ್ಲ” ಸರ್ಕಾರದ ಈ ಹಿಂದಿನ ನಿರ್ಧಾರದ ಕುರಿತು ಉದ್ಭವಿಸಿದ್ದ ವಿವಾದಕ್ಕೆ…

Read More

ಶಿವಮೊಗ್ಗ: ಜಿಲ್ಲೆಯ ತಾಲ್ಲೂಕಿನ ವಿಶೇಷ ಚೇತನರಿಗೆ ನೆರವಾಗುವ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆಯು ಸುಮಾರು 3 ಕೋಟಿ ರೂಪಾಯಿ ವೆಚ್ಚದ ಸಾಧನಾ ಸಲಕರಣೆಗಳನ್ನು ವಿತರಿಸಲು ಮುಂದಾಗಿದೆ. ಈ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹ ಹಾಗೂ ನೋಂದಣಿ ಕಾರ್ಯಕ್ರಮವು ಏಪ್ರಿಲ್ 27ರಂದು ಬೆಳಿಗ್ಗೆ 9:30ಕ್ಕೆ ಸಾಗರದ ನೆಹರೂ ಮೈದಾನದಲ್ಲಿರುವ ಲಯನ್ಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಸನ್ನ ಟಿ. ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಹಂಚಿಕೊಂಡರು. ರಾಜ್ಯದಲ್ಲೇ ಮೊದಲ ಪ್ರಯತ್ನ ಶೃಂಗೇರಿ ಶಂಕರಮಠ ಹಾಗೂ ದಿವ್ಯಾಂಗ ವ್ಯಕ್ತಿಗಳ ಕೌಶಲ್ಯಾಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. “ಇಂತಹ ಬೃಹತ್ ಮಟ್ಟದ ದಿವ್ಯಾಂಗ ಸಬಲೀಕರಣ ಕಾರ್ಯಕ್ರಮವು ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಾಗರ ಲಯನ್ಸ್ ಸಂಸ್ಥೆಯ ವತಿಯಿಂದ ನಡೆಯುತ್ತಿದೆ” ಎಂದು ಡಾ. ಪ್ರಸನ್ನ ಹೆಮ್ಮೆಯಿಂದ ತಿಳಿಸಿದರು. ಲಯನ್ಸ್ ಸಂಸ್ಥೆಯ ಜಿಲ್ಲಾ ಉಪ ಗವರ್ನರ್…

Read More

ಶಿವಮೊಗ್ಗ: “ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಬೇಕಾದರೆ ಅಧಿಕಾರಿಗಳ ನಡುವೆ ಸಮನ್ವಯತೆ ಅತ್ಯಗತ್ಯ. ನಿಮ್ಮ ನಡುವಿನ ಸಮನ್ವಯದ ಕೊರತೆಯಿಂದಾಗಿ ಕುಡಿಯುವ ನೀರು ಸೇರಿದಂತೆ ಹಲವು ಸೌಲಭ್ಯಗಳು ಜನರಿಗೆ ಸಿಗುತ್ತಿಲ್ಲ. ಮೊದಲು ಒಬ್ಬರ ಮೇಲೆ ಒಬ್ಬರು ದೂರು ಹೇಳುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಿ,” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಾದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮನ್ವಯತೆ ಕೊರತೆಗೆ ಶಾಸಕರ ಕಿಡಿ ಗ್ರಾಮೀಣ ಭಾಗದಲ್ಲಿ ಬೇಸಿಗೆಯ ಬೇಗೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಈ ಸಂದರ್ಭದಲ್ಲಿ ಮೆಸ್ಕಾಂ, ನೀರು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಶಾಸಕರು ಸೂಚಿಸಿದರು. “ಕೆಲವು ಕಡೆ ಟಿ.ಸಿ. (ಟ್ರಾನ್ಸ್‌ಫಾರ್ಮರ್) ಅಳವಡಿಸಿದರೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಅಧಿಕಾರಿಗಳ ಇಂತಹ ಬೇಜವಾಬ್ದಾರಿಯಿಂದ ಸಾಮಾನ್ಯ…

Read More

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ನಡೆಸಿದ ಸಿಇಟಿ ಕನ್ನಡ ಭಾಷಾ ಪರೀಕ್ಷೆಗೆ 1,792 ಅಭ್ಯರ್ಥಿಗಳ ಪೈಕಿ 822 (ಶೇ 46) ಮಂದಿ ಹಾಜರಾಗಿದ್ದರು. ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ನಗರಗಳ ಐದು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. 50 ಅಂಕಗಳ ಈ ಪರೀಕ್ಷೆ ಸುಗಮವಾಗಿ ನಡೆಯಿತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಏಪ್ರಿಲ್ 23ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ 24ರಂದು ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ನಿಗದಿತ ಕೇಂದ್ರಕ್ಕೆ ಎರಡು ಗಂಟೆ ಮುಂಚಿತವಾಗಿ ಹೋಗಿ ಪರಿಶೀಲನೆಗ ಒಳಗಾಗಬೇಕು ಎಂದು ಅವರು ಸಲಹೆ ನೀಡಿದ್ದಾರೆ. ರಾಜ್ಯದ 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ. https://kannadanewsnow.com/kannada/housewife-in-bengaluru-dies-due-to-husbands-online-betting-addiction-mother-kills-daughter-and-commits-suicide/ https://kannadanewsnow.com/kannada/iran-seizes-ship-bound-for-india/

Read More

ಟೆಹ್ರಾನ್: ವಿಶ್ವದ ಅತ್ಯಂತ ಪ್ರಮುಖ ಸಮುದ್ರ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ಸ್ ಕಾರ್ಪ್ಸ್ (IRGC) ನೌಕಾಪಡೆಯು ಎರಡು ಸರಕು ಸಾಗಣೆ ಹಡಗುಗಳನ್ನು ವಶಪಡಿಸಿಕೊಂಡಿದೆ. ನೌಕಾಯಾನ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮತ್ತು ಜಲಸಂಧಿಯಲ್ಲಿ ಸುರಕ್ಷತೆಗೆ ಧಕ್ಕೆ ತಂದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಹಡಗುಗಳ ವಶ ಮತ್ತು ಆರೋಪ IRGC ನೀಡಿರುವ ಹೇಳಿಕೆಯ ಪ್ರಕಾರ, “ಇಂದು ಬೆಳಿಗ್ಗೆ ಹಾರ್ಮುಜ್ ಜಲಸಂಧಿಯಲ್ಲಿ ನಿಯಮ ಉಲ್ಲಂಘಿಸುತ್ತಿದ್ದ ಎರಡು ಹಡಗುಗಳನ್ನು ಗುರುತಿಸಿ ತಡೆಯಲಾಗಿದೆ. ಈ ಹಡಗುಗಳನ್ನು ಇರಾನ್ ಕರಾವಳಿಯತ್ತ ಕೊಂಡೊಯ್ಯಲಾಗಿದೆ.” ವಶಪಡಿಸಿಕೊಳ್ಳಲಾದ ಹಡಗುಗಳನ್ನು MSC-FRANCESCA ಮತ್ತು EPAMINONDAS ಎಂದು ಗುರುತಿಸಲಾಗಿದೆ. ಮರೈನ್ ಟ್ರಾಫಿಕ್ (Marinetraffic) ವೆಬ್‌ಸೈಟ್ ಮಾಹಿತಿ ಪ್ರಕಾರ, ಲೈಬೀರಿಯಾ ಧ್ವಜದ ಅಡಿಯಲ್ಲಿ ಸಂಚರಿಸುತ್ತಿದ್ದ ‘ಎಪಮಿನೋಂಡಾಸ್’ ಕಂಟೇನರ್ ಹಡಗು ದುಬೈನ ಜೆಬೆಲ್ ಅಲಿಯಿಂದ ಭಾರತದ ಗುಜರಾತ್‌ಗೆ ಪ್ರಯಾಣಿಸುತ್ತಿತ್ತು. ಸರಣಿ ದಾಳಿಗಳಿಂದ ಆತಂಕ ಇಂದು ಮುಂಜಾನೆಯಿಂದಲೇ ಹಾರ್ಮುಜ್ ಜಲಸಂಧಿಯಲ್ಲಿ ಕನಿಷ್ಠ ಮೂರು ಕಂಟೇನರ್ ಹಡಗುಗಳ…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೌಟುಂಬಿಕ ಕಲಹ ಹಾಗೂ ವ್ಯಸನಗಳು ಎರಡು ಸಂಸಾರಗಳನ್ನು ಬೀದಿಗೆ ತಳ್ಳಿವೆ. ಪತಿಯ ಆನ್‌ಲೈನ್ ಬೆಟ್ಟಿಂಗ್ ಹಾಗೂ ಮದ್ಯಪಾನದ ಚಟಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರೆ, ಮತ್ತೊಂದು ಘಟನೆಯಲ್ಲಿ ತಾಯಿಯೇ ಮಗಳನ್ನು ಕೊಂದು ತಾನೂ ಪ್ರಾಣತ್ಯಾಗ ಮಾಡಿದ ದಾರುಣ ಘಟನೆ ವರದಿಯಾಗಿದೆ. ಬೆಟ್ಟಿಂಗ್ ಮತ್ತು ಮದ್ಯದ ವ್ಯಸನಕ್ಕೆ ಬಲಿಯಾದ ಕನಗಾ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎ. ನಾರಾಯಣಪುರದಲ್ಲಿ ವಾಸವಿದ್ದ ಕನಗಾ (28) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಪತಿ ಶಂಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಿನ್ನೆಲೆ: ತಮಿಳುನಾಡು ಮೂಲದ ಶಂಕರ್ ಹಾಗೂ ಕನಗಾ 2023ರಲ್ಲಿ ವಿವಾಹವಾಗಿದ್ದರು. ಇವರಿಗೆ ಎರಡು ವರ್ಷದ ಗಂಡು ಮಗನಿದ್ದಾನೆ. ಶಂಕರ್ ಮದ್ಯಪಾನ ಹಾಗೂ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ದಾಸನಾಗಿ ಭಾರಿ ಪ್ರಮಾಣದ ಸಾಲ ಮಾಡಿಕೊಂಡಿದ್ದ. ಪತ್ನಿಯ ಮನೆಯವರು ಇವರನ್ನು ಬೆಂಗಳೂರಿಗೆ ಕರೆಸಿಕೊಂಡು, ಜೀವನಕ್ಕಾಗಿ ಹಣ್ಣಿನ ವ್ಯಾಪಾರ ಮಾಡಲು ನೆರವಾಗಿದ್ದರು. ಘಟನೆಗೆ ಕಾರಣ: ಹಣ್ಣಿನ ವ್ಯಾಪಾರದಲ್ಲಿ ಬಂದ ಹಣವನ್ನು ಪತ್ನಿಗೆ…

Read More

ಬೆಂಗಳೂರು: ಪ್ರಖ್ಯಾತ ಐಟಿ ಸೇವಾ ಸಂಸ್ಥೆ ಕಾಗ್ನಿಜೆಂಟ್ ಜಾಗತಿಕ ಮಟ್ಟದಲ್ಲಿ ಎಂಟರ್‌ಪ್ರೈಸ್ ಗ್ರಾಹಕರಿಗೆ ಎಐ ತಂತ್ರಜ್ಞಾನದ ಗರಿಷ್ಠ ಲಾಭವನ್ನು ಒದಗಿಸುವ ಉದ್ದೇಶದಿಂದ ಓಪನ್ಎಐ ಜೊತೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ ಓಪನ್ಎಐನ ‘ಕೋಡೆಕ್ಸ್’ ತಂತ್ರಜ್ಞಾನವನ್ನು ಕಾಗ್ನಿಜೆಂಟ್ ತನ್ನ ಸಾಫ್ಟ್‌ವೇರ್ ಇಂಜಿನಿಯರಿಂಗ್ ವಿಭಾಗದಾದ್ಯಂತ ಅಳವಡಿಸಿಕೊಳ್ಳಲಿದೆ. ಸಂಕೀರ್ಣವಾದ ಎಂಟರ್‌ಪ್ರೈಸ್ ಪರಿಸರದಲ್ಲಿ ಕೋಡೆಕ್ಸ್ ತಂತ್ರಜ್ಞಾನವನ್ನು ಯಶಸ್ವಿಯಾಗಿ ನಿಯೋಜಿಸುವ ಮತ್ತು ನಿರ್ವಹಿಸುವ ಸಾಮರ್ಥ್ಯವನ್ನು ಗುರುತಿಸಿ ಓಪನ್ಎಐ ಸಂಸ್ಥೆಯು ಕಾಗ್ನಿಜೆಂಟ್ ಅನ್ನು ತನ್ನ ‘ಆಯ್ದ ಪಾಲುದಾರರ’ ಪಟ್ಟಿಗೆ ಸೇರಿಸಿದೆ. ಎಐ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸುವಲ್ಲಿ ಮತ್ತು ನಿರ್ವಹಿಸುವಲ್ಲಿ ಕಾಗ್ನಿಜೆಂಟ್ ಹೊಂದಿರುವ ಸುದೀರ್ಘ ಅನುಭವವೇ ಈ ಆಯ್ಕೆಗೆ ಪ್ರಮುಖ ಕಾರಣವಾಗಿದೆ. ʼಇದು ಮಾನವ ಮತ್ತು ಎಐ ಒಟ್ಟಾಗಿ ಕಾರ್ಯನಿರ್ವಹಿಸುವ ಕಾಲʼ ಪಾಲುದಾರಿಕೆ ಕುರಿತು ಮಾತನಾಡಿದ ಕಾಗ್ನಿಜೆಂಟ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಂಡಿ) ರಾಜೇಶ್ ವಾರಿಯರ್, “ಮುಂದಿನ ದಶಕದ ಅತ್ಯುತ್ತಮ ಇಂಜಿನಿಯರಿಂಗ್ ಸಂಸ್ಥೆಗಳು, ಎಷ್ಟು ಜನ ಇಂಜಿನಿಯರ್‌ಗಳನ್ನು ಹೊಂದಿವೆ ಎಂಬುದರ ಮೇಲೆ ನಿರ್ಧಾರವಾಗುವುದಿಲ್ಲ. ಬದಲಾಗಿ, ಮಾನವನ ಆಲೋಚನಾ…

Read More

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳ ಸ್ಥಿತಿಗತಿ ಹಾಗೂ ನೌಕರರ ಸಮಸ್ಯೆಗಳ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವೆ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಟೀಕೆಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಂಕಿ-ಅಂಶಗಳ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಸಾರಿಗೆ ಸಂಸ್ಥೆಯ ಇಂದಿನ ಸ್ಥಿತಿಗೆ ಬಿಜೆಪಿಯೇ ಹೊಣೆ” “ಬಿ.ವೈ. ವಿಜಯೇಂದ್ರ ಅವರೇ, ನಿಮ್ಮ ಈ ನಕಲಿ ಕಾಳಜಿಯ ಮುಖವಾಡವನ್ನು ಮೊದಲು ಕಳಚಿಡಿ” ಎಂದು ಲೇವಡಿ ಮಾಡಿರುವ ಸಚಿವರು, ಸಾರಿಗೆ ಸಂಸ್ಥೆಗಳು ಇವತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ ಅದಕ್ಕೆ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಕಾಲದ ಅದಕ್ಷ ಆಡಳಿತವೇ ನೇರ ಕಾರಣ ಎಂದು ನೇರ ವಾಗ್ದಾಳಿ ನಡೆಸಿದ್ದಾರೆ. https://twitter.com/rlr_btm/status/2046888800048296441 ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಘಟನೆಗಳನ್ನು ಸಚಿವರು ಈ ಕೆಳಗಿನಂತೆ ಪಟ್ಟಿ ಮಾಡಿದ್ದಾರೆ: ದಾಖಲೆಯ ಮುಷ್ಕರ: ಸಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ 15 ದಿನಗಳ ಕಾಲ ಸತತ ಮುಷ್ಕರ…

Read More

ಹುಬ್ಬಳ್ಳಿ: ನಗರದ ಕುಂದಗೋಳ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಎದೆ ನಡುಗಿಸುವಂತಹ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತೀ ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ, ಡಿಕ್ಕಿಯ ರಭಸಕ್ಕೆ ವ್ಯಕ್ತಿಯ ರುಂಡ ಮತ್ತು ಮುಂಡ ಪ್ರತ್ಯೇಕವಾಗಿ ಬಿದ್ದಿರುವ ಘನಘೋರ ಘಟನೆ ನಡೆದಿದೆ. ಘಟನೆಯ ವಿವರ ಮೃತ ವ್ಯಕ್ತಿಯನ್ನು ಶೆರವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ ಎಂದು ಗುರುತಿಸಲಾಗಿದೆ. ಸದಾನಂದ ಅವರು ಕುಂದಗೋಳ ರಸ್ತೆಯ ಬದಿಯಲ್ಲಿ ಜೆಸಿಬಿ ಯಂತ್ರವನ್ನು ರಿಪೇರಿ ಮಾಡುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ನೇರವಾಗಿ ಸದಾನಂದ ಅವರಿಗೆ ಗುದ್ದಿದೆ. ಇಂಜಿನ್ ಒಳಗೇ ಸಿಲುಕಿದ ತಲೆ! ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಕಾರು ಡಿಕ್ಕಿಯಾದ ಕ್ಷಣಾರ್ಧದಲ್ಲೇ ಸದಾನಂದ ಅವರ ದೇಹ ಎರಡು ಭಾಗವಾಗಿದೆ. ರುಂಡವು ದೇಹದಿಂದ ಬೇರ್ಪಟ್ಟು ಕಾರಿನ ಮುಂಭಾಗದ ಇಂಜಿನ್ ಒಳಗೆ ಹೋಗಿ ಬಿದ್ದಿದ್ದರೆ, ಮುಂಡವು ರಸ್ತೆಯ ಇನ್ನೊಂದು ಬದಿಗೆ ಎಸೆಯಲ್ಪಟ್ಟಿದೆ. ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಈ ದೃಶ್ಯ…

Read More