Author: kannadanewsnow09

ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಆಜೆಕಾರಿನ ನಿವಾಸಿಯಾಗಿದ್ದಾರೆ. ದೆಹಲಿ ಸ್ಪೋಟ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ನಡೆಸಿದ್ದರು. ಪ್ರತಿಭಟನೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದಂತ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿತ್ತು. ಮದರಸ, ಮಸೀದಿಯಲ್ಲಿ ಹಿಂದೂಗಳ ಹತ್ಯೆಗೆ ಪ್ರಚೋದನೆ ಎಂಬ ಹೇಳಿಕೆ ನೀಡಿದ್ದರು. ದ್ವೇಷ ಅಸೂಯೆ ಉಂಟುಮಾಡುವ ಹೇಳಿಕೆ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ರತ್ನಾಕರ್ ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/priyank-kharge-is-limitless-in-telling-lies-cheater-narayanaswamy/ https://kannadanewsnow.com/kannada/priyank-kharge-is-limitless-in-telling-lies-cheater-narayanaswamy/

Read More

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರು ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಅವರು ಹೇಳಿರುವ ಮಾತುಗಳೆಲ್ಲವೂ ಅಪ್ಪಟ ಸುಳ್ಳು ಎಂದು ಟೀಕಿಸಿದರು. ತಮ್ಮ ಕ್ಷೇತ್ರ ಚಿತ್ತಾಪುರದಲ್ಲಿ ಪಥ ಸಂಚಲನ ಆಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಇವತ್ತು ಪಥ ಸಂಚಲನ ನಡೆದಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದರು. ನನ್ನ ಕೈಯಲ್ಲಿ ಅಧಿಕಾರವಿದ್ದರೆ ಇವತ್ತೇ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಹೇಳಿದ್ದರು. ಅದು ಅವರಿಗೆ ಈ ಜನ್ಮದಲ್ಲಿ ಆಗಲಾರದ ವಿಷಯ ಎಂದು ಸವಾಲೆಸೆದರು. ನೀವು ಅನುಮತಿ ಕೊಟ್ಟಿದ್ದಾಗಿ ಹೇಳಿದ್ದೀರಿ; ಅದು ನಿಮ್ಮ ಅನುಮತಿಯಲ್ಲ; ಅದು ನ್ಯಾಯಾಲಯದಿಂದ ಸಿಕ್ಕಿದೆ ಎಂದು ಗಮನಕ್ಕೆ ತಂದರು. ಸರಣಿ ಸುಳ್ಳು ಹೇಳುವ ಸುಳ್ಳುಗಾರ ಇದ್ದರೆ ಅದು ಪ್ರಿಯಾಂಕ್ ಖರ್ಗೆ ಎಂದರು. ಇರಲಾರದೆ ಇರುವೆ ಬಿಟ್ಟುಕೊಂಡು ಈಗ ಕಚ್ಚಿಸಿಕೊಂಡು ಓಡಾಡುತ್ತಿದ್ದಾರೆ; ಅವರಿಗೆ ಇರುವೆ ಬಹಳ…

Read More

ಬೆಂಗಳೂರು: ನವೆಂಬರ್‌ 19 ರಂದು ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ “ಕ್ವಾಂಟಮ್‌ ಟೆಕ್ನಾಲಜಿ ರೌಂಡ್‌ ಟೇಬಲ್‌” ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ನವೆಂಬರ್‌ 19 ರಂದು ಆಯೋಜಿಸಲಾಗಿರುವಂತಹ ಕ್ವಾಂಟಮ್‌ ರೌಂಡ್‌ಟೇಬಲ್‌ ನಲ್ಲಿ, ಕ್ವಾಂಟಮ್‌ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವಂತಹ ಪ್ರಮುಖ ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಐಟಿ&ಬಿಟಿ ಸಚಿವರಾದ ಪ್ರಿಯಾಂಕಾ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್‌, ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್‌, ಐಐಎಸ್ಸ್‌ಸಿ, AWS, ಸ್ವಿಸ್‌ನೆಕ್ಸ್‌, QpIAI ಸೇರಿದತೆ ಪ್ರಮುಖ ತಜ್ಞರು ಭಾಗವಹಿಸಲಿದ್ದಾರೆ. ಈ ರೌಂಡ್‌ ಟೇಬಲ್‌ ನಲ್ಲಿ “ಕ್ವಾಂಟಮ್‌ ಸಿಟಿ” ಕರ್ನಾಟಕ ರಾಜ್ಯದಲ್ಲಿ ಕ್ವಾಂಟಮ್‌ ತಂತ್ರಜ್ಞಾನದ ರೋಡ್‌ಮ್ಯಾಪ್‌ ಕುರಿತು ಚರ್ಚಿಸಲಿದ್ದಾರೆ. ಸಂಶೋಧನಾ ಕ್ಲಸ್ಟರ್‌ಗಳು, ಸ್ಟಾರ್ಟ್‌ಅಪ್‌ಗಳ ವೇಗವರ್ಧನೆ, ತಯಾರಿಕಾ ಸಾಮರ್ಥ್ಯ ಹಾಗೂ ನೈಪುಣ್ಯ ಅಭಿವೃದ್ದಿ ಪ್ರಮುಖ ವಿಷಯಗಳಾಗಿರಲಿವೆ ಎಂದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಸಂಶೋಧನಾ ವಾತಾವರಣವಿದೆ. ಅಲ್ಲದೇ, ಕೌಶಲ್ಯ ಹೊಂದಿರುವಂತಹ ಮಾನವ ಸಂಪನ್ಮೂಲ ಹಾಗೂ…

Read More

ಬೆಂಗಳೂರು : ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆ ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 2034 ರ…

Read More

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಸರ್ಕಾರಿ‌ ಕಚೇರಿ ಜಪ್ತಿ ಮಾಡಲಾಗಿದೆ. ರೈತನಿಗೆ ಭೂ ಪರಿಹಾರ ಕೊಡದೆ ಸತಾಯಿಸಿದ ಅಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶದಂತೆ ಮಂಡ್ಯ ನಗರದಲ್ಲಿರುವ ಕಾರ್ಯಪಾಲಕ ಇಂಜಿನಿಯರ್ ವಿಸಿ ನಾಲಾ ವಿಭಾಗದ ಎಇ ಕಚೇರಿ ಜಪ್ತಿ ಮಾಡಲಾಗಿದೆ. ಮಂಡ್ಯದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಪ್ತಿಗ ಆದೇಶ ಮಾಡಿತ್ತು. ಹೀಗಾಗಿ ಮಂಡ್ಯ ನಗರದಲ್ಲಿರುವ ಕಾರ್ಯಪಾಲಕ ಇಂಜಿನಿಯರ್ ವಿಸಿ ನಾಲಾ ವಿಭಾಗದ ಎಇ ಕಚೇರಿ ಜಪ್ತಿ ಮಾಡಲಾಗಿದೆ. ವಕೀಲರ ಜೊತೆ ಕೋರ್ಟ್ ಜಪ್ತಿ ಆದೇಶದೊಂದಿಗೆ ಬಂದ ರೈತನಿಂದ ಕಚೇರಿ ಪೀಠೋಕರಣ ಸೇರಿ ಕಂಪ್ಯೂಟರ್ ಜಪ್ತಿ ಮಾಡಿದ್ದಾರೆ. ಮದ್ದೂರು ತಾಲೂಕಿನ ಹೆಬ್ಬೆರಳು ಗ್ರಾಮದ ರೈತ ಜವರೇಗೌಡ ಭೂ ಪರಿಹಾರ ಕೊಡದೆ ನಿರ್ಲಕ್ಷ್ಯ ತೋರಿದ್ದರು. ನೀರಾವರಿ ಇಲಾಖೆ ಅಧಿಕಾರಿಯ ನಿರ್ಲಕ್ಷ್ಯ ಧೋರಣೆ ಗೆ ಜಪ್ತಿ ಆದೇಶ ಕೊಟ್ಟು ಕೋರ್ಟ್ ಚಾಟಿ ಬೀಸಿದೆ. ನಾಲೆಗೆ ಭೂಮಿ ಕಳೆದುಕೊಂಡಿದ್ದ ರೈತನಿಗೆ 84 ಲಕ್ಷ ಪರಿಹಾರ ಕೊಡದೆ ವಿಳಂಬ ಮಾಡಿತ್ತು. ಗ್ರಾಮದ ಮುತ್ತುರಾಯನಕೆರೆಯ ಪೋಷಕ ನಾಲೆಗೆ ರೈತರ…

Read More

ಬೆಂಗಳೂರು: ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ  ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ ಪರವಾನಗಿ ವಿಶೇಷ ಅಭಿಯಾನ ನಡೆಸುವಂತೆ ಆರೋಗ್ಯ ವಿಭಾಗ ಅಧಿಕಾರಿಗಳಿಗೆ  ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ತಿಳಿಸಿದರು. 14 ಪಿಜಿಗಳಿಗೆ ಬೀಗ ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ. ಕಾಯ್ದೆ, 2024ರ ಅನ್ವಯ ವಿಧಿಸಿರುವ ಷರತ್ತು ಹಾಗೂ ನಿಬಂಧನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸುತ್ತಿರುವ 14 ಪೇಯಿಂಗ್ ಗೆಸ್ಟ್ ಗಳನ್ನು ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರ ಮಾರ್ಗದರ್ಶನದಲ್ಲಿ,  ಆರೋಗ್ಯಾಧಿಕಾರಿ ಡಾ. ಸವಿತಾ ರವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಪರಿಶೀಲನೆ ನಡೆಸಿ  ವಸತಿಗೃಹಗಳ (ಪಿಜಿ) ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ತಿಳಿಸಿದರು. ಬೀಗ ಹಾಕಲಾದ  ವಸತಿಗೃಹಗಳ ವಿವರಗಳು ಮಹದೇವಪುರ ವಿಧಾನಸಭಾ  ಕ್ಷೇತ್ರ * ಎಸ್.ವಿ.ಕೆ. ಪಿ.ಜಿ ಪಟ್ಟಂದೂರು ಅಗ್ರಹಾರ, ಐಟಿಪಿಲ್ ಬ್ಯಾಕ್ ಗೇಟ್ * ವಂಶಿ ಕೃಷ್ಣ ಪಿಜಿ,…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೂತನ ಮೆಟ್ರೋ ಫೀಡರ್ ಮಾರ್ಗದಲ್ಲಿ ಬಿಎಂಟಿಸಿ ಬಸ್ ಪರಿಚಯಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ   ಸೌಲಭ್ಯವನ್ನು ಒದಗಿಸುತ್ತಿದೆ. ಬೆ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ: 19.11.2025 ರಿಂದ ಪರಿಚಯಿಸಿದ್ದು, ಮಾರ್ಗದ ವೇಳಾ ಪಟ್ಟಿ ವಿವರಗಳು ಈ ಕೆಳಕಂಡಂತಿದೆ.                            ಮಾರ್ಗ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ ಎಂಎಫ್-23‌C ಜಾಲಹಳ್ಳಿ ಕ್ರಾಸ್‌ ಜಾಲಹಳ್ಳಿ ಕ್ರಾಸ್‌ ಗಂಗಮ್ಮ ಸರ್ಕಲ್‌, ಎಂ.ಎಸ್.ಪಾಳ್ಯ, ಕಸಘಟ್ಟಪುರ, ಚಿಕ್ಕಬಾಣಾವಾರ, ಬಗಲಗುಂಟೆ ಕ್ರಾಸ್ 03 ಬಸ್ಸು / 24 ಸುತ್ತುವಳಿಗಳು ಎಂಎಫ್-23‌D ಜಾಲಹಳ್ಳಿ ಕ್ರಾಸ್‌ ಜಾಲಹಳ್ಳಿ ಕ್ರಾಸ್‌ ಬಗಲಗುಂಟೆ ಕ್ರಾಸ್‌, ಚಿಕ್ಕಬಾಣಾವಾರ, ಕಸಘಟ್ಟಪುರ, ಎಂ.ಎಸ್.ಪಾಳ್ಯ, ಗಂಗಮ್ಮ ಸರ್ಕಲ್‌ 03 ಬಸ್ಸು / 24 ಸುತ್ತುವಳಿಗಳು    ಮಾರ್ಗ ಸಂಖ್ಯೆ ಎಂಎಫ್-23‌C ಜಾಲಹಳ್ಳಿ ಕ್ರಾಸ್‌ ಬಿಡುವ ವೇಳೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ ಸಾರ್ವತ್ರಿಕೆ ರಜಾ ದಿನಗಳು ಹಾಗೂ ಪರಿಮಿತ ರಜಾ ದಿನಗಳ ಅಧಿಕೃತ ಪಟ್ಟಿಯನ್ನು ಮುಂದಿದೆ ನೋಡಿ.. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಸಾರ್ವಜನಿಕರಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಇನ್ನೂ ಅಧಿಸೂಚನೆ 1ರ ಅನುಬಂಧದಲ್ಲಿ 2026ನೇ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಇರುವ ಪರಿಮಿತ ರಜಾ ದಿನಗಳ ಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Read More

ಬೆಂಗಳೂರು: ಸಾಮಾಜಿಕ ಜಾಲತಾಣವಾದಂತ ವಾಟ್ಸ್ ಆಪ್ ಗ್ರೂಪಿನಲ್ಲಿ ಜಾತಿ ಗಣತಿ ವರದಿಯೆಂದು ಕೆಲವೊಂದು ಅಂಕಿ ಸಂಖ್ಯೆಗಳನ್ನು ಪ್ರಕಟಿಸಿ, ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ದೂರು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆಎ ದಯಾನಂದ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025ರಿಂದ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಪ್ರಾರಂಭಿಸಿ ದಿನಾಂಕ:31.10.2025ರವರೆಗೆ ಸಾರ್ವಜನಿಕರಿಗೆ ಆನೈನ್ ಮೂಲಕ ಪಾಲ್ಗೊಳ್ಳಲು ದಿನಾಂಕ:30.11.2025ರವರೆಗೆ ಅವಕಾಶ ನೀಡಲಾಗಿದೆ. ಅದರಂತೆ ಸಮೀಕ್ಷೆ ಕಾರ್ಯ ಇನ್ನೂ ಪ್ರಗತಿಯಲ್ಲಿರುತ್ತದೆ. ಈ ಸಂಬಂಧ ಮಾನ್ಯ ಉಚ್ಚನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆ: 28665/2025, 28668/2025, 28670/2025 ಮತ್ತು 28675/2025 ಗಳಲ್ಲಿ ಆಯೋಗವು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ದತ್ತಾಂಶಗಳನ್ನು ಯಾವುದೇ ವ್ಯಕ್ತಿಗೆ ಮಾಹಿತಿಯನ್ನು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಲಾಗುವುದೆಂದು ದಿನಾಂಕ:26.09.2025 ರಂದು ಅಫಿಡವಿಟ್…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ ಸಾರ್ವತ್ರಿಕೆ ರಜಾ ದಿನಗಳು ಹಾಗೂ ಪರಿಮಿತ ರಜಾ ದಿನಗಳ ಅಧಿಕೃತ ಪಟ್ಟಿಯನ್ನು ಮುಂದಿದೆ ನೋಡಿ.. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಸಾರ್ವಜನಿಕರಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಹೀಗಿದೆ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ದಿನಾಂಕ 15-01-2026 ಗುರುವಾರ, ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ ದಿನಾಂಕ 26-01-2026 ಸೋಮವಾರ, ಗಣರಾಜ್ಯೋತ್ಸವ ದಿನಾಂಕ 19-03-2026 ಗುರುವಾರ, ಯುಗಾದಿ ಹಬ್ಬ ದಿನಾಂಕ 21-03-2026 ಶನಿವಾರ, ಖುತುಬ್ ಎ ರಂಜಾನ್ ದಿನಾಂಕ 31-03-2026 ಮಂಗಳವಾರ, ಮಹಾವೀರ ಜಯಂತಿ ದಿನಾಂಕ 03-04-2026 ಶುಕ್ರವಾರ, ಗುಡ್ ಪ್ರೈಡೆ ದಿನಾಂಕ 14-04-2026 ಮಂಗಳವಾರ, ಡಾ.ಬಿಆರ್ ಅಂಬೇಡ್ಕರ್ ಜಯಂತಿ ದಿನಾಂಕ 04-04-2026 ಸೋಮವಾರ, ಬಸವಜಯಂತಿ,…

Read More